Homeಮುಖಪುಟಎಡಪಂಥೀಯ ವಿದ್ಯಾರ್ಥಿ ಸಂಘಟನೆಗಳೊಂದಿಗೆ ಘರ್ಷಣೆ; ಜಾದವ್‌ಪುರ ವಿವಿಯಲ್ಲಿ 'ಸರ್ಜಿಕಲ್ ಸ್ಟ್ರೈಕ್' ಬೆದರಿಕೆ ಹಾಕಿದ ಎಬಿವಿಪಿ

ಎಡಪಂಥೀಯ ವಿದ್ಯಾರ್ಥಿ ಸಂಘಟನೆಗಳೊಂದಿಗೆ ಘರ್ಷಣೆ; ಜಾದವ್‌ಪುರ ವಿವಿಯಲ್ಲಿ ‘ಸರ್ಜಿಕಲ್ ಸ್ಟ್ರೈಕ್’ ಬೆದರಿಕೆ ಹಾಕಿದ ಎಬಿವಿಪಿ

- Advertisement -
- Advertisement -

ಬಲಪಂಥೀಯ ಸಂಘಟನೆಯಾದ ಆರ್‌ಎಸ್‌ಎಸ್‌ನ ವಿದ್ಯಾರ್ಥಿ ವಿಭಾಗವಾದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಮಂಗಳವಾರ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದಲ್ಲಿ “ಸರ್ಜಿಕಲ್ ಸ್ಟ್ರೈಕ್” ಮಾಡುವುದಾಗಿ ಬೆದರಿಕೆ ಹಾಕಿದೆ. ಪಶ್ಚಿಮ ಬಂಗಾಳ ಶಿಕ್ಷಣ ಸಚಿವ ಬ್ರಾತ್ಯ ಬಸು ಅವರ ವಾಹನ ಕ್ಯಾಂಪಸ್ ಆವರಣದಲ್ಲಿ ವಿದ್ಯಾರ್ಥಿಯೊಬ್ಬರಿಗೆ ಡಿಕ್ಕಿ ಹೊಡೆದ ಘಟನೆಯಿಂದ ಪರಿಸ್ಥಿತಿ ಉದ್ವಿಗ್ನಗೊಂಡಿದೆ.

ವಿಶ್ವವಿದ್ಯಾಲಯದಲ್ಲಿ ಅರಾಜಕತೆ ಇದೆ ಎಂದು ಆರೋಪಿಸಿರುವ ಎಬಿವಿಪಿಯ ರಾಜ್ಯ ಕಾರ್ಯದರ್ಶಿ ಅನಿರುದ್ಧ ಸರ್ಕಾರ್, “ಭವಿಷ್ಯದಲ್ಲಿ, ಎಬಿವಿಪಿ ಜಾದವ್‌ಪುರದೊಳಗೆ ಸರ್ಜಿಕಲ್ ಸ್ಟ್ರೈಕ್ ನಡೆಸಲಿದ್ದು, ಅದು ತುಂಬಾ ಭಯಾನಕವಾಗಿರುತ್ತದೆ. ಯಾವುದೇ ರೀತಿಯಲ್ಲಿ ಮತ್ತು ಯಾವುದೇ ಭಾಷೆಯಲ್ಲಿ ಎಬಿವಿಪಿಯು ಎಸ್‌ಎಫ್‌ಐಗೆ ಅರ್ಥವಾಗುವ ಭಾಷೆಯಲ್ಲಿ ಪ್ರತಿಕ್ರಿಯಿಸುತ್ತದೆ; ಅವರು ಇದಕ್ಕೆ ಸಿದ್ಧರಾಗಲಿ” ಎಂದು ಎಂಡಪಂಥೀಯ ವಿದ್ಯಾರ್ಥಿ ಸಂಘಟನೆಗಳು ಹಾಗೂ ವಿಶ್ವವಿದ್ಯಾಲಯ ಆಡಳಿತ ಮಂಡಳಿಗೆ ಎಚ್ಚರಿಕೆ ನೀಡಿದ್ದಾರೆ.

ಇದಕ್ಕೂ ಮೊದಲು, ಜಾದವ್‌ಪುರ ವಿಶ್ವವಿದ್ಯಾಲಯದಲ್ಲಿ ‘ಸರ್ಜಿಕಲ್ ಸ್ಟ್ರೈಕ್’ ಬಗ್ಗೆ ಮಾಜಿ ರಾಜ್ಯ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್ ಮಾತನಾಡಿದ್ದರು.

ಮಾರ್ಚ್ 1 ರಂದು ಎಡಪಂಥೀಯ ವಿದ್ಯಾರ್ಥಿ ಸಂಘಟನೆಗಳಾದ ಎಸ್‌ಎಫ್‌ಐ ಮತ್ತು ಎಐಎಸ್‌ಎ ರಾಜ್ಯ ಸಚಿವ ಬ್ರಾತ್ಯ ಬಸು ಅವರಿಗೆ ‘ಘೇರಾವ್’ ಹಾಕಿ, ಅವರ ವಾಹನದ ಗಾಜು ಹಾನಿಗೊಳಿಸಿದಾಗಿನಿಂದ ಬಿಕ್ಕಟ್ಟು ಪ್ರಾರಂಭವಾಯಿತು. ರಾಜ್ಯದಲ್ಲಿ ವಿದ್ಯಾರ್ಥಿ ಸಂಘದ ಚುನಾವಣಾ ದಿನಾಂಕಗಳನ್ನು ಆದಷ್ಟು ಬೇಗ ಘೋಷಿಸುವಂತೆ ಎಡಪಂಥೀಯ ಸಂಘಟನೆಗಳು ಒತ್ತಾಯಿಸಿದ್ದವು.

ಸಚಿವ ಬಸು ಕ್ಯಾಂಪಸ್‌ಗೆ ಆಗಮಿಸುವ ಮೊದಲು ಪ್ರತಿಭಟನೆ ಪ್ರಾರಂಭವಾಯಿತು, ವಿದ್ಯಾರ್ಥಿಗಳು ಘೋಷಣೆಗಳನ್ನು ಕೂಗುತ್ತಾ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು. ಪಶ್ಚಿಮ ಬಂಗಾಳ ಕಾಲೇಜು ಮತ್ತು ವಿಶ್ವವಿದ್ಯಾಲಯ ಅಧಿಕಾರಿಗಳು ಪ್ರತಿಭಟನಾಕಾರರನ್ನು ಚದುರಿಸಲು ಪ್ರಯತ್ನಿಸಿದಾಗ, ಉದ್ವಿಗ್ನತೆ ದೈಹಿಕ ವಾಗ್ವಾದಕ್ಕೆ ಕಾರಣವಾಯಿತು.

ವಿದ್ಯಾರ್ಥಿಗಳು ಸಚಿವರ ವಾಹನವನ್ನು ತಡೆದು, ಅದರ ಟೈರ್‌ಗಳನ್ನು ಗಾಳಿಯಲ್ಲಿ ಇಳಿಸಿ ಅವರು ಹೊರಬರದಂತೆ ತಡೆಯುತ್ತಿದ್ದಂತೆ ಪರಿಸ್ಥಿತಿ ಮತ್ತಷ್ಟು ಉಲ್ಬಣಗೊಂಡಿತು. ಗೊಂದಲದ ನಡುವೆ ಸಚಿವರು ಸುಮಾರು ಎರಡು ಗಂಟೆಗಳ ಕಾಲ ಬಂಧನದಲ್ಲಿದ್ದರು, ವಿವಿ ಆವರಣದಿಂದ ಅವರು ಹೊರಬರಲು ಸಾಧ್ಯವಾಗಲಿಲ್ಲ.

ಸೋಮವಾರ, ವಿಶ್ವವಿದ್ಯಾಲಯದ ಗೇಟ್‌ನಲ್ಲಿ ಎರಡು ವಿದ್ಯಾರ್ಥಿ ಸಂಘಟನೆಗಳ ನಡುವೆ ಘರ್ಷಣೆ ಸಂಭವಿಸಿತು. ಎಬಿವಿಪಿ ಸದಸ್ಯರು ವಿಶ್ವವಿದ್ಯಾಲಯದ ನಾಲ್ಕನೇ ಗೇಟ್‌ಗೆ ಮೆರವಣಿಗೆ ನಡೆಸಿದರು. ಅನೇಕ ಜನರು ವಿಶ್ವವಿದ್ಯಾಲಯದ ಗೇಟ್ ಅನ್ನು ತಳ್ಳುವ ಮೂಲಕ ಪ್ರವೇಶಿಸಿದರು ಎಂದು ಆರೋಪಿಸಲಾಗಿದೆ.

ವಿಶ್ವವಿದ್ಯಾಲಯದ ಭದ್ರತಾ ಸಿಬ್ಬಂದಿ ಗೇಟ್ ಮುಚ್ಚಲು ಪ್ರಯತ್ನಿಸಿದರು, ಆದರೆ ವಿದ್ಯಾರ್ಥಿ ಸಂಘಟನೆಗಳೊಂದಿಗೆ ಗಲಾಟೆಯಲ್ಲಿ ತೊಡಗಿದರು.

ಈ ಗೊಂದಲದ ಸಮಯದಲ್ಲಿ, ಎಸ್‌ಎಫ್‌ಐ ಮತ್ತು ಎಐಡಿಎಸ್‌ಒ ಧ್ವಜಗಳನ್ನು ಕೆಡವಲಾಯಿತು. ಎಬಿವಿಪಿ ಕಾರ್ಯಕರ್ತರು ತಮ್ಮ ಧ್ವಜಗಳನ್ನು ಆ ಸ್ಥಳದಲ್ಲಿ ಹಾಕಿದರು. ಎಡಪಂಥೀಯ ವಿದ್ಯಾರ್ಥಿ ಸಂಘಟನೆಯ ಪೋಸ್ಟರ್‌ಗಳನ್ನು ಸಹ ಹರಿದು ಹಾಕಲಾಯಿತು.

ಜಾದವ್‌ಪುರ ವಿಶ್ವವಿದ್ಯಾಲಯದ ಸಿಕ್ಖಾ ಬೊಂಡು ಶಿಕ್ಷಕರ ಸಂಘದ ಕಚೇರಿಯಲ್ಲಿ ನಡೆದ ದರೋಡೆ, ಬೆಂಕಿ ಹಚ್ಚುವಿಕೆಗೆ ಸಂಬಂಧಿಸಿದಂತೆ ಕೋಲ್ಕತ್ತಾ ಪೊಲೀಸರು ಒಬ್ಬ ವ್ಯಕ್ತಿಯನ್ನು ಬಂಧಿಸಿದರು. ನಂತರ ಮಾರ್ಚ್ 12 ರವರೆಗೆ ಅವರನ್ನು ಪೊಲೀಸ್ ವಶಕ್ಕೆ ನೀಡಲಾಯಿತು.

ಇದಲ್ಲದೆ, ಪಶ್ಚಿಮ ಬಂಗಾಳದಲ್ಲಿ ವಿದ್ಯಾರ್ಥಿ ಸಂಘದ ಚುನಾವಣಾ ದಿನಾಂಕಗಳನ್ನು ತಕ್ಷಣ ಘೋಷಿಸುವಂತೆ ಒತ್ತಾಯಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಕ್ಯಾಂಪಸ್‌ನಲ್ಲಿ ನಡೆದ ಹಿಂಸಾತ್ಮಕ ಘರ್ಷಣೆಗಳ ನಂತರ ಏಳು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ.

ಸಂಸದೀಯ ಕ್ಷೇತ್ರ ಪುನರ್‌ವಿಂಗಡಣೆ ಕಳವಳ : ಸರ್ವಪಕ್ಷ ಸಭೆ ನಡೆಸಿದ ತಮಿಳುನಾಡು ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...