Homeಮುಖಪುಟಉತ್ತರ ಭಾರತದಲ್ಲಿ ತಮಿಳು ಪ್ರಚಾರ ಸಭಾ ಏಕಿಲ್ಲ? ಕೇಂದ್ರ ಸರ್ಕಾರಕ್ಕೆ ಸಿಎಂ ಸ್ಟಾಲಿನ್ ಪ್ರಶ್ನೆ

ಉತ್ತರ ಭಾರತದಲ್ಲಿ ತಮಿಳು ಪ್ರಚಾರ ಸಭಾ ಏಕಿಲ್ಲ? ಕೇಂದ್ರ ಸರ್ಕಾರಕ್ಕೆ ಸಿಎಂ ಸ್ಟಾಲಿನ್ ಪ್ರಶ್ನೆ

- Advertisement -
- Advertisement -

ದಕ್ಷಿಣ ಭಾರತದ ರಾಜ್ಯಗಳಲ್ಲಿ ಹಿಂದಿಯನ್ನು ಉತ್ತೇಜಿಸಲು ‘ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ’ ಒಂದು ಶತಮಾನಕ್ಕೂ ಹೆಚ್ಚು ಕಾಲದಿಂದ ಅಸ್ತಿತ್ವದಲ್ಲಿದ್ದರೂ, ಉತ್ತರ ಭಾರತದಲ್ಲಿ ‘ಉತ್ತರ ಭಾರತ ತಮಿಳು ಪ್ರಚಾರ ಸಭಾ’ ಏಕೆ ಸ್ಥಾಪಿಸಲಿಲ್ಲ? ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್ ಹಾಕಿರುವ ಸ್ಟಾಲಿನ್ “ದಕ್ಷಿಣ ಭಾರತೀಯರು ಹಿಂದಿ ಕಲಿಯುವಂತೆ ಮಾಡಲು ದಕ್ಷಿಣ ಭಾರತ ಹಿಂದಿ ಪ್ರಚಾರ ಸಭೆಯನ್ನು ಸ್ಥಾಪಿಸಿ ಒಂದು ಶತಮಾನ ಕಳೆದಿದೆ. ಈ ಅವಧಿಯಲ್ಲಿ ಉತ್ತರ ಭಾರತದಲ್ಲಿ ಎಷ್ಟು ಉತ್ತರ ಭಾರತ ತಮಿಳು ಪ್ರಚಾರ ಸಭೆಗಳನ್ನು ಸ್ಥಾಪಿಸಲಾಗಿದೆ? ಸತ್ಯವೆಂದರೆ, ಉತ್ತರ ಭಾರತೀಯರು ತಮಿಳು ಅಥವಾ ಯಾವುದೇ ದಕ್ಷಿಣ ಭಾರತೀಯ ಭಾಷೆಯನ್ನು ‘ಸಂರಕ್ಷಿಸುವ ಸಲುವಾಗಿ ಕಲಿಯಬೇಕೆಂದು ನಾವು ಎಂದಿಗೂ ಒತ್ತಾಯಿಸಿಲ್ಲ. ನಮ್ಮ ಮೇಲೆ ಹಿಂದಿ ಹೇರಿಕೆಯನ್ನು ನಿಲ್ಲಿಸಿ ಎಂದು ಮಾತ್ರ ನಾವು ಕೇಳಿಕೊಳ್ಳುತ್ತಿದ್ದೇವೆ. ಬಿಜೆಪಿ ಆಡಳಿತದ ರಾಜ್ಯಗಳು ಮೂರು ಅಥವಾ 30 ಭಾಷೆಗಳನ್ನು ಕಲಿಸಲಿ, ಅದು ಅವರಿಗೆ ಬಿಟ್ಟಿದ್ದು, ಆದರೆ, ತಮಿಳುನಾಡನ್ನು ಬಿಟ್ಟುಬಿಡಿ!” ಎಂದು ಬರೆದುಕೊಂಡಿದ್ದಾರೆ.

ತಮಿಳುನಾಡು ಮತ್ತು ದಕ್ಷಿಣದ ಇತರ ರಾಜ್ಯಗಳಲ್ಲಿ ಹಿಂದಿ ಹೇರಿಕೆಗೆ ತಮ್ಮ ವಿರೋಧವನ್ನು ಪುನರುಚ್ಚರಿಸಿದ ಸಿಎಂ ಸ್ಟಾಲಿನ್, “ಉತ್ತರದ ರಾಜ್ಯಗಳು ತಮಿಳು ಕಲಿಯಬೇಕೆಂದು ತಮಿಳುನಾಡು ಎಂದಿಗೂ ಒತ್ತಾಯಿಸಿಲ್ಲ” ಎಂದು ಒತ್ತಿ ಹೇಳಿದ್ದಾರೆ.

ಉತ್ತರ ಭಾರತದ ವಿದ್ಯಾರ್ಥಿಗಳು ಕೇವಲ ಎರಡು ಭಾಷೆಗಳನ್ನು ಕಲಿಯಬೇಕಾದರೆ, ದಕ್ಷಿಣ ಭಾರತದ ವಿದ್ಯಾರ್ಥಿಗಳು ಮಾತ್ರ ಮೂರನೇ ಭಾಷೆಯನ್ನು ಕಲಿಯುವಂತೆ ಒತ್ತಾಯಿಸುತ್ತಿರುವುದು ಏಕೆ? ಎಂದು ಕೇಂದ್ರದ ತ್ರಿಭಾಷಾ ನೀತಿಯನ್ನು ಸ್ಟಾಲಿನ್ ಪ್ರಶ್ನಿಸಿದ್ದಾರೆ.

ಮತ್ತೊಂದು ಎಕ್ಸ್ ಪೋಸ್ಟ್‌ನಲ್ಲಿ ಅವರು ತಮಿಳುನಾಡಿನಲ್ಲಿ ಮೂರನೇ ಭಾಷೆಗಾಗಿ ಆಗ್ರಹಿಸುತ್ತಿರುವವರನ್ನು ಟೀಕಿಸಿಸಿದ್ದು, “ಕೆಲವು ಓರೆ ನೀತಿಗಳ ರಕ್ಷಕರು, ತೀವ್ರ ಕಳವಳದಿಂದ ಅಳುತ್ತಾ, ‘ತಮಿಳುನಾಡಿನ ವಿದ್ಯಾರ್ಥಿಗಳಿಗೆ ಮೂರನೇ ಭಾಷೆ ಕಲಿಯುವ ಅವಕಾಶವನ್ನು ಏಕೆ ನಿರಾಕರಿಸುತ್ತಿದ್ದೀರಿ?’ ಎಂದು ಕೇಳುತ್ತಿದ್ದಾರೆ. ಹಾಗಾದರೆ, ಸರಿ, ಉತ್ತರದಲ್ಲಿ ಯಾವ ಮೂರನೇ ಭಾಷೆಯನ್ನು ಕಲಿಸಲಾಗುತ್ತಿದೆ ಎಂದು ಅವರು ಏಕೆ ಹೇಳುತ್ತಿಲ್ಲ? ಉತ್ತರ ಭಾರತದವರು ಎರಡು ಭಾಷೆಗಳನ್ನು ಕಲಿಯುವಾಗ, ನಾವು ಮೂರನೇ ಭಾಷೆಯನ್ನು ಕಲಿಯುವ ಅಗತ್ಯ ಏನಿದೆ?” ಎಂದು ಕೇಳಿದ್ದಾರೆ.

“ಎನ್‌ಇಪಿ ಜಾರಿಗೆ ತಂದರೆ ತಮಿಳುನಾಡು 2 ಸಾವಿರ ವರ್ಷಗಳಷ್ಟು ಹಿಂದಕ್ಕೆ ಹೋಗಲಿದೆ. ಕೇಂದ್ರ ಸರ್ಕಾರ 10 ಸಾವಿರ ಕೋಟಿ ಕೊಟ್ಟರೂ, ನಾವು ಹೊಸ ಶಿಕ್ಷಣ ನೀತಿಯನ್ನು ತಮಿಳುನಾಡಿನಲ್ಲಿ ಜಾರಿಗೊಳಿಸುವುದಿಲ್ಲ” ಎಂದು ಇತ್ತೀಚೆಗೆ ಸಿಎಂ ಸ್ಟಾಲಿನ್ ಹೇಳಿದ್ದರು.

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನೂ ಟೀಕಿಸಿದ್ದ ಸ್ಟಾಲಿನ್, “ಅವರು ಎನ್‌ಇಪಿ ಮೂಲಕ ಹಿಂದಿ ಹೇರಿಕೆ ಮಾಡುತ್ತಿದ್ದಾರೆ” ಎಂದು ಕಿಡಿಕಾರಿದ್ದರು.

ಭಾಷಾ ಅಭಿವೃದ್ಧಿಗೆ ನಿಧಿ ಹಂಚಿಕೆ ಮಾಡುವಲ್ಲಿನ ತಾರತಮ್ಯವನ್ನು ಸಿಎಂ ಸ್ಟಾಲಿನ್ ಎತ್ತಿ ತೋರಿಸಿದ್ದು, “8 ಕೋಟಿ ಜನರು ತಮಿಳು ಮಾತನಾಡುತ್ತಾರೆ. ಆದರೆ, ಕೇಂದ್ರ ಸರ್ಕಾರ ಅದರ ಅಭಿವೃದ್ಧಿಗೆ ಕೇವಲ 74 ಕೋಟಿ ರೂ.ಗಳನ್ನು ಮಾತ್ರ ಮೀಸಲಿಟ್ಟಿದೆ. ಆದರೆ, ಕೆಲವೇ ಸಾವಿರ ಜನರು ಮಾತನಾಡುವ ಸಂಸ್ಕೃತಕ್ಕೆ 1,488 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ” ಎಂದಿದ್ದಾರೆ.

“ತಮಿಳುನಾಡು ಸರ್ಕಾರ ಎನ್‌ಇಪಿ ಮತ್ತು ತ್ರಿಭಾಷಾ ನೀತಿಯನ್ನು ನಿರಂತರವಾಗಿ ವಿರೋಧಿಸುತ್ತಾ ಬಂದಿದೆ. ಪ್ರಸ್ತುತ ಅಸ್ತಿತ್ವದಲ್ಲಿರುವ ದ್ವಿಭಾಷಾ ವ್ಯವಸ್ಥೆಯಾದ ತಮಿಳು ಮತ್ತು ಇಂಗ್ಲಿಷ್‌ಗೆ ಆದ್ಯತೆ ನೀಡಿದೆ. ಪ್ರಮುಖ ವಿರೋಧ ಪಕ್ಷವಾದ ಎಐಎಡಿಎಂಕೆ ಕೂಡ ಈ ನಿಲುವನ್ನು ಬೆಂಬಲಿಸಿದೆ” ಎಂದು ಸಿಎಂ ಸ್ಟಾಲಿನ್ ತಿಳಿಸಿದ್ದಾರೆ.

ಈ ನಡುವೆ, ಸಿಎಂ ಸ್ಟಾಲಿನ್ ಅವರು ರಾಜಕೀಯಕ್ಕಾಗಿ ಎನ್‌ಇಪಿ ಕುರಿತು ತಪ್ಪು ಹೇಳಿಕೆ ನೀಡುತ್ತಿದ್ದಾರೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಆರೋಪಿಸಿದ್ದಾರೆ. ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ವಿದ್ಯಾರ್ಥಿಗಳ ಹಿತಾಸಕ್ತಿಗಳ ಮೇಲೆ ಕೇಂದ್ರೀಕರಿಸುವಂತೆ ಅವರು ಮನವಿ ಮಾಡಿದ್ದಾರೆ.

ಪ್ರಧಾನ ಮಂತ್ರಿ ಶ್ರೀ ಶಾಲೆಗಳ ಯೋಜನೆಯೊಂದಿಗೆ ಸಮಗ್ರ ಶಿಕ್ಷಾ ಅಭಿಯಾನ (ಎಸ್‌ಎಸ್‌ಎ) ನಿಧಿಯನ್ನು ಜೋಡಿಸುವುದನ್ನು ಆಕ್ಷೇಪಿಸಿ ಸಿಎಂ ಸ್ಟಾಲಿನ್ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ ನಂತರ ಪ್ರಧಾನ್ ಅವರ ಪ್ರತಿಕ್ರಿಯೆ ಬಂದಿದೆ.

ಪ್ರಧಾನ ಮಂತ್ರಿ ಶ್ರೀ ಶಾಲೆ ಮತ್ತು ಎಸ್‌ಎಸ್‌ಎ ಪ್ರತ್ಯೇಕ ಕೇಂದ್ರ ಪ್ರಾಯೋಜಿತ ಕಾರ್ಯಕ್ರಮಗಳಾಗಿದ್ದು, ಇವುಗಳನ್ನು ಲಿಂಕ್ ಮಾಡುವುದು ಅನ್ಯಾಯ ಎಂದು ಸ್ಟಾಲಿನ್ ಅವರು ಪ್ರಧಾನಿಗೆ ಬರೆದ ಪತ್ರದಲ್ಲಿ ಹೇಳಿದ್ದರು. ಎನ್‌ಇಪಿ ಜೊತೆ ಸೇರಿಸದೆ ಎಸ್‌ಎಸ್‌ಎ ಯೋಜನೆಯ ಹಣವಾದ 2,152 ಕೋಟಿ ರೂ.ಗಳನ್ನು ತಮಿಳುನಾಡಿಗೆ ತಕ್ಷಣ ಬಿಡುಗಡೆ ಮಾಡಬೇಕೆಂದು ಅವರು ಒತ್ತಾಯಿಸಿದ್ದರು.

ರಾಜ್ಯಗಳು ತಾವು ಹೇಳಿದಂತೆ ಕೇಳಲು ಕೇಂದ್ರ ಸರ್ಕಾರ ಅನುದಾನ ಹಂಚಿಕೆಯನ್ನು ಒಂದು ಅಸ್ತ್ರವಾಗಿ ಬಳಸುತ್ತಿದೆ. ಇದು ಸಹಕಾರಿ ಒಕ್ಕೂಟ ವ್ಯವಸ್ಥೆಗೆ ವಿರುದ್ದ ಎಂದು ಸ್ಟಾಲಿನ್ ಪತ್ರದಲ್ಲಿ ಹೇಳಿದ್ದರು.

ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಕೂಡ ಹೊಸ ಶಿಕ್ಷಣ ನೀತಿ (ಎನ್‌ಇಪಿ) ಮತ್ತು ಇತರ ರೀತಿಯಲ್ಲಿ ಹಿಂದಿ ಹೇರಿಕೆಯನ್ನು ಬಲವಾಗಿ ವಿರೋಧಿಸಿದ್ದಾರೆ. ತಮಿಳು ಗುರುತನ್ನು ಯಾವುದೇ ಬೆಲೆ ತೆತ್ತಾದರೂ ರಕ್ಷಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.

‘ತಕ್ಷಣ ಮಕ್ಕಳನ್ನು ಹೊಂದಿ’ | ಕ್ಷೇತ್ರ ವಿಂಗಡನೆ ಬಗ್ಗೆ ತಮಿಳುನಾಡು ನಿವಾಸಿಗಳಿಗೆ ಸಿಎಂ ಸ್ಟಾಲಿನ್ ಸಲಹೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...