Homeಮುಖಪುಟವಕ್ಫ್‌ ವಿವಾದ| ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಹೋರಾಟಕ್ಕೆ ಪ್ರತಿಯಾಗಿ ಹಿಂದುತ್ವ ಗುಂಪಿನಿಂದ ಪ್ರತಿಭಟನೆ!

ವಕ್ಫ್‌ ವಿವಾದ| ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಹೋರಾಟಕ್ಕೆ ಪ್ರತಿಯಾಗಿ ಹಿಂದುತ್ವ ಗುಂಪಿನಿಂದ ಪ್ರತಿಭಟನೆ!

- Advertisement -
- Advertisement -

ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಮ್‌ಪಿಎಲ್‌ಬಿ) ಮಾರ್ಚ್ 10 ರಂದು ಸಂಸತ್ತಿನ ಬಳಿಯ ಐತಿಹಾಸಿಕ ಜಂತರ್ ಮಂತರ್‌ನಲ್ಲಿ ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ಬೃಹತ್ ಹೋರಾಟ ನಡೆಸುವ ಯೋಜನೆಯನ್ನು ಘೋಷಿಸಿದ ಕೆಲವು ದಿನಗಳ ನಂತರ, ಹಿಂದೂ ರಕ್ಷಾ ದಳದ ಮುಖ್ಯಸ್ಥೆ ಪಿಂಕಿ ಚೌಧರಿ ಕೂಡ ಅದೇ ಸ್ಥಳದಲ್ಲಿ ಮಸೂದೆಯನ್ನು ಬೆಂಬಲಿಸಿ ಪ್ರತಿಭಟನೆ ನಡೆಸುವ ಯೋಜನೆಯನ್ನು ಬಹಿರಂಗಪಡಿಸಿದ್ದಾರೆ.

ವಕ್ಫ್ ಸಂಸ್ಥೆಯನ್ನು ಸಂಪೂರ್ಣವಾಗಿ ರದ್ದುಗೊಳಿಸುವಂತೆ ಒತ್ತಾಯಿಸಿ ತಮ್ಮ ಸಂಘಟನೆ ಪ್ರತಿಭಟನೆ ನಡೆಸಲಿದೆ ಎಂದು ಚೌಧರಿ ಬುಧವಾರ ಹೇಳಿದ್ದಾರೆ.

ಈ ಬಗ್ಗೆ ವೀಡಿಯೊ ಹೇಳಿಕೆ ಬಿಡುಗಡೆ ಮಾಡಿರುವ ಚೌಧರಿ, “ದೆಹಲಿ ಪೊಲೀಸರು ವಕ್ಫ್ ಮಸೂದೆಯ ವಿರುದ್ಧ ಪ್ರತಿಭಟಿಸಲು ಮುಸ್ಲಿಮರಿಗೆ ಅನುಮತಿ ನೀಡಿದ್ದಾರೆ ಎಂದು ಹೇಳುತ್ತಾರೆ. ಹಿಂದೂಗಳು ಆ ಸ್ಥಳದಲ್ಲಿ ಮುಸ್ಲಿಮರು ಸೇರದಂತೆ ನೋಡಿಕೊಳ್ಳಬೇಕು” ಎಂದು ಅವರು ಕರೆ ನೀಡಿದ್ದಾರೆ.

“ನಾವೆಲ್ಲರೂ ಹಿಂದೂ ಸಹೋದರರು ಒಟ್ಟಾಗಿ ಹೋರಾಡಿದರೆ, ವಕ್ಫ್ ಮಂಡಳಿಯನ್ನು ಮುಗಿಸಬಹುದು. ಇತರರು ಅದನ್ನು ಮಾಡಲು ಸಾಧ್ಯವಿಲ್ಲ, ಮಾರ್ಚ್ 10 ರಂದು ವಕ್ಫ್ ಸಂಸ್ಥೆಯನ್ನು ವಿರೋಧಿಸಲು ನಾವು ಪೂರ್ಣ ಬಲದಿಂದ ಜಂತರ್ ಮಂತರ್‌ಗೆ ಆಗಮಿಸುತ್ತೇವೆ ಎಂದು ನಾನು ಎlfl ಹಿಂದೂ ಸಹೋದರರಿಗೆ ಹೇಳಲು ಬಯಸುತ್ತೇನೆ” ಎಂದು ಅವರು ಹೇಳಿದರು.

ಸರ್ಕಾರವು ವಕ್ಫ್ ಕಾಯ್ದೆಯನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿದ ಅವರು, ಮತ್ತು ದೇಶಾದ್ಯಂತ ಅದರ ವಿರುದ್ಧ ಪ್ರತಿಭಟನೆಗಳನ್ನು ನಡೆಸುವಂತೆ ತಮ್ಮ ಬೆಂಬಲಿಗರನ್ನು ಕೇಳಿಕೊಂಡರು.

ಜಂತರ್ ಮಂತರ್‌ನಲ್ಲಿ ಮುಸ್ಲಿಂ ಪ್ರತಿಭಟನಾಕಾರರೊಂದಿಗೆ ದೈಹಿಕ ಘರ್ಷಣೆಗೆ ತಮ್ಮ ಬೆಂಬಲಿಗರು ಹಿಂಜರಿಯುವುದಿಲ್ಲ. ವಕ್ಫ್ ಮಂಡಳಿಯನ್ನು ಬೆಂಬಲಿಸಲು ಈ ಮುಲ್ಲಾಗಳು ಒಟ್ಟುಗೂಡಲು ನಾವು ಅನುಮತಿಸುವುದಿಲ್ಲ ಎಂದು ಚೌಧರಿ ಪ್ರಚೋಧನಾತ್ಮಕ ಹೇಳಕೆ ನೀಡಿದ್ದಾರೆ.

ಮುಸ್ಲಿಮರು ಪ್ರತಿಭಟಿಸದಿದ್ದರೆ ಜನರ ಆಸ್ತಿಗಳನ್ನು ವಕ್ಫ್ ಆಸ್ತಿಗಳೆಂದು ಘೋಷಿಸುತ್ತಾರೆ ಎಂದು ಸುಳ್ಳು ಹೇಳುವ ಮೂಲಕ ಅವರು ಭಯ ಹುಟ್ಟಿಸುವ ಪ್ರಚಾರವನ್ನು ಸಹ ಮಾಡಿದರು.

ಮಾರ್ಚ್ 1 ರಂದು, ಎಐಎಮ್‌ಪಿಎಲ್‌ಬಿ ವಕ್ತಾರ ಡಾ. ಸೈಯದ್ ಖಾಸಿಂ ರಸೂಲ್ ಇಲ್ಯಾಸ್, ಆ ದಿನ ಸಂಸತ್ತಿನಲ್ಲಿ ಮಂಡಿಸಲಿರುವ ವಕ್ಫ್ ಮಸೂದೆಯ ವಿರುದ್ಧ ಮಂಡಳಿಯು ಪ್ರತಿಭಟನೆಯನ್ನು ಆಯೋಜಿಸುತ್ತದೆ ಎಂದು ಹೇಳಿದರು.

ಮಂಡಳಿಯು ಹಲವಾರು ಮುಸ್ಲಿಂ ಸಂಘಟನೆಗಳು ಮತ್ತು ಸಾಮಾನ್ಯ ಮುಸ್ಲಿಂ ಸಮುದಾಯದೊಂದಿಗೆ ಕೇಂದ್ರ ಸರ್ಕಾರ, ಅದರ ಮಿತ್ರ ಪಕ್ಷಗಳು ಮತ್ತು ವಿಶೇಷವಾಗಿ ಸಂಬಂಧಿತ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಮುಂದೆ ತನ್ನ ನಿಲುವನ್ನು ಬಲವಾಗಿ ಮಂಡಿಸಿದೆ ಎಂದು ಅವರು ಹೇಳಿದರು. ಪ್ರಸ್ತಾವಿತ ಮಸೂದೆಯು ವಕ್ಫ್ ಆಸ್ತಿಗಳನ್ನು ವಶಪಡಿಸಿಕೊಳ್ಳುವ, ಅದನ್ನು ನಾಶಮಾಡುವ ಒಂದು ದುಷ್ಟ ಪಿತೂರಿಯಾಗಿದ್ದು, ನಿರ್ಧಾರವನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಅವರು ಒತ್ತಿ ಹೇಳಿದರು. ಆದರೆ, ಕೇಂದ್ರ ಸರ್ಕಾರವು ಈ ಕಳವಳಗಳಿಗೆ ಕಿವಿಗೊಡಲಿಲ್ಲ.

“ಸರ್ಕಾರವು ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಲು ಯೋಜಿಸುತ್ತಿರುವುದರಿಂದ, ಮಂಡಳಿಯ ಕಾರ್ಯಕಾರಿ ಸಮಿತಿಯು ಮಾರ್ಚ್ 10 ರಂದು ಸಂಸತ್ತಿನ ಮುಂದೆ ಜಂತರ್ ಮಂತರ್‌ನಲ್ಲಿ ಧರಣಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಸರ್ಕಾರ ಮತ್ತು ರಾಜಕೀಯ ಪಕ್ಷಗಳ ಆತ್ಮಸಾಕ್ಷಿಯನ್ನು ಜಾಗೃತಗೊಳಿಸಲು ಹಾಗೂ ಅವರ ಪ್ರತಿಭಟನೆಯನ್ನು ನೋಂದಾಯಿಸಲು. ವಿವಿಧ ಧಾರ್ಮಿಕ, ರಾಷ್ಟ್ರೀಯ ಮತ್ತು ಸಾಮಾಜಿಕ ಸಂಘಟನೆಗಳ ಕೇಂದ್ರ ನಾಯಕತ್ವದೊಂದಿಗೆ ಎಐಎಮ್‌ಪಿಎಲ್‌ಬಿಯ ಸಂಪೂರ್ಣ ನಾಯಕತ್ವವು ಈ ಪ್ರತಿಭಟನೆಯಲ್ಲಿ ಭಾಗವಹಿಸುತ್ತದೆ. ಎಲ್ಲ ವಿರೋಧ ಪಕ್ಷಗಳು, ನಾಗರಿಕ ಸಮಾಜ ಚಳುವಳಿಗಳನ್ನು ಈ ಧರಣಿ ಪ್ರತಿಭಟನೆಯಲ್ಲಿ ಸೇರುವಂತೆ ಹಾಗೂ ಈ ಅನ್ಯಾಯ, ದಬ್ಬಾಳಿಕೆಯ ವಿರುದ್ಧ ನಿಲ್ಲುವಂತೆ ಎಐಎಮ್‌ಪಿಎಲ್‌ಬಿ ಒತ್ತಾಯಿಸಿದೆ.

ಈ ಪ್ರತಿಭಟನೆಯಲ್ಲಿ ದಲಿತರು, ಆದಿವಾಸಿಗಳು ಮತ್ತು ಒಬಿಸಿಗಳ ಸಾಮಾಜಿಕ ಮತ್ತು ರಾಜಕೀಯ ನಾಯಕತ್ವ, ಸಿಖ್ ಮತ್ತು ಕ್ರಿಶ್ಚಿಯನ್ ಸಮುದಾಯಗಳ ಧಾರ್ಮಿಕ ಮುಖಂಡರು ಸಹ ಭಾಗವಹಿಸಲಿದ್ದಾರೆ ಎಂದು ವಕ್ತಾರರು ತಿಳಿಸಿದ್ದಾರೆ. ಹೆಚ್ಚುವರಿಯಾಗಿ, ಮಾರ್ಚ್ 7 ರಂದು, ವಿಜಯವಾಡ (ಆಂಧ್ರಪ್ರದೇಶ) ಮತ್ತು ಪಾಟ್ನಾ (ಬಿಹಾರ) ದಲ್ಲಿನ ರಾಜ್ಯ ಸಭೆಗಳ ಮುಂದೆ ಪ್ರತಿಭಟನೆಗಳು ನಡೆಯಲಿವೆ.

ದೇಶದ ಮುಖ್ಯವಾಹಿನಿಯ ಮಾಧ್ಯಮಗಳು ಕೋಮು ಶಕ್ತಿಗಳಿಂದ ನಡೆಸಲ್ಪಡುವ ಆಧಾರರಹಿತ, ದಾರಿತಪ್ಪಿಸುವ ನಿರೂಪಣೆಗಳನ್ನು ಪ್ರಚಾರ ಮಾಡುತ್ತಿರುವುದರ ಬಗ್ಗೆಯೂ ಮಂಡಳಿಯು ಆಕ್ರೋಶ ವ್ಯಕ್ತಪಡಿಸಿದೆ. ಮಿಲಿಟರಿ ಮತ್ತು ರೈಲ್ವೆಗಳ ನಂತರ, ವಕ್ಫ್ ಆಸ್ತಿಗಳು ದೇಶದಲ್ಲಿ ಅತಿ ದೊಡ್ಡದಾಗಿದೆ ಎಂದು ಅವರು ಹೇಳಿಕೊಳ್ಳುತ್ತಾರೆ. ಆದರೆ, ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿರುವ ಹಿಂದೂ ವಕ್ಫ್ ಆಸ್ತಿಗಳು ಹಾಗೂ ಒಡಿಶಾದಲ್ಲಿನ ದೇವಾಲಯ ಆಸ್ತಿಗಳು ಒಟ್ಟು ವಕ್ಫ್ ಆಸ್ತಿಗಳಿಗಿಂತ ಹೆಚ್ಚಿನದಾಗಿದೆ.

“ಇನ್ನೊಂದು ನಿರ್ಣಾಯಕ ಅಂಶವೆಂದರೆ, ಈ ಎಲ್ಲ ವಕ್ಫ್ ಆಸ್ತಿಗಳು ಮೂಲತಃ ಧಾರ್ಮಿಕ ಮತ್ತು ದತ್ತಿ ಉದ್ದೇಶಗಳಿಗಾಗಿ ಮುಸ್ಲಿಂ ಪೂರ್ವಜರು ದಾನ ಮಾಡಿದ ವೈಯಕ್ತಿಕ ಆಸ್ತಿಗಳಾಗಿದ್ದವು. ವಕ್ಫ್ ಕಾನೂನು ಅವುಗಳ ರಕ್ಷಣೆಯನ್ನು ಖಚಿತಪಡಿಸುತ್ತದೆ ಮತ್ತು ಅವುಗಳ ದುರುಪಯೋಗವನ್ನು ತಡೆಯುತ್ತದೆ” ಎಂದು ಡಾ. ಇಲ್ಯಾಸ್ ಅವರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

‘ಭಾರತವನ್ನು ‘ಹಿಂದಿಯನ್ನಾಗಿ’ಸಲು ಪ್ರಯತ್ನಿಸುತ್ತಿದ್ದೀರಾ..?’; ಹಿಂದಿ ಹೇರಿಕೆ ವಿರುದ್ಧ ವಾಗ್ದಾಳಿ ಮುಂದುವರಿಸಿದ ಕಮಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...