Homeಮುಖಪುಟಸೂಟ್‌ ಕೇಸ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತೆಯ ಶವ ಪತ್ತೆ ಪ್ರಕರಣ : ಫೇಸ್‌ಬುಕ್‌ ಗೆಳೆಯನ ಬಂಧನ

ಸೂಟ್‌ ಕೇಸ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತೆಯ ಶವ ಪತ್ತೆ ಪ್ರಕರಣ : ಫೇಸ್‌ಬುಕ್‌ ಗೆಳೆಯನ ಬಂಧನ

- Advertisement -
- Advertisement -

ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ ಶವ ಸೂಟ್‌ಕೇಸ್‌ನಲ್ಲಿ ಪತ್ತೆಯಾದ ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಪೊಲೀಸರು ಸೋಮವಾರ (ಮಾ.3) ಬಂಧಿಸಿದ್ದಾರೆ.

ಮೃತ ಹಿಮಾನಿ ಅವರ ಫೇಸ್‌ಬುಕ್ ಗೆಳೆಯ, ಹರಿಯಾಣದ ಜಜ್ಜರ್ ಜಿಲ್ಲೆಯ ಕೈಪುರ್ ಗ್ರಾಮದ ಸಚಿನ್ ಅಲಿಯಾಸ್ ಧಿಲ್ಲು (30) ಬಂಧಿತ ವ್ಯಕ್ತಿ.

ಈತ ಕಳೆದ ಒಂದೂವರೆ ವರ್ಷದಿಂದ ಫೇಸ್‌ಬುಕ್ ಮೂಲಕ ಹಿಮಾನಿ ಅವರಿಗೆ ಪರಿಚಯವಿದ್ದ. ಕಳೆದ ಏಳು ತಿಂಗಳಿನಿಂದ ಹರಿಯಾಣದ ರೋಹ್ತಕ್‌ ಜಿಲ್ಲೆಯ ವಿಜಯನಗರದ ಹಿಮಾನಿಯವರ ಮನೆಗೆ ಆಗಾಗ ಭೇಟಿ ನೀಡುತ್ತಿದ್ದ. ಹಿಮಾನಿ ಅವರ ಸಹೋದರ ಮತ್ತು ತಾಯಿ ದೀರ್ಘ ಸಮಯದಿಂದ ದೆಹಲಿಯಲ್ಲಿ ವಾಸಿಸುತ್ತಿದ್ದರು.

ಆರೋಪಿ ಸಚಿನ್‌ಗೆ ಈಗಾಗಲೇ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಆತನನ್ನು ನ್ಯಾಯಾಲಯ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ಪೊಲೀಸರು ಹಿಮಾನಿಯವರಿಗೆ ಸಂಬಂಧಿಸಿದ ಮೊಬೈಲ್ ಫೋನ್, ಲ್ಯಾಪ್‌ಟಾಪ್ ಮತ್ತು ಆಭರಣವನ್ನು ಜಜ್ಜರ್‌ನ ಕನೋಡ ಗ್ರಾಮದಲ್ಲಿರುವ ಆರೋಪಿಯ ಮೊಬೈಲ್ ಅಂಗಡಿಯಿಂದ ವಶಕ್ಕೆ ಪಡೆಯಲಾಗಿದೆ ಎಂದು ವರದಿಯಾಗಿದೆ.

ಮಾರ್ಚ್ 1ರಂದು ರೋಹ್ತಕ್-ದೆಹಲಿ ಹೆದ್ದಾರಿಯ ಸಂಪ್ಲಾ ಬಸ್ ನಿಲ್ದಾಣದ ಬಳಿ ಸೂಟ್‌ಕೇಸ್‌ನಲ್ಲಿ ಹಿಮಾನಿಯವರ ಶವವನ್ನು ಪೊಲೀಸರು ಪತ್ತೆ ಮಾಡಿದ್ದರು.

ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿರುವ ರೋಹ್ತಕ್ ರೇಂಜ್‌ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಕ್ರಿಶನ್ ಕುಮಾರ್ ರಾವ್, “ಫೆಬ್ರವರಿ 28ರಂದು ಮನೆಯಲ್ಲಿ ನಡೆದ ಜಗಳದಲ್ಲಿ ಸಚಿನ್ ಮೊಬೈಲ್ ಫೋನ್ ಚಾರ್ಜರ್ ಸಹಾಯದಿಂದ ಹಿಮಾನಿ ಅವರನ್ನು ಕೊಂದಿದ್ದಾನೆ” ಎಂದು ಹೇಳಿದ್ದಾರೆ.

“ಆರೋಪಿ ಸಾಮಾಜಿಕ ಜಾಲತಾಣದ ಮೂಲಕ ಕಳೆದ ಒಂದೂವರೆ ವರ್ಷದಿಂದ ಹಿಮಾನಿ ಅವರ ಜೊತೆ ಸಂಪರ್ಕದಲ್ಲಿದ್ದ. ವಿಜಯನಗರದ ಅವರ ಮನೆಗೆ ಕಳೆದ ಅರೇಳು ತಿಂಗಳಿನಿಂದ ಆತ ಆಗಾಗ ಭೇಟಿ ಕೊಡುತ್ತಿದ್ದ. ಫೆಬ್ರವರಿ 27ರಂದು ಹಿಮಾನಿ ಮನೆಗೆ ಹೋಗಿದ್ದ ಆರೋಪಿ ಇಡೀ ರಾತ್ರಿ ಆಕೆಯೊಂದಿಗೆ ಕಳೆದಿದ್ದ. ಮರುದಿನ ಹಣಕಾಸಿನ ವಿಷಯಕ್ಕೆ ಅವರಿಬ್ಬರ ನಡುವೆ ಜಗಳ ಶುರುವಾಗಿದೆ. ಅದು ತಾರಕಕ್ಕೇರಿ ಸಚಿನ್ ಹಿಮಾನಿಯ ಕೈಗಳನ್ನು ಆಕೆಯ ದುಪಟ್ಟದಿಂದ ಕಟ್ಟಿದ್ದು, ಬಳಿಕ ಮೊಬೈಲ್ ಚಾರ್ಜರ್‌ನಿಂದ ಆಕೆಯ ಕತ್ತು ಬಿಗಿದಿದ್ದಾನೆ. ನಂತರ ಆಕೆಯ ದೇಹವನ್ನು ರಕ್ತದ ಕಲೆಗಳಿದ್ದ ಹೊದಿಕೆಯೊಂದಿಗೆ ಸೂಟ್‌ಕೇಸ್‌ನಲ್ಲಿ ತುಂಬಿದ್ದಾನೆ” ಎಂದು ಎಡಿಜಿಪಿ ತಿಳಿಸಿದ್ದಾರೆ.

“ಕೊಲೆ ಬಳಿಕ ಹಿಮಾನಿಯ ಮೊಬೈಲ್ ಫೋನ್, ಲ್ಯಾಪ್‌ಟಾಪ್ ಮತ್ತು ಆಭರಣಗಳನ್ನು ತೆಗೆದುಕೊಂಡ ಸಚಿನ್, ಅದನ್ನು ಜಜ್ಜರ್‌ನ ಕನೋಡ ಗ್ರಾಮದಲ್ಲಿರುವ ಆತನ ಮೊಬೈಲ್‌ ಅಂಗಡಿಗೆ ಕೊಂಡೊಯ್ದಿದ್ದ”.

“ಆರೋಪಿ ಸಚಿನ್ ಕಳವುಗೈದ ವಸ್ತುಗಳನ್ನು ಸಾಗಿಸಲು ಹಿಮಾನಿಯ ಸ್ಕೂಟರ್ ಬಳಸಿದ್ದ. ಬಳಿಕ ಹಿಮಾನಿಯ ಮನೆಗೆ ವಾಪಸ್ ಬಂದ ಆತ, ಹಿಮಾನಿಯ ಶವ ತುಂಬಿದ್ದ ಸೂಟ್‌ಕೇಸ್‌ ಜೊತೆ ರೋಹ್ತಕ್‌ನ ವಿಜಯ್ ನಗರದಿಂದ ದೆಹಲಿ ಬೈಪಾಸ್‌ವರೆಗೆ ಆಟೋದಲ್ಲಿ ತೆರಳಿದ್ದ. ಅಲ್ಲಿಂದ ಸಂಪ್ಲಾಗೆ (ಸುಮಾರು 26 ಕಿ.ಮೀ) ಬಸ್‌ನಲ್ಲಿ ಪ್ರಯಾಣಿಸಿದ್ದ. ನಂತರ, ಸುಮಾರು 80 ಮೀಟರ್‌ಗಳಷ್ಟು ಕಾಲ್ನಡಿಗೆಯಲ್ಲಿ ಹೋಗಿ ಸೂಟ್‌ಕೇಸ್ ಅನ್ನು ಪೊದೆಗೆ ಎಸೆದಿದ್ದ” ಎಂದು ಎಡಿಜಿಪಿ ಹೇಳಿದ್ದಾರೆ.

“ಹಿಮಾನಿ ಯುವ ಕಾಂಗ್ರೆಸ್ ಕಾರ್ಯಕರ್ತೆಯಾಗಿದ್ದರು. ಆರೋಪಿಗೆ ಯಾವುದೇ ರಾಜಕೀಯ ಸಂಪರ್ಕವಿಲ್ಲ. ಆಕೆ ಆತನಿಂದ ಹಣ ಪಡೆಯುತ್ತಿದ್ದರೋ ಅಥವಾ ಆತ ಆಕೆಯಿಂದ ಹಣ ಪಡೆಯುತ್ತಿದ್ದರೋ ಎಂಬ ಬಗ್ಗೆ ಇದುವರೆಗೆ ಯಾವುದೇ ಖಚಿತ ಮಾಹಿತಿ ಲಭ್ಯವಾಗಿಲ್ಲ. ಆರೋಪಿ ಈಗಾಗಲೇ ವಿವಾಹಿತನಾಗಿರುವುದರಿಂದ ಮತ್ತು ಆಕೆ ಒಂಟಿಯಾಗಿರುವುದರಿಂದ ಮದುವೆಯಾಗಲು ಎರಡೂ ಕಡೆಯಿಂದ ಒತ್ತಡವಿತ್ತು ಎನ್ನಲಾಗಿದೆ. ಈ ಬಗ್ಗೆಯೂ ಇಲ್ಲಿಯವರೆಗೆ ಯಾವುದೇ ಮಾಹಿತಿ ದೊರೆತಿಲ್ಲ” ಎಂದು ಪೊಲೀಸರು ತಿಳಿಸಿದ್ದಾರೆ.

ರೋಹ್ತಕ್‌ನ ವೈಶ್ ಕಾನೂನು ಕಾಲೇಜಿನ ವಿದ್ಯಾರ್ಥಿನಿಯಾಗಿದ್ದ ಹಿಮಾನಿ, ಮಾರ್ಚ್ 1ರಂದು ಶವ ಪತ್ತೆಯಾಗುವ ಮೊದಲೇ ನಾಪತ್ತೆಯಾಗಿದ್ದರು. ಇವರು ಭಾರತ್ ಜೋಡೋ ಯಾತ್ರೆಯ ಹರಿಯಾಣದ ಪಾದಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ಹೆಜ್ಜೆ ಹಾಕಿ ಗಮನ ಸೆಳೆದಿದ್ದರು.

ಸಿಸಿಟಿವಿ ವಿಡಿಯೋ ವೈರಲ್ : ಆರೋಪಿ ಸಚಿನ್ ರೋಹ್ತಕ್‌ನ ವಿಜಯನಗರದ ಮನೆಯಿಂದ ಹಿಮಾನಿಯವರ ಶವವನ್ನು ಸೂಟ್‌ಕೇಸ್‌ನಲ್ಲಿ ತುಂಬಿಕೊಂಡು ಹೋಗಿದ್ದಾರೆ ಎನ್ನಲಾದ ಸಿಸಿಟಿವಿ ವಿಡಿಯೋ ವೈರಲ್ ಆಗಿದೆ.

ಚಂಡೀಗಢ| ರೈತ ನಾಯಕರನ್ನು ಮಧ್ಯರಾತ್ರಿ ಬಂಧಿಸಿದ ಪಂಜಾಬ್ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...