Homeಕರ್ನಾಟಕಜಯನಗರ ಮತಎಣಿಕೆ ವಿವಾದ : ಸೌಮ್ಯ ರೆಡ್ಡಿ ವಿರುದ್ಧದ ಬಿಜೆಪಿ ಶಾಸಕ ರಾಮಮೂರ್ತಿ ಅರ್ಜಿ ವಜಾಗೊಳಿಸಿದ...

ಜಯನಗರ ಮತಎಣಿಕೆ ವಿವಾದ : ಸೌಮ್ಯ ರೆಡ್ಡಿ ವಿರುದ್ಧದ ಬಿಜೆಪಿ ಶಾಸಕ ರಾಮಮೂರ್ತಿ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್!

- Advertisement -
- Advertisement -

ಚುನಾವಣಾ ತಕರಾರು ಅರ್ಜಿಗೆ ಸಂಬಂಧಿಸಿ ಪರಾಜಿತ ಅಭ್ಯರ್ಥಿ ಹಾಗೂ ಅರ್ಜಿದಾರರಾದ ಸೌಮ್ಯ ರೆಡ್ಡಿ ಅವರಿಗೆ ಡಿವಿಡಿ ಮತ್ತು ಇತರ ಕೆಲವು ದಾಖಲೆಗಳನ್ನು ರೆಕಾರ್ಡ್‌ನಲ್ಲಿ ಇರಿಸಲು ಅನುಮತಿ ನೀಡಿದ್ದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಸಿ.ಕೆ ರಾಮಮೂರ್ತಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಮಾ.3) ವಜಾಗೊಳಿಸಿದೆ.

ಹೈಕೋರ್ಟ್‌ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂಕೋರ್ಟ್‌ ನಿರಾಕರಿಸಿದ್ದು, ಸಿ.ಕೆ ರಾಮಮೂರ್ತಿ ಅವರಿಗೆ ಲಿಖಿತ ಹೇಳಿಕೆ ಸಲ್ಲಿಸಲು ಮೂರು ವಾರಗಳ ಕಾಲಾವಕಾಶ ನೀಡಿದೆ ಎಂದು ವರದಿಯಾಗಿದೆ.

ಶಾಸಕ ಸಿ.ಕೆ ರಾಮಮೂರ್ತಿ ವಿರುದ್ಧ ಸೌಮ್ಯಾರೆಡ್ಡಿ ಅವರು ಕರ್ನಾಟಕ ಹೈಕೋರ್ಟ್‌ಗೆ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ತಮ್ಮ ಅರ್ಜಿಯಲ್ಲಿ ರಾಮಮೂರ್ತಿ ಅವರ ಆಯ್ಕೆಯನ್ನು ಅಸಿಂಧು ಎಂಬುದಾಗಿ ಘೋಷಿಸಬೇಕು ಎಂದು ಕೋರಿದ್ದರು.

ಸೌಮ್ಯರೆಡ್ಡಿ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್‌, ಡಿವಿಡಿ ಸೇರಿದಂತೆ 10 ಪ್ರಮುಖ ದಾಖಲೆಗಳನ್ನು ಹಾಜರುಪಡಿಸಲು ಫೆ.14ರಂದು ಅನುಮತಿ ನೀಡಿತ್ತು.

ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸಿ.ಕೆ ರಾಮಮೂರ್ತಿ ಅವರು ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದರು. ಈ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಪ್ರಕರಣದ ಹಿನ್ನೆಲೆ : 2023ರಲ್ಲಿ ನಡೆದಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ, ಜಯನಗರ ಕ್ಷೇತ್ರದಿಂದ ಸಿ.ಕೆ ರಾಮಮೂರ್ತಿ ಬಿಜೆಪಿ ಅಭ್ಯರ್ಥಿಯಾಗಿ ಮತ್ತು ಸೌಮ್ಯರೆಡ್ಡಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಈ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸೌಮ್ಯರೆಡ್ಡಿ ಕೇವಲ 16 ಮತಗಳಿಂದ ಪರಾಭವಗೊಂಡಿದ್ದರು.

ಈ ಸಂಬಂಧ ಸಿ.ಕೆ ರಾಮಮೂರ್ತಿ ಅವರ ಆಯ್ಕೆ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ್ದ ಸೌಮ್ಯರೆಡ್ಡಿ, ಮತಎಣಿಕೆ ಪ್ರಕ್ರಿಯೆಯಲ್ಲಿ ಏನೋ ವ್ಯತ್ಯಾಸವಾಗಿದೆ ಎಂದು ಅನುಮಾನ ವ್ಯಕ್ತಪಡಿಸಿದ್ದರು.

“ವಿದ್ಯುನ್ಮಾನ ಮತ ಯಂತ್ರಗಳ ಮತ ಎಣಿಕೆಯಲ್ಲಿ ನಾನು ಮುನ್ನಡೆ ಸಾಧಿಸಿದ್ದೆ. ಆದರೆ ಅಂಚೆ ಮತಗಳ ಎಣಿಕೆಯಲ್ಲಿ ವ್ಯತ್ಯಾಸವಾಗಿದೆ. ಒಟ್ಟು 827 ಅಂಚೆ ಮತಗಳಲ್ಲಿ ವ್ಯತ್ಯಾಸವಾಗಿದ್ದು, ಪ್ರತಿ ಬಾರಿ ಮರು ಎಣಿಕೆ ಮಾಡಿದಾಗಲೂ ಪ್ರತ್ಯೇಕ ಅಂಕಿ-ಅಂಶ ಬಂದಿದೆ. ಮತ ಎಣಿಕೆ ಆರಂಭವಾದ ನಂತರವೂ ಅಂಚೆ ಮೂಲಕ ಬಂದಿದ್ದ ಮತ ಪತ್ರಗಳನ್ನು ಎಣಿಕೆಗೆ ಪರಿಗಣಿಸಲಾಗಿದೆ” ಎಂದು ಸೌಮ್ಯಾರೆಡ್ಡಿ ಆರೋಪಿಸಿದ್ದರು.

ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ಆರೋಪ : ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಸೇರಿ 12 ಮಂದಿ ವಿರುದ್ಧ ಎಫ್‌ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...