Homeಮುಖಪುಟನದಿ ನೀರಿನಲ್ಲಿ ಮಲ ಬ್ಯಾಕ್ಟೀರಿಯ ಇತ್ತು, ಆದರೆ ಕಡಿಮೆ ಪ್ರಮಾಣದಲ್ಲಿತ್ತು: ಸಿಎಂ ಆದಿತ್ಯನಾಥ್

ನದಿ ನೀರಿನಲ್ಲಿ ಮಲ ಬ್ಯಾಕ್ಟೀರಿಯ ಇತ್ತು, ಆದರೆ ಕಡಿಮೆ ಪ್ರಮಾಣದಲ್ಲಿತ್ತು: ಸಿಎಂ ಆದಿತ್ಯನಾಥ್

- Advertisement -
- Advertisement -

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಮಹಾ ಕುಂಭ ಮೇಳದಲ್ಲಿ ಪವಿತ್ರ ಸ್ನಾನ ನಡೆದ ನದಿಯ ನೀರಿನಲ್ಲಿ ಮಲದಲ್ಲಿ ಕಂಡು ಬರುವ ಬ್ಯಾಕ್ಟೀರಿಯ ಕಡಿಮೆ ಪ್ರಮಾಣದಲ್ಲಿ ಇತ್ತು ಎಂದು ರಾಜ್ಯದ ಮುಖ್ಯಮಂತ್ರಿ ಆದಿತ್ಯನಾಥ್ ಸೋಮವಾರ ಹೇಳಿದ್ದಾರೆ. ಜೊತೆಗೆ ಅಲ್ಲಿ ಜನವರಿ 29 ರಂದು ಸಂಭವಿಸಿದ ಕಾಲ್ತುಳಿತವು “ಆ ದಿನ ಹಾಜರಿದ್ದ ಕೋಟ್ಯಂತರ ಯಾತ್ರಿಕರಲ್ಲಿ ಭೀತಿ ಉಂಟುಮಾಡಬಹುದಾಗಿರುವುದರಿಂದ” ಅದನ್ನು ಎತ್ತಿ ತೋರಿಸಲು ತಮ್ಮ ಸರ್ಕಾರ ಅವಕಾಶ ನೀಡಲಿಲ್ಲ ಎಂದು ಅವರು ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ನದಿ ನೀರಿನಲ್ಲಿ ಮಲ ಬ್ಯಾಕ್ಟೀರಿಯ

ಮಾಲಿನ್ಯದ ಬಗ್ಗೆ ಮಾಧ್ಯಮಗಳಲ್ಲಿನ ಹೇಳಿಕೆಗಳು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ವರದಿಗಳನ್ನು ಆಧರಿಸಿವೆ ಎಂದು ಅವರು ಹೇಳಿದ್ದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. “ಪ್ರಾಣಿಗಳ ಮಲವು ನೀರನ್ನು ಕಲುಷಿತಗೊಳಿಸಿದ ಸ್ಥಳಗಳಿಂದ ಅಥವಾ ನದಿ ನೀರು ಈಗಾಗಲೇ ಕಲುಷಿತಗೊಂಡ ಸ್ಥಳದಿಂದ ಅವರ ಮಾದರಿಗಳನ್ನು ತೆಗೆದುಕೊಳ್ಳಲಾಗಿದೆ” ಎಂದು ಅವರು ಪ್ರತಿಪಾದಿಸಿದ್ದಾರೆ. ನದಿ ನೀರಿನಲ್ಲಿ ಮಲ ಬ್ಯಾಕ್ಟೀರಿಯ

“ಜನವರಿ 11 ಮತ್ತು ಫೆಬ್ರವರಿ 13 ರ ನಡುವೆ ನಾವು ಸಂಗಮದಿಂದ ಮಾದರಿಗಳನ್ನು ತೆಗೆದುಕೊಂಡಾಗಲೆಲ್ಲಾ, ಮಲ ಬ್ಯಾಕ್ಟೀರಿಯಾದ ಅಳತೆ 100 ರವರೆಗೆ ಇತ್ತು. ಆದರೆ ಇದರ ಅನುಮತಿಸುವ ಮಿತಿ 25,000 ಆಗಿದೆ. ಸಂಗಮದಿಂದ ದೂರದಲ್ಲಿರುವ ಕೆಲವು ಇತರ ಸ್ಥಳಗಳಿಂದ ತೆಗೆದುಕೊಂಡ ಮಾದರಿಗಳಲ್ಲಿ ಮಲ ಬ್ಯಾಕ್ಟೀರಿಯಾದ ಅಳತೆ ಸುಮಾರು 1,200-1,300 ಆಗಿರಬಹುದು. ಏಕೆಂದರೆ ಅಲ್ಲಿ ಬಹುಶಃ ಎಮ್ಮೆಗಳನ್ನು ಆ ಸ್ಥಳಗಳಿಗೆ ಕರೆದೊಯ್ಯಲಾಗುತ್ತದೆ ಮತ್ತು ಅವುಗಳ ಮಲವು ಈ ಬ್ಯಾಕ್ಟೀರಿಯಾಗಳ ಪ್ರಮಾಣವನ್ನು ಹೆಚ್ಚಿಸುತ್ತದೆ.” ಎಂದು ಅವರು ಹೇಳಿದ್ದಾರೆ.

“ಮಹಾಕುಂಭದ ಯಶಸ್ವಿ ಸಂಘಟನೆಯ ಮೂಲಕ ರಾಷ್ಟ್ರ ನಿರ್ಮಾಣ” ಎಂಬ ಕಾರ್ಯಕ್ರಮದಲ್ಲಿ ಭಾರತೀಯ ನಿರ್ವಹಣಾ ಸಂಸ್ಥೆ ಮತ್ತು ಭಾರತೀಯ ಅಂಚೆ ಸೇವೆಯ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ಅವರು ಈ ಹೇಳಿಕೆ ನೀಡಿದ್ದಾರೆ.

ಹಿಂದೂ ಕ್ಯಾಲೆಂಡರ್‌ನಲ್ಲಿ ಆಧ್ಯಾತ್ಮಿಕವಾಗಿ ಮಹತ್ವದ ದಿನವಾದ ಮೌನಿ ಅಮವಾಸ್ಯೆಯ ಸಂದರ್ಭದಲ್ಲಿ ಪವಿತ್ರ ಸ್ನಾನ ಮಾಡಲು ಹೆಚ್ಚಿನ ಸಂಖ್ಯೆಯ ಯಾತ್ರಿಕರು ಆಗಮಿಸಿದ್ದಾಗ ಮಹಾ ಕುಂಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿದರು ಮತ್ತು 60 ಜನರು ಗಾಯಗೊಂಡರು ಎಂದು ವರದಿಯಾಗಿದೆ.

“ಜನಸಂದಣಿ ನದಿಯಲ್ಲಿನ ನೀರಿನ ಪ್ರವಾಹದಂತೆ ಹರಿಯುತ್ತಿತ್ತು. ಈ ಪ್ರವಾಹವನ್ನು ನಿಲ್ಲಿಸಲು ಪ್ರಯತ್ನಿಸಿದಾಗಲೆಲ್ಲಾ, ಅದು ಬಲವಂತವಾಗಿ ಹೊರಬರುತ್ತದೆ ಅಥವಾ ತೀವ್ರ ಹರಡಿ ಹಾನಿಯನ್ನುಂಟುಮಾಡುತ್ತದೆ. ಅಂದಿನ ರಾತ್ರಿ ಸ್ಥಳದಲ್ಲಿ ಭಾರಿ ಜನಸಂದಣಿ ಇತ್ತು ಮತ್ತು ಎಲ್ಲರೂ ಬೆಳಿಗ್ಗೆ 4 ಗಂಟೆಗೆ ಪವಿತ್ರ ಸ್ನಾನ ಮಾಡಲು ಹೊರಟಾಗ ಈ ಕಾಲ್ತುಳಿತ ಸಂಭವಿಸಿದೆ.” ಎಂದು ಮುಖ್ಯಮಂತ್ರಿ ಸೋಮವಾರ ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ಉಲ್ಲೇಖಿಸಿದೆ.

ಜನವರಿ 28 ರಂದು ಸಂಜೆ 7.30 ಕ್ಕೆ ಮೌನಿ ಅಮಾವಾಸ್ಯೆ ಪ್ರಾರಂಭವಾದ ಕಾರಣ ಜನಸಂದಣಿ ಹೆಚ್ಚಾಯಿತು ಮತ್ತು ಘಟನೆ ಬೆಳಗಿನ ಜಾವ 1 ರಿಂದ 1.30 ರ ನಡುವೆ ಸಂಭವಿಸಿದೆ ಎಂದು ಅವರು ಹೇಳಿದ್ದಾರೆ.

“ಆ ಸಮಯದಲ್ಲಿ ಪ್ರಯಾಗ್‌ರಾಜ್‌ ಮತ್ತು ಕುಂಭಮೇಳ ಪ್ರದೇಶದಲ್ಲಿ ಎಂಟು ಕೋಟಿ ಭಕ್ತರು ಮತ್ತು ಸಾಧುಗಳು ಹಾಜರಿದ್ದರು. ಅವರು ಭಯಭೀತರಾಗಿದ್ದರಿಂದ ಈ ಘಟನೆಯನ್ನು ನಾವು ಅತಿಯಾಗಿ ಹೈಲೈಟ್ ಮಾಡಲು ನಾವು ಅವಕಾಶ ನೀಡಲಿಲ್ಲ. ಒಂದು ವೇಳೆ ಹಾಗೆ ಆಗಿದ್ದರೆ ಪರಿಸ್ಥಿತಿ ಇನ್ನಷ್ಟು ಹದಗೆಡಬಹುದಿತ್ತು” ಎಂದು ಅವರು ಪಿಟಿಐಗೆ ತಿಳಿಸಿದ್ದಾರೆ.

ಆ ದಿನ ಬೆಳಿಗ್ಗೆ 13 ಅಖಾಡಗಳ ಮಠಾಧೀಶರು ಸಹ ಪವಿತ್ರ ಸ್ನಾನ ಮಾಡುವ ಬಗ್ಗೆ ನಿರ್ಧರಿಸಲಾಗಿತ್ತು ಎಂದು ಆದಿತ್ಯನಾಥ್ ಹೇಳಿದ್ದಾರೆ. ಅಖಾಡಗಳು ಎಂದರೆ, ನಿರ್ದಿಷ್ಟ ಆಧ್ಯಾತ್ಮಿಕ ಸಂಪ್ರದಾಯಗಳನ್ನು ಅನುಸರಿಸುವ ಮಠಾಧೀಶರ ಸಂಸ್ಥೆಗಳಾಗಿವೆ.

“ಅಖಾಡಗಳ ಸ್ನಾನ ಯಾವಾಗಲೂ ಒಂದು ಸವಾಲಾಗಿರುತ್ತದೆ. ಏಕೆಂದರೆ ಯಾರು ಮೊದಲು ಸ್ನಾನ ಮಾಡುತ್ತಾರೆ ಎಂಬುದರ ಕುರಿತು ಹಿಂಸಾಚಾರ ನಡೆಯುತ್ತಿತ್ತು. ಸ್ನಾನ ಬೆಳಿಗ್ಗೆ 4 ಗಂಟೆಗೆ ಪ್ರಾರಂಭವಾಗಬೇಕಿತ್ತು, ಮತ್ತು ಕಾಲ್ತುಳಿತದ ಹೊರತಾಗಿಯೂ ಎಲ್ಲಾ ಅಖಾಡಗಳು ಸಿದ್ಧವಾಗಿದ್ದವು. ಆದರೆ ಬೆಳಿಗ್ಗೆ 3 ಗಂಟೆಗೆ, ಒಂದು ಘಟನೆ ನಡೆದ ಕಾರಣ ಅವರ ಸ್ನಾನವನ್ನು ಮುಂದೂಡಲು ನಾನು ವಿನಂತಿಸಿದೆ.” ಎಂದು ಅವರು ಹೇಳಿದ್ದಾರೆ.

ಮಹಾ ಕುಂಭದ ಸಮಯದಲ್ಲಿ ಯಾತ್ರಿಕರು ಪವಿತ್ರ ಸ್ನಾನ ಮಾಡುತ್ತಿದ್ದ ನದಿ ನೀರಿನಲ್ಲಿ ಮಲದಲ್ಲಿ ಸಾಮಾನ್ಯವಾಗಿ ಕಂಡುಬರುವ ಬ್ಯಾಕ್ಟೀರಿಯಾಗಳು ಹೆಚ್ಚಿನ ಮಟ್ಟದ ಕಂಡುಬಂದಿವೆ ಎಂಬ ವರದಿಗಳನ್ನು ಮುಖ್ಯಮಂತ್ರಿ ತಿರಸ್ಕರಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಫೆಬ್ರವರಿ 3 ರಂದು, ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಗೆ ಮಹಾ ಕುಂಭ ಯಾತ್ರಾ ಸ್ಥಳದ ನದಿ ನೀರಿನ ಗುಣಮಟ್ಟವು ಮಲದಲ್ಲಿ ಕಂಡುಬರುವ ಬ್ಯಾಕ್ಟೀರಿಯಾ ಹೆಚ್ಚಿನ ಮಟ್ಟದಲ್ಲಿ ಇರುವುದರಿಂದ ಅದು ಸ್ನಾನಕ್ಕೆ ಸೂಕ್ತವಲ್ಲ ಎಂದು ತಿಳಿಸಿತ್ತು.

“2013 ರ ಕುಂಭದಲ್ಲಿ ಗಂಗಾ ನದಿಯಲ್ಲಿ ಸ್ನಾನ ಮಾಡಲು ಅಂದಿನ ಮಾರಿಷಸ್ ಪ್ರಧಾನಿ ನಿರಾಕರಿಸಿದ್ದರು. ನಾವು ಮೊದಲ ದಿನದಿಂದಲೂ ಅದನ್ನು ಮನಸ್ಸಿನಲ್ಲಿಟ್ಟುಕೊಂಡಿದ್ದೆವು ಮತ್ತು ಗಂಗಾ ಅಥವಾ ಯಮುನಾಗೆ ಯಾವುದೇ ಒಳಚರಂಡಿ ಅಥವಾ ನಲ್ಲಾ ಸೋರಿಕೆಯಾಗಬಾರದು ಎಂದು ನಿರ್ಧರಿಸಿದ್ದೇವೆ.” ಎಂದು ಆದಿತ್ಯನಾಥ್ ಅವರು ಹೇಳಿದ್ದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ಸೋಮವಾರ ವರದಿ ಮಾಡಿದೆ.

“ಉತ್ತರ ಪ್ರದೇಶದ ಗಂಗಾ ನದಿಯ ಅತ್ಯಂತ ನಿರ್ಣಾಯಕ ಕೇಂದ್ರ ಕಾನ್ಪುರದಲ್ಲಿದೆ. 125 ವರ್ಷಗಳಿಂದ ಸಿಸಾಮೌ ಕೇಂದ್ರದಲ್ಲಿ ಪ್ರತಿದಿನ 4 ಕೋಟಿ ಲೀಟರ್‌ಗಿಂತಲೂ ಹೆಚ್ಚು ಒಳಚರಂಡಿ ನೀರು ಗಂಗಾಕ್ಕೆ ಹರಿಯುತ್ತಿತ್ತು. “ಮೂರು ವರ್ಷಗಳ ಹಿಂದೆ ನಾವು ಇದನ್ನು ಪರಿಹರಿಸಿದ್ದೇವೆ” ಎಂದು ಅವರು ಹೇಳಿದ್ದಾರೆ.

ನೀರಿನ ಮಾಲಿನ್ಯದ ವರದಿಗಳನ್ನು “ನಕಲಿ” ಎಂದು ಕರೆದ ಮುಖ್ಯಮಂತ್ರಿ, ಈ ಬಗ್ಗೆ ಸರ್ಕಾರಿ ಮತ್ತು ಖಾಸಗಿ ಪ್ರಯೋಗಾಲಯಗಳು ತನಿಖೆ ನಡೆಸಿವೆ ಎಂದು ಹೇಳಿದ್ದಾರೆ. “ಜನವರಿ 11 ಮತ್ತು ಫೆಬ್ರವರಿ 26 ರ ನಡುವೆ ನಾವು ನಿಯಮಿತವಾಗಿ ನೀರಿನ ಮಾದರಿಗಳನ್ನು ತೆಗೆದುಕೊಂಡಿದ್ದೇವೆ. ಅದನ್ನು ತೆಗೆದುಕೊಂಡಾಗಲೆಲ್ಲಾ, ಸಂಗಮ್ನಲ್ಲಿ BOD ಅಳತೆ 3 ಕ್ಕಿಂತ ಕಡಿಮೆ ಕಂಡುಬಂದಿದೆ. ಸಂಗಮ್‌ನಲ್ಲಿ ಕರಗಿದ ಆಮ್ಲಜನಕವು ಯಾವಾಗಲೂ 10 ಕ್ಕಿಂತ ಹೆಚ್ಚಿತ್ತು.” ಎಂದು ಅವರು ಹೇಳಿಕೊಂಡಿದ್ದಾರೆ. ಸಂಗಮ ಎಂದರೆ, ಗಂಗಾ, ಯಮುನಾ ಮತ್ತು ಪೌರಾಣಿಕ ಸರಸ್ವತಿ ನದಿಗಳ ಸಂಗಮ ಸ್ಥಳವಾಗಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ತಕ್ಷಣ ಮಕ್ಕಳನ್ನು ಹೊಂದಿ’ | ಕ್ಷೇತ್ರ ವಿಂಗಡನೆ ಬಗ್ಗೆ ತಮಿಳುನಾಡು ನಿವಾಸಿಗಳಿಗೆ ಸಿಎಂ ಸ್ಟಾಲಿನ್ ಸಲಹೆ

‘ತಕ್ಷಣ ಮಕ್ಕಳನ್ನು ಹೊಂದಿ’ | ಕ್ಷೇತ್ರ ವಿಂಗಡನೆ ಬಗ್ಗೆ ತಮಿಳುನಾಡು ನಿವಾಸಿಗಳಿಗೆ ಸಿಎಂ ಸ್ಟಾಲಿನ್ ಸಲಹೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...