Homeಕರ್ನಾಟಕಬಗರ್ ಹುಕುಂ ರೈತರಿಗೆ ಭೂಮಿ ಮಂಜೂರಾತಿಗೆ ಆಗ್ರಹಿಸಿ ಮಾ.11ರಂದು ಭೂಮಿ ಮತ್ತು ವಸತಿ ವಂಚಿತರ ಹೋರಾಟ...

ಬಗರ್ ಹುಕುಂ ರೈತರಿಗೆ ಭೂಮಿ ಮಂಜೂರಾತಿಗೆ ಆಗ್ರಹಿಸಿ ಮಾ.11ರಂದು ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿಯಿಂದ ಬೃಹತ್ ಪ್ರತಿಭಟನೆ  

- Advertisement -
- Advertisement -

ಬಗರ್ ಹುಕುಂ ರೈತರಿಗೆ ಭೂಮಂಜೂರಾತಿಗೆ ಆಗ್ರಹಿಸಿ ಇದೇ ಮಾ.11ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಅನಿರ್ಧಿಷ್ಟಾವಧಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಕುಮಾರ್ ಸಮತಳ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು,  ಈ ರಾಜ್ಯದ ಅತ್ಯಂತ ಕಟ್ಟ ಕಡೆಯ ಕೆಳ ಸಮುದಾಯಗಳು ಅತೀ ಹೆಚ್ಚು ಭೂ ಹಿಡುವಳಿಯಿಂದ ವಂಚಿತರಾಗಿದ್ದಾರೆಂಬುದು ಹಗಲಿನ ಸೂರ್ಯನಷ್ಟೇ ಸತ್ಯ. 70ರ ದಶಕದಲ್ಲಿ ಜಾರಿಯಾಗಿದ್ದ “ಉಳುವವನೇ ಭೂ ಒಡೆಯ” ಅಂದಿನ ದೇವರಾಜ ಅರಸು ಸರ್ಕಾರದ ಕ್ರಾಂತಿಕಾರಿ ಘೋಷಣೆಯಿಂದ ಒಂದಷ್ಟು ಹಿಂದುಳಿದ ಸಮುದಾಯಗಳಿಗೆ, ಕಟ್ಟ ಕಡೆಯ ಅಸ್ಪೃಶ್ಯ ಸಮುದಾಯಗಳಿಗೆ ಭೂಮಿಯ ಒಡೆತನ ದೊರೆತದ್ದು ಈಗ ಇತಿಹಾಸ ಎಂದು ಅವರು ಹೇಳಿದ್ದಾರೆ.

ಸರ್ಕಾರದ ಒಡೆತನದಲ್ಲಿದ್ದ ಲಕ್ಷಾಂತರ ಎಕರೆ ಭೂಮಿಯನ್ನು ಸಕ್ರಮಗೊಳಿಸುವ ಬಗರ್ ಹುಕುಂ ಸಕ್ರಮ ಸಮಿತಿಗಳ ರಚನೆಯೂ ಭೂರಹಿತರರ ಪಾಲಿಗೆ ಜೀವಾಳವಾಗಿದ್ದೂ ಇದೆ. ಫಾರಂ.ನಂ.50, 53, ಹಾಗೂ ಇತ್ತೀಚೆಗೆ ಫಾರಂನಂ 57 ರ ಅರ್ಜಿಗಳನ್ನು ಸ್ವೀಕರಿಸಿ ಕೆಲ ನಿಬಂಧನೆಗಳ ಮೂಲಕ ಭೂಮಿಯನ್ನು ಮಂಜೂರಾತಿ ನೀಡುತ್ತಿರುವುದು ನಿಯಮ. ಇತ್ತೀಚೆಗೆ ಕಂದಾಯ ಮಂತ್ರಿ ಕೃಷ್ಣ ಭೈರೇಗೌಡರ ನೇತೃತ್ವದಲ್ಲಿ ಲಕ್ಷಾಂತರ ಸಂಖ್ಯೆ ಅರ್ಜಿಗಳನ್ನು ಪರಿಶೀಲಿಸಿ ಭೂಮಿ ಮಂಜೂರಾತಿ ಪ್ರಕ್ರಿಯೆ ನಡೆಯುತ್ತಿರುವುದು ಸಂತೋಷದ ವಿಷಯ. ಇದಕ್ಕಾಗಿ ಸರ್ಕಾರವನ್ನು ವಿಶೇಷವಾಗಿ ಕಂದಾಯ ಮಂತ್ರಿಗಳನ್ನು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಅಭಿನಂದಿಸುತ್ತದೆ ಎಂದು ಹೇಳಿಕೆಯು ತಿಳಿಸಿದೆ.

ಭೂಮಿ ಮಂಜುರಾತಿಯ ಈ ಸಂದರ್ಭದಲ್ಲಿ ಸರ್ಕಾರ ಲಕ್ಷಾಂತರ ಸಂಖ್ಯೆಯ ಅರ್ಜಿಗಳನ್ನು ತಿರಸ್ಕರಿಸುವ ಮೂಲಕ ಲಕ್ಷಾಂತರ ಸಂಖ್ಯೆಯ ಬಡ ಕುಟುಂಬಗಳಿಗೆ ಅದರಲ್ಲೂ ಬಹುತೇಕ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳು, ಹಿಂದುಳಿದ, ಅಲೆಮಾರಿ ಸಮುದಾಯಗಳೇ ಸಾಗುವಳಿ ಮಾಡುತ್ತಾ ಅರ್ಜಿ ಸಲ್ಲಿಸರುವ ಭೂರಹಿತ ಕುಟುಂಬಗಳಿಗೆ ಭೂಮಿಯ ಹಕ್ಕಿನಿಂದ ವಂಚಿಸುವುದೇ ಆಗಿದೆ. ಸಂವಿಧಾನ ಪರ, ಬಾಬಾ ಸಾಹೇಬ್ ಅಂಬೇಡ್ಕರ್‍ವಾದಿ, ಸಮಾಜವಾದಿ ಹೆಸರಿನಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಸಾಮಾಜಿಕ ನ್ಯಾಯವನ್ನು ಎಲ್ಲಿ ಪಾಲಿಸುತ್ತದೆ? ಎಂಬ ಪ್ರಶ್ನೆ ಕಾಡುತ್ತಿದೆ ಎಂದು ಸಮತಳ್ ಹೇಳಿಕೆಯಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.

ಕಾನೂನಿನ ಹೆಸರಿನಲ್ಲಿ ಭೂಮಂಜೂರಾತಿ ನೀಡದೇ ಅರ್ಜಿಗಳನ್ನು ಮಾನ್ಯ ಮಾಡುತ್ತಿಲ್ಲ. ಇದಕ್ಕೆ ಹಲವಾರು ರೀತಿಯ ಕಾರಣಗಳನ್ನು ನೀಡುತ್ತಿದ್ದು, ಕೃಷಿ ಯೋಗ್ಯವಲ್ಲದ ಭೂಮಿ, ಅರಣ್ಯ, ಖರಾಬ್, ಅ ಖರಾಬ್, ಬ ಖರಾಬ್, ರಾಳಗುಡ್ಡ, ಪಾರಂಪೋಕು, ಜೌಗು ಪ್ರದೇಶ, ಅರಳು ಪ್ರದೇಶ, ಸವಳು ಭೂಮಿ, ಉಸುಕು ಭೂಮಿ, ಹುಲ್ಲುಬನ್ನಿ, ಕಾವಲು, ಪೈಸಾರಿ, ಮಫತ್ ಭೂಮಿ, ಖಾರೀಜ್ ಖಾತಾ, ಇನಾಂ, ಲ್ಯಾಂಡ್ ಬ್ಯಾಂಕ್, ಗ್ರಾಮಠಾಣಾ, ಸೇಂಧಿವನ, ಸಿ ಅಂಡ್ ಡಿ, ಕಿರು ಅರಣ್ಯದ ಹೆಸರಿನಲ್ಲಿರುವ ಭೂಮಿಗಳು, ಮಲೆನಾಡಿನಲ್ಲಿ ಕರೆಯಲ್ಪಡುವ ಸೊಪ್ಪಿನ ಬೆಟ್ಟ (ಊರುಗುಪ್ಪೆ), ನೆಡುತೋಪು, ಬಾಣೆ, ದೇವರಕಾಡು ಹೆಸರಿನಲ್ಲಿರುವ ಭೂಮಿಗಳಾಗಿವೆ. ಇದೇ ಭೂಮಿಗಳಲ್ಲಿ ಭೂರಹಿತ ಜನರು ಕಷ್ಟಪಟ್ಟು ಹಸನುಗೊಳಿಸಿಕೊಂಡು ಬದುಕು ಕಟ್ಟಿಕೊಂಡಿದ್ದಾರೆ. ಹಲವು ವಿಧದ ಭೂಮಿಗಳು ಸರ್ಕಾರದ ದೃಷ್ಟಿಯಲ್ಲಿ ಯೋಗ್ಯವಲ್ಲದ ಭೂಮಿಗಳಾಗಿರಬಹುದು ಆದರೆ ಈ ಭೂಮಿಗಳಲ್ಲೇ ಲಕ್ಷಾಂತರ ಬಡ ಜನರು ದುಡಿಯುತ್ತಾ ಸ್ವಾಭಿಮಾನಿ ಬದುಕು ಕಟ್ಟಿಕೊಂಡಿದ್ದಾರೆ. ‘ಅರ್ಜಿಗಳ ತಿರಸ್ಕಾರ’ ಎಂಬುದು ಜನರ ನಿದ್ದೆ ಕೆಡಿಸಿದೆಯಲ್ಲದೆ ಜನರ ಬದುಕುವ ಹಕ್ಕನ್ನೇ ತಿರಸ್ಕರಿಸಿದಂತಾಗಿದೆ. ಇದೇ ತುಂಡು ಭೂಮಿ ಅವರ ಕುಟುಂಬಗಳಿಗೆ ಜೀವನಾಧಾರವಾಗಿದೆ. ದಶಕಗಳ ಕಾಲದಿಂದಲೂ ಬದುಕಿಗೆ ಆಸರೆಯಾಗಿದ್ದ ಭೂಮಿಗಳನ್ನೇ ನಂಬಿ ಅರ್ಜಿ ಸಲ್ಲಿಸಿ ಭೂಮಿಯ ಹಕ್ಕಿಗಾಗಿ ಕಾಯುತ್ತಿದ್ದವರಿಗೆ ನಿರಾಶೆಯ ಸಿಡಿಲು ಬಡಿದಂತಾಗಿದೆ. ಈ ಭೂಮಿಯನ್ನು ಉಳಿಸಿಕೊಳ್ಳುವುದಕ್ಕಾಗಿ ಜೀವನದುದ್ದಕ್ಕೂ ಅದೆಷ್ಟೋ ಹೋರಾಟಗಳನ್ನು ಮಾಡುತ್ತಾ ಜೀವ ಸವೆಸಿದ್ದಾರೆ ಎಂದು ಹೇಳಿಕೆಯಲ್ಲಿ ಅವರು ತಿಳಿಸಿದ್ದಾರೆ.

ಬಗರ್ ಹುಕುಂ ಅರ್ಜಿಗಳನ್ನು ತಿರಸ್ಕರಿಸುವ ಮೂಲಕ ಸ್ವಾಭೀಮಾನದ ಬದುಕಿಗೆ ಸರಕಾರವು ಭಂಗ ತರುತ್ತಿದೆ. ಅಷ್ಟೇ ಅಲ್ಲದೆ ಬಡವರಿಗೊಂದು, ಶ್ರೀಮಂತರು ಮತ್ತು ಕಂಪನಿಗಳಿಗೊಂದು ಕಾನೂನು ಮಾಡುವ ಮೂಲಕ ಬಡವರಿಗೆ ಭೂಮಿ ಮಂಜೂರಾತಿ ನೀತಿಯನ್ನು ಗಾಳಿಗೆ ತೂರುತ್ತಿದೆ. ಈ ನೀತಿಯನ್ನು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ತೀರ್ವವಾಗಿ ವಿರೋಧಿಸುತ್ತದೆ ಮತ್ತು ಬಗರ್ ಹುಕುಂ ಸಾಗುವಳಿದಾರರ ಅರ್ಜಿಗಳನ್ನು ಯಾವುದೇ ನೆಪದಲ್ಲಿ ತಿರಸ್ಕರಿಸಬಾರದೆಂದು “ ಅರ್ಜಿ ಸಲ್ಲಿಸಿ ಸಾಗುವಳಿ ಮಾಡುತ್ತಿರುವ ಭೂಹೀನರೆಲ್ಲರಿಗೂ ಒಂದು ಬಾರಿ ಅವಕಾಶ” ನೀಡುವ ಮೂಲಕ ಭೂಮಿಯ ಹಕ್ಕುನ್ನು ನೀಡಬೇಕೆಂಬ ಒತ್ತಾಯವನ್ನು ಸರ್ಕಾರಕ್ಕೆ ಮಾಡುತ್ತಾ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ನೇತೃತ್ವದಲ್ಲಿ ಬೆಂಗಳೂರಿನ ಪ್ರಿಡಂ ಪಾರ್ಕ್‍ನಲ್ಲಿ ಅನಿರ್ಧಿಷ್ಟಾವಧಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.
ಮಾರ್ಚ್ 11 ರಂದು ಬೆಳಿಗ್ಗ 10 ಗಂಟೆಗೆ ಆರಂಭವಾಗಲಿರುವ ಪ್ರತಿಭಟನಾ ಧರಣಿಗೆ ರಾಜ್ಯದ ಎಲ್ಲಾ ಬಗರ್ ಹುಕುಂ ಸಾಗುವಳಿದಾರರು ಆಗಮಿಸಬೇಕೆಂದು ಈ ಮೂಲಕ ಮನವಿ ಮಾಡಿಕೊಳ್ಳುತ್ತದೆ ಎಂದು ಅವರು ಹೇಳಿಕೆಯಲ್ಲಿ ಮಾಹಿತಿ ನೀಡಿದ್ದಾರೆ.

‘ಪಾಕಿಸ್ತಾನಿ’ ಎಂದು ಕರೆಯುವುದು ಧಾರ್ಮಿಕ ಭಾವನೆಗಳಿಗೆ ನೋಯಿಸುವ ಅಪರಾಧವಲ್ಲ: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...