Homeಮುಖಪುಟ'ತಕ್ಷಣ ಮಕ್ಕಳನ್ನು ಹೊಂದಿ' | ಕ್ಷೇತ್ರ ವಿಂಗಡನೆ ಬಗ್ಗೆ ತಮಿಳುನಾಡು ನಿವಾಸಿಗಳಿಗೆ ಸಿಎಂ ಸ್ಟಾಲಿನ್...

‘ತಕ್ಷಣ ಮಕ್ಕಳನ್ನು ಹೊಂದಿ’ | ಕ್ಷೇತ್ರ ವಿಂಗಡನೆ ಬಗ್ಗೆ ತಮಿಳುನಾಡು ನಿವಾಸಿಗಳಿಗೆ ಸಿಎಂ ಸ್ಟಾಲಿನ್ ಸಲಹೆ

- Advertisement -
- Advertisement -

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಸೋಮವಾರ ರಾಜ್ಯದ ನವವಿವಾಹಿತ ನಿವಾಸಿಗಳಿಗೆ “ತಕ್ಷಣ ಮಕ್ಕಳನ್ನು ಹೊಂದುವ ಬಗ್ಗೆ ಯೋಜನೆ ರೂಪಿಸಿ” ಎಂದು ಒತ್ತಾಯಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಜನಸಂಖ್ಯಾ ಆಧಾರಿತ ರಾಷ್ಟ್ರವ್ಯಾಪಿ ಕ್ಷೇತ್ರ ವಿಂಗಡಣೆಯು ಸಂಸತ್ತಿನಲ್ಲಿ ರಾಜ್ಯದ ಪ್ರಾತಿನಿಧ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಬಗ್ಗೆಗಿನ ಕಳವಳಗಳ ನಡುವೆ ಅವರು ಈ ಹೇಳಿಕೆ ನೀಡಿದ್ದಾರೆ. ತಕ್ಷಣ ಮಕ್ಕಳನ್ನು ಹೊಂದಿ

“ಈ ಹಿಂದೆ, ನವವಿವಾಹಿತರು ತಮ್ಮ ಕುಟುಂಬವನ್ನು ವಿಸ್ತರಿಸುವ ಮೊದಲು ಸಮಯ ತೆಗೆದುಕೊಳ್ಳುವಂತೆ ನಾನು ಕೇಳುತ್ತಿದ್ದೆ. ಈಗ ಕೇಂದ್ರ ಸರ್ಕಾರ ಜಾರಿಗೆ ತರಲು ಯೋಜಿಸುತ್ತಿರುವ ಕ್ಷೇತ್ರ ವಿಂಗಡಣೆಯಿಂದಾಗಿ ಅಂತಹ ಸಲಹೆಯು ನೀಡುವುದಿಲ್ಲ.” ಎಂದು ತಮ್ಮ ಪಕ್ಷವಾದ ದ್ರಾವಿಡ ಮುನ್ನೇತ್ರ ಕಳಗಂ ಕಾರ್ಯಕರ್ತನ ಮಗನ ವಿವಾಹ ಸಮಾರಂಭದಲ್ಲಿ ಮುಖ್ಯಮಂತ್ರಿ ಸ್ಟಾಲಿನ್ ಹೇಳಿದ್ದಾರೆ.

ಇದೇ ವೇಳೆ ನಿವಾಸಿಗಳು ತಮ್ಮ ಮಕ್ಕಳಿಗೆ “ಸುಂದರವಾದ ತಮಿಳು ಹೆಸರುಗಳನ್ನು” ನೀಡಬೇಕೆಂದು ಸ್ಟಾಲಿನ್ ಒತ್ತಾಯಿಸಿದ್ದಾರೆ. ತಕ್ಷಣ ಮಕ್ಕಳನ್ನು ಹೊಂದಿ

ಲೋಕಸಭಾ ಕ್ಷೇತ್ರಗಳ ಗಡಿಗಳನ್ನು ಪುನರ್ರಚಿಸುವ ಪ್ರಕ್ರಿಯೆಯೇ ಕ್ಷೇತ್ರ ವಿಂಗಡಣೆ. ಸಂವಿಧಾನದ 82 ನೇ ವಿಧಿಯು ಪ್ರತಿ ಜನಗಣತಿ ಪೂರ್ಣಗೊಂಡ ನಂತರ, ಪ್ರತಿ ರಾಜ್ಯಕ್ಕೆ ಲೋಕಸಭಾ ಸ್ಥಾನಗಳ ಹಂಚಿಕೆಯನ್ನು ಅವರ ಜನಸಂಖ್ಯೆಯಲ್ಲಿನ ಬದಲಾವಣೆಗಳ ಆಧಾರದ ಮೇಲೆ ಸರಿಹೊಂದಿಸಬೇಕು ಎಂದು ಹೇಳುತ್ತದೆ. ಪ್ರಸ್ತುತ ಲೋಕಸಭೆಯ ಸಂಯೋಜನೆಯು 1971 ರ ಜನಗಣತಿಯನ್ನು ಆಧರಿಸಿದೆ.

ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ಮಾಡಲು ಯೋಜಿಸುತ್ತಿರುವ ಜನಸಂಖ್ಯೆ ಆಧಾರಿತ ಕ್ಷೇತ್ರ ವಿಂಗಡಣೆಯು ಲೋಕಸಭೆಯಲ್ಲಿ ಭಾರತದ ಉತ್ತರ ಮತ್ತು ಮಧ್ಯ ರಾಜ್ಯಗಳಿಗೆ ಅನಗತ್ಯ ಪ್ರಯೋಜನವನ್ನು ನೀಡಲಿದೆ ಎಂದು ದಕ್ಷಿಣ ಭಾರತದ ರಾಜ್ಯಗಳು ಕಳವಳ ವ್ಯಕ್ತಪಡಿಸಿವೆ.

ಫೆಬ್ರವರಿ 25 ರಂದು, ಈ ಬಗ್ಗೆ ಚರ್ಚಿಸಲು ಸಿಎಂ ಸ್ಟಾಲಿನ್ ಮಾರ್ಚ್ 5 ರಂದು ಚೆನ್ನೈನಲ್ಲಿ ಸರ್ವಪಕ್ಷ ಸಭೆಯನ್ನು ಘೋಷಿಸಿದ್ದು. ಕ್ಷೇತ್ರ ವಿಂಗಡನೆಯಿಂದ ತಮ್ಮ ರಾಜ್ಯ ಎಂಟು ಲೋಕಸಭಾ ಸ್ಥಾನಗಳು ಕಳೆದುಕೊಳ್ಳಲಿದೆ ಎಂದು ಅವರು ಹೇಳಿಕೊಂಡಿದ್ದಾರೆ. “ತಮಿಳುನಾಡು ತನ್ನ ಹಕ್ಕುಗಳಿಗಾಗಿ ಗಂಭೀರ ಹೋರಾಟವನ್ನು ನಡೆಸಬೇಕಾಗಿದೆ. ಕ್ಷೇತ್ರ ವಿಂಗಡಣೆಯ ಬೆದರಿಕೆ ದಕ್ಷಿಣ ಭಾರತದ ರಾಜ್ಯಗಳ ಮೇಲೆ ಡಮೋಕ್ಲಿಸ್‌ನ ಕತ್ತಿಯಂತೆ ನೇತಾಡುತ್ತಿದೆ” ಎಂದು ಸ್ಟಾಲಿನ್ ಹೇಳಿದ್ದರು.

ಅವರ ಹೇಳಿಕೆಗಳ ಒಂದು ದಿನದ ನಂತರ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಪ್ರಸ್ತಾವಿತ ಕ್ಷೇತ್ರ ವಿಂಗಡಣೆ ಪ್ರಕ್ರಿಯೆಯಿಂದಾಗಿ ದಕ್ಷಿಣ ಭಾರತದ ರಾಜ್ಯಗಳು ಒಂದೇ ಒಂದು ಲೋಕಸಭಾ ಸ್ಥಾನವನ್ನು ಕಳೆದುಕೊಳ್ಳುವುದಿಲ್ಲ ಎಂದು ಹೇಳಿದ್ದರು.

“ಒಂದೇ ಒಂದು ಸ್ಥಾನವನ್ನು ಕೂಡಾ ಅನುಪಾತದಲ್ಲಿ ಕಡಿಮೆ ಮಾಡದಂತೆ ನೋಡಿಕೊಳ್ಳಲು ಮೋದಿ ಅವರು ನಿಮ್ಮ ಹಿತಾಸಕ್ತಿಯನ್ನು ಮನಸ್ಸಿನಲ್ಲಿಟ್ಟುಕೊಂಡಿದ್ದಾರೆ ಎಂದು ದಕ್ಷಿಣ ಭಾರತದ ಸಾರ್ವಜನಿಕರಿಗೆ ನಾನು ಭರವಸೆ ನೀಡಲು ಬಯಸುತ್ತೇನೆ. ಮತ್ತು ಎಷ್ಟೇ ಹೆಚ್ಚಳವಾದರೂ, ದಕ್ಷಿಣದ ರಾಜ್ಯಗಳಿಗೆ ನ್ಯಾಯಯುತ ಪಾಲು ಸಿಗುತ್ತದೆ, ಇದನ್ನು ಅನುಮಾನಿಸಲು ಯಾವುದೇ ಕಾರಣವಿಲ್ಲ” ಎಂದು ಅಮಿತ್‌ ಶಾ ಕೊಯಮತ್ತೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹೇಳಿದ್ದರು.

ಇದರ ನಂತರ ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಮಿತ್‌ ಶಾ ಅವರ ಭರವಸೆಗಳು ವಿಶ್ವಾಸಾರ್ಹವಲ್ಲ ಎಂದು ಹೇಳಿದ್ದಾರೆ. “ದಕ್ಷಿಣ ರಾಜ್ಯಗಳಲ್ಲಿ ಗೊಂದಲ ಸೃಷ್ಟಿಸುವ ದುರುದ್ದೇಶಪೂರಿತ ಉದ್ದೇಶದಿಂದ ಈ ಹೇಳಿಕೆ ನೀಡಲಾಗಿದೆ” ಎಂದು ಅವರು ಆರೋಪಿಸಿದ್ದಾರೆ.

ಶುಕ್ರವಾರ, ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರು ಕೂಡಾ ಬಿಜೆಪಿಯು ದಕ್ಷಿಣದ ರಾಜ್ಯಗಳನ್ನು ರಾಜಕೀಯವಾಗಿ ಮತ್ತು ಆರ್ಥಿಕವಾಗಿ ದುರ್ಬಲಗೊಳಿಸಲು ಪಿತೂರಿ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.

2024ರ ಫೆಬ್ರವರಿ ತಿಂಗಳಲ್ಲಿ ತಮಿಳುನಾಡು ವಿಧಾನಸಭೆಯು ಪ್ರಸ್ತಾವಿತ ಕ್ಷೇತ್ರ ವಿಂಗಡನೆಯ ವಿರುದ್ಧ ನಿರ್ಣಯವನ್ನು ಅಂಗೀಕರಿಸಿತು.

ಕ್ಷೇತ್ರ ವಿಂಗಡನೆಯಿಂದ ಅತಿ ದೊಡ್ಡ ಹಿಂದಿ ಬೆಲ್ಟ್ ರಾಜ್ಯವಾದ ಉತ್ತರ ಪ್ರದೇಶದಲ್ಲಿ ಪ್ರಸ್ತುತ 80 ಸ್ಥಾನಗಳಿದ್ದು, 143 ಸ್ಥಾನಗಳು ಹೆಚ್ಚಾಗಲಿವೆ. ಅದೇ ರೀತಿ, ಬಿಹಾರದ ಸ್ಥಾನಗಳು 40 ರಿಂದ 79 ಕ್ಕೆ ದ್ವಿಗುಣಗೊಳ್ಳಲಿವೆ ಎಂದು ವರದಿಯಾಗಿದೆ.

ಒಟ್ಟಾರೆಯಾಗಿ, 10 ಹಿಂದಿ ಬೆಲ್ಟ್ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಾದ ಬಿಹಾರ, ಛತ್ತೀಸ್‌ಗಢ, ದೆಹಲಿ, ಹರಿಯಾಣ, ಹಿಮಾಚಲ ಪ್ರದೇಶ, ಜಾರ್ಖಂಡ್, ಮಧ್ಯಪ್ರದೇಶ, ರಾಜಸ್ಥಾನ, ಉತ್ತರ ಪ್ರದೇಶ ಮತ್ತು ಉತ್ತರಾಖಂಡಗಳಲ್ಲಿನ ಲೋಕಸಭಾ ಸ್ಥಾನಗಳ ಪ್ರಮಾಣವು ಈಗಿರುವ ಸುಮಾರು 42% ರಿಂದ ಸುಮಾರು 48% ಕ್ಕೆ ಏರಲಿದೆ.

ಇದಕ್ಕೆ ಅನುಗುಣವಾಗಿ, ಹಿಂದಿ ಬೆಲ್ಟ್ ಅಲ್ಲದ ಕೇರಳ, ಪಶ್ಚಿಮ ಬಂಗಾಳ ಮತ್ತು ಎಲ್ಲಾ ಈಶಾನ್ಯ ರಾಜ್ಯಗಳ ಪ್ರಾತಿನಿಧ್ಯ ಕುಸಿಯಲಿದೆ ಎಂದು ವರದಿ ಹೇಳಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಉತ್ತರ ಪ್ರದೇಶದ ದಲಿತರ ಮೇಲೆ ಹೆಚ್ಚುತ್ತಿರುವ ದಬ್ಬಾಳಿಕೆ; ರಾಷ್ಟ್ರಪತಿ ಆಳ್ವಿಕೆಗೆ ಒತ್ತಾಯಿಸಿ ಪ್ರತಿಭಟನೆ

ಉತ್ತರ ಪ್ರದೇಶದ ದಲಿತರ ಮೇಲೆ ಹೆಚ್ಚುತ್ತಿರುವ ದಬ್ಬಾಳಿಕೆ; ರಾಷ್ಟ್ರಪತಿ ಆಳ್ವಿಕೆಗೆ ಒತ್ತಾಯಿಸಿ ಪ್ರತಿಭಟನೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...