Homeಮುಖಪುಟಬಿಹಾರ | ಎನ್‌ಡಿಎ ಸರ್ಕಾರವನ್ನು ಬೇರು ಸಹಿತ ಕಿತ್ತೊಗೆಯುತ್ತೇವೆ: ಚುನಾವಣಾ ಪ್ರಚಾರ ಆರಂಭಿಸಿದ ಸಿಪಿಐ-ಎಂಎಲ್

ಬಿಹಾರ | ಎನ್‌ಡಿಎ ಸರ್ಕಾರವನ್ನು ಬೇರು ಸಹಿತ ಕಿತ್ತೊಗೆಯುತ್ತೇವೆ: ಚುನಾವಣಾ ಪ್ರಚಾರ ಆರಂಭಿಸಿದ ಸಿಪಿಐ-ಎಂಎಲ್

- Advertisement -
- Advertisement -

ಬಿಹಾರ ಚುನಾವಣೆಗೆ ಸಿಪಿಐ-ಎಂಎಲ್ (ಲಿಬರೇಷನ್) ‘ಬದ್ಲೋ ಬಿಹಾರ’ ರ‍್ಯಾಲಿಯನ್ನು ಆಯೋಜಿಸುವ ಮೂಲಕ ತನ್ನ ಚುನಾವಣಾ ಪ್ರಚಾರವನ್ನು ಆರಂಭಿಸಿದೆ. ಈ ವೇಳೆ ಮಾತನಾಡಿರುವ ಪಕ್ಷದ ಪ್ರಧಾನ ಕಾರ್ಯದರ್ಶಿ ದೀಪಂಕರ್ ಭಟ್ಟಾಚಾರ್ಯ ಅವರು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಹಾರದಲ್ಲಿ ಎನ್‌ಡಿಎ ಸರ್ಕಾರವನ್ನು ಬೇರು ಸಹಿತ ಕಿತ್ತೊಗೆಯುವಂತೆ ಜನರನ್ನು ಕೇಳಿಕೊಂಡಿದ್ದಾರೆ. ಎನ್‌ಡಿಎ ಸರ್ಕಾರವನ್ನು

ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆದ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ದೀಪಂಕರ್ ಅವರು, ಬಿಹಾರದಲ್ಲಿಯೂ ಜಾರ್ಖಂಡ್‌ನ ಚುನಾವಣಾ ಇತಿಹಾಸವನ್ನು ಪುನರಾವರ್ತಿಸುವ ಸಮಯ ಬಂದಿದೆ ಎಂದು ಹೇಳಿದ್ದಾರೆ. ಇತ್ತೀಚಿನ ಸಮೀಕ್ಷೆಯ ಪ್ರಕಾರ, ಸುಮಾರು 75 ಪ್ರತಿಶತದಷ್ಟು ಜನರು ಪ್ರಸ್ತುತ ಸರ್ಕಾರವು ತಮಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಎನ್‌ಡಿಎ ಸರ್ಕಾರ ವಿಫಲವಾಗಿದೆ ಎಂದು ಹೇಳಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಎನ್‌ಡಿಎ ಸರ್ಕಾರವನ್ನು

“ಬಿಜೆಪಿ ಮತ್ತು ಎನ್‌ಡಿಎ ಹಗಲುಗನಸು ಕಾಣಲಿ. ಮಹಾರಾಷ್ಟ್ರ ಮತ್ತು ದೆಹಲಿಯ ನಂತರ, ಬಿಹಾರದಲ್ಲಿ ಕೂಡಾ ಚುನಾವಣೆಗಳನ್ನು ಗೆಲ್ಲುತ್ತೇವೆ ಎಂದು ಅವರು ಭಾವಿಸಲಿ. ಆದರೆ, ನೆರೆಯ ಜಾರ್ಖಂಡ್‌ನಲ್ಲಿ ಬಿಜೆಪಿ ಹೀನಾಯ ಸೋಲನ್ನು ಎದುರಿಸಿತು. ಅಲ್ಲಿ ಜೆಎಂಎಂ, ಕಾಂಗ್ರೆಸ್ ಮತ್ತು ಸಿಪಿಐ-ಎಂಎಲ್ (ಲಿಬರೇಷನ್) ಒಟ್ಟಿಗೆ ಸೇರಿದವು. ಅದೇ ರೀತಿ, ಬಿಹಾರ ಕೂಡಾ ಮಾಡಲಿದೆ” ಎಂದು ಅವರು ಹೇಳಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಡೆದ ಜಾರ್ಖಂಡ್‌ನಂತೆಯೇ ಬಿಹಾರ ಕೂಡ ಅದೇ ಮಾರ್ಗವನ್ನು ಅನುಸರಿಸುತ್ತದೆ ಎಂದು ಅವರು ಹೇಳಿದ್ದಾರೆ.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಟೀಕಿಸಿದ ದೀಪಂಕರ್, “ಜೆಡಿ(ಯು) ಮುಖ್ಯಸ್ಥ ನಿತೀಶ್ ಕುಮಾರ್ ಕಳೆದ ವರ್ಷ ಬಿಹಾರದಲ್ಲಿ ಬಿಜೆಪಿಯೊಂದಿಗೆ ಕೈಜೋಡಿಸಿದ ನಂತರ ನಾವು ಲೋಕಸಭೆಯಲ್ಲಿ ಹಲವಾರು ಸ್ಥಾನಗಳನ್ನು ಗೆದ್ದಿದ್ದೇವೆ. ಮುಂಬರುವ ಚುನಾವಣೆಯಲ್ಲಿ ಆಡಳಿತ ಪಕ್ಷಕ್ಕೆ ಸೂಕ್ತ ಉತ್ತರ ನೀಡಲು ವಿರೋಧ ಪಕ್ಷಗಳು ಸಿದ್ಧರಾಗಿರುವುದರಿಂದ ಇಂದಿನ ಒಗ್ಗಟ್ಟು ಎನ್‌ಡಿಎ ಪಕ್ಷಗಳಲ್ಲಿ ಆಘಾತದ ಅಲೆಗಳನ್ನು ಎಬ್ಬಿಸಿದೆ” ಎಂದು ಅವರು ಹೇಳಿದ್ದಾರೆ.

ಬಿಜೆಪಿ ತನ್ನ ರಾಜಕೀಯ ವಿರೋಧಿಗಳ ವಿರುದ್ಧ ಪಿತೂರಿ ನಡೆಸುವುದರಲ್ಲಿ ನಂಬಿಕೆ ಇಟ್ಟಿದೆ ಎಂದು ದೀಪಂಕರ್ ಹೇಳಿದ್ದಾರೆ. ಪ್ರದೇಶದಲ್ಲಿ ಎನ್‌ಡಿಎ ಮತದಾರರನ್ನು ಒಟ್ಟುಗೂಡಿಸಲು ಕೋಮು ಗಲಭೆಯನ್ನು ಪ್ರಚೋದಿಸಲು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು ಇತ್ತೀಚಿನ ಸೀಮಾಂಚಲ್‌ಗೆ ನೀಡಿದ್ದ ಭೇಟಿಯನ್ನು ಅವರು ಉಲ್ಲೇಖಿಸಿದ್ದಾರೆ.

ಆದಾಗ್ಯೂ, ವಿರೋಧ ಪಕ್ಷಗಳು ಜನರ ಗಮನವನ್ನು ಬೇರೆಡೆಗೆ ತಿರುಗುವುದಿಲ್ಲ ಮತ್ತು ಬಹಳ ಹಿಂದಿನಿಂದಲೂ ಬಿಹಾರವನ್ನು ಕಾಡುತ್ತಿರುವ ನಿಜವಾದ ಸಮಸ್ಯೆಗಳ ಮೇಲೆ ವಿಧಾನಸಭಾ ಚುನಾವಣೆಗಳಲ್ಲಿ ಸ್ಪರ್ಧಿಸುತ್ತವೆ ಎಂದು ಅವರು ಪ್ರತಿಪಾದಿಸಿದ್ದಾರೆ. ನಿರುದ್ಯೋಗ ಮತ್ತು ವಲಸೆಗಳು ಸೇರಿದಂತೆ ಚುನಾವಣಾ ಪ್ರಚಾರದ ಸಮಯದಲ್ಲಿ ಪ್ರಮುಖ ವಿಚಾರಗಳನ್ನು ಎತ್ತಲಿದ್ದೇವೆ ಎಂದು ಅವರು ಹೇಳಿದ್ದಾರೆ.

ಸಮಸ್ಯೆಗಳು ಮತ್ತು ನೋವುಗಳು ಹಲವು ಆದರೂ, ಆದರೆ ಪರಿಹಾರವು ಒಂದೇ ಒಂದು ಇದ್ದು, ಅದು ಬಿಹಾರವನ್ನು ಬದಲಾಯಿಸುವುದಾಗಿದೆ ಎಂದು ಅವರು ಹೇಳಿದ್ದಾರೆ. “ರಾಜ್ಯ ರಾಜಧಾನಿಯ ಐತಿಹಾಸಿಕ ಗಾಂಧಿ ಮೈದಾನದಲ್ಲಿ ಇಂದು ಬೃಹತ್ ಜನಸಮೂಹದೊಂದಿಗೆ ಬದಲಾವಣೆಗಾಗಿ ನಾವು ಕಹಳೆ ಮೊಳಗಿಸಿದ್ದೇವೆ” ಎಂದು ಅವರು ಪ್ರತಿಪಾದಿಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಹೋಳಿ ಸಮಯದಲ್ಲಿ ಮುಸ್ಲಿಮರ ಪ್ರವೇಶ ನಿಷೇಧಕ್ಕೆ ಹಿಂದೂ ಪುರೋಹಿತರ ಆದೇಶ

ಹೋಳಿ ಸಮಯದಲ್ಲಿ ಮುಸ್ಲಿಮರ ಪ್ರವೇಶ ನಿಷೇಧಕ್ಕೆ ಹಿಂದೂ ಪುರೋಹಿತರ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...