Homeಮುಖಪುಟಸಂಸದೀಯ ಕ್ಷೇತ್ರ ಪುನರ್‌ವಿಂಗಡಣೆ ಕಳವಳ : ಸರ್ವಪಕ್ಷ ಸಭೆ ನಡೆಸಿದ ತಮಿಳುನಾಡು ಸಿಎಂ

ಸಂಸದೀಯ ಕ್ಷೇತ್ರ ಪುನರ್‌ವಿಂಗಡಣೆ ಕಳವಳ : ಸರ್ವಪಕ್ಷ ಸಭೆ ನಡೆಸಿದ ತಮಿಳುನಾಡು ಸಿಎಂ

- Advertisement -
- Advertisement -

ಸಂಸದೀಯ ಕ್ಷೇತ್ರಗಳ ಪ್ರಸ್ತಾವಿತ ಪುನರ್‌ವಿಂಗಡನೆಯ ಕುರಿತು ಚರ್ಚಿಸಲು ಇಂದು (ಮಾ.5) ರಾಜ್ಯ ಸಚಿವಾಲಯದಲ್ಲಿ ಆಯೋಜಿಸಿದ್ದ ಸರ್ವಪಕ್ಷಗಳ ಸಭೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಕೇಂದ್ರ ಸರ್ಕಾರದ ಪುನರ್‌ವಿಂಗಡಣಾ ಯೋಜನೆಯನ್ನು ತೀವ್ರವಾಗಿ ವಿರೋಧಿಸಿದ್ದಾರೆ.

ಜನಗಣತಿಯ ಪ್ರಕಾರ ಪುನರ್‌ವಿಂಗಡನೆ ಮಾಡಿದರೆ, ಅದು ತಮಿಳುನಾಡಿನ ರಾಜಕೀಯ ಪ್ರಭಾವವನ್ನು ದುರ್ಬಲಗೊಳಿಸುತ್ತದೆ. ತಮಿಳುನಾಡು ಪ್ರಸ್ತುತ ಸಂಸತ್ತಿನಲ್ಲಿ 39 ಸಂಸದರನ್ನು ಹೊಂದಿದ್ದರೂ, ರಾಜ್ಯದ ಸಮಸ್ಯೆಗಳನ್ನು ಕೇಂದ್ರ ಪರಿಹರಿಸುತ್ತಿಲ್ಲ ಎಂದಿರುವ ಸ್ಟಾಲಿನ್, ಜನಸಂಖ್ಯಾ ಬೆಳವಣಿಗೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಿದ ರಾಜ್ಯಗಳಿಗೆ ನ್ಯಾಯ ಒದಗಿಸಲು, ಪ್ರಸ್ತುತ ಇರುವ ಗಡಿ ನಿರ್ಣಯ ಪದ್ದತಿಯನ್ನು ಮುಂದಿನ 30 ವರ್ಷಗಳವರೆಗೆ ಮುಂದುವರಿಸಬೇಕೆಂದು ಆಗ್ರಹಿಸಿದ್ದಾರೆ.

ಕೇಂದ್ರದ ಕ್ಷೇತ್ರ ಪುನರ್‌ವಿಂಗಡಣೆಯ ಪರಿಣಾಮದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಸರ್ವ ಪಕ್ಷಗಳ ಸಮಿತಿಯನ್ನು ರಚಿಸುವುದಾಗಿ ಸ್ಟಾಲಿನ್ ಘೋಷಿಸಿದ್ದಾರೆ. ಸಭೆಯಲ್ಲಿ ಭಾಗವಹಿಸಿದ್ದ ಎಲ್ಲಾ ಪಕ್ಷಗಳು ಸರ್ವಾನುಮತದಿಂದ ನಿರ್ಣಯವನ್ನು ಅಂಗೀಕರಿಸಬೇಕು ಮತ್ತು ಕೇಂದ್ರದ ಕ್ಷೇತ್ರ ವಿಂಗಡಣೆ ಯೋಜನೆಯನ್ನು ವಿರೋಧಿಸುವಲ್ಲಿ ಒಗ್ಗಟ್ಟಿನಿಂದ ಮುಂದುವರಿಯಬೇಕು ಎಂದು ಸ್ಟಾಲಿನ್ ಮನವಿ ಮಾಡಿದ್ದಾರೆ.

ದಕ್ಷಿಣ ಭಾರತದ ಸರ್ವಪಕ್ಷ ಪ್ರತಿನಿಧಿಗಳ ಜಂಟಿ ಸಮಿತಿಗೆ ಪ್ರತಿನಿಧಿಗಳನ್ನು ಹುಡುಕಲು ಇತರ ರಾಜ್ಯಗಳಿಗೆ ಭೇಟಿ ನೀಡಬೇಕೆಂದು ಪಟ್ಟಾಳಿ ಮಕ್ಕಳ್ ಕಚ್ಚಿ (ಪಿಎಂಕೆ) ಅಧ್ಯಕ್ಷ ಅನ್ಬುಮಣಿ ರಾಮದಾಸ್ ಅವರನ್ನು ಸ್ಟಾಲಿನ್ ಕೋರಿದ್ದಾರೆ.

ಹಲವಾರು ರಾಜಕೀಯ ಪಕ್ಷಗಳು ಭಾಗವಹಿಸಿದ್ದ ಸಭೆಯಲ್ಲಿ, ಜನಸಂಖ್ಯೆಯ ಅಂಕಿ ಅಂಶಗಳನ್ನು ಆಧರಿಸಿದ ಕ್ಷೇತ್ರ ಪುನರ್‌ವಿಂಗಡಣೆ ಮಾಡುವುದು ಸಂಸತ್ತಿನಲ್ಲಿ ತಮಿಳುನಾಡಿನ ಪ್ರಾತಿನಿಧ್ಯವನ್ನು ಗಮನಾರ್ಹವಾಗಿ ಕಡಿಮೆ ಮಾಡಬಹುದು ಎಂಬ ಕಳವಳಗಳ ಮೇಲೆ ಕೇಂದ್ರೀಕರಿಸಿ ಚರ್ಚೆ ನಡೆದಿದೆ. ಬಿಜೆಪಿ, ನಾಮ್ ತಮಿಳರ್ ಕಚ್ಚಿ (ಎನ್‌ಟಿಕೆ) ಮತ್ತು ತಮಿಳು ಮಾನಿಲ ಕಾಂಗ್ರೆಸ್ ಸಭೆಯನ್ನು ಬಹಿಷ್ಕರಿಸಿದ್ದವು.

ಜನ ಸಂಖ್ಯೆಯ ಆಧಾರದ ಮೇಲಿನ ಕ್ಷೇತ್ರ ವಿಂಗಡಣೆಯಿಂದ ಸಂಸತ್‌ನಲ್ಲಿ ದಕ್ಷಿಣ ಭಾರತದ ಪ್ರಾತಿನಿಧ್ಯ ಕುಸಿಯಬಹುದು. ಹೆಚ್ಚಿನ ಸ್ಥಾನಗಳು ಉತ್ತರ ಭಾರತದ ರಾಜ್ಯಗಳಿಗೆ ಹೋಗಬಹುದು ಎಂಬ ಕಳವಳ ಶುರುವಾಗಿದೆ. ಏಕೆಂದರೆ, ದಕ್ಷಿಣ ಭಾರತದ ರಾಜ್ಯಗಳು ಅಭಿವೃದ್ದಿ ದೃಷ್ಠಿಯಿಂದ ಪರಿಣಾಕಾರಿಯಾಗಿ ಜನಸಂಖ್ಯಾ ನಿಯಂತ್ರಣ ಯೋಜನೆಗಳನ್ನು ಅಳವಡಿಸಿಕೊಂಡು ಜನಸಂಖ್ಯೆ ನಿಯಂತ್ರಿಸಿವೆ.

ಕೆಲ ದಿನಗಳ ಹಿಂದೆ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ್ದ ಸಿಎಂ ಸ್ಟಾಲಿನ್, “ತಮಿಳುನಾಡಿನ ಜನರು ಮದುವೆಯಾದ ತಕ್ಷಣ ಮಕ್ಕಳನ್ನು ಹೊಂದುವಂತೆ ಕರೆ ನೀಡಿದ್ದರು. ನಾವು ಜನಸಂಖ್ಯೆ ನಿಯಂತ್ರಣಕ್ಕೆ ಅಳವಡಿಸಿಕೊಂಡಿದ್ದ ಯೋಜನೆಗಳೇ ಈಗ ನಮಗೆ ಮುಳುವಾಗಿದೆ. ಕೇಂದ್ರ ಸರ್ಕಾರ ಜನಸಂಖ್ಯೆ ಆಧಾರದ ಮೇಲೆ ಕ್ಷೇತ್ರ ಪುನರ್‌ವಿಂಗಡಣೆ ಮಾಡಿದರೆ ತಮಿಳುನಾಡು ಎಂಟು ಲೋಕಸಭಾ ಕ್ಷೇತ್ರಗಳನ್ನು ಕಳೆದುಕೊಳ್ಳಲಿದೆ ಎಂದಿದ್ದರು.

ಇದು ಕೇವಲ ತಮಿಳುನಾಡಿ ಹೋರಾಟವಲ್ಲ. ಜನಸಂಖ್ಯೆಯನ್ನು ನಿಯಂತ್ರಣ ಮಾಡಿಕೊಂಡಿರುವ ದಕ್ಷಿಣದ ಎಲ್ಲಾ ರಾಜ್ಯಗಳ ಹೋರಾಟವಾಗಿದೆ. ಕೇಂದ್ರದ ಕ್ಷೇತ್ರ ಪುನರ್‌ವಿಂಗಡಣೆಯ ಶಿಕ್ಷೆಗೆ ದಕ್ಷಿಣದ ರಾಜ್ಯಗಳು ಒಳಗಾಗಬಾರದು ಎಂಬ ಹೋರಾಟವಾಗಿದೆ ಎಂದಿದ್ದರು.

ಬಿಜೆಪಿ ಆರ್‌ಆರ್‌ಎಸ್‌ನ ಗುಲಾಮ

ಕೇಂದ್ರದ ಸಂಸದೀಯ ಕ್ಷೇತ್ರಗಳ ಪುನರ್‌ವಿಂಗಡಣೆ ಯೋಜನೆಯ ಪರಿಣಾಮಗಳ ಕುರಿತ ಸಭೆಗೆ ಗೈರಾದ ತಮಿಳುನಾಡು ಬಿಜೆಪಿ ವಿರುದ್ದ ಡಿಎಂಕೆ ನಾಯಕ ಟಿಕೆಎಸ್ ಎಳಂಗೋವನ್ ಕಿಡಿಕಾರಿದ್ದು, ‘ಬಿಜೆಪಿ ಆರ್‌ಎಸ್‌ಎಸ್‌ನ ಗುಲಾಮ’ ಎಂದಿದ್ದಾರೆ.

“ಸರ್ವಪಕ್ಷ ಸಭೆಗೆ ಹಾಜರಾಗದ ಪಕ್ಷಗಳು ತಮಿಳುನಾಡಿನ ಕಲ್ಯಾಣದ ಪರವಾಗಿಲ್ಲ. ಅವರು ಈ ಸಭೆ ಹೇಗೆ ಹಾಜರಾಗುತ್ತಾರೆ? ಏಕೆಂದರೆ ಈ ಸಭೆ ಅವರಿಗೆ ವಿರುದ್ದವಾಗಿದೆ. ಬಿಜೆಪಿ ಯಾವ ಸಭೆಗೆ ಹಾಜರಾಗಬೇಕೆಂದು ನಿರ್ಧರಿಸುವುದು ಆರ್‌ಎಸ್‌ಎಸ್. ಈ ಸಭೆಗೆ ಹಾಜರಾಗದ ಪಕ್ಷಗಳಿಗೆ ರಾಜ್ಯದ ಕಲ್ಯಾಣದಲ್ಲಿ ಆಸಕ್ತಿ ಇಲ್ಲ ಎಂದರ್ಥ” ಎಂದು ಎಳಂಗೋವನ್ ವಾಗ್ದಾಳಿ ನಡೆಸಿದ್ದಾರೆ.

ಉತ್ತರ ಭಾರತದಲ್ಲಿ ತಮಿಳು ಪ್ರಚಾರ ಸಭಾ ಏಕಿಲ್ಲ? ಕೇಂದ್ರ ಸರ್ಕಾರಕ್ಕೆ ಸಿಎಂ ಸ್ಟಾಲಿನ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...