Homeಕರ್ನಾಟಕಬಗರ್ ಹುಕುಂ ರೈತರಿಗೆ ಭೂಮಿ ಮಂಜೂರಾತಿಗೆ ಆಗ್ರಹಿಸಿ ಮಾ.11ರಂದು ಭೂಮಿ ಮತ್ತು ವಸತಿ ವಂಚಿತರ ಹೋರಾಟ...

ಬಗರ್ ಹುಕುಂ ರೈತರಿಗೆ ಭೂಮಿ ಮಂಜೂರಾತಿಗೆ ಆಗ್ರಹಿಸಿ ಮಾ.11ರಂದು ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿಯಿಂದ ಬೃಹತ್ ಪ್ರತಿಭಟನೆ  

- Advertisement -
- Advertisement -

ಬಗರ್ ಹುಕುಂ ರೈತರಿಗೆ ಭೂಮಂಜೂರಾತಿಗೆ ಆಗ್ರಹಿಸಿ ಇದೇ ಮಾ.11ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಅನಿರ್ಧಿಷ್ಟಾವಧಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಕುಮಾರ್ ಸಮತಳ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು,  ಈ ರಾಜ್ಯದ ಅತ್ಯಂತ ಕಟ್ಟ ಕಡೆಯ ಕೆಳ ಸಮುದಾಯಗಳು ಅತೀ ಹೆಚ್ಚು ಭೂ ಹಿಡುವಳಿಯಿಂದ ವಂಚಿತರಾಗಿದ್ದಾರೆಂಬುದು ಹಗಲಿನ ಸೂರ್ಯನಷ್ಟೇ ಸತ್ಯ. 70ರ ದಶಕದಲ್ಲಿ ಜಾರಿಯಾಗಿದ್ದ “ಉಳುವವನೇ ಭೂ ಒಡೆಯ” ಅಂದಿನ ದೇವರಾಜ ಅರಸು ಸರ್ಕಾರದ ಕ್ರಾಂತಿಕಾರಿ ಘೋಷಣೆಯಿಂದ ಒಂದಷ್ಟು ಹಿಂದುಳಿದ ಸಮುದಾಯಗಳಿಗೆ, ಕಟ್ಟ ಕಡೆಯ ಅಸ್ಪೃಶ್ಯ ಸಮುದಾಯಗಳಿಗೆ ಭೂಮಿಯ ಒಡೆತನ ದೊರೆತದ್ದು ಈಗ ಇತಿಹಾಸ ಎಂದು ಅವರು ಹೇಳಿದ್ದಾರೆ.

ಸರ್ಕಾರದ ಒಡೆತನದಲ್ಲಿದ್ದ ಲಕ್ಷಾಂತರ ಎಕರೆ ಭೂಮಿಯನ್ನು ಸಕ್ರಮಗೊಳಿಸುವ ಬಗರ್ ಹುಕುಂ ಸಕ್ರಮ ಸಮಿತಿಗಳ ರಚನೆಯೂ ಭೂರಹಿತರರ ಪಾಲಿಗೆ ಜೀವಾಳವಾಗಿದ್ದೂ ಇದೆ. ಫಾರಂ.ನಂ.50, 53, ಹಾಗೂ ಇತ್ತೀಚೆಗೆ ಫಾರಂನಂ 57 ರ ಅರ್ಜಿಗಳನ್ನು ಸ್ವೀಕರಿಸಿ ಕೆಲ ನಿಬಂಧನೆಗಳ ಮೂಲಕ ಭೂಮಿಯನ್ನು ಮಂಜೂರಾತಿ ನೀಡುತ್ತಿರುವುದು ನಿಯಮ. ಇತ್ತೀಚೆಗೆ ಕಂದಾಯ ಮಂತ್ರಿ ಕೃಷ್ಣ ಭೈರೇಗೌಡರ ನೇತೃತ್ವದಲ್ಲಿ ಲಕ್ಷಾಂತರ ಸಂಖ್ಯೆ ಅರ್ಜಿಗಳನ್ನು ಪರಿಶೀಲಿಸಿ ಭೂಮಿ ಮಂಜೂರಾತಿ ಪ್ರಕ್ರಿಯೆ ನಡೆಯುತ್ತಿರುವುದು ಸಂತೋಷದ ವಿಷಯ. ಇದಕ್ಕಾಗಿ ಸರ್ಕಾರವನ್ನು ವಿಶೇಷವಾಗಿ ಕಂದಾಯ ಮಂತ್ರಿಗಳನ್ನು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಅಭಿನಂದಿಸುತ್ತದೆ ಎಂದು ಹೇಳಿಕೆಯು ತಿಳಿಸಿದೆ.

ಭೂಮಿ ಮಂಜುರಾತಿಯ ಈ ಸಂದರ್ಭದಲ್ಲಿ ಸರ್ಕಾರ ಲಕ್ಷಾಂತರ ಸಂಖ್ಯೆಯ ಅರ್ಜಿಗಳನ್ನು ತಿರಸ್ಕರಿಸುವ ಮೂಲಕ ಲಕ್ಷಾಂತರ ಸಂಖ್ಯೆಯ ಬಡ ಕುಟುಂಬಗಳಿಗೆ ಅದರಲ್ಲೂ ಬಹುತೇಕ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳು, ಹಿಂದುಳಿದ, ಅಲೆಮಾರಿ ಸಮುದಾಯಗಳೇ ಸಾಗುವಳಿ ಮಾಡುತ್ತಾ ಅರ್ಜಿ ಸಲ್ಲಿಸರುವ ಭೂರಹಿತ ಕುಟುಂಬಗಳಿಗೆ ಭೂಮಿಯ ಹಕ್ಕಿನಿಂದ ವಂಚಿಸುವುದೇ ಆಗಿದೆ. ಸಂವಿಧಾನ ಪರ, ಬಾಬಾ ಸಾಹೇಬ್ ಅಂಬೇಡ್ಕರ್‍ವಾದಿ, ಸಮಾಜವಾದಿ ಹೆಸರಿನಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಸಾಮಾಜಿಕ ನ್ಯಾಯವನ್ನು ಎಲ್ಲಿ ಪಾಲಿಸುತ್ತದೆ? ಎಂಬ ಪ್ರಶ್ನೆ ಕಾಡುತ್ತಿದೆ ಎಂದು ಸಮತಳ್ ಹೇಳಿಕೆಯಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.

ಕಾನೂನಿನ ಹೆಸರಿನಲ್ಲಿ ಭೂಮಂಜೂರಾತಿ ನೀಡದೇ ಅರ್ಜಿಗಳನ್ನು ಮಾನ್ಯ ಮಾಡುತ್ತಿಲ್ಲ. ಇದಕ್ಕೆ ಹಲವಾರು ರೀತಿಯ ಕಾರಣಗಳನ್ನು ನೀಡುತ್ತಿದ್ದು, ಕೃಷಿ ಯೋಗ್ಯವಲ್ಲದ ಭೂಮಿ, ಅರಣ್ಯ, ಖರಾಬ್, ಅ ಖರಾಬ್, ಬ ಖರಾಬ್, ರಾಳಗುಡ್ಡ, ಪಾರಂಪೋಕು, ಜೌಗು ಪ್ರದೇಶ, ಅರಳು ಪ್ರದೇಶ, ಸವಳು ಭೂಮಿ, ಉಸುಕು ಭೂಮಿ, ಹುಲ್ಲುಬನ್ನಿ, ಕಾವಲು, ಪೈಸಾರಿ, ಮಫತ್ ಭೂಮಿ, ಖಾರೀಜ್ ಖಾತಾ, ಇನಾಂ, ಲ್ಯಾಂಡ್ ಬ್ಯಾಂಕ್, ಗ್ರಾಮಠಾಣಾ, ಸೇಂಧಿವನ, ಸಿ ಅಂಡ್ ಡಿ, ಕಿರು ಅರಣ್ಯದ ಹೆಸರಿನಲ್ಲಿರುವ ಭೂಮಿಗಳು, ಮಲೆನಾಡಿನಲ್ಲಿ ಕರೆಯಲ್ಪಡುವ ಸೊಪ್ಪಿನ ಬೆಟ್ಟ (ಊರುಗುಪ್ಪೆ), ನೆಡುತೋಪು, ಬಾಣೆ, ದೇವರಕಾಡು ಹೆಸರಿನಲ್ಲಿರುವ ಭೂಮಿಗಳಾಗಿವೆ. ಇದೇ ಭೂಮಿಗಳಲ್ಲಿ ಭೂರಹಿತ ಜನರು ಕಷ್ಟಪಟ್ಟು ಹಸನುಗೊಳಿಸಿಕೊಂಡು ಬದುಕು ಕಟ್ಟಿಕೊಂಡಿದ್ದಾರೆ. ಹಲವು ವಿಧದ ಭೂಮಿಗಳು ಸರ್ಕಾರದ ದೃಷ್ಟಿಯಲ್ಲಿ ಯೋಗ್ಯವಲ್ಲದ ಭೂಮಿಗಳಾಗಿರಬಹುದು ಆದರೆ ಈ ಭೂಮಿಗಳಲ್ಲೇ ಲಕ್ಷಾಂತರ ಬಡ ಜನರು ದುಡಿಯುತ್ತಾ ಸ್ವಾಭಿಮಾನಿ ಬದುಕು ಕಟ್ಟಿಕೊಂಡಿದ್ದಾರೆ. ‘ಅರ್ಜಿಗಳ ತಿರಸ್ಕಾರ’ ಎಂಬುದು ಜನರ ನಿದ್ದೆ ಕೆಡಿಸಿದೆಯಲ್ಲದೆ ಜನರ ಬದುಕುವ ಹಕ್ಕನ್ನೇ ತಿರಸ್ಕರಿಸಿದಂತಾಗಿದೆ. ಇದೇ ತುಂಡು ಭೂಮಿ ಅವರ ಕುಟುಂಬಗಳಿಗೆ ಜೀವನಾಧಾರವಾಗಿದೆ. ದಶಕಗಳ ಕಾಲದಿಂದಲೂ ಬದುಕಿಗೆ ಆಸರೆಯಾಗಿದ್ದ ಭೂಮಿಗಳನ್ನೇ ನಂಬಿ ಅರ್ಜಿ ಸಲ್ಲಿಸಿ ಭೂಮಿಯ ಹಕ್ಕಿಗಾಗಿ ಕಾಯುತ್ತಿದ್ದವರಿಗೆ ನಿರಾಶೆಯ ಸಿಡಿಲು ಬಡಿದಂತಾಗಿದೆ. ಈ ಭೂಮಿಯನ್ನು ಉಳಿಸಿಕೊಳ್ಳುವುದಕ್ಕಾಗಿ ಜೀವನದುದ್ದಕ್ಕೂ ಅದೆಷ್ಟೋ ಹೋರಾಟಗಳನ್ನು ಮಾಡುತ್ತಾ ಜೀವ ಸವೆಸಿದ್ದಾರೆ ಎಂದು ಹೇಳಿಕೆಯಲ್ಲಿ ಅವರು ತಿಳಿಸಿದ್ದಾರೆ.

ಬಗರ್ ಹುಕುಂ ಅರ್ಜಿಗಳನ್ನು ತಿರಸ್ಕರಿಸುವ ಮೂಲಕ ಸ್ವಾಭೀಮಾನದ ಬದುಕಿಗೆ ಸರಕಾರವು ಭಂಗ ತರುತ್ತಿದೆ. ಅಷ್ಟೇ ಅಲ್ಲದೆ ಬಡವರಿಗೊಂದು, ಶ್ರೀಮಂತರು ಮತ್ತು ಕಂಪನಿಗಳಿಗೊಂದು ಕಾನೂನು ಮಾಡುವ ಮೂಲಕ ಬಡವರಿಗೆ ಭೂಮಿ ಮಂಜೂರಾತಿ ನೀತಿಯನ್ನು ಗಾಳಿಗೆ ತೂರುತ್ತಿದೆ. ಈ ನೀತಿಯನ್ನು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ತೀರ್ವವಾಗಿ ವಿರೋಧಿಸುತ್ತದೆ ಮತ್ತು ಬಗರ್ ಹುಕುಂ ಸಾಗುವಳಿದಾರರ ಅರ್ಜಿಗಳನ್ನು ಯಾವುದೇ ನೆಪದಲ್ಲಿ ತಿರಸ್ಕರಿಸಬಾರದೆಂದು “ ಅರ್ಜಿ ಸಲ್ಲಿಸಿ ಸಾಗುವಳಿ ಮಾಡುತ್ತಿರುವ ಭೂಹೀನರೆಲ್ಲರಿಗೂ ಒಂದು ಬಾರಿ ಅವಕಾಶ” ನೀಡುವ ಮೂಲಕ ಭೂಮಿಯ ಹಕ್ಕುನ್ನು ನೀಡಬೇಕೆಂಬ ಒತ್ತಾಯವನ್ನು ಸರ್ಕಾರಕ್ಕೆ ಮಾಡುತ್ತಾ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ನೇತೃತ್ವದಲ್ಲಿ ಬೆಂಗಳೂರಿನ ಪ್ರಿಡಂ ಪಾರ್ಕ್‍ನಲ್ಲಿ ಅನಿರ್ಧಿಷ್ಟಾವಧಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.
ಮಾರ್ಚ್ 11 ರಂದು ಬೆಳಿಗ್ಗ 10 ಗಂಟೆಗೆ ಆರಂಭವಾಗಲಿರುವ ಪ್ರತಿಭಟನಾ ಧರಣಿಗೆ ರಾಜ್ಯದ ಎಲ್ಲಾ ಬಗರ್ ಹುಕುಂ ಸಾಗುವಳಿದಾರರು ಆಗಮಿಸಬೇಕೆಂದು ಈ ಮೂಲಕ ಮನವಿ ಮಾಡಿಕೊಳ್ಳುತ್ತದೆ ಎಂದು ಅವರು ಹೇಳಿಕೆಯಲ್ಲಿ ಮಾಹಿತಿ ನೀಡಿದ್ದಾರೆ.

‘ಪಾಕಿಸ್ತಾನಿ’ ಎಂದು ಕರೆಯುವುದು ಧಾರ್ಮಿಕ ಭಾವನೆಗಳಿಗೆ ನೋಯಿಸುವ ಅಪರಾಧವಲ್ಲ: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...