Homeಮುಖಪುಟಹಾರ್ದಿಕ್ ಪಟೇಲ್, ಶೆಹ್ಲಾ ರಶೀದ್ ವಿರುದ್ಧದ 'ದೇಶದ್ರೋಹ' ಪ್ರಕರಣಗಳು ವಾಪಸ್ : ಬಿಜೆಪಿ ಬೆಂಬಲಿಸಿದರೆ ಗಂಭೀರ...

ಹಾರ್ದಿಕ್ ಪಟೇಲ್, ಶೆಹ್ಲಾ ರಶೀದ್ ವಿರುದ್ಧದ ‘ದೇಶದ್ರೋಹ’ ಪ್ರಕರಣಗಳು ವಾಪಸ್ : ಬಿಜೆಪಿ ಬೆಂಬಲಿಸಿದರೆ ಗಂಭೀರ ಕೇಸ್‌ಗಳು ರದ್ದು?

- Advertisement -
- Advertisement -

2015ರ ಪಾಟಿದಾರ್ ಮೀಸಲಾತಿ ಆಂದೋಲನದ ನೇತೃತ್ವ ವಹಿಸಿದ್ದ ಬಿಜೆಪಿ ಶಾಸಕ ಹಾರ್ದಿಕ್ ಪಟೇಲ್ ಮತ್ತು ಇತರ ನಾಲ್ವರ ವಿರುದ್ಧ ದಾಖಲಾಗಿದ್ದ ದೇಶದ್ರೋಹ ಪ್ರಕರಣವನ್ನು ಹಿಂಪಡೆಯಲು ಅಹಮದಾಬಾದ್ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಗುಜರಾತ್ ಸರ್ಕಾರಕ್ಕೆ ಅನುಮತಿ ನೀಡಿದೆ.

ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ನಿಬಂಧನೆಗಳ ಅಡಿಯಲ್ಲಿ ವಿಶೇಷ ಸಾರ್ವಜನಿಕ ಅಭಿಯೋಜಕ ಸುಧೀರ್ ಬ್ರಹ್ಮಭಟ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಮನೀಶ್ ಪುರೋಹಿತ್ ಶನಿವಾರ (ಮಾ.1) ಈ ಸಂಬಂಧ ಎರಡು ಆದೇಶಗಳನ್ನು ಹೊರಡಿಸಿದ್ದಾರೆ.

“ಕಾನೂನುಬದ್ಧವಾಗಿ ಮತ್ತು ಸಾಮಾಜಿಕವಾಗಿ ಸಾಧ್ಯವಿಲ್ಲ” ಎಂದು ತಿಳಿದಿದ್ದರೂ ಸಹ, ಹಾರ್ದಿಕ್ ಪಟೇಲ್, ದಿನೇಶ್ ಬಂಭಾನಿಯಾ, ಚಿರಾಗ್ ಪಟೇಲ್, ಕೇತನ್ ಪಟೇಲ್ ಮತ್ತು ಅಲ್ಪೇಶ್ ಕಥೇರಿಯಾ ಪಾಟಿದಾರ್ ಅಥವಾ ಪಟೇಲ್ ಸಮುದಾಯದ ಸದಸ್ಯರನ್ನು ಒಬಿಸಿ ಪಟ್ಟಿಗೆ ಸೇರಿಸಲು ಆಂದೋಲನ ನಡೆಸುವಂತೆ 2015ರಲ್ಲಿ ಪ್ರಚೋದಿಸಲು ಸಂಚು ರೂಪಿಸಿದ್ದಾರೆ ಎಂದು ಆರೋಪಿಸಲಾಗಿತ್ತು.

ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124ಎ (ದೇಶದ್ರೋಹ), 121 (ಭಾರತ ಸರ್ಕಾರದ ವಿರುದ್ಧ ಯುದ್ಧ ಮಾಡುವುದು ಅಥವಾ ಯುದ್ಧ ಮಾಡಲು ಪ್ರಯತ್ನಿಸುವುದು ಅಥವಾ ಯುದ್ಧ ಮಾಡಲು ಪ್ರೇರೇಪಿಸುವುದು), 121ಎ (ಸೆಕ್ಷನ್ 121 ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧಗಳನ್ನು ಮಾಡಲು ಸಂಚು ರೂಪಿಸುವುದು), 153ಎ (ಧರ್ಮ, ಜನಾಂಗ, ಜನ್ಮಸ್ಥಳ, ನಿವಾಸ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ಸಾಮರಸ್ಯದ ವಿರುದ್ದ ಪೂರ್ವಾಗ್ರಹ ಪೀಡಿತ ಕೃತ್ಯಗಳನ್ನು ಮಾಡುವುದು) ಮತ್ತು 153ಬಿ (ಆಪಾದನೆ, ರಾಷ್ಟ್ರೀಯ ಏಕೀಕರಣದ ವಿರುದ್ದ ಪೂರ್ವಾಗ್ರಹ ಪೀಡಿತ ಹೇಳಿಕೆಗಳು) ಅಡಿಯಲ್ಲಿ ಆರೋಪ ಹೊರಿಸಲಾಗಿತ್ತು.

ಕಳೆದ ತಿಂಗಳು ಬಿಜೆಪಿ ಸರ್ಕಾರ ಹಿಂಪಡೆಯುವುದಾಗಿ ಘೋಷಿಸಿದ ಒಂಬತ್ತು ಪಾಟೀದಾರ್ ಕೋಟಾ ಆಂದೋಲನ ಪ್ರಕರಣಗಳಲ್ಲಿ ಇದೂ ಒಂದು. 2015 ರ ಪಾಟೀದಾರ್ ಆಂದೋಲನಕ್ಕೆ ಸಂಬಂಧಿಸಿದಂತೆ ಸುಮಾರು 300 ಪ್ರಕರಣಗಳು ದಾಖಲಾಗಿವೆ.

ಶೆಹ್ಲಾ ರಶೀದ್ ವಿರುದ್ದದ ದೇಶದ್ರೋಹ ಪ್ರಕರಣ ವಾಪಸ್!

2019ರಲ್ಲಿ ದಾಖಲಾಗಿದ್ದ ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಮಾಜಿ ವಿದ್ಯಾರ್ಥಿ ನಾಯಕಿ ಶೆಹ್ಲಾ ರಶೀದ್ ಅವರ ವಿರುದ್ಧದ ಮೊಕದ್ದಮೆಯನ್ನು ಹಿಂಪಡೆಯಲು ದೆಹಲಿ ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ನ್ಯಾಯಾಲಯ ಗುರುವಾರ (ಫೆ.27) ಸ್ವೀಕರಿಸಿದೆ.

ಸೆಪ್ಟೆಂಬರ್ 2019ರಲ್ಲಿ, ಕಾಶ್ಮೀರದಲ್ಲಿ ಸಶಸ್ತ್ರ ಪಡೆಗಳ ಬಗ್ಗೆ ತಪ್ಪು ಮಾಹಿತಿ ಹರಡಿದ ಆರೋಪದ ಮೇಲೆ ರಶೀದ್ ವಿರುದ್ಧ ದೇಶದ್ರೋಹ ಮತ್ತು ಇತರ ಕ್ರಿಮಿನಲ್ ಆರೋಪಗಳನ್ನು ಹೊರಿಸಲಾಗಿತ್ತು.

ವಕೀಲ ಅಲಖ್ ಅಲೋಕ್ ಶ್ರೀವಾಸ್ತವ ಅವರ ದೂರಿನ ಆಧಾರದ ಮೇಲೆ ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124ಎ (ದೇಶದ್ರೋಹ), 153ಎ (ಧರ್ಮ, ಜನಾಂಗ, ಜನ್ಮಸ್ಥಳ, ವಾಸಸ್ಥಳ, ಭಾಷೆಯ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 153 (ಗಲಭೆಯನ್ನು ಉಂಟುಮಾಡುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಪ್ರಚೋದನೆ ನೀಡುವುದು), 504 (ಶಾಂತಿ ಕದಡುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಅವಮಾನಿಸುವುದು) ಮತ್ತು 505 (ಸಾರ್ವಜನಿಕ ಕಿಡಿಗೇಡಿತನಕ್ಕೆ ಕಾರಣವಾಗುವ ಹೇಳಿಕೆಗಳು) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನಿಡಿದ್ದ 370ನೇ ವಿಧಿಯನ್ನು ಆಗಸ್ಟ್ 18, 2019ರಂದು ರದ್ದುಗೊಳಿಸಿ, ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದ ನಂತರ ಕಣಿವೆಯಲ್ಲಿ ಮಕ್ಕಳು ಮತ್ತು ಯುವಕರ ಮೇಲೆ ಸಶಸ್ತ್ರ ಪಡೆಗಳು ದೌರ್ಜನ್ಯವೆಸಗಿವೆ ಎಂದು ರಶೀದ್ ಆರೋಪಿಸಿದ್ದರು.

ಜೈಲಿನಲ್ಲಿ ಕೊಳೆಯುತ್ತಿರುವ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ 

ಬಿಜೆಪಿ ಬೆಂಬಲಿಸಿದವರ ವಿರುದ್ದದ ದೇಶದ್ರೋಹಗಳಂತಹ ಗಂಭೀರ ಪ್ರಕರಣಗಳು ರದ್ದಾಗುತ್ತಿದೆ. ಆದರೆ, ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್‌ನಂತವರು ಕಳೆದ 4-5 ವರ್ಷಗಳಿಂದ ಜೈಲಿನಲ್ಲಿ ಕೊಳೆಯುತ್ತಿದ್ದಾರೆ.

2020ರ ದೆಹಲಿ ಗಲಭೆಗೆ ಸಂಚು ರೂಪಿಸಿದ ಆರೋಪದ ಮೇಲೆ ಉಮರ್ ಖಾಲಿದ್ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸಿ ಜೈಲಿಗಟ್ಟಲಾಗಿದೆ. ಇದೇ ರೀತಿ ಸಿಎಎ ವಿರುದ್ದದ ಪ್ರತಿಭಟನೆ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಶಾರ್ಜೀಲ್ ಇಮಾಮ್ ವಿರುದ್ದವೂ ದೇಶದ್ರೋಹದ ಪ್ರಕರಣ ದಾಖಲಿಸಲಾಗಿದೆ. ಇವರಿಬ್ಬರ ಜಾಮೀನು ಅರ್ಜಿಗಳನ್ನು ಅನೇಕ ಬಾರಿ ತಿರಸ್ಕರಿಸಲಾಗಿದೆ. ವಿಶೇಷವೆಂದರೆ, ವಿಚಾರಣೆಯೇ ಪ್ರಾರಂಭಿಸದೆ, ಆರೋಪ ಸಾಬೀತಾಗದೆ ಜೈಲಿನಲ್ಲಿಡಲಾಗಿದೆ.

ಒಂದು ಕಡೆಗೆ ಬದಲಾಗಿ ಎಲ್ಲವೂ ಒಳ್ಳೆಯದಾಗುತ್ತದೆ : ರಾಜ್‌ದೀಪ್ ಸರ್ದೇಸಾಯಿ 

“ಶೆಹ್ಲಾ ರಶೀದ್ ವಿರುದ್ಧದ 2019ರ ದೇಶದ್ರೋಹ ಪ್ರಕರಣವನ್ನು ದೆಹಲಿ ಪೊಲೀಸರು ಹಿಂತೆಗೆದುಕೊಂಡಿದ್ದಾರೆ; ಹಾರ್ದಿಕ್ ಪಟೇಲ್ ವಿರುದ್ಧದ ದೇಶದ್ರೋಹ ಪ್ರಕರಣವನ್ನು ಹಿಂಪಡೆಯಲು ಗುಜರಾತ್ ಸರ್ಕಾರಕ್ಕೆ ಅಹಮದಾಬಾದ್ ನ್ಯಾಯಾಲಯ ಅನುಮತಿ ನೀಡಿದೆ. ಉಮರ್ ಖಾಲಿದ್‌ನಂತೆ ಬಾಗಲು ನಿರಾಕರಿಸಿದವರು ಇನ್ನೂ 5 ವರ್ಷಗಳಿಂದ ಜಾಮೀನು ಸಹ ಇಲ್ಲದೆ ಜೈಲಿನಲ್ಲಿದ್ದಾರೆ. ಕಾನೂನು ತನ್ನದೇ ಆದ ಹಾದಿ ಹಿಡಿಯುತ್ತಿದೆಯೇ ಅಥವಾ ‘ವಾಷಿಂಗ್ ಮೆಷಿನ್’ ಪಾತ್ರವನ್ನು ನಿರ್ವಹಿಸುತ್ತಿರುವ ರಾಜಕೀಯವೇ? ಸಂದೇಶವು ಸ್ಪಷ್ಟವಾಗಿದೆ: ಬದಿಗಳನ್ನು ಬದಲಾಯಿಸಿ ಎಲ್ಲವೂ ಒಳ್ಳೆಯದಾಗುತ್ತದೆ” ಎಂದು ಹಿರಿಯ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಹೇಳಿದ್ದಾರೆ.

 

“ಬಿಜೆಪಿಗೆ ಸೇರಿ ಅಥವಾ ಉಮರ್ ಖಾಲಿದ್‌ರಂತೆ ಜೈಲಿನಲ್ಲಿ ಕೊಳೆಯಿರಿ”

“ಶೆಹ್ಲಾ ರಶೀದ್ ಮತ್ತು ಹಾರ್ದಿಕ್ ಪಟೇಲ್ ವಿರುದ್ಧದ ದೇಶದ್ರೋಹ ಪ್ರಕರಣಗಳನ್ನು ಹಿಂಪಡೆಯಲಾಗಿದೆ. ಸಂದೇಶ ಸ್ಪಷ್ಟವಾಗಿದೆ. ಬಿಜೆಪಿಗೆ ಸೇರಿ ಅಥವಾ ಉಮರ್ ಖಾಲಿದ್‌ರಂತೆ ಜೈಲಿನಲ್ಲಿ ಕೊಳೆಯಿರಿ” ಎಂದು ಹೋರಾಟಗಾರ ತರುಣ್ ಗೌತಮ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಹಾರ್ದಿಕ್ ಪಟೇಲ್, ಶೆಹ್ಲಾ ರಶೀದ್ ಹಿನ್ನೆಲೆ 

ಹಾರ್ದಿಕ್ ಪಟೇಲ್ : ಗುಜರಾತ್‌ನ ಪಾಟೀದಾರ್ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಸಾವಿರಾರು ಯುವಜನರನ್ನು ಒಟ್ಟುಗೂಡಿಸಿ ಧೀರ್ಘ ಕಾಲ ಪ್ರತಿಭಟಿಸಿದ ಹಾರ್ದಿಕ್ ಪಟೇಲ್, ಅಲ್ಲಿನ ಯುವನಾಯಕನಾಗಿ ಬೆಳೆದಿದ್ದರು. ಕಳೆದ 20 ವರ್ಷದಿಂದ ಆಡಳಿತದಲ್ಲಿರುವ ಬಿಜೆಪಿ ಸಮುದಾಯಕ್ಕೆ ಮೋಸ ಮಾಡುತ್ತಿದೆ ಎಂದು ಆರೋಪಿಸಿದ್ದರು. ಅವರ ಪ್ರತಿಭಟನೆಗೆ ಭರಪೂರ ಬೆಂಬಲ ವ್ಯಕ್ತವಾಗಿತ್ತು. 2017ರಲ್ಲಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರಿ ಹೋರಾಟ ಮುಂದುವರೆಸಿದ್ದರು. ಜಿಗ್ನೇಶ್ ಮೇವಾನಿ, ಹಾರ್ದಿಕ್ ಪಟೇಲ್ ಮತ್ತು ಅಲ್ಪೇಶ್ ಠಾಕೂರ್ ಎಂಬ ಮೂವರು ಯುವಜನರು ಬಿಜೆಪಿಯ ಎದೆ ನಡುಗಿಸಿದ್ದರು. ಆ ಚುನಾವಣೆಯಲ್ಲಿ ಸೋಲಿನ ದವಡೆಗೆ ಸಿಲುಕಿದ್ದ ಬಿಜೆಪಿ ಅಲ್ಪದರಲ್ಲೇ ಸರಳ ಬಹುಮತ ಪಡೆದು ಪಾರಾಗಿತ್ತು. ಆನಂತರ ಹಾರ್ದಿಕ್ ಪಟೇಲ್ ಮತ್ತು ಅಲ್ಪೇಶ್ ಠಾಕೂರ್ ಮೇಲೆ ಬಿಜೆಪಿ ದೇಶದ್ರೋಹ ಸೇರಿ ಇತರ ಪ್ರಕರಣಗಳನ್ನು ದಾಖಲಿಸಿ ಕಿರುಕುಳ ಕೊಟ್ಟಿತ್ತು. ಅವರಿಬ್ಬರೂ ಬಿಜೆಪಿ ಸೇರಿ ಆರೋಪ ಮುಕ್ತರಾದರು. ಅವರ ಮೇಲಿನ ಪ್ರಕರಣ ಹಿಂಪಡೆಯಲಾಗಿದೆ. ಜಿಗ್ನೇಶ್ ಮೇಲೆ ಹಲವು ಪ್ರಕರಣಗಳಿದ್ದು ತನಿಖೆ ಎದುರಿಸುತ್ತಿದ್ದಾರೆ.

ಶೆಹ್ಲಾ ರಶೀದ್  : ಕಾಶ್ಮೀರದ ಈ ಯುವತಿ ಜೆಎನ್‌ಯೂನಲ್ಲಿ ಓದುತ್ತಿದ್ದಾಗ ಬಿಜೆಪಿಯ ಕಡು ವಿರೋಧಿಯಾಗಿದ್ದರು. 2018ರ ಜನವರಿಯಲ್ಲಿ ಬೆಂಗಳೂರಿನಲ್ಲಿ ನಡೆದ ಗೌರಿ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಕನ್ನಯ್ಯ, ಜಿಗ್ನೇಶ್, ಉಮರ್ ಖಾಲಿದ್ ಮತ್ತು ಪ್ರಕಾಶ್ ರಾಜ್‌ರವರ ಜೊತೆ ಫೋಟೊ ತೆಗೆಸಿಕೊಂಡಿದ್ದರು. ಜಮ್ಮ ಕಾಶ್ಮೀರ ಪೀಪಲ್ಸ್ ಮೂವ್ ಮೆಂಟ್ ಅನ್ನುವ ಪಕ್ಷ/ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದರು. 2019ರಲ್ಲಿ ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ನಂತರ ಅದನ್ನು ವಿರೋಧಿಸಿ ಆಗಸ್ಟ್ 17ರಂದು ಶೆಹ್ಲಾ ರಶೀದ್ ಸರಣಿ ಟ್ವಿಟ್ ಗಳನ್ನು ಮಾಡಿದ್ದರು. ಪ್ರತಿನಿತ್ಯ, ಅದರಲ್ಲಿಯೂ ರಾತ್ರಿವೇಳೆ ವಿಚಾರಣೆಯ ನೆಪದಲ್ಲಿ ಭಾರತೀಯ ಸೇನೆಯು ಜನರನ್ನು ಕರೆದೊಯ್ದು ಹಿಂಸೆ ನೀಡುತ್ತಿದೆ ಎಂದು ಆರೋಪಿಸಿದ್ದರು. ಆ ಕಾರಣಕ್ಕೆ ಅವರ ಮೇಲೆ ಉದ್ದೇಶಪೂರ್ವಕ ಹಿಂಸೆಗೆ ಪ್ರಚೋದನೆ ಮತ್ತು ಸೇನೆಗೆ ಕೆಟ್ಟ ಹೆಸರು ತರುತ್ತಿದ್ದಾರೆಂದು ದೇಶದ್ರೋಹದ ಪ್ರಕರಣ ದಾಖಲಿಸಲಾಗಿತ್ತು. ಆನಂತರ, ನಿಧಾನಕ್ಕೆ ಶೆಹ್ಲಾ ರಶೀದ್ ಬದಲಾದರು. ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ಮೋದಿ ಸರ್ಕಾರದ ಕ್ರಮವನ್ನು ಶ್ಲಾಘಿಸಿದರು, ಬಿಜೆಪಿ ಪರ ಟ್ವೀಟ್ ಮಾಡಿದರು. ಈಗ ಅವರ ಮೇಲಿನ ಪ್ರಕರಣವನ್ನು ವಾಪಸ್ ಪಡೆಯಲಾಗಿದೆ.

ಬಿಹಾರ | ಎನ್‌ಡಿಎ ಸರ್ಕಾರವನ್ನು ಬೇರು ಸಹಿತ ಕಿತ್ತೊಗೆಯುತ್ತೇವೆ: ಚುನಾವಣಾ ಪ್ರಚಾರ ಆರಂಭಿಸಿದ ಸಿಪಿಐ-ಎಂಎಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...