Homeಮುಖಪುಟಉತ್ತರ ಭಾರತದಲ್ಲಿ ತಮಿಳು ಪ್ರಚಾರ ಸಭಾ ಏಕಿಲ್ಲ? ಕೇಂದ್ರ ಸರ್ಕಾರಕ್ಕೆ ಸಿಎಂ ಸ್ಟಾಲಿನ್ ಪ್ರಶ್ನೆ

ಉತ್ತರ ಭಾರತದಲ್ಲಿ ತಮಿಳು ಪ್ರಚಾರ ಸಭಾ ಏಕಿಲ್ಲ? ಕೇಂದ್ರ ಸರ್ಕಾರಕ್ಕೆ ಸಿಎಂ ಸ್ಟಾಲಿನ್ ಪ್ರಶ್ನೆ

- Advertisement -
- Advertisement -

ದಕ್ಷಿಣ ಭಾರತದ ರಾಜ್ಯಗಳಲ್ಲಿ ಹಿಂದಿಯನ್ನು ಉತ್ತೇಜಿಸಲು ‘ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ’ ಒಂದು ಶತಮಾನಕ್ಕೂ ಹೆಚ್ಚು ಕಾಲದಿಂದ ಅಸ್ತಿತ್ವದಲ್ಲಿದ್ದರೂ, ಉತ್ತರ ಭಾರತದಲ್ಲಿ ‘ಉತ್ತರ ಭಾರತ ತಮಿಳು ಪ್ರಚಾರ ಸಭಾ’ ಏಕೆ ಸ್ಥಾಪಿಸಲಿಲ್ಲ? ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್ ಹಾಕಿರುವ ಸ್ಟಾಲಿನ್ “ದಕ್ಷಿಣ ಭಾರತೀಯರು ಹಿಂದಿ ಕಲಿಯುವಂತೆ ಮಾಡಲು ದಕ್ಷಿಣ ಭಾರತ ಹಿಂದಿ ಪ್ರಚಾರ ಸಭೆಯನ್ನು ಸ್ಥಾಪಿಸಿ ಒಂದು ಶತಮಾನ ಕಳೆದಿದೆ. ಈ ಅವಧಿಯಲ್ಲಿ ಉತ್ತರ ಭಾರತದಲ್ಲಿ ಎಷ್ಟು ಉತ್ತರ ಭಾರತ ತಮಿಳು ಪ್ರಚಾರ ಸಭೆಗಳನ್ನು ಸ್ಥಾಪಿಸಲಾಗಿದೆ? ಸತ್ಯವೆಂದರೆ, ಉತ್ತರ ಭಾರತೀಯರು ತಮಿಳು ಅಥವಾ ಯಾವುದೇ ದಕ್ಷಿಣ ಭಾರತೀಯ ಭಾಷೆಯನ್ನು ‘ಸಂರಕ್ಷಿಸುವ ಸಲುವಾಗಿ ಕಲಿಯಬೇಕೆಂದು ನಾವು ಎಂದಿಗೂ ಒತ್ತಾಯಿಸಿಲ್ಲ. ನಮ್ಮ ಮೇಲೆ ಹಿಂದಿ ಹೇರಿಕೆಯನ್ನು ನಿಲ್ಲಿಸಿ ಎಂದು ಮಾತ್ರ ನಾವು ಕೇಳಿಕೊಳ್ಳುತ್ತಿದ್ದೇವೆ. ಬಿಜೆಪಿ ಆಡಳಿತದ ರಾಜ್ಯಗಳು ಮೂರು ಅಥವಾ 30 ಭಾಷೆಗಳನ್ನು ಕಲಿಸಲಿ, ಅದು ಅವರಿಗೆ ಬಿಟ್ಟಿದ್ದು, ಆದರೆ, ತಮಿಳುನಾಡನ್ನು ಬಿಟ್ಟುಬಿಡಿ!” ಎಂದು ಬರೆದುಕೊಂಡಿದ್ದಾರೆ.

ತಮಿಳುನಾಡು ಮತ್ತು ದಕ್ಷಿಣದ ಇತರ ರಾಜ್ಯಗಳಲ್ಲಿ ಹಿಂದಿ ಹೇರಿಕೆಗೆ ತಮ್ಮ ವಿರೋಧವನ್ನು ಪುನರುಚ್ಚರಿಸಿದ ಸಿಎಂ ಸ್ಟಾಲಿನ್, “ಉತ್ತರದ ರಾಜ್ಯಗಳು ತಮಿಳು ಕಲಿಯಬೇಕೆಂದು ತಮಿಳುನಾಡು ಎಂದಿಗೂ ಒತ್ತಾಯಿಸಿಲ್ಲ” ಎಂದು ಒತ್ತಿ ಹೇಳಿದ್ದಾರೆ.

ಉತ್ತರ ಭಾರತದ ವಿದ್ಯಾರ್ಥಿಗಳು ಕೇವಲ ಎರಡು ಭಾಷೆಗಳನ್ನು ಕಲಿಯಬೇಕಾದರೆ, ದಕ್ಷಿಣ ಭಾರತದ ವಿದ್ಯಾರ್ಥಿಗಳು ಮಾತ್ರ ಮೂರನೇ ಭಾಷೆಯನ್ನು ಕಲಿಯುವಂತೆ ಒತ್ತಾಯಿಸುತ್ತಿರುವುದು ಏಕೆ? ಎಂದು ಕೇಂದ್ರದ ತ್ರಿಭಾಷಾ ನೀತಿಯನ್ನು ಸ್ಟಾಲಿನ್ ಪ್ರಶ್ನಿಸಿದ್ದಾರೆ.

ಮತ್ತೊಂದು ಎಕ್ಸ್ ಪೋಸ್ಟ್‌ನಲ್ಲಿ ಅವರು ತಮಿಳುನಾಡಿನಲ್ಲಿ ಮೂರನೇ ಭಾಷೆಗಾಗಿ ಆಗ್ರಹಿಸುತ್ತಿರುವವರನ್ನು ಟೀಕಿಸಿಸಿದ್ದು, “ಕೆಲವು ಓರೆ ನೀತಿಗಳ ರಕ್ಷಕರು, ತೀವ್ರ ಕಳವಳದಿಂದ ಅಳುತ್ತಾ, ‘ತಮಿಳುನಾಡಿನ ವಿದ್ಯಾರ್ಥಿಗಳಿಗೆ ಮೂರನೇ ಭಾಷೆ ಕಲಿಯುವ ಅವಕಾಶವನ್ನು ಏಕೆ ನಿರಾಕರಿಸುತ್ತಿದ್ದೀರಿ?’ ಎಂದು ಕೇಳುತ್ತಿದ್ದಾರೆ. ಹಾಗಾದರೆ, ಸರಿ, ಉತ್ತರದಲ್ಲಿ ಯಾವ ಮೂರನೇ ಭಾಷೆಯನ್ನು ಕಲಿಸಲಾಗುತ್ತಿದೆ ಎಂದು ಅವರು ಏಕೆ ಹೇಳುತ್ತಿಲ್ಲ? ಉತ್ತರ ಭಾರತದವರು ಎರಡು ಭಾಷೆಗಳನ್ನು ಕಲಿಯುವಾಗ, ನಾವು ಮೂರನೇ ಭಾಷೆಯನ್ನು ಕಲಿಯುವ ಅಗತ್ಯ ಏನಿದೆ?” ಎಂದು ಕೇಳಿದ್ದಾರೆ.

“ಎನ್‌ಇಪಿ ಜಾರಿಗೆ ತಂದರೆ ತಮಿಳುನಾಡು 2 ಸಾವಿರ ವರ್ಷಗಳಷ್ಟು ಹಿಂದಕ್ಕೆ ಹೋಗಲಿದೆ. ಕೇಂದ್ರ ಸರ್ಕಾರ 10 ಸಾವಿರ ಕೋಟಿ ಕೊಟ್ಟರೂ, ನಾವು ಹೊಸ ಶಿಕ್ಷಣ ನೀತಿಯನ್ನು ತಮಿಳುನಾಡಿನಲ್ಲಿ ಜಾರಿಗೊಳಿಸುವುದಿಲ್ಲ” ಎಂದು ಇತ್ತೀಚೆಗೆ ಸಿಎಂ ಸ್ಟಾಲಿನ್ ಹೇಳಿದ್ದರು.

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನೂ ಟೀಕಿಸಿದ್ದ ಸ್ಟಾಲಿನ್, “ಅವರು ಎನ್‌ಇಪಿ ಮೂಲಕ ಹಿಂದಿ ಹೇರಿಕೆ ಮಾಡುತ್ತಿದ್ದಾರೆ” ಎಂದು ಕಿಡಿಕಾರಿದ್ದರು.

ಭಾಷಾ ಅಭಿವೃದ್ಧಿಗೆ ನಿಧಿ ಹಂಚಿಕೆ ಮಾಡುವಲ್ಲಿನ ತಾರತಮ್ಯವನ್ನು ಸಿಎಂ ಸ್ಟಾಲಿನ್ ಎತ್ತಿ ತೋರಿಸಿದ್ದು, “8 ಕೋಟಿ ಜನರು ತಮಿಳು ಮಾತನಾಡುತ್ತಾರೆ. ಆದರೆ, ಕೇಂದ್ರ ಸರ್ಕಾರ ಅದರ ಅಭಿವೃದ್ಧಿಗೆ ಕೇವಲ 74 ಕೋಟಿ ರೂ.ಗಳನ್ನು ಮಾತ್ರ ಮೀಸಲಿಟ್ಟಿದೆ. ಆದರೆ, ಕೆಲವೇ ಸಾವಿರ ಜನರು ಮಾತನಾಡುವ ಸಂಸ್ಕೃತಕ್ಕೆ 1,488 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ” ಎಂದಿದ್ದಾರೆ.

“ತಮಿಳುನಾಡು ಸರ್ಕಾರ ಎನ್‌ಇಪಿ ಮತ್ತು ತ್ರಿಭಾಷಾ ನೀತಿಯನ್ನು ನಿರಂತರವಾಗಿ ವಿರೋಧಿಸುತ್ತಾ ಬಂದಿದೆ. ಪ್ರಸ್ತುತ ಅಸ್ತಿತ್ವದಲ್ಲಿರುವ ದ್ವಿಭಾಷಾ ವ್ಯವಸ್ಥೆಯಾದ ತಮಿಳು ಮತ್ತು ಇಂಗ್ಲಿಷ್‌ಗೆ ಆದ್ಯತೆ ನೀಡಿದೆ. ಪ್ರಮುಖ ವಿರೋಧ ಪಕ್ಷವಾದ ಎಐಎಡಿಎಂಕೆ ಕೂಡ ಈ ನಿಲುವನ್ನು ಬೆಂಬಲಿಸಿದೆ” ಎಂದು ಸಿಎಂ ಸ್ಟಾಲಿನ್ ತಿಳಿಸಿದ್ದಾರೆ.

ಈ ನಡುವೆ, ಸಿಎಂ ಸ್ಟಾಲಿನ್ ಅವರು ರಾಜಕೀಯಕ್ಕಾಗಿ ಎನ್‌ಇಪಿ ಕುರಿತು ತಪ್ಪು ಹೇಳಿಕೆ ನೀಡುತ್ತಿದ್ದಾರೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಆರೋಪಿಸಿದ್ದಾರೆ. ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ವಿದ್ಯಾರ್ಥಿಗಳ ಹಿತಾಸಕ್ತಿಗಳ ಮೇಲೆ ಕೇಂದ್ರೀಕರಿಸುವಂತೆ ಅವರು ಮನವಿ ಮಾಡಿದ್ದಾರೆ.

ಪ್ರಧಾನ ಮಂತ್ರಿ ಶ್ರೀ ಶಾಲೆಗಳ ಯೋಜನೆಯೊಂದಿಗೆ ಸಮಗ್ರ ಶಿಕ್ಷಾ ಅಭಿಯಾನ (ಎಸ್‌ಎಸ್‌ಎ) ನಿಧಿಯನ್ನು ಜೋಡಿಸುವುದನ್ನು ಆಕ್ಷೇಪಿಸಿ ಸಿಎಂ ಸ್ಟಾಲಿನ್ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ ನಂತರ ಪ್ರಧಾನ್ ಅವರ ಪ್ರತಿಕ್ರಿಯೆ ಬಂದಿದೆ.

ಪ್ರಧಾನ ಮಂತ್ರಿ ಶ್ರೀ ಶಾಲೆ ಮತ್ತು ಎಸ್‌ಎಸ್‌ಎ ಪ್ರತ್ಯೇಕ ಕೇಂದ್ರ ಪ್ರಾಯೋಜಿತ ಕಾರ್ಯಕ್ರಮಗಳಾಗಿದ್ದು, ಇವುಗಳನ್ನು ಲಿಂಕ್ ಮಾಡುವುದು ಅನ್ಯಾಯ ಎಂದು ಸ್ಟಾಲಿನ್ ಅವರು ಪ್ರಧಾನಿಗೆ ಬರೆದ ಪತ್ರದಲ್ಲಿ ಹೇಳಿದ್ದರು. ಎನ್‌ಇಪಿ ಜೊತೆ ಸೇರಿಸದೆ ಎಸ್‌ಎಸ್‌ಎ ಯೋಜನೆಯ ಹಣವಾದ 2,152 ಕೋಟಿ ರೂ.ಗಳನ್ನು ತಮಿಳುನಾಡಿಗೆ ತಕ್ಷಣ ಬಿಡುಗಡೆ ಮಾಡಬೇಕೆಂದು ಅವರು ಒತ್ತಾಯಿಸಿದ್ದರು.

ರಾಜ್ಯಗಳು ತಾವು ಹೇಳಿದಂತೆ ಕೇಳಲು ಕೇಂದ್ರ ಸರ್ಕಾರ ಅನುದಾನ ಹಂಚಿಕೆಯನ್ನು ಒಂದು ಅಸ್ತ್ರವಾಗಿ ಬಳಸುತ್ತಿದೆ. ಇದು ಸಹಕಾರಿ ಒಕ್ಕೂಟ ವ್ಯವಸ್ಥೆಗೆ ವಿರುದ್ದ ಎಂದು ಸ್ಟಾಲಿನ್ ಪತ್ರದಲ್ಲಿ ಹೇಳಿದ್ದರು.

ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಕೂಡ ಹೊಸ ಶಿಕ್ಷಣ ನೀತಿ (ಎನ್‌ಇಪಿ) ಮತ್ತು ಇತರ ರೀತಿಯಲ್ಲಿ ಹಿಂದಿ ಹೇರಿಕೆಯನ್ನು ಬಲವಾಗಿ ವಿರೋಧಿಸಿದ್ದಾರೆ. ತಮಿಳು ಗುರುತನ್ನು ಯಾವುದೇ ಬೆಲೆ ತೆತ್ತಾದರೂ ರಕ್ಷಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.

‘ತಕ್ಷಣ ಮಕ್ಕಳನ್ನು ಹೊಂದಿ’ | ಕ್ಷೇತ್ರ ವಿಂಗಡನೆ ಬಗ್ಗೆ ತಮಿಳುನಾಡು ನಿವಾಸಿಗಳಿಗೆ ಸಿಎಂ ಸ್ಟಾಲಿನ್ ಸಲಹೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...