Homeದಲಿತ್ ಫೈಲ್ಸ್ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ; ಇಬ್ಬರ ಬಂಧನ

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ; ಇಬ್ಬರ ಬಂಧನ

- Advertisement -
- Advertisement -

ಮದುವೆ ಮನೆಯಲ್ಲಿ ಡಿಜೆ ಸಂಗೀತಕ್ಕೆ ಸಂಬಂಧಿಸಿದಂತೆ ಉಂಟಾದ ವಿವಾದದಲ್ಲಿ, ದಲಿತ ವರನ ವಿವಾಹ ಮೆರವಣಿಗೆ ಮೇಲೆ ಪ್ರಬಲ ಜಾತಿ ಸದಸ್ಯರು ಹಲ್ಲೆ ನಡೆಸಿದ ಆರೋಪದ ಮೇಲೆ ಠಾಕೂರ್ ಸಮುದಾಯದ ಇಬ್ಬರನ್ನು ಉತ್ತರ ಪ್ರದೇಶದ ಮೀರತ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ. ಶುಕ್ರವಾರ ಮತ್ತು ಶನಿವಾರ ಮಧ್ಯರಾತ್ರಿ ಠಾಕೂರ್ ಸಮುದಾಯಕ್ಕೆ ಸೇರಿದ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ವ್ಯಕ್ತಿಗಳ ಮೇಲೆ ಪ್ರಕರಣ ದಾಖಲಿಸಿದ್ದಾರೆ. ದೂರಿನ ಪ್ರಕಾರ, ಮೀರತ್‌ನ ಕಲಿಂಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯ ಮೇಲೆ ಪ್ರಬಲ ಜಾತಿ ಜನರ ಗುಂಪೊಂದು ದಾಳಿ ನಡೆಸಿದ ಬಳಿಕ ಜಾತಿ ನಿಂದನೆ ಮಾಡಿದ್ದಾರೆ. ದಲಿತ ಮಹಿಳೆಯರ ಮೇಲೆ ಹಲ್ಲೆ ನಡೆಸಿ, ಬೆಲೆಬಾಳುವ ವಸ್ತುಗಳನ್ನು ದೋಚಿದ್ದಾರೆ ಎಂದು ಆರೋಪಿಸಲಾಗಿದೆ.

ಮುಜಾಫರ್‌ನಗರದ ಭೋಕರ್‌ಹೆಡಿ ಗ್ರಾಮದ ನಿವಾಸಿ ವರ ಸಂಜೀವ್ ಕುಮಾರ್ ಅವರ ಪ್ರಕಾರ, ಆರೋಪಿಯು ವರನ ಸಹೋದರ ಗೋವಿಂದ್ ಅವರನ್ನು ಕೋಲುಗಳಿಂದ ಹೊಡೆದು ತಲೆಗೆ ತೀವ್ರ ಗಾಯಗೊಳಿಸಿದ್ದಾನೆ. ಅವರ ಸಹೋದರಿ ಅಂಜು ಮಧ್ಯಪ್ರವೇಶಿಸಿದಾಗ, ಅವರ ಮೇಲೂ ದಾಳಿ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.

ಮದುವೆ ಮೆರವಣಿಗೆಯಲ್ಲಿ ಹಲವಾರು ಮಹಿಳೆಯರನ್ನು ಸಹ ಬೆನ್ನಟ್ಟಿ ಥಳಿಸಲಾಯಿತು. ದಾಳಿಕೋರರು ಕಾರುಗಳಲ್ಲಿ ಪರಾರಿಯಾಗಿದ್ದ ಅತಿಥಿಗಳನ್ನು ಹಿಂಬಾಲಿಸಿದರು. ಸಂತ್ರಸ್ತರು ತಪ್ಪಿಸಿಕೊಂಡು ಸರ್ಧಾನಾ ಪೊಲೀಸ್ ಠಾಣೆ ತಲುಪುವಲ್ಲಿ ಯಶಸ್ವಿಯಾದರು ಎಂದು ಅವರು ಹೇಳಿದರು.

ದಾಳಿಕೋರರು ವರನ ಚಿಕ್ಕಪ್ಪನಿಂದ ಎರಡು ಚಿನ್ನದ ಉಂಗುರಗಳು, ಒಂದು ಚಿನ್ನದ ಬಳೆ ಮತ್ತು ₹2 ಲಕ್ಷ ಹಣವಿರುವ ಚೀಲವನ್ನು ದೋಚಿದ್ದಾರೆ ಎಂದು ಆರೋಪಿಸಲಾಗಿದೆ. ಗಲಾಟೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ದಾಳಿಕೋರರು ಠಾಕೂರ್ ಸಮುದಾಯಕ್ಕೆ ಸೇರಿದವರು ಎಂದು ಸಂಜೀವ್ ಹೇಳಿದ್ದಾರೆ.

ಸಂತ್ರಸ್ತರ ಪ್ರಕಾರ, ಮದುವೆಯಲ್ಲಿ ಡಿಜೆ ಸಂಗೀತ ನುಡಿಸುವ ಬಗ್ಗೆ ವಿವಾದ ಪ್ರಾರಂಭವಾಯಿತು. ಆರೋಪಿಗಳು ಮೆರವಣಿಗೆಯನ್ನು ನಿಲ್ಲಿಸಿ, ಠಾಕೂರ್ ಕುಟುಂಬಗಳಿಗೆ ಮಾತ್ರ ಗ್ರಾಮದಲ್ಲಿ ಡಿಜೆ ನುಡಿಸಲು ಅವಕಾಶವಿದೆ ಎಂದು ತಾಕೀತು ಮಾಡಿದ್ದಾರೆ.

ಆದರೆ, ವಿವಾದವು ತಿಂಡಿ ಅಂಗಡಿಯಲ್ಲಿ ಪ್ರಾರಂಭವಾಯಿತು ಎಂದು ಪೊಲೀಸರು ಹೇಳಿದ್ದಾರೆ. ಮೂವರು ಶಂಕಿತರನ್ನು ಬಂಧಿಸಲಾಗಿದೆ. ಆದರೆ, ವರನ ಸಹೋದರ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾನೆ. ಅಂತಿಮವಾಗಿ ಪೊಲೀಸ್ ರಕ್ಷಣೆಯಲ್ಲಿ ಮದುವೆಯನ್ನು ಪೂರ್ಣಗೊಳಿಸಲಾಯಿತು.

ವಧುವಿನ ಸಹೋದರ ನೀಡಿದ ದೂರಿನ ಮೇರೆಗೆ, ಪೊಲೀಸರು ಬಿಎನ್‌ಎಸ್ ಸೆಕ್ಷನ್ 191(2) (ಗಲಭೆ), 74 (ಮಹಿಳೆಯ ಮೇಲೆ ಹಲ್ಲೆ ಅಥವಾ ಕ್ರಿಮಿನಲ್ ಬಲಪ್ರಯೋಗ), 352 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ), 351(2) (ಕ್ರಿಮಿನಲ್ ಬೆದರಿಕೆ) ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆಯ ಸೆಕ್ಷನ್ 2(2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಎಫ್‌ಐಆರ್‌ನಲ್ಲಿ ನಾಲ್ವರು ಆರೋಪಿಗಳಾದ ಅಕ್ಷಯ್, ಸಚಿನ್ ಅಲಿಯಾಸ್ ಕಾಲಾ, ಚೋಟು ಅಲಿಯಾಸ್ ನಿಶಾಂತ್ ಮತ್ತು ತರುಣ್, ಎಲ್ಲರೂ ಕಾಳಿಂದಿ ಗ್ರಾಮದ ನಿವಾಸಿಗಳು ಎಂದು ಹೆಸರಿಸಲಾಗಿದೆ. ಗ್ರಾಮದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

ಇದನ್ನು ದೃಢಪಡಿಸಿದ ಎಸ್‌ಪಿ (ಗ್ರಾಮೀಣ) ರಾಕೇಶ್ ಮಿಶ್ರಾ, “ಆರೋಪಿಗಳನ್ನು ವೀಡಿಯೊ ಸಾಕ್ಷ್ಯಗಳ ಮೂಲಕ ಗುರುತಿಸಲಾಗಿದೆ. ಸಂಜೆ ನಂತರ, ಪೊಲೀಸರು ತರುಣ್ ಮತ್ತು ಚೋಟು ಅವರನ್ನು ಬಂಧಿಸಿದರು. ಇತರರಿಗಾಗಿ ಹುಡುಕಾಟ ಮುಂದುವರೆದಿದೆ. ಗ್ರಾಮವು ಶಾಂತಿಯುತವಾಗಿದ್ದು, ಮದುವೆ ನಡೆದಿದೆ” ಎಂದರು.

ಈ ಮಧ್ಯೆ, ನಗೀನಾ ಸಂಸದ ಚಂದ್ರಶೇಖರ್ ಆಜಾದ್ ಅವರು ಘಟನೆಯನ್ನು ಖಂಡಿಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, “ದಾಳಿಕೋರರು ‘ಡಿಜೆ ನಮ್ಮ ಮನೆಯಲ್ಲಿ ಮಾತ್ರ ಹಾಕಬೇಕು!’ ಎಂದು ಬಹಿರಂಗವಾಗಿ ಬೆದರಿಕೆ ಹಾಕಿದರು. ಬಹುಜನ ಸಮುದಾಯಕ್ಕೆ ತಮ್ಮ ಮದುವೆಗಳನ್ನು ಆಚರಿಸುವ ಸ್ವಾತಂತ್ರ್ಯವೂ ಇಲ್ಲವೇ? ಈ ರಾಜ್ಯದಲ್ಲಿ ದಲಿತರಿಗೆ ತಮ್ಮ ಸಂತೋಷದಲ್ಲಿ ಆನಂದಿಸುವ ಹಕ್ಕಿಲ್ಲವೇ” ಎಂದು ಪ್ರಶ್ನಿಸಿದ್ದಾರೆ.

“ಸಿಎಂ ಯೋಗಿ ದಲಿತರ ಘನತೆ ಮತ್ತು ಭದ್ರತೆಯ ಬಗ್ಗೆ ಎಷ್ಟೇ ಮಾತನಾಡಿದರೂ, ಉತ್ತರ ಪ್ರದೇಶದಲ್ಲಿ ಬಹುಜನರ ಮೇಲಿನ ದೌರ್ಜನ್ಯಗಳು ಹೆಚ್ಚುತ್ತಿವೆ ಎಂಬುದು ಮೂಲ ವಾಸ್ತವ. ಅಧಿಕಾರದಲ್ಲಿರುವವರು ಅಪರಾಧಿಗಳನ್ನು ರಕ್ಷಿಸುತ್ತಿದ್ದಾರೆ, ಅದಕ್ಕಾಗಿಯೇ ಅವರು ನಮ್ಮ ಸಮುದಾಯದ ಸಂತೋಷದ ಮೇಲೆ ನಿರ್ಭಯವಾಗಿ ದಾಳಿ ಮಾಡುತ್ತಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

ಈ ವಿಷಯದಲ್ಲಿ ತ್ವರಿತ ಕ್ರಮ ಕೈಗೊಳ್ಳದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆಗಳ ಬಗ್ಗೆ ಆಜಾದ್ ಎಚ್ಚರಿಸಿದ್ದಾರೆ. 24 ಗಂಟೆಗಳ ಒಳಗೆ ಎಲ್ಲ ಆರೋಪಿಗಳನ್ನು ತಕ್ಷಣ ಬಂಧಿಸಬೇಕೆಂದು ಅವರು ಒತ್ತಾಯಿಸಿದರು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಲು ಪ್ರಕರಣವನ್ನು ನ್ಯಾಯಾಲಯದಲ್ಲಿ ತ್ವರಿತಗೊಳಿಸಬೇಕೆಂದು ಅವರು ಒತ್ತಾಯಿಸಿದರು.

ರಾಷ್ಟ್ರೀಯ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ಆಯೋಗಗಳಲ್ಲಿ ಪ್ರಮುಖ ಹುದ್ದೆಗಳು ಖಾಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Mera kehena hai dalith log jago aise kuttounko sabak sikhavo our bolte hain mere hindu bhaee hum sab hindu hai hum sab ek hain kahan hai o log nara bolne vale kis kone me chupe hain unko bahar nikhalo batavo a sab natak. Jai bheem Jai Tippu

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...