HomeUncategorizedಮಾದರಿ ನೀತಿಸಂಹಿತೆ ಎಂದರೇನು? : ಡೇಟಾಖೋಲಿ ಬೈ ಡೇಟಾಮ್ಯಾಟಿಕ್ಸ್‌

ಮಾದರಿ ನೀತಿಸಂಹಿತೆ ಎಂದರೇನು? : ಡೇಟಾಖೋಲಿ ಬೈ ಡೇಟಾಮ್ಯಾಟಿಕ್ಸ್‌

- Advertisement -
- Advertisement -

ಜನರಿಂದ ಆರಿಸಿ ಹೋಗಿ ಜನವಿರೋಧಿ ಕೆಲಸವನ್ನು ಕಾಯಿದೇ ಶೀರ ಮಾಡುವವರಿಗೆ ನಮ್ಮ ದೇಶದೊಳಗ ಜನಪ್ರತಿನಿಧಿ ಅಂತ ಹೆಸರು.

ಅಂಥವರು ಒಲ್ಲೆ ಒಲ್ಲೆ ಅನಕೋತ ಮಾಡಿದ ಅನೇಕ ಕಾನೂನುಗಳಲ್ಲಿ ಒಂದು ಅಂದರ ಚುನಾವಣೆ ಆಯೋಗದ ಮಾದರಿ ನೀತಿಸಂಹಿತೆ (ಮಾನಿಸಂ). ಖರೇ ಹೇಳಬೇಕಂದರ ಅದು ಸಂಸತ್ತು ಮಾಡಿದಲ್ಲ. ಆಯೋಗ ಮಾಡಿದ್ದು ಅಧೀನ ಶಾಸಕಾಂಗದ ಅಧಿಕಾರದೊಳಗ.

ಕೇಂದ್ರ ಚುನಾವಣಾ ಆಯೋಗ ಮಾದರಿ ನೀತಿಸಂಹಿತೆಯನ್ನ ಪ್ರತಿ ಚುನಾವಣೆಗೆ ಮುಂಚೆ ಬದಲಿಸಿಗೋತ, ಗಟ್ಟಿ ಮಾಡಿಕೋತ, ತಪ್ಪುಗಳನ್ನು ತಿದ್ದಿಕೋತ, ಹಿಂದಿನ ಚುನಾವಣೆ ಪಾಠಗಳನ್ನು ಕಲಕೋತ ಖರೇ ಅರ್ಥದೊಳಗ ಅದನ್ನ ಮಾದರಿ ಮಾಡಬೇಕು ಅನ್ನೊ ಕೆಲಸ ಮಾಡಿಕೋತ ಬಂದದ.

ಅದರ ಕೆಲವು ಅಂಶಗಳನ್ನು ನೋಡೋಣ.
 ಹೊಸ ಯೋಜನೆ ಘೋಷಿಸಬಾರದು, ಹೊಸ ಕಾರ್ಯಕ್ರಮ ಶುರುಮಾಡಬಾರದು
 ಸರಕಾರಿ ವಸತಿಗೃಹ, ಕಚೇರಿಗಳನ್ನ ರಾಜಕೀಯ ಕಾರಣಗಳಿಗೆ ಬಳಸಬಾರದು, ಮೀಟಿಂಗು ಮಾಡಬಾರದು
 ಸರಕಾರಿ ಸ್ಥಳಗಳನ್ನ ಅಂದಗೆಡಿಸಬಾರದು.
 ವಿರೋಧಿಗಳ ಮನೀ ಮುಂದ, ಅವರಿಗೆ ಕಿರಿಕಿರಿ ಆಗೋ ಹಂಗ ಪ್ರಭಾತಫೇರಿ ತೆಗೀಬಾರದು, ಹೊಯ್ಕೋ- ಬಡಕೋ ಮಾಡಬಾರದು
 ಸರಕಾರಿ ಮಾಧ್ಯಮದೊಳಗ ಎಲ್ಲಾ ಪಕ್ಷಗಳಿಗೂ ಸಮಾನ ಅವಕಾಶ ಸಿಗಬೇಕು
 ಮೈಕಾಸುರನನ್ನ ರಾತ್ರಿ ಒದರಸಬಾರದು.
 ಆಡಳಿತ ಪಕ್ಷ ತನ್ನ ಶಕ್ತಿಯ ದುರುಪಯೋಗ ಮಾಡಬಾರದು
 ಮಂತ್ರಿಗಳು ಗಾಡಿ, ಘೋಡಾ, ಪೀಏ, ಪೀಪಿ, ಗನ್ ಮ್ಯಾನು, ಉಪಯೋಗಿಸಬಾರದು.
 ಮತದಾನದ ದಿವಸ ಮತದಾರ ಮಹಾಪ್ರಭುಗಳನ್ನ ಹುದ್ದರಿಗಳು ತಮ್ಮ ಗಾಡಿಯೊಳಗ ಕರಕೊಂಡು ಹೋಗಬಾರದು.
 (ಅಧಿಕಾರಿಗಳಿಗೆ ಗೊತ್ತಾಗೋ ಹಂಗ) ಹಣ- ಹೆಂಡ ಹಂಚಬಾರದು, ಇತ್ಯಾದಿ, ಇತ್ಯಾದಿ.

ಒಟ್ಟಿನೊಳಗ, ನಾಯಕರು ಜನಪ್ರೀತಿಯಿಂದ ಚುನಾವಣೆ ಗೆಲ್ಲಬೇಕೇ ಹೊರತು ಜನರನ್ನು ಪ್ರಲೋಭಿಸಿ ಅಥವಾ ಹೆದರಿಸಿ ಗೆಲ್ಲಬಾರದು ಅನ್ನೋದು ಮಾನೀಸಂ ಉದ್ದೇಶ.

ಇದು ಚುನಾವಣೆ ಘೋಷಣೆ ಆದತಕ್ಷಣ ಜಾರಿಗೆ ಬರತದ. ಚುನಾವಣೆ ಪ್ರಕ್ರಿಯೆ ಮುಗಿಯೋ ತನಕಾ ಇರತದ.

ಬಹುಮಟ್ಟಿಗೆ ಯಾವುದಾದರೂ ಕ್ಷೇತ್ರದೊಳಗ ಚುನಾವಣೆ ಬಂದರ ಆ ಇಡೀ ರಾಜ್ಯ ಅಥವಾ ಜಿಲ್ಲೆಗೆ ಇದು ಲಾಗೂ ಆಗತದ.

ಇದನ್ನು ಉಲ್ಲಂಘಿಸಿದರ ಜೈಲಿಗೆ ಹಾಕೋದರಿಂದ ಹಿಡದು ಮುಂದಿನ ಚುನಾವಣೆಗೆ ಅಯೋಗ್ಯರನ್ನಾಗಿ ಮಾಡೋ ತನಕಾ ಆಯೋಗಕ್ಕ ಅಧಿಕಾರ ಐತಿ.

ಹಿಂದೆಲ್ಲಾ ಚುನಾವಣೆ ಅಧಿಕಾರಿಗಳಿಗೆ ಹೆಚ್ಚಿನ ಡ್ಯೂಟಿ ಹಾಕಿ ಮಾನೀಸಂ ಮೇಲುಸ್ತುವಾರಿ ಕೊಡತಿದ್ದರು. ಈಗ ಮಾನೀಸಂ ಜಾರಿಗೆ ಅಂತನೇ ಬ್ಯಾರೆ ಅಧಿಕಾರಿ ಇರತಾರ.
ಆದರೂ ಚುನಾವಣೆಗೆ ಬಡಿದ ಮುಸುಕು ಸರದಿಲ್ಲ. ಅವು ಪಾರದರ್ಶಕ ಆಗಿಲ್ಲ ಅನ್ನೋ ಮಾತು ಕಡಿಮಿ ಆಗಿಲ್ಲ.

ಇವೆಲ್ಲವನ್ನೂ ನಾವು ಸರಿಯಾಗಿ ಪಾಲಿಸಲಿಕ್ಕೆ ಹತ್ತೇವೇನು? ಇದಕ್ಕ `ಇಲ್ಲ’ ಅನ್ನೋ ಯಾಷಿ ಮಾತಿನಗಿಂತಾ `ಕಮ್ಮಿ ಖರೇ’ ಅನ್ನೋ ಸಿಹಿಮಾತಿನ ಉತ್ತರನ ಸರಿ ಆದೀತು.
ಈ ಹಿನ್ನೆಲೆಯೊಳಗ ಒಂದು ವಿಷಯ ನೆನಪು ಆಗತದ.

`ಅವರು ಭಾಳ ಪ್ರತಿಭಾವಂತರು, ಒಳ್ಳೆಯವರು, ಇತರರಿಗೆ ಮಾದರಿಯಾಗಬಲ್ಲವರು ಆದರೆ ಅವರಿಗೆ ಸಿಗಬೇಕಾದ ಮನ್ನಣೆ ಸಿಗಲಿಲ್ಲ” ಅನ್ನೋದು ಏನದಲಾ, ಅದು ನಂ ಹಿಂದೂಸ್ತಾನದಾಗ ಕೇಳಿ ಬರಕೋತನ ಇರೋ ಸಿಕ್ಕಾಪಟ್ಟೆ ಕೂಗುಗಳೊಳಗ ಒಂದು. ಈ ಮಾತಿಗೆ ತಕ್ಕಂತೆ ಇದ್ದ ಒಬ್ಬ ದೊಡ್ಡ ಮನಿಷ ಅಂದರ ಮಾಜಿ ಉಪಪ್ರಧಾನಿ, ಪ್ರಕಾಂಡಪಂಡಿತ ಬಾಬು ಜಗಜೀವನರಾಂ. ಅವರ ಧರ್ಮಪತ್ನಿ ಇಂದ್ರಾಣಿ ದೇವಿ. ಕಾನಪುರದ ಸಾಮಾಜಿಕ ಕಾರ್ಯಕರ್ತರ ಮಗಳಾದ ಇಂದ್ರಾಣಿ ದೇವಿ ಅವರು ಒಂದು ಪುಸ್ತಕ ಬರೆದರು ಅದರ ಹೆಸರು `ದೇಖಿ, ಸುನಿ, ಬೀತಿ ಬಾತೆಂ’ (ನೋಡಿದ, ಕೇಳಿದ, ಆಗಿ ಹೋದ ಮಾತುಗಳು).

ಅದರೊಳಗ ಒಂದು ಭಾರಿ ಮಜಾ ವಿಷಯ ಐತಿ. “ಅಮೆರಿಕಯಲ್ಲಿ ಬಿಳಿಯರು ಕರಿಯರಿಗೆ ಹಿಂಸೆ ಕೊಡಬಾರದು ಅಂತ ಅಬ್ರಹಾಂ ಲಿಂಕನ್ ಹಾಗೂ ಇತರ ನಾಯಕರು ಪ್ರಯತ್ನಿಸಿದಾಗ ಅಲ್ಲಿ ಭಯಂಕರ ಪ್ರತಿರೋಧ ಬಂತು. ಆದರೆ ಭಾರತದಲ್ಲಿ ಗುಲಾಮಗಿರಿ ಹಾಗೂ ಅಸ್ಪೃಶ್ಯತೆ ಯನ್ನು ಪ್ರತಿಬಂಧಿಸಿದಾಗ ಹಾಗಾಗಲಿಲ್ಲ” ಅನ್ನೋದು.

ಅದಕ್ಕೆ ಇಂದ್ರಾಣಿ ಅವರು ಕೊಡುವ ಕಾರಣ ಇನ್ನೂ ಮಜಾ. “ಯಾಕೆ ಗೊತ್ತೇ? ಈ ಕಾನೂನುಗಳನ್ನು ಈ ದೇಶದಲ್ಲಿ ಯಾರೂ ಸರಿಯಾಗಿ ಜಾರಿ ಮಾಡೋದಿಲ್ಲ. ಇಂತಹ ಎಷ್ಟು ಕಾನೂನು ಬಂದರೂ ಇಲ್ಲಿ ನಿಮ್ನ ವರ್ಗದ ಜನರ ಬದುಕು ಬದಲಾಗೋದಿಲ್ಲ” ಅಂತ ಅವರು ಷರಾ ಎಳೀತಾರ. ಆ ಪುಸ್ತಕ ಓದಿ ಕೆಳಗ ಇಡಬೇಕಾದರ ‘ಐವತ್ತು ವರ್ಷದ ಹಿಂದೆ ಹೇಳಿದ ಈ ಮಾತುಗಳು ಎಷ್ಟು ಪ್ರಸ್ತುತ’ ಅಂತ ಮತ್ತ ಕ್ಲೀಷೆಯೊಳಗ ಮಾತಾಡಬೇಕಾಗತದ.

ಹೆಚ್ಚಿನ ಮಾಹಿತಿಗೆ – ಇಲ್ಲಿ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...