Homeಮುಖಪುಟವಕ್ಫ್‌ ವಿವಾದ| ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಹೋರಾಟಕ್ಕೆ ಪ್ರತಿಯಾಗಿ ಹಿಂದುತ್ವ ಗುಂಪಿನಿಂದ ಪ್ರತಿಭಟನೆ!

ವಕ್ಫ್‌ ವಿವಾದ| ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಹೋರಾಟಕ್ಕೆ ಪ್ರತಿಯಾಗಿ ಹಿಂದುತ್ವ ಗುಂಪಿನಿಂದ ಪ್ರತಿಭಟನೆ!

- Advertisement -
- Advertisement -

ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಮ್‌ಪಿಎಲ್‌ಬಿ) ಮಾರ್ಚ್ 10 ರಂದು ಸಂಸತ್ತಿನ ಬಳಿಯ ಐತಿಹಾಸಿಕ ಜಂತರ್ ಮಂತರ್‌ನಲ್ಲಿ ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ಬೃಹತ್ ಹೋರಾಟ ನಡೆಸುವ ಯೋಜನೆಯನ್ನು ಘೋಷಿಸಿದ ಕೆಲವು ದಿನಗಳ ನಂತರ, ಹಿಂದೂ ರಕ್ಷಾ ದಳದ ಮುಖ್ಯಸ್ಥೆ ಪಿಂಕಿ ಚೌಧರಿ ಕೂಡ ಅದೇ ಸ್ಥಳದಲ್ಲಿ ಮಸೂದೆಯನ್ನು ಬೆಂಬಲಿಸಿ ಪ್ರತಿಭಟನೆ ನಡೆಸುವ ಯೋಜನೆಯನ್ನು ಬಹಿರಂಗಪಡಿಸಿದ್ದಾರೆ.

ವಕ್ಫ್ ಸಂಸ್ಥೆಯನ್ನು ಸಂಪೂರ್ಣವಾಗಿ ರದ್ದುಗೊಳಿಸುವಂತೆ ಒತ್ತಾಯಿಸಿ ತಮ್ಮ ಸಂಘಟನೆ ಪ್ರತಿಭಟನೆ ನಡೆಸಲಿದೆ ಎಂದು ಚೌಧರಿ ಬುಧವಾರ ಹೇಳಿದ್ದಾರೆ.

ಈ ಬಗ್ಗೆ ವೀಡಿಯೊ ಹೇಳಿಕೆ ಬಿಡುಗಡೆ ಮಾಡಿರುವ ಚೌಧರಿ, “ದೆಹಲಿ ಪೊಲೀಸರು ವಕ್ಫ್ ಮಸೂದೆಯ ವಿರುದ್ಧ ಪ್ರತಿಭಟಿಸಲು ಮುಸ್ಲಿಮರಿಗೆ ಅನುಮತಿ ನೀಡಿದ್ದಾರೆ ಎಂದು ಹೇಳುತ್ತಾರೆ. ಹಿಂದೂಗಳು ಆ ಸ್ಥಳದಲ್ಲಿ ಮುಸ್ಲಿಮರು ಸೇರದಂತೆ ನೋಡಿಕೊಳ್ಳಬೇಕು” ಎಂದು ಅವರು ಕರೆ ನೀಡಿದ್ದಾರೆ.

“ನಾವೆಲ್ಲರೂ ಹಿಂದೂ ಸಹೋದರರು ಒಟ್ಟಾಗಿ ಹೋರಾಡಿದರೆ, ವಕ್ಫ್ ಮಂಡಳಿಯನ್ನು ಮುಗಿಸಬಹುದು. ಇತರರು ಅದನ್ನು ಮಾಡಲು ಸಾಧ್ಯವಿಲ್ಲ, ಮಾರ್ಚ್ 10 ರಂದು ವಕ್ಫ್ ಸಂಸ್ಥೆಯನ್ನು ವಿರೋಧಿಸಲು ನಾವು ಪೂರ್ಣ ಬಲದಿಂದ ಜಂತರ್ ಮಂತರ್‌ಗೆ ಆಗಮಿಸುತ್ತೇವೆ ಎಂದು ನಾನು ಎlfl ಹಿಂದೂ ಸಹೋದರರಿಗೆ ಹೇಳಲು ಬಯಸುತ್ತೇನೆ” ಎಂದು ಅವರು ಹೇಳಿದರು.

ಸರ್ಕಾರವು ವಕ್ಫ್ ಕಾಯ್ದೆಯನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿದ ಅವರು, ಮತ್ತು ದೇಶಾದ್ಯಂತ ಅದರ ವಿರುದ್ಧ ಪ್ರತಿಭಟನೆಗಳನ್ನು ನಡೆಸುವಂತೆ ತಮ್ಮ ಬೆಂಬಲಿಗರನ್ನು ಕೇಳಿಕೊಂಡರು.

ಜಂತರ್ ಮಂತರ್‌ನಲ್ಲಿ ಮುಸ್ಲಿಂ ಪ್ರತಿಭಟನಾಕಾರರೊಂದಿಗೆ ದೈಹಿಕ ಘರ್ಷಣೆಗೆ ತಮ್ಮ ಬೆಂಬಲಿಗರು ಹಿಂಜರಿಯುವುದಿಲ್ಲ. ವಕ್ಫ್ ಮಂಡಳಿಯನ್ನು ಬೆಂಬಲಿಸಲು ಈ ಮುಲ್ಲಾಗಳು ಒಟ್ಟುಗೂಡಲು ನಾವು ಅನುಮತಿಸುವುದಿಲ್ಲ ಎಂದು ಚೌಧರಿ ಪ್ರಚೋಧನಾತ್ಮಕ ಹೇಳಕೆ ನೀಡಿದ್ದಾರೆ.

ಮುಸ್ಲಿಮರು ಪ್ರತಿಭಟಿಸದಿದ್ದರೆ ಜನರ ಆಸ್ತಿಗಳನ್ನು ವಕ್ಫ್ ಆಸ್ತಿಗಳೆಂದು ಘೋಷಿಸುತ್ತಾರೆ ಎಂದು ಸುಳ್ಳು ಹೇಳುವ ಮೂಲಕ ಅವರು ಭಯ ಹುಟ್ಟಿಸುವ ಪ್ರಚಾರವನ್ನು ಸಹ ಮಾಡಿದರು.

ಮಾರ್ಚ್ 1 ರಂದು, ಎಐಎಮ್‌ಪಿಎಲ್‌ಬಿ ವಕ್ತಾರ ಡಾ. ಸೈಯದ್ ಖಾಸಿಂ ರಸೂಲ್ ಇಲ್ಯಾಸ್, ಆ ದಿನ ಸಂಸತ್ತಿನಲ್ಲಿ ಮಂಡಿಸಲಿರುವ ವಕ್ಫ್ ಮಸೂದೆಯ ವಿರುದ್ಧ ಮಂಡಳಿಯು ಪ್ರತಿಭಟನೆಯನ್ನು ಆಯೋಜಿಸುತ್ತದೆ ಎಂದು ಹೇಳಿದರು.

ಮಂಡಳಿಯು ಹಲವಾರು ಮುಸ್ಲಿಂ ಸಂಘಟನೆಗಳು ಮತ್ತು ಸಾಮಾನ್ಯ ಮುಸ್ಲಿಂ ಸಮುದಾಯದೊಂದಿಗೆ ಕೇಂದ್ರ ಸರ್ಕಾರ, ಅದರ ಮಿತ್ರ ಪಕ್ಷಗಳು ಮತ್ತು ವಿಶೇಷವಾಗಿ ಸಂಬಂಧಿತ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಮುಂದೆ ತನ್ನ ನಿಲುವನ್ನು ಬಲವಾಗಿ ಮಂಡಿಸಿದೆ ಎಂದು ಅವರು ಹೇಳಿದರು. ಪ್ರಸ್ತಾವಿತ ಮಸೂದೆಯು ವಕ್ಫ್ ಆಸ್ತಿಗಳನ್ನು ವಶಪಡಿಸಿಕೊಳ್ಳುವ, ಅದನ್ನು ನಾಶಮಾಡುವ ಒಂದು ದುಷ್ಟ ಪಿತೂರಿಯಾಗಿದ್ದು, ನಿರ್ಧಾರವನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಅವರು ಒತ್ತಿ ಹೇಳಿದರು. ಆದರೆ, ಕೇಂದ್ರ ಸರ್ಕಾರವು ಈ ಕಳವಳಗಳಿಗೆ ಕಿವಿಗೊಡಲಿಲ್ಲ.

“ಸರ್ಕಾರವು ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಲು ಯೋಜಿಸುತ್ತಿರುವುದರಿಂದ, ಮಂಡಳಿಯ ಕಾರ್ಯಕಾರಿ ಸಮಿತಿಯು ಮಾರ್ಚ್ 10 ರಂದು ಸಂಸತ್ತಿನ ಮುಂದೆ ಜಂತರ್ ಮಂತರ್‌ನಲ್ಲಿ ಧರಣಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಸರ್ಕಾರ ಮತ್ತು ರಾಜಕೀಯ ಪಕ್ಷಗಳ ಆತ್ಮಸಾಕ್ಷಿಯನ್ನು ಜಾಗೃತಗೊಳಿಸಲು ಹಾಗೂ ಅವರ ಪ್ರತಿಭಟನೆಯನ್ನು ನೋಂದಾಯಿಸಲು. ವಿವಿಧ ಧಾರ್ಮಿಕ, ರಾಷ್ಟ್ರೀಯ ಮತ್ತು ಸಾಮಾಜಿಕ ಸಂಘಟನೆಗಳ ಕೇಂದ್ರ ನಾಯಕತ್ವದೊಂದಿಗೆ ಎಐಎಮ್‌ಪಿಎಲ್‌ಬಿಯ ಸಂಪೂರ್ಣ ನಾಯಕತ್ವವು ಈ ಪ್ರತಿಭಟನೆಯಲ್ಲಿ ಭಾಗವಹಿಸುತ್ತದೆ. ಎಲ್ಲ ವಿರೋಧ ಪಕ್ಷಗಳು, ನಾಗರಿಕ ಸಮಾಜ ಚಳುವಳಿಗಳನ್ನು ಈ ಧರಣಿ ಪ್ರತಿಭಟನೆಯಲ್ಲಿ ಸೇರುವಂತೆ ಹಾಗೂ ಈ ಅನ್ಯಾಯ, ದಬ್ಬಾಳಿಕೆಯ ವಿರುದ್ಧ ನಿಲ್ಲುವಂತೆ ಎಐಎಮ್‌ಪಿಎಲ್‌ಬಿ ಒತ್ತಾಯಿಸಿದೆ.

ಈ ಪ್ರತಿಭಟನೆಯಲ್ಲಿ ದಲಿತರು, ಆದಿವಾಸಿಗಳು ಮತ್ತು ಒಬಿಸಿಗಳ ಸಾಮಾಜಿಕ ಮತ್ತು ರಾಜಕೀಯ ನಾಯಕತ್ವ, ಸಿಖ್ ಮತ್ತು ಕ್ರಿಶ್ಚಿಯನ್ ಸಮುದಾಯಗಳ ಧಾರ್ಮಿಕ ಮುಖಂಡರು ಸಹ ಭಾಗವಹಿಸಲಿದ್ದಾರೆ ಎಂದು ವಕ್ತಾರರು ತಿಳಿಸಿದ್ದಾರೆ. ಹೆಚ್ಚುವರಿಯಾಗಿ, ಮಾರ್ಚ್ 7 ರಂದು, ವಿಜಯವಾಡ (ಆಂಧ್ರಪ್ರದೇಶ) ಮತ್ತು ಪಾಟ್ನಾ (ಬಿಹಾರ) ದಲ್ಲಿನ ರಾಜ್ಯ ಸಭೆಗಳ ಮುಂದೆ ಪ್ರತಿಭಟನೆಗಳು ನಡೆಯಲಿವೆ.

ದೇಶದ ಮುಖ್ಯವಾಹಿನಿಯ ಮಾಧ್ಯಮಗಳು ಕೋಮು ಶಕ್ತಿಗಳಿಂದ ನಡೆಸಲ್ಪಡುವ ಆಧಾರರಹಿತ, ದಾರಿತಪ್ಪಿಸುವ ನಿರೂಪಣೆಗಳನ್ನು ಪ್ರಚಾರ ಮಾಡುತ್ತಿರುವುದರ ಬಗ್ಗೆಯೂ ಮಂಡಳಿಯು ಆಕ್ರೋಶ ವ್ಯಕ್ತಪಡಿಸಿದೆ. ಮಿಲಿಟರಿ ಮತ್ತು ರೈಲ್ವೆಗಳ ನಂತರ, ವಕ್ಫ್ ಆಸ್ತಿಗಳು ದೇಶದಲ್ಲಿ ಅತಿ ದೊಡ್ಡದಾಗಿದೆ ಎಂದು ಅವರು ಹೇಳಿಕೊಳ್ಳುತ್ತಾರೆ. ಆದರೆ, ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿರುವ ಹಿಂದೂ ವಕ್ಫ್ ಆಸ್ತಿಗಳು ಹಾಗೂ ಒಡಿಶಾದಲ್ಲಿನ ದೇವಾಲಯ ಆಸ್ತಿಗಳು ಒಟ್ಟು ವಕ್ಫ್ ಆಸ್ತಿಗಳಿಗಿಂತ ಹೆಚ್ಚಿನದಾಗಿದೆ.

“ಇನ್ನೊಂದು ನಿರ್ಣಾಯಕ ಅಂಶವೆಂದರೆ, ಈ ಎಲ್ಲ ವಕ್ಫ್ ಆಸ್ತಿಗಳು ಮೂಲತಃ ಧಾರ್ಮಿಕ ಮತ್ತು ದತ್ತಿ ಉದ್ದೇಶಗಳಿಗಾಗಿ ಮುಸ್ಲಿಂ ಪೂರ್ವಜರು ದಾನ ಮಾಡಿದ ವೈಯಕ್ತಿಕ ಆಸ್ತಿಗಳಾಗಿದ್ದವು. ವಕ್ಫ್ ಕಾನೂನು ಅವುಗಳ ರಕ್ಷಣೆಯನ್ನು ಖಚಿತಪಡಿಸುತ್ತದೆ ಮತ್ತು ಅವುಗಳ ದುರುಪಯೋಗವನ್ನು ತಡೆಯುತ್ತದೆ” ಎಂದು ಡಾ. ಇಲ್ಯಾಸ್ ಅವರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

‘ಭಾರತವನ್ನು ‘ಹಿಂದಿಯನ್ನಾಗಿ’ಸಲು ಪ್ರಯತ್ನಿಸುತ್ತಿದ್ದೀರಾ..?’; ಹಿಂದಿ ಹೇರಿಕೆ ವಿರುದ್ಧ ವಾಗ್ದಾಳಿ ಮುಂದುವರಿಸಿದ ಕಮಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...