Homeಮುಖಪುಟಸೂಟ್‌ ಕೇಸ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತೆಯ ಶವ ಪತ್ತೆ ಪ್ರಕರಣ : ಫೇಸ್‌ಬುಕ್‌ ಗೆಳೆಯನ ಬಂಧನ

ಸೂಟ್‌ ಕೇಸ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತೆಯ ಶವ ಪತ್ತೆ ಪ್ರಕರಣ : ಫೇಸ್‌ಬುಕ್‌ ಗೆಳೆಯನ ಬಂಧನ

- Advertisement -
- Advertisement -

ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ ಶವ ಸೂಟ್‌ಕೇಸ್‌ನಲ್ಲಿ ಪತ್ತೆಯಾದ ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಪೊಲೀಸರು ಸೋಮವಾರ (ಮಾ.3) ಬಂಧಿಸಿದ್ದಾರೆ.

ಮೃತ ಹಿಮಾನಿ ಅವರ ಫೇಸ್‌ಬುಕ್ ಗೆಳೆಯ, ಹರಿಯಾಣದ ಜಜ್ಜರ್ ಜಿಲ್ಲೆಯ ಕೈಪುರ್ ಗ್ರಾಮದ ಸಚಿನ್ ಅಲಿಯಾಸ್ ಧಿಲ್ಲು (30) ಬಂಧಿತ ವ್ಯಕ್ತಿ.

ಈತ ಕಳೆದ ಒಂದೂವರೆ ವರ್ಷದಿಂದ ಫೇಸ್‌ಬುಕ್ ಮೂಲಕ ಹಿಮಾನಿ ಅವರಿಗೆ ಪರಿಚಯವಿದ್ದ. ಕಳೆದ ಏಳು ತಿಂಗಳಿನಿಂದ ಹರಿಯಾಣದ ರೋಹ್ತಕ್‌ ಜಿಲ್ಲೆಯ ವಿಜಯನಗರದ ಹಿಮಾನಿಯವರ ಮನೆಗೆ ಆಗಾಗ ಭೇಟಿ ನೀಡುತ್ತಿದ್ದ. ಹಿಮಾನಿ ಅವರ ಸಹೋದರ ಮತ್ತು ತಾಯಿ ದೀರ್ಘ ಸಮಯದಿಂದ ದೆಹಲಿಯಲ್ಲಿ ವಾಸಿಸುತ್ತಿದ್ದರು.

ಆರೋಪಿ ಸಚಿನ್‌ಗೆ ಈಗಾಗಲೇ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಆತನನ್ನು ನ್ಯಾಯಾಲಯ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ಪೊಲೀಸರು ಹಿಮಾನಿಯವರಿಗೆ ಸಂಬಂಧಿಸಿದ ಮೊಬೈಲ್ ಫೋನ್, ಲ್ಯಾಪ್‌ಟಾಪ್ ಮತ್ತು ಆಭರಣವನ್ನು ಜಜ್ಜರ್‌ನ ಕನೋಡ ಗ್ರಾಮದಲ್ಲಿರುವ ಆರೋಪಿಯ ಮೊಬೈಲ್ ಅಂಗಡಿಯಿಂದ ವಶಕ್ಕೆ ಪಡೆಯಲಾಗಿದೆ ಎಂದು ವರದಿಯಾಗಿದೆ.

ಮಾರ್ಚ್ 1ರಂದು ರೋಹ್ತಕ್-ದೆಹಲಿ ಹೆದ್ದಾರಿಯ ಸಂಪ್ಲಾ ಬಸ್ ನಿಲ್ದಾಣದ ಬಳಿ ಸೂಟ್‌ಕೇಸ್‌ನಲ್ಲಿ ಹಿಮಾನಿಯವರ ಶವವನ್ನು ಪೊಲೀಸರು ಪತ್ತೆ ಮಾಡಿದ್ದರು.

ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿರುವ ರೋಹ್ತಕ್ ರೇಂಜ್‌ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಕ್ರಿಶನ್ ಕುಮಾರ್ ರಾವ್, “ಫೆಬ್ರವರಿ 28ರಂದು ಮನೆಯಲ್ಲಿ ನಡೆದ ಜಗಳದಲ್ಲಿ ಸಚಿನ್ ಮೊಬೈಲ್ ಫೋನ್ ಚಾರ್ಜರ್ ಸಹಾಯದಿಂದ ಹಿಮಾನಿ ಅವರನ್ನು ಕೊಂದಿದ್ದಾನೆ” ಎಂದು ಹೇಳಿದ್ದಾರೆ.

“ಆರೋಪಿ ಸಾಮಾಜಿಕ ಜಾಲತಾಣದ ಮೂಲಕ ಕಳೆದ ಒಂದೂವರೆ ವರ್ಷದಿಂದ ಹಿಮಾನಿ ಅವರ ಜೊತೆ ಸಂಪರ್ಕದಲ್ಲಿದ್ದ. ವಿಜಯನಗರದ ಅವರ ಮನೆಗೆ ಕಳೆದ ಅರೇಳು ತಿಂಗಳಿನಿಂದ ಆತ ಆಗಾಗ ಭೇಟಿ ಕೊಡುತ್ತಿದ್ದ. ಫೆಬ್ರವರಿ 27ರಂದು ಹಿಮಾನಿ ಮನೆಗೆ ಹೋಗಿದ್ದ ಆರೋಪಿ ಇಡೀ ರಾತ್ರಿ ಆಕೆಯೊಂದಿಗೆ ಕಳೆದಿದ್ದ. ಮರುದಿನ ಹಣಕಾಸಿನ ವಿಷಯಕ್ಕೆ ಅವರಿಬ್ಬರ ನಡುವೆ ಜಗಳ ಶುರುವಾಗಿದೆ. ಅದು ತಾರಕಕ್ಕೇರಿ ಸಚಿನ್ ಹಿಮಾನಿಯ ಕೈಗಳನ್ನು ಆಕೆಯ ದುಪಟ್ಟದಿಂದ ಕಟ್ಟಿದ್ದು, ಬಳಿಕ ಮೊಬೈಲ್ ಚಾರ್ಜರ್‌ನಿಂದ ಆಕೆಯ ಕತ್ತು ಬಿಗಿದಿದ್ದಾನೆ. ನಂತರ ಆಕೆಯ ದೇಹವನ್ನು ರಕ್ತದ ಕಲೆಗಳಿದ್ದ ಹೊದಿಕೆಯೊಂದಿಗೆ ಸೂಟ್‌ಕೇಸ್‌ನಲ್ಲಿ ತುಂಬಿದ್ದಾನೆ” ಎಂದು ಎಡಿಜಿಪಿ ತಿಳಿಸಿದ್ದಾರೆ.

“ಕೊಲೆ ಬಳಿಕ ಹಿಮಾನಿಯ ಮೊಬೈಲ್ ಫೋನ್, ಲ್ಯಾಪ್‌ಟಾಪ್ ಮತ್ತು ಆಭರಣಗಳನ್ನು ತೆಗೆದುಕೊಂಡ ಸಚಿನ್, ಅದನ್ನು ಜಜ್ಜರ್‌ನ ಕನೋಡ ಗ್ರಾಮದಲ್ಲಿರುವ ಆತನ ಮೊಬೈಲ್‌ ಅಂಗಡಿಗೆ ಕೊಂಡೊಯ್ದಿದ್ದ”.

“ಆರೋಪಿ ಸಚಿನ್ ಕಳವುಗೈದ ವಸ್ತುಗಳನ್ನು ಸಾಗಿಸಲು ಹಿಮಾನಿಯ ಸ್ಕೂಟರ್ ಬಳಸಿದ್ದ. ಬಳಿಕ ಹಿಮಾನಿಯ ಮನೆಗೆ ವಾಪಸ್ ಬಂದ ಆತ, ಹಿಮಾನಿಯ ಶವ ತುಂಬಿದ್ದ ಸೂಟ್‌ಕೇಸ್‌ ಜೊತೆ ರೋಹ್ತಕ್‌ನ ವಿಜಯ್ ನಗರದಿಂದ ದೆಹಲಿ ಬೈಪಾಸ್‌ವರೆಗೆ ಆಟೋದಲ್ಲಿ ತೆರಳಿದ್ದ. ಅಲ್ಲಿಂದ ಸಂಪ್ಲಾಗೆ (ಸುಮಾರು 26 ಕಿ.ಮೀ) ಬಸ್‌ನಲ್ಲಿ ಪ್ರಯಾಣಿಸಿದ್ದ. ನಂತರ, ಸುಮಾರು 80 ಮೀಟರ್‌ಗಳಷ್ಟು ಕಾಲ್ನಡಿಗೆಯಲ್ಲಿ ಹೋಗಿ ಸೂಟ್‌ಕೇಸ್ ಅನ್ನು ಪೊದೆಗೆ ಎಸೆದಿದ್ದ” ಎಂದು ಎಡಿಜಿಪಿ ಹೇಳಿದ್ದಾರೆ.

“ಹಿಮಾನಿ ಯುವ ಕಾಂಗ್ರೆಸ್ ಕಾರ್ಯಕರ್ತೆಯಾಗಿದ್ದರು. ಆರೋಪಿಗೆ ಯಾವುದೇ ರಾಜಕೀಯ ಸಂಪರ್ಕವಿಲ್ಲ. ಆಕೆ ಆತನಿಂದ ಹಣ ಪಡೆಯುತ್ತಿದ್ದರೋ ಅಥವಾ ಆತ ಆಕೆಯಿಂದ ಹಣ ಪಡೆಯುತ್ತಿದ್ದರೋ ಎಂಬ ಬಗ್ಗೆ ಇದುವರೆಗೆ ಯಾವುದೇ ಖಚಿತ ಮಾಹಿತಿ ಲಭ್ಯವಾಗಿಲ್ಲ. ಆರೋಪಿ ಈಗಾಗಲೇ ವಿವಾಹಿತನಾಗಿರುವುದರಿಂದ ಮತ್ತು ಆಕೆ ಒಂಟಿಯಾಗಿರುವುದರಿಂದ ಮದುವೆಯಾಗಲು ಎರಡೂ ಕಡೆಯಿಂದ ಒತ್ತಡವಿತ್ತು ಎನ್ನಲಾಗಿದೆ. ಈ ಬಗ್ಗೆಯೂ ಇಲ್ಲಿಯವರೆಗೆ ಯಾವುದೇ ಮಾಹಿತಿ ದೊರೆತಿಲ್ಲ” ಎಂದು ಪೊಲೀಸರು ತಿಳಿಸಿದ್ದಾರೆ.

ರೋಹ್ತಕ್‌ನ ವೈಶ್ ಕಾನೂನು ಕಾಲೇಜಿನ ವಿದ್ಯಾರ್ಥಿನಿಯಾಗಿದ್ದ ಹಿಮಾನಿ, ಮಾರ್ಚ್ 1ರಂದು ಶವ ಪತ್ತೆಯಾಗುವ ಮೊದಲೇ ನಾಪತ್ತೆಯಾಗಿದ್ದರು. ಇವರು ಭಾರತ್ ಜೋಡೋ ಯಾತ್ರೆಯ ಹರಿಯಾಣದ ಪಾದಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ಹೆಜ್ಜೆ ಹಾಕಿ ಗಮನ ಸೆಳೆದಿದ್ದರು.

ಸಿಸಿಟಿವಿ ವಿಡಿಯೋ ವೈರಲ್ : ಆರೋಪಿ ಸಚಿನ್ ರೋಹ್ತಕ್‌ನ ವಿಜಯನಗರದ ಮನೆಯಿಂದ ಹಿಮಾನಿಯವರ ಶವವನ್ನು ಸೂಟ್‌ಕೇಸ್‌ನಲ್ಲಿ ತುಂಬಿಕೊಂಡು ಹೋಗಿದ್ದಾರೆ ಎನ್ನಲಾದ ಸಿಸಿಟಿವಿ ವಿಡಿಯೋ ವೈರಲ್ ಆಗಿದೆ.

ಚಂಡೀಗಢ| ರೈತ ನಾಯಕರನ್ನು ಮಧ್ಯರಾತ್ರಿ ಬಂಧಿಸಿದ ಪಂಜಾಬ್ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...