Homeಮುಖಪುಟವಕ್ಫ್‌ ವಿವಾದ| ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಹೋರಾಟಕ್ಕೆ ಪ್ರತಿಯಾಗಿ ಹಿಂದುತ್ವ ಗುಂಪಿನಿಂದ ಪ್ರತಿಭಟನೆ!

ವಕ್ಫ್‌ ವಿವಾದ| ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಹೋರಾಟಕ್ಕೆ ಪ್ರತಿಯಾಗಿ ಹಿಂದುತ್ವ ಗುಂಪಿನಿಂದ ಪ್ರತಿಭಟನೆ!

- Advertisement -
- Advertisement -

ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಮ್‌ಪಿಎಲ್‌ಬಿ) ಮಾರ್ಚ್ 10 ರಂದು ಸಂಸತ್ತಿನ ಬಳಿಯ ಐತಿಹಾಸಿಕ ಜಂತರ್ ಮಂತರ್‌ನಲ್ಲಿ ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ಬೃಹತ್ ಹೋರಾಟ ನಡೆಸುವ ಯೋಜನೆಯನ್ನು ಘೋಷಿಸಿದ ಕೆಲವು ದಿನಗಳ ನಂತರ, ಹಿಂದೂ ರಕ್ಷಾ ದಳದ ಮುಖ್ಯಸ್ಥೆ ಪಿಂಕಿ ಚೌಧರಿ ಕೂಡ ಅದೇ ಸ್ಥಳದಲ್ಲಿ ಮಸೂದೆಯನ್ನು ಬೆಂಬಲಿಸಿ ಪ್ರತಿಭಟನೆ ನಡೆಸುವ ಯೋಜನೆಯನ್ನು ಬಹಿರಂಗಪಡಿಸಿದ್ದಾರೆ.

ವಕ್ಫ್ ಸಂಸ್ಥೆಯನ್ನು ಸಂಪೂರ್ಣವಾಗಿ ರದ್ದುಗೊಳಿಸುವಂತೆ ಒತ್ತಾಯಿಸಿ ತಮ್ಮ ಸಂಘಟನೆ ಪ್ರತಿಭಟನೆ ನಡೆಸಲಿದೆ ಎಂದು ಚೌಧರಿ ಬುಧವಾರ ಹೇಳಿದ್ದಾರೆ.

ಈ ಬಗ್ಗೆ ವೀಡಿಯೊ ಹೇಳಿಕೆ ಬಿಡುಗಡೆ ಮಾಡಿರುವ ಚೌಧರಿ, “ದೆಹಲಿ ಪೊಲೀಸರು ವಕ್ಫ್ ಮಸೂದೆಯ ವಿರುದ್ಧ ಪ್ರತಿಭಟಿಸಲು ಮುಸ್ಲಿಮರಿಗೆ ಅನುಮತಿ ನೀಡಿದ್ದಾರೆ ಎಂದು ಹೇಳುತ್ತಾರೆ. ಹಿಂದೂಗಳು ಆ ಸ್ಥಳದಲ್ಲಿ ಮುಸ್ಲಿಮರು ಸೇರದಂತೆ ನೋಡಿಕೊಳ್ಳಬೇಕು” ಎಂದು ಅವರು ಕರೆ ನೀಡಿದ್ದಾರೆ.

“ನಾವೆಲ್ಲರೂ ಹಿಂದೂ ಸಹೋದರರು ಒಟ್ಟಾಗಿ ಹೋರಾಡಿದರೆ, ವಕ್ಫ್ ಮಂಡಳಿಯನ್ನು ಮುಗಿಸಬಹುದು. ಇತರರು ಅದನ್ನು ಮಾಡಲು ಸಾಧ್ಯವಿಲ್ಲ, ಮಾರ್ಚ್ 10 ರಂದು ವಕ್ಫ್ ಸಂಸ್ಥೆಯನ್ನು ವಿರೋಧಿಸಲು ನಾವು ಪೂರ್ಣ ಬಲದಿಂದ ಜಂತರ್ ಮಂತರ್‌ಗೆ ಆಗಮಿಸುತ್ತೇವೆ ಎಂದು ನಾನು ಎlfl ಹಿಂದೂ ಸಹೋದರರಿಗೆ ಹೇಳಲು ಬಯಸುತ್ತೇನೆ” ಎಂದು ಅವರು ಹೇಳಿದರು.

ಸರ್ಕಾರವು ವಕ್ಫ್ ಕಾಯ್ದೆಯನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿದ ಅವರು, ಮತ್ತು ದೇಶಾದ್ಯಂತ ಅದರ ವಿರುದ್ಧ ಪ್ರತಿಭಟನೆಗಳನ್ನು ನಡೆಸುವಂತೆ ತಮ್ಮ ಬೆಂಬಲಿಗರನ್ನು ಕೇಳಿಕೊಂಡರು.

ಜಂತರ್ ಮಂತರ್‌ನಲ್ಲಿ ಮುಸ್ಲಿಂ ಪ್ರತಿಭಟನಾಕಾರರೊಂದಿಗೆ ದೈಹಿಕ ಘರ್ಷಣೆಗೆ ತಮ್ಮ ಬೆಂಬಲಿಗರು ಹಿಂಜರಿಯುವುದಿಲ್ಲ. ವಕ್ಫ್ ಮಂಡಳಿಯನ್ನು ಬೆಂಬಲಿಸಲು ಈ ಮುಲ್ಲಾಗಳು ಒಟ್ಟುಗೂಡಲು ನಾವು ಅನುಮತಿಸುವುದಿಲ್ಲ ಎಂದು ಚೌಧರಿ ಪ್ರಚೋಧನಾತ್ಮಕ ಹೇಳಕೆ ನೀಡಿದ್ದಾರೆ.

ಮುಸ್ಲಿಮರು ಪ್ರತಿಭಟಿಸದಿದ್ದರೆ ಜನರ ಆಸ್ತಿಗಳನ್ನು ವಕ್ಫ್ ಆಸ್ತಿಗಳೆಂದು ಘೋಷಿಸುತ್ತಾರೆ ಎಂದು ಸುಳ್ಳು ಹೇಳುವ ಮೂಲಕ ಅವರು ಭಯ ಹುಟ್ಟಿಸುವ ಪ್ರಚಾರವನ್ನು ಸಹ ಮಾಡಿದರು.

ಮಾರ್ಚ್ 1 ರಂದು, ಎಐಎಮ್‌ಪಿಎಲ್‌ಬಿ ವಕ್ತಾರ ಡಾ. ಸೈಯದ್ ಖಾಸಿಂ ರಸೂಲ್ ಇಲ್ಯಾಸ್, ಆ ದಿನ ಸಂಸತ್ತಿನಲ್ಲಿ ಮಂಡಿಸಲಿರುವ ವಕ್ಫ್ ಮಸೂದೆಯ ವಿರುದ್ಧ ಮಂಡಳಿಯು ಪ್ರತಿಭಟನೆಯನ್ನು ಆಯೋಜಿಸುತ್ತದೆ ಎಂದು ಹೇಳಿದರು.

ಮಂಡಳಿಯು ಹಲವಾರು ಮುಸ್ಲಿಂ ಸಂಘಟನೆಗಳು ಮತ್ತು ಸಾಮಾನ್ಯ ಮುಸ್ಲಿಂ ಸಮುದಾಯದೊಂದಿಗೆ ಕೇಂದ್ರ ಸರ್ಕಾರ, ಅದರ ಮಿತ್ರ ಪಕ್ಷಗಳು ಮತ್ತು ವಿಶೇಷವಾಗಿ ಸಂಬಂಧಿತ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಮುಂದೆ ತನ್ನ ನಿಲುವನ್ನು ಬಲವಾಗಿ ಮಂಡಿಸಿದೆ ಎಂದು ಅವರು ಹೇಳಿದರು. ಪ್ರಸ್ತಾವಿತ ಮಸೂದೆಯು ವಕ್ಫ್ ಆಸ್ತಿಗಳನ್ನು ವಶಪಡಿಸಿಕೊಳ್ಳುವ, ಅದನ್ನು ನಾಶಮಾಡುವ ಒಂದು ದುಷ್ಟ ಪಿತೂರಿಯಾಗಿದ್ದು, ನಿರ್ಧಾರವನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಅವರು ಒತ್ತಿ ಹೇಳಿದರು. ಆದರೆ, ಕೇಂದ್ರ ಸರ್ಕಾರವು ಈ ಕಳವಳಗಳಿಗೆ ಕಿವಿಗೊಡಲಿಲ್ಲ.

“ಸರ್ಕಾರವು ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಲು ಯೋಜಿಸುತ್ತಿರುವುದರಿಂದ, ಮಂಡಳಿಯ ಕಾರ್ಯಕಾರಿ ಸಮಿತಿಯು ಮಾರ್ಚ್ 10 ರಂದು ಸಂಸತ್ತಿನ ಮುಂದೆ ಜಂತರ್ ಮಂತರ್‌ನಲ್ಲಿ ಧರಣಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಸರ್ಕಾರ ಮತ್ತು ರಾಜಕೀಯ ಪಕ್ಷಗಳ ಆತ್ಮಸಾಕ್ಷಿಯನ್ನು ಜಾಗೃತಗೊಳಿಸಲು ಹಾಗೂ ಅವರ ಪ್ರತಿಭಟನೆಯನ್ನು ನೋಂದಾಯಿಸಲು. ವಿವಿಧ ಧಾರ್ಮಿಕ, ರಾಷ್ಟ್ರೀಯ ಮತ್ತು ಸಾಮಾಜಿಕ ಸಂಘಟನೆಗಳ ಕೇಂದ್ರ ನಾಯಕತ್ವದೊಂದಿಗೆ ಎಐಎಮ್‌ಪಿಎಲ್‌ಬಿಯ ಸಂಪೂರ್ಣ ನಾಯಕತ್ವವು ಈ ಪ್ರತಿಭಟನೆಯಲ್ಲಿ ಭಾಗವಹಿಸುತ್ತದೆ. ಎಲ್ಲ ವಿರೋಧ ಪಕ್ಷಗಳು, ನಾಗರಿಕ ಸಮಾಜ ಚಳುವಳಿಗಳನ್ನು ಈ ಧರಣಿ ಪ್ರತಿಭಟನೆಯಲ್ಲಿ ಸೇರುವಂತೆ ಹಾಗೂ ಈ ಅನ್ಯಾಯ, ದಬ್ಬಾಳಿಕೆಯ ವಿರುದ್ಧ ನಿಲ್ಲುವಂತೆ ಎಐಎಮ್‌ಪಿಎಲ್‌ಬಿ ಒತ್ತಾಯಿಸಿದೆ.

ಈ ಪ್ರತಿಭಟನೆಯಲ್ಲಿ ದಲಿತರು, ಆದಿವಾಸಿಗಳು ಮತ್ತು ಒಬಿಸಿಗಳ ಸಾಮಾಜಿಕ ಮತ್ತು ರಾಜಕೀಯ ನಾಯಕತ್ವ, ಸಿಖ್ ಮತ್ತು ಕ್ರಿಶ್ಚಿಯನ್ ಸಮುದಾಯಗಳ ಧಾರ್ಮಿಕ ಮುಖಂಡರು ಸಹ ಭಾಗವಹಿಸಲಿದ್ದಾರೆ ಎಂದು ವಕ್ತಾರರು ತಿಳಿಸಿದ್ದಾರೆ. ಹೆಚ್ಚುವರಿಯಾಗಿ, ಮಾರ್ಚ್ 7 ರಂದು, ವಿಜಯವಾಡ (ಆಂಧ್ರಪ್ರದೇಶ) ಮತ್ತು ಪಾಟ್ನಾ (ಬಿಹಾರ) ದಲ್ಲಿನ ರಾಜ್ಯ ಸಭೆಗಳ ಮುಂದೆ ಪ್ರತಿಭಟನೆಗಳು ನಡೆಯಲಿವೆ.

ದೇಶದ ಮುಖ್ಯವಾಹಿನಿಯ ಮಾಧ್ಯಮಗಳು ಕೋಮು ಶಕ್ತಿಗಳಿಂದ ನಡೆಸಲ್ಪಡುವ ಆಧಾರರಹಿತ, ದಾರಿತಪ್ಪಿಸುವ ನಿರೂಪಣೆಗಳನ್ನು ಪ್ರಚಾರ ಮಾಡುತ್ತಿರುವುದರ ಬಗ್ಗೆಯೂ ಮಂಡಳಿಯು ಆಕ್ರೋಶ ವ್ಯಕ್ತಪಡಿಸಿದೆ. ಮಿಲಿಟರಿ ಮತ್ತು ರೈಲ್ವೆಗಳ ನಂತರ, ವಕ್ಫ್ ಆಸ್ತಿಗಳು ದೇಶದಲ್ಲಿ ಅತಿ ದೊಡ್ಡದಾಗಿದೆ ಎಂದು ಅವರು ಹೇಳಿಕೊಳ್ಳುತ್ತಾರೆ. ಆದರೆ, ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿರುವ ಹಿಂದೂ ವಕ್ಫ್ ಆಸ್ತಿಗಳು ಹಾಗೂ ಒಡಿಶಾದಲ್ಲಿನ ದೇವಾಲಯ ಆಸ್ತಿಗಳು ಒಟ್ಟು ವಕ್ಫ್ ಆಸ್ತಿಗಳಿಗಿಂತ ಹೆಚ್ಚಿನದಾಗಿದೆ.

“ಇನ್ನೊಂದು ನಿರ್ಣಾಯಕ ಅಂಶವೆಂದರೆ, ಈ ಎಲ್ಲ ವಕ್ಫ್ ಆಸ್ತಿಗಳು ಮೂಲತಃ ಧಾರ್ಮಿಕ ಮತ್ತು ದತ್ತಿ ಉದ್ದೇಶಗಳಿಗಾಗಿ ಮುಸ್ಲಿಂ ಪೂರ್ವಜರು ದಾನ ಮಾಡಿದ ವೈಯಕ್ತಿಕ ಆಸ್ತಿಗಳಾಗಿದ್ದವು. ವಕ್ಫ್ ಕಾನೂನು ಅವುಗಳ ರಕ್ಷಣೆಯನ್ನು ಖಚಿತಪಡಿಸುತ್ತದೆ ಮತ್ತು ಅವುಗಳ ದುರುಪಯೋಗವನ್ನು ತಡೆಯುತ್ತದೆ” ಎಂದು ಡಾ. ಇಲ್ಯಾಸ್ ಅವರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

‘ಭಾರತವನ್ನು ‘ಹಿಂದಿಯನ್ನಾಗಿ’ಸಲು ಪ್ರಯತ್ನಿಸುತ್ತಿದ್ದೀರಾ..?’; ಹಿಂದಿ ಹೇರಿಕೆ ವಿರುದ್ಧ ವಾಗ್ದಾಳಿ ಮುಂದುವರಿಸಿದ ಕಮಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...