Homeಮುಖಪುಟಔರಂಗಜೇಬ್ ಕುರಿತು ಹೇಳಿಕೆ : ಮಹಾರಾಷ್ಟ್ರ ವಿಧಾನಸಭೆಯಿಂದ ಶಾಸಕ ಅಬೂ ಅಝ್ಮಿ ಅಮಾನತು

ಔರಂಗಜೇಬ್ ಕುರಿತು ಹೇಳಿಕೆ : ಮಹಾರಾಷ್ಟ್ರ ವಿಧಾನಸಭೆಯಿಂದ ಶಾಸಕ ಅಬೂ ಅಝ್ಮಿ ಅಮಾನತು

- Advertisement -
- Advertisement -

ಮೊಗಲ್ ದೊರೆ ಔರಂಗಜೇಬ್ ಕುರಿತು ಹೇಳಿಕೆ ನೀಡಿದ್ದಕ್ಕೆ ಮಹಾರಾಷ್ಟ್ರದ ವಿಧಾನಸಭೆಯಿಂದ ಸಮಾಜವಾದಿ ಪಕ್ಷದ (ಎಸ್‌ಪಿ) ಶಾಸಕ ಅಬೂ ಅಝ್ಮಿ ಅವರನ್ನು ಪ್ರಸ್ತುತ ನಡೆಯುತ್ತಿರುವ ಬಜೆಟ್ ಅಧಿವೇಶನದ ಅಂತ್ಯದವರೆಗೆ ಅಮಾನತುಗೊಳಿಸಲಾಗಿದೆ.

ಕಳೆದ ವಾರ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಶಾಸಕ ಅಝ್ಮಿ, “ಔರಂಗಜೇಬ್‌ರನ್ನು ಒಬ್ಬ ಕ್ರೂರ ಆಡಳಿತಗಾರ ಎಂದು ನೋಡಬಾರದು, ಬದಲಾಗಿ ದೇವಾಲಯಗಳನ್ನು ನಿರ್ಮಿಸಿದ ಮಹಾನ್ ಆಡಳಿತಗಾರ ಎಂದು ನೋಡಬೇಕು. ಔರಂಗಜೇಬರ ಆಳ್ವಿಕೆಯಲ್ಲಿ, ಭಾರತದ ಗಡಿ ಅಫ್ಘಾನಿಸ್ತಾನ ಮತ್ತು ಬರ್ಮಾವರೆಗೆ (ಈಗ ಮ್ಯಾನ್ಮಾರ್) ವಿಸ್ತರಿಸಿತ್ತು” ಎಂದು ಹೇಳಿದ್ದರು.

ಅಲ್ಲದೆ, “ಛತ್ರಪತಿ ಸಂಭಾಜಿ ಮಹಾರಾಜ್ ಮತ್ತು ಔರಂಗಜೇಬ್ ನಡುವಿನ ಯುದ್ಧವು ಧರ್ಮದ ವಿಷಯಕ್ಕೆ ನಡೆದಿರುವುದು ಎಂದು ನಾನು ನಂಬುವುದಿಲ್ಲ; ಅದೊಂದು ರಾಜಕೀಯ ಯುದ್ಧವಾಗಿತ್ತು” ಎಂದಿದ್ದರು.

ತನ್ನ ಹೇಳಿಕೆಗೆ ವಿರೋಧ ವ್ಯಕ್ತವಾಗುತ್ತಿದ್ದಂತೆ ಕ್ಷಮೆ ಯಾಚಿಸಿದ್ದ ಅಝ್ಮಿ, “ಇತಿಹಾಸಕಾರರು ಏನು ಹೇಳಿದ್ದಾರೋ, ಅದನ್ನೇ ನಾನು ಹೇಳಿದ್ದೇನೆ. ಅದು ಛತ್ರಪತಿ ಶಿವಾಜಿ ಮಹಾರಾಜ್ ಅಥವಾ ಸಂಭಾಜಿ ಮಹಾರಾಜ್ ವಿರುದ್ಧ ನೀಡಿದ್ದ ಹೇಳಿಕೆಯಾಗಿರಲಿಲ್ಲ” ಎಂದು ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದರು.

ಅಝ್ಮಿಯ ಹೇಳಿಕೆಯನ್ನು ಖಂಡಿಸಿದ್ದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ್ ಶಿಂದೆ ‘ಅಝ್ಮಿ ದೇಶದ್ರೋಹಿ’ ಎಂದಿದ್ದರು.

“ಅಝ್ಮಿ ಒಬ್ಬರು ದೇಶದ್ರೋಹಿ. ಅವರಿಗೆ ವಿಧಾನಸಭೆಯಲ್ಲಿ ಕುಳಿತುಕೊಳ್ಳುವ ಹಕ್ಕಿಲ್ಲ. ಅವರು ಯಾವಾಗಲೂ ಛತ್ರಪತಿ ಶಿವಾಜಿ ಮತ್ತು ಸಂಭಾಜಿ ಮಹಾರಾಜರನ್ನು ಅವಮಾನಿಸುತ್ತಲೇ ಬಂದಿದ್ದಾರೆ” ಎಂದು ಶಿಂಧೆ ಕಿಡಿಕಾರಿದ್ದರು.

ಮಂಖುರ್ದ್-ಶಿವಾಜಿ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಅಝ್ಮಿ “ಛಾವಾ ಸಿನಿಮಾ’ಗೆ ಸಂಬಂಧಿಸಿದಂತೆ ನಾನು ಹೇಳಿಕೆ ನೀಡಿದ್ದೇನೆ ಎಂದರೂ, ಅವರ ವಿರುದ್ದ ಬಿಎನ್‌ಎಸ್‌ ಕಾಯ್ದೆಯಡಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಮತ್ತು ಮಾನನಷ್ಠೆ ಮೊಕದ್ದಮೆ” ದಾಖಲಿಸಲಾಗಿದೆ.

ಅಬೂ ಅಝ್ಮಿ ಅವರನ್ನು ವಿಧಾನಸಭೆಯಿಂದ ಅಮಾನತುಗೊಳಿಸಿರುವ ಕುರಿತು ಮಾತನಾಡಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದು, ತಮ್ಮ ಪಕ್ಷದ ನಾಯಕನ ವಿರುದ್ಧದ ಕ್ರಮವು ‘ಸತ್ಯವನ್ನು ಮೌನಗೊಳಿಸುವ’ ಪ್ರಯತ್ನವಾಗಿದೆ ಎಂದಿದ್ದಾರೆ.

“ಸಿದ್ದಾಂತದ ವಿಚಾರಕ್ಕೆ ಅಮಾನತು ಮಾಡುವುದಾದರೆ ವಾಕ್ ಸ್ವಾತಂತ್ರ್ಯ ಮತ್ತು ತಲೆ ಬಾಗುವುದರ ನಡುವೆ ಏನು ವ್ಯತ್ಯಾಸ ಇರಲಿದೆ? ನಮ್ಮ ಶಾಸಕರು ನಿರ್ಭೀತ ಬುದ್ದಿವಂತರು. ಅಮಾನತು ಸತ್ಯವನ್ನು ಮೌನಗೊಳಿಸಬಹುದು ಎಂದುಕೊಂಡರೆ, ಅದು ಅವರ ಅಪ್ರಭುದ್ದತೆಯಷ್ಟೆ” ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

ಎಡಪಂಥೀಯ ವಿದ್ಯಾರ್ಥಿ ಸಂಘಟನೆಗಳೊಂದಿಗೆ ಘರ್ಷಣೆ; ಜಾದವ್‌ಪುರ ವಿವಿಯಲ್ಲಿ ‘ಸರ್ಜಿಕಲ್ ಸ್ಟ್ರೈಕ್’ ಬೆದರಿಕೆ ಹಾಕಿದ ಎಬಿವಿಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...