Homeಮುಖಪುಟಬಿಹಾರ | ಎನ್‌ಡಿಎ ಸರ್ಕಾರವನ್ನು ಬೇರು ಸಹಿತ ಕಿತ್ತೊಗೆಯುತ್ತೇವೆ: ಚುನಾವಣಾ ಪ್ರಚಾರ ಆರಂಭಿಸಿದ ಸಿಪಿಐ-ಎಂಎಲ್

ಬಿಹಾರ | ಎನ್‌ಡಿಎ ಸರ್ಕಾರವನ್ನು ಬೇರು ಸಹಿತ ಕಿತ್ತೊಗೆಯುತ್ತೇವೆ: ಚುನಾವಣಾ ಪ್ರಚಾರ ಆರಂಭಿಸಿದ ಸಿಪಿಐ-ಎಂಎಲ್

- Advertisement -
- Advertisement -

ಬಿಹಾರ ಚುನಾವಣೆಗೆ ಸಿಪಿಐ-ಎಂಎಲ್ (ಲಿಬರೇಷನ್) ‘ಬದ್ಲೋ ಬಿಹಾರ’ ರ‍್ಯಾಲಿಯನ್ನು ಆಯೋಜಿಸುವ ಮೂಲಕ ತನ್ನ ಚುನಾವಣಾ ಪ್ರಚಾರವನ್ನು ಆರಂಭಿಸಿದೆ. ಈ ವೇಳೆ ಮಾತನಾಡಿರುವ ಪಕ್ಷದ ಪ್ರಧಾನ ಕಾರ್ಯದರ್ಶಿ ದೀಪಂಕರ್ ಭಟ್ಟಾಚಾರ್ಯ ಅವರು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಹಾರದಲ್ಲಿ ಎನ್‌ಡಿಎ ಸರ್ಕಾರವನ್ನು ಬೇರು ಸಹಿತ ಕಿತ್ತೊಗೆಯುವಂತೆ ಜನರನ್ನು ಕೇಳಿಕೊಂಡಿದ್ದಾರೆ. ಎನ್‌ಡಿಎ ಸರ್ಕಾರವನ್ನು

ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆದ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ದೀಪಂಕರ್ ಅವರು, ಬಿಹಾರದಲ್ಲಿಯೂ ಜಾರ್ಖಂಡ್‌ನ ಚುನಾವಣಾ ಇತಿಹಾಸವನ್ನು ಪುನರಾವರ್ತಿಸುವ ಸಮಯ ಬಂದಿದೆ ಎಂದು ಹೇಳಿದ್ದಾರೆ. ಇತ್ತೀಚಿನ ಸಮೀಕ್ಷೆಯ ಪ್ರಕಾರ, ಸುಮಾರು 75 ಪ್ರತಿಶತದಷ್ಟು ಜನರು ಪ್ರಸ್ತುತ ಸರ್ಕಾರವು ತಮಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಎನ್‌ಡಿಎ ಸರ್ಕಾರ ವಿಫಲವಾಗಿದೆ ಎಂದು ಹೇಳಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಎನ್‌ಡಿಎ ಸರ್ಕಾರವನ್ನು

“ಬಿಜೆಪಿ ಮತ್ತು ಎನ್‌ಡಿಎ ಹಗಲುಗನಸು ಕಾಣಲಿ. ಮಹಾರಾಷ್ಟ್ರ ಮತ್ತು ದೆಹಲಿಯ ನಂತರ, ಬಿಹಾರದಲ್ಲಿ ಕೂಡಾ ಚುನಾವಣೆಗಳನ್ನು ಗೆಲ್ಲುತ್ತೇವೆ ಎಂದು ಅವರು ಭಾವಿಸಲಿ. ಆದರೆ, ನೆರೆಯ ಜಾರ್ಖಂಡ್‌ನಲ್ಲಿ ಬಿಜೆಪಿ ಹೀನಾಯ ಸೋಲನ್ನು ಎದುರಿಸಿತು. ಅಲ್ಲಿ ಜೆಎಂಎಂ, ಕಾಂಗ್ರೆಸ್ ಮತ್ತು ಸಿಪಿಐ-ಎಂಎಲ್ (ಲಿಬರೇಷನ್) ಒಟ್ಟಿಗೆ ಸೇರಿದವು. ಅದೇ ರೀತಿ, ಬಿಹಾರ ಕೂಡಾ ಮಾಡಲಿದೆ” ಎಂದು ಅವರು ಹೇಳಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಡೆದ ಜಾರ್ಖಂಡ್‌ನಂತೆಯೇ ಬಿಹಾರ ಕೂಡ ಅದೇ ಮಾರ್ಗವನ್ನು ಅನುಸರಿಸುತ್ತದೆ ಎಂದು ಅವರು ಹೇಳಿದ್ದಾರೆ.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಟೀಕಿಸಿದ ದೀಪಂಕರ್, “ಜೆಡಿ(ಯು) ಮುಖ್ಯಸ್ಥ ನಿತೀಶ್ ಕುಮಾರ್ ಕಳೆದ ವರ್ಷ ಬಿಹಾರದಲ್ಲಿ ಬಿಜೆಪಿಯೊಂದಿಗೆ ಕೈಜೋಡಿಸಿದ ನಂತರ ನಾವು ಲೋಕಸಭೆಯಲ್ಲಿ ಹಲವಾರು ಸ್ಥಾನಗಳನ್ನು ಗೆದ್ದಿದ್ದೇವೆ. ಮುಂಬರುವ ಚುನಾವಣೆಯಲ್ಲಿ ಆಡಳಿತ ಪಕ್ಷಕ್ಕೆ ಸೂಕ್ತ ಉತ್ತರ ನೀಡಲು ವಿರೋಧ ಪಕ್ಷಗಳು ಸಿದ್ಧರಾಗಿರುವುದರಿಂದ ಇಂದಿನ ಒಗ್ಗಟ್ಟು ಎನ್‌ಡಿಎ ಪಕ್ಷಗಳಲ್ಲಿ ಆಘಾತದ ಅಲೆಗಳನ್ನು ಎಬ್ಬಿಸಿದೆ” ಎಂದು ಅವರು ಹೇಳಿದ್ದಾರೆ.

ಬಿಜೆಪಿ ತನ್ನ ರಾಜಕೀಯ ವಿರೋಧಿಗಳ ವಿರುದ್ಧ ಪಿತೂರಿ ನಡೆಸುವುದರಲ್ಲಿ ನಂಬಿಕೆ ಇಟ್ಟಿದೆ ಎಂದು ದೀಪಂಕರ್ ಹೇಳಿದ್ದಾರೆ. ಪ್ರದೇಶದಲ್ಲಿ ಎನ್‌ಡಿಎ ಮತದಾರರನ್ನು ಒಟ್ಟುಗೂಡಿಸಲು ಕೋಮು ಗಲಭೆಯನ್ನು ಪ್ರಚೋದಿಸಲು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು ಇತ್ತೀಚಿನ ಸೀಮಾಂಚಲ್‌ಗೆ ನೀಡಿದ್ದ ಭೇಟಿಯನ್ನು ಅವರು ಉಲ್ಲೇಖಿಸಿದ್ದಾರೆ.

ಆದಾಗ್ಯೂ, ವಿರೋಧ ಪಕ್ಷಗಳು ಜನರ ಗಮನವನ್ನು ಬೇರೆಡೆಗೆ ತಿರುಗುವುದಿಲ್ಲ ಮತ್ತು ಬಹಳ ಹಿಂದಿನಿಂದಲೂ ಬಿಹಾರವನ್ನು ಕಾಡುತ್ತಿರುವ ನಿಜವಾದ ಸಮಸ್ಯೆಗಳ ಮೇಲೆ ವಿಧಾನಸಭಾ ಚುನಾವಣೆಗಳಲ್ಲಿ ಸ್ಪರ್ಧಿಸುತ್ತವೆ ಎಂದು ಅವರು ಪ್ರತಿಪಾದಿಸಿದ್ದಾರೆ. ನಿರುದ್ಯೋಗ ಮತ್ತು ವಲಸೆಗಳು ಸೇರಿದಂತೆ ಚುನಾವಣಾ ಪ್ರಚಾರದ ಸಮಯದಲ್ಲಿ ಪ್ರಮುಖ ವಿಚಾರಗಳನ್ನು ಎತ್ತಲಿದ್ದೇವೆ ಎಂದು ಅವರು ಹೇಳಿದ್ದಾರೆ.

ಸಮಸ್ಯೆಗಳು ಮತ್ತು ನೋವುಗಳು ಹಲವು ಆದರೂ, ಆದರೆ ಪರಿಹಾರವು ಒಂದೇ ಒಂದು ಇದ್ದು, ಅದು ಬಿಹಾರವನ್ನು ಬದಲಾಯಿಸುವುದಾಗಿದೆ ಎಂದು ಅವರು ಹೇಳಿದ್ದಾರೆ. “ರಾಜ್ಯ ರಾಜಧಾನಿಯ ಐತಿಹಾಸಿಕ ಗಾಂಧಿ ಮೈದಾನದಲ್ಲಿ ಇಂದು ಬೃಹತ್ ಜನಸಮೂಹದೊಂದಿಗೆ ಬದಲಾವಣೆಗಾಗಿ ನಾವು ಕಹಳೆ ಮೊಳಗಿಸಿದ್ದೇವೆ” ಎಂದು ಅವರು ಪ್ರತಿಪಾದಿಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಹೋಳಿ ಸಮಯದಲ್ಲಿ ಮುಸ್ಲಿಮರ ಪ್ರವೇಶ ನಿಷೇಧಕ್ಕೆ ಹಿಂದೂ ಪುರೋಹಿತರ ಆದೇಶ

ಹೋಳಿ ಸಮಯದಲ್ಲಿ ಮುಸ್ಲಿಮರ ಪ್ರವೇಶ ನಿಷೇಧಕ್ಕೆ ಹಿಂದೂ ಪುರೋಹಿತರ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...