Homeಚಳವಳಿಪಶ್ಚಿಮ ಬಂಗಾಳ | SFI ಮುಷ್ಕರದ ವೇಳೆ ಎಡಪಂಥೀಯ ಮತ್ತು TMCP ಕಾರ್ಯಕರ್ತರ ನಡುವೆ ಘರ್ಷಣೆ

ಪಶ್ಚಿಮ ಬಂಗಾಳ | SFI ಮುಷ್ಕರದ ವೇಳೆ ಎಡಪಂಥೀಯ ಮತ್ತು TMCP ಕಾರ್ಯಕರ್ತರ ನಡುವೆ ಘರ್ಷಣೆ

- Advertisement -
- Advertisement -

ಶಿಕ್ಷಣ ಸಚಿವ ಬ್ರತ್ಯ ಬಸು ಅವರ ರಾಜೀನಾಮೆಗೆ ಒತ್ತಾಯಿಸಿ ಸೋಮವಾರ ಪಶ್ಚಿಮ ಬಂಗಾಳದಾದ್ಯಂತ ವಿಶ್ವವಿದ್ಯಾಲಯ ಕ್ಯಾಂಪಸ್‌ಗಳಲ್ಲಿ ಸಿಪಿಐ(ಎಂ)ನ ವಿದ್ಯಾರ್ಥಿ ಘಟಕ ಎಸ್‌ಎಫ್‌ಐ ಕರೆ ನೀಡಿದ್ದ ಮುಷ್ಕರದ ಸಂದರ್ಭದಲ್ಲಿ ವಿವಿಧ ಎಡಪಂಥೀಯ ವಿದ್ಯಾರ್ಥಿ ಸಂಘಟನೆಗಳು ಮತ್ತು ತೃಣಮೂಲ ಕಾಂಗ್ರೆಸ್ ಛಾತ್ರ ಪರಿಷತ್ (ಟಿಎಂಸಿಪಿ) ಕಾರ್ಯಕರ್ತರ ನಡುವೆ ಘರ್ಷಣೆಗಳು ಭುಗಿಲೆದ್ದವು. ಪಶ್ಚಿಮ ಬಂಗಾಳ

ಪಶ್ಚಿಮ ಮೇದಿನಿಪುರ ಜಿಲ್ಲೆಯ ಮೇದಿನಿಪುರ ಪಟ್ಟಣ, ಡಾರ್ಜಿಲಿಂಗ್ ಜಿಲ್ಲೆಯ ಸಿಲಿಗುರಿ, ಕೂಚ್ ಬೆಹಾರ್ ಜಿಲ್ಲೆ ಮತ್ತು ಪುರ್ಬಾ ಮೇದಿನಿಪುರ ಜಿಲ್ಲೆಯ ಪನ್ಸ್ಕುರಾದಲ್ಲಿ ಟಿಎಂಸಿಯ ವಿದ್ಯಾರ್ಥಿ ಘಟಕದ ಸದಸ್ಯರು ಮತ್ತು ಎಐಡಿಎಸ್‌ಒ ಮತ್ತು ಎಸ್‌ಎಫ್‌ಐನ ಎಡಪಂಥೀಯ ಕಾರ್ಯಕರ್ತರ ನಡುವೆ ಘರ್ಷಣೆಗಳು ನಡೆದಿವೆ ಎಂದು ವರದಿಯಾಗಿವೆ.

ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ)ನ ಸದಸ್ಯರು ಬೆಳಿಗ್ಗೆ 10 ಗಂಟೆಗೆ ಪ್ರಾರಂಭವಾದ ಒಂದು ದಿನದ ಮುಷ್ಕರವನ್ನು ಕೋಲ್ಕತ್ತಾದ ಜಾದವ್‌ಪುರ ಮತ್ತು ಪ್ರೆಸಿಡೆನ್ಸಿ ವಿಶ್ವವಿದ್ಯಾಲಯಗಳ ಕ್ಯಾಂಪಸ್‌ಗಳಲ್ಲಿ ನಡೆಸಿದ್ದಾರೆ.

ಕಲ್ಕತ್ತಾ ವಿಶ್ವವಿದ್ಯಾಲಯ, ರವೀಂದ್ರ ಭಾರತಿ ವಿಶ್ವವಿದ್ಯಾಲಯ, ಉತ್ತರ ಬಂಗಾಳ ವಿಶ್ವವಿದ್ಯಾಲಯ ಮತ್ತು ಬರ್ದ್ವಾನ್ ವಿಶ್ವವಿದ್ಯಾಲಯದಂತಹ ಇತರ ಉನ್ನತ ಶಿಕ್ಷಣ ಸಂಸ್ಥೆಗಳ ಕ್ಯಾಂಪಸ್‌ಗಳಲ್ಲಿ ಸೆಮಿಸ್ಟರ್ ಪರೀಕ್ಷೆಗಳು ನಡೆದರೂ ಕೆಲವು ತರಗತಿಗಳು ನಡೆಯದ ಕಾರಣ ಮುಷ್ಕರವು ಭಾಗಶಃ ಪರಿಣಾಮ ಬೀರಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆದಾಗ್ಯೂ, ಜಾದವ್‌ಪುರ ವಿಶ್ವವಿದ್ಯಾಲಯ ಮತ್ತು ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಂತಲ್ಲದೆ ಈ ಕ್ಯಾಂಪಸ್‌ಗಳಲ್ಲಿ ಮುಷ್ಕರದಲ್ಲಿ ಕಡಿಮೆ ಎಸ್‌ಎಫ್‌ಐ ಕಾರ್ಯಕರ್ತರು ಕಾಣಿಸಿಕೊಂಡರು ಎಂದು ವರದಿಯಾಗಿದೆ. ಆಡಳಿತಾರೂಢ ಟಿಎಂಸಿಯ ವಿದ್ಯಾರ್ಥಿ ವಿಭಾಗವಾದ ತೃಣಮೂಲ ಛಾತ್ರ ಪರಿಷತ್‌ನ ಕಾರ್ಯಕರ್ತರು ಸಹ ಕ್ಯಾಂಪಸ್‌ಗಳಲ್ಲಿ ಕಾಣಿಸಿಕೊಂಡರು ಎಂದು ವರದಿಯಾಗಿದೆ. ಪಶ್ಚಿಮ ಬಂಗಾಳ

ಎಸ್‌ಎಫ್‌ಐ ಕಾರ್ಯಕರ್ತರು ರಸ್ತೆ ಸಂಚಾರಕ್ಕೆ ಯಾವುದೇ ಅಡ್ಡಿ ಉಂಟುಮಾಡದ ಕಾರಣ ಮುಷ್ಕರವು ಇಲ್ಲಿಯವರೆಗೆ ವಾಹನ ಸಂಚಾರದ ಮೇಲೆ ಪರಿಣಾಮ ಬೀರಲಿಲ್ಲ. ಪಶ್ಚಿಮ ಬಂಗಾಳ ಮಂಡಳಿಯ 12 ನೇ ತರಗತಿ ಪರೀಕ್ಷೆಗಳು ಸಹ ಸೋಮವಾರ ಪ್ರಾರಂಭವಾಗಿವೆ. ವಿಧ್ಯಾರ್ಥಿಗಳು ಬೆಳಿಗ್ಗೆಯಿಂದಲೇ ರಾಜ್ಯಾದ್ಯಂತ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಸರಾಗವಾಗಿ ತೆರಳಿದ್ದಾರೆ.

ಮಾರ್ಚ್ 1 ರಂದು ಜಾದವ್‌ಪುರ ವಿಶ್ವವಿದ್ಯಾಲಯದಲ್ಲಿ ನಡೆದ ಗಲಾಟೆಯ ಸಂದರ್ಭದಲ್ಲಿ ಸಚಿವ ಬಸು ಅವರ ಬೆಂಗಾವಲು ಪಡೆಯಲ್ಲಿದ್ದ ಕಾರಿಗೆ ಸಿಲುಸಿ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದರು. ವಿದ್ಯಾರ್ಥಿ ಸಂಘ ಚುನಾವಣೆ ನಡೆಸುವ ಬಗ್ಗೆ ಚರ್ಚೆ ನಡೆಸುವಂತೆ ಒತ್ತಾಯಿಸಿ ಎಡಪಂಥೀಯ ವಿದ್ಯಾರ್ಥಿಗಳು ಸಚಿವರನ್ನು ಕ್ಯಾಂಪಸ್‌ನಿಂದ ಹೊರಹೋಗದಂತೆ ತಡೆಯಲು ಪ್ರಯತ್ನಿಸಿದ್ದರು. ಈ ವೇಳೆ ಪ್ರತಿಭಟನಾಕಾರರು ಬಸು ಅವರ ಕಾರಿನ ವಿಂಡ್‌ಶೀಲ್ಡ್‌ಗೆ ಹಾನಿ ಮಾಡಿದ್ದರಿಂದ ಬಸು ಅವರಿಗೆ ಗಾಯಗಳಾಗಿವೆ.

ಟಿಎಂಸಿ ಬೆಂಬಲಿತ ಶಿಕ್ಷಕರ ಸಂಘವಾದ ಪಶ್ಚಿಮ ಬಂಗಾಳ ಕಾಲೇಜು ಮತ್ತು ವಿಶ್ವವಿದ್ಯಾಲಯ ಪ್ರಾಧ್ಯಾಪಕರ ಸಂಘದ (WBCUPA) ವಾರ್ಷಿಕ ಮಹಾಸಭೆಯಲ್ಲಿ ಭಾಗವಹಿಸಿದ ನಂತರ ಬಸು ಆವರಣದಿಂದ ಹೊರಡುವಾಗ ಈ ಘಟನೆ ಸಂಭವಿಸಿತ್ತು.

“ಶನಿವಾರ ಜಾದವ್‌ಪುರ ವಿಶ್ವವಿದ್ಯಾಲಯ ಆವರಣದಲ್ಲಿ ನಡೆದ ಡಬ್ಲ್ಯುಬಿಸಿಯುಪಿಎ ವಾರ್ಷಿಕ ಮಹಾಸಭೆಯ ಸಂದರ್ಭದಲ್ಲಿ ಟಿಎಂಸಿ ಬೆಂಬಲಿಗರು ಬಸು ಅವರ ಸಮ್ಮುಖದಲ್ಲಿ ಹಿಂಸಾಚಾರ ಮತ್ತು ವಿಧ್ವಂಸಕ ಕೃತ್ಯವನ್ನು ಪ್ರಚೋದಿಸಿದ್ದರು” ಎಂದು ಎಸ್‌ಎಫ್‌ಐ ರಾಜ್ಯ ಸಮಿತಿ ಸದಸ್ಯ ಶುವಜಿತ್ ಸರ್ಕಾರ್ ಆರೋಪಿಸಿದ್ದಾರೆ.

ಮಾರ್ಚ್ 1 ರಂದು ಜಾದವ್‌ಪುರ ವಿಶ್ವವಿದ್ಯಾಲಯ ಆವರಣದಲ್ಲಿ ನಡೆದ ಘಟನೆಗಳ ಬಗ್ಗೆ ಮಾತನಾಡಿದ ಸರ್ಕಾರ್, “ವಿದ್ಯಾರ್ಥಿಗಳು ಉಪಕುಲಪತಿಗಳ ಸಮ್ಮುಖದಲ್ಲಿ ಶಿಕ್ಷಣ ಸಚಿವರೊಂದಿಗೆ ಚರ್ಚೆ ನಡೆಸಲು ಮಾತ್ರ ಬಯಸಿದ್ದರು. ಆದರೆ ಅವರು ಅವರೊಂದಿಗೆ ಸರಿಯಾಗಿ ವರ್ತಿಸದೆ, ಕ್ಯಾಂಪಸ್‌ನಿಂದ ಹೊರಹೋಗಲು ಪ್ರಯತ್ನಿಸಿದರು” ಎಂದು ಅವರು ಪಿಟಿಐಗೆ ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಸಚಿವರೊಂದಿಗೆ ಸಭೆ ನಡೆಸುವಂತೆ ಒತ್ತಾಯಿಸಿದರೂ, ಅವರು ಬಲಪಂಥೀಯ ಟಿಎಂಸಿ ಮತ್ತು ಹೊರಗಿನವರೊಂದಿಗೆ ತಮ್ಮ ಕಾರನ್ನು ಹತ್ತಿದರು. ಈ ವೇಳೆ ಅವರ ಚಾಲಕ ವಾಹನದ ಬಳಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಸುರಕ್ಷತೆಯ ಬಗ್ಗೆ ಕಾಳಜಿ ವಹಿಸದೆ ವಾಹನವನ್ನು ವೇಗಗೊಳಿಸಿದರು. ಹಾಗಾಗಿ ಅವರ ಕಾರು ಇಬ್ಬರು ವಿದ್ಯಾರ್ಥಿಗಳಿಗೆ ಗಾಯಗೊಳಿಸಿತು, ಅವರಲ್ಲಿ ಒಬ್ಬನಿಗೆ ಗಂಭೀರ ಗಾಯಗಳಾಗಿದ್ದು, ಅವರು ಹಿಂತಿರುಗಿ ನೋಡದೆ ವೇಗವಾಗಿ ಓಡಿಹೋದರು ಎಂದು ಸರ್ಕಾರ್ ಆರೋಪಿಸಿದ್ದಾರೆ.

“ಇಬ್ಬರು ವಿದ್ಯಾರ್ಥಿಗಳ ಗಾಯಗಳಿಗೆ ಬಸು ಕಾರಣ. ಹಾಗಾಗಿ ಅವರು ರಾಜ್ಯ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಬೇಕು. ಜೊತೆಗೆ ಜಾದವ್‌ಪುರ ವಿಶ್ವವಿದ್ಯಾಲಯದ ಆವರಣದಲ್ಲಿ ಬೆಂಕಿ ಹಚ್ಚಿದ್ದಕ್ಕಾಗಿ ಅವರ ವಿರುದ್ಧ ಪೊಲೀಸ್ ಕ್ರಮ ಕೈಗೊಳ್ಳಬೇಕೆಂದು ನಾವು ಒತ್ತಾಯಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಸೋಮವಾರದಿಂದ ಪ್ರಾರಂಭವಾದ ಹೈಯರ್ ಸೆಕೆಂಡರಿ ಪರೀಕ್ಷೆಗಳ ಸುಗಮ ನಿರ್ವಹಣೆಗೆ ಎಸ್‌ಎಫ್‌ಐ ತನ್ನ ಸಹಾಯವನ್ನು ನೀಡಲಿದೆ. ಅಭ್ಯರ್ಥಿಗಳಿಗೆ ಸಹಾಯ ಮಾಡಲು ಪರೀಕ್ಷಾ ಕೇಂದ್ರಗಳ ಬಳಿ ಶಿಬಿರಗಳನ್ನು ಆಯೋಜಿಸಲಿದೆ ಎಂದು ಅವರು ಇದೇ ವೇಳೆ ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಹೋಳಿ ಸಮಯದಲ್ಲಿ ಮುಸ್ಲಿಮರ ಪ್ರವೇಶ ನಿಷೇಧಕ್ಕೆ ಹಿಂದೂ ಪುರೋಹಿತರ ಆದೇಶ

ಹೋಳಿ ಸಮಯದಲ್ಲಿ ಮುಸ್ಲಿಮರ ಪ್ರವೇಶ ನಿಷೇಧಕ್ಕೆ ಹಿಂದೂ ಪುರೋಹಿತರ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...