Homeಮುಖಪುಟರಾಜ್ಯದ 144 ಮೀನುಗಾರರು, 1,173 ದೋಣಿಗಳು ಪಾಕಿಸ್ತಾನದ ವಶದಲ್ಲಿ - ಒಪ್ಪಿಕೊಂಡ ಗುಜರಾತ್ ಬಿಜೆಪಿ ಸರ್ಕಾರ

ರಾಜ್ಯದ 144 ಮೀನುಗಾರರು, 1,173 ದೋಣಿಗಳು ಪಾಕಿಸ್ತಾನದ ವಶದಲ್ಲಿ – ಒಪ್ಪಿಕೊಂಡ ಗುಜರಾತ್ ಬಿಜೆಪಿ ಸರ್ಕಾರ

- Advertisement -
- Advertisement -

ರಾಜ್ಯದ 144 ಮೀನುಗಾರರು ಮತ್ತು 1,173 ದೋಣಿಗಳು ಪಾಕಿಸ್ತಾನದ ವಶದಲ್ಲಿದ್ದಾರೆ ಎಂದು ಗುಜರಾತ್ ಸರ್ಕಾರ ಬುಧವಾರ ಒಪ್ಪಿಕೊಂಡಿದೆ ಎಂದು ಪಿಟಿಐ ವರದಿ ಮಾಡಿದೆ. ಕಳೆದ ಎರಡು ವರ್ಷಗಳಲ್ಲಿ ಇಪ್ಪತ್ತೆರಡು ಜನರನ್ನು ಬಂಧಿಸಲಾಗಿದೆ ಎಂದು ರಾಜ್ಯ ಮೀನುಗಾರಿಕಾ ಸಚಿವ ರಾಘವ್‌ಜಿ ಪಟೇಲ್ ವಿಧಾನಸಭೆಗೆ ತಿಳಿಸಿದ್ದಾರೆ.

2023 ರಲ್ಲಿ ಒಂಬತ್ತು ಜನರನ್ನು ಮತ್ತು 2024 ರಲ್ಲಿ 13 ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ಸಚಿವ ಹೇಳಿದ್ದಾರೆ. ಅರಬ್ಬಿ ಸಮುದ್ರದಲ್ಲಿನ ಅಂತರರಾಷ್ಟ್ರೀಯ ಸಮುದ್ರ ಗಡಿಯನ್ನು ದಾಟಿ ಈ ಮೀನುಗಾರರು ತನ್ನ ಜಲಪ್ರದೇಶವನ್ನು ಪ್ರವೇಶಿಸಿದ್ದಾರೆ ಎಂದು ಪಾಕಿಸ್ತಾನ ಸಾಗರ ಭದ್ರತಾ ಸಂಸ್ಥೆ ಆರೋಪಿಸಿದೆ ಎಂದು ಪಿಟಿಐ ವರದಿ ಮಾಡಿದೆ. ರಾಜ್ಯದ 144 ಮೀನುಗಾರರು

ಕಳೆದ ಎರಡು ವರ್ಷಗಳಲ್ಲಿ, 432 ಭಾರತೀಯ ಮೀನುಗಾರರನ್ನು ಪಾಕಿಸ್ತಾನ ಬಿಡುಗಡೆ ಮಾಡಿದೆ ಎಂದು ಇದೇ ವೇಳೆ ಸಚಿವ ಹೇಳಿದ್ದಾರೆ. ಗುಜರಾತ್ ಸರ್ಕಾರವು ಮೀನುಗಾರರ ರಾಷ್ಟ್ರೀಯತೆಯ ಪುರಾವೆ ಸೇರಿದಂತೆ ಅಗತ್ಯ ದಾಖಲೆಗಳನ್ನು ಕೇಂದ್ರ ಗೃಹ ಸಚಿವಾಲಯಕ್ಕೆ ನಿಯಮಿತವಾಗಿ ಸಲ್ಲಿಸುತ್ತಿದೆ ಎಂದು ಪಟೇಲ್ ವಿಧಾನಸಭೆಗೆ ತಿಳಿಸಿದ್ದಾರೆ.

ಡಿಸೆಂಬರ್ ವರೆಗೆ, ಪಾಕಿಸ್ತಾನವು ಭಾರತೀಯರಿಗೆ ಸೇರಿದ 1,173 ಮೀನುಗಾರಿಕಾ ದೋಣಿಗಳನ್ನು ವಶಪಡಿಸಿಕೊಂಡಿದೆ ಎಂದು ಅವರು ಹೇಳಿದ್ದು, ಆದರೆ ಕಳೆದ ಎರಡು ವರ್ಷಗಳಲ್ಲಿ ಯಾವುದೇ ದೋಣಿಯನ್ನು ಹಿಂತಿರುಗಿಸಲಾಗಿಲ್ಲ ಎಂದು ತಿಳಿಸಿದ್ದಾರೆ.

ಬುಧವಾರ ಗುಜರಾತ್ ವಿಧಾನಸಭೆಯಲ್ಲಿ ನಡೆದ ತೀವ್ರ ವಾಗ್ವಾದದಲ್ಲಿ, ಕಾಂಗ್ರೆಸ್ ಶಾಸಕರಾದ ಶೈಲೇಶ್ ಪರ್ಮಾರ್ ಮತ್ತು ಅಮಿತ್ ಚಾವ್ಡಾ ಅವರು ಪಾಕಿಸ್ತಾನದಲ್ಲಿ ಬಂಧಿಸಲ್ಪಟ್ಟ ಮೀನುಗಾರರು ಮತ್ತು ದೋಣಿಗಳ ಭವಿಷ್ಯದ ಬಗ್ಗೆ ಮೀನುಗಾರಿಕಾ ಸಚಿವರ ಮೇಲೆ ಒತ್ತಡ ಹೇರಿದ್ದರು.

ಪಾಕಿಸ್ತಾನದ ಜೈಲಿನಲ್ಲಿ ಜೈಲಿನಲ್ಲಿದ್ದ ಗುಜರಾತ್‌ನ ಉನಾದ ಸೋಖ್ಡಾ ಗ್ರಾಮದ ಮೀನುಗಾರ ಬಾಬುಭಾಯಿ ಚುಡಾಸಮಾ ಅವರ ದುರಂತ ಸಾವು ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶವನ್ನು ಹುಟ್ಟುಹಾಕಿತ್ತು. ಅನಾರೋಗ್ಯದಿಂದಾಗಿ ಅವರು ನಿಧನ ಹೊಂದಿದ್ದಾರೆ ಎಂದು ವರದಿಗಳು ವ್ಯಾಪಕವಾಗಿ ಹರಡಿದ್ದು, ಜೊತೆಗೆ ಘಟನೆಯನ್ನು ವಿವರಿಸುವ ಪತ್ರವೂ ವೈರಲ್ ಆಗಿದೆ.

ಪತ್ರದ ಪ್ರಕಾರ, ಜನವರಿ 23, 2025 ರಂದು ಬೆಳಿಗ್ಗೆ 4:30 ಕ್ಕೆ ಚುಡಾಸಮ ತೀವ್ರ ಅಸ್ವಸ್ಥರಾದರು. ಸಹ ಕೈದಿಗಳು ಅವರನ್ನು ಜೈಲಿನ ಆಸ್ಪತ್ರೆಗೆ ಸಾಗಿಸಿದರು. ಆದರೆ ಅವರ ಸ್ಥಿತಿ ಹದಗೆಟ್ಟಂತೆ, ಅವರನ್ನು ಆಂಬ್ಯುಲೆನ್ಸ್‌ನಲ್ಲಿ ನಗರದ ಆಸ್ಪತ್ರೆಗೆ ವರ್ಗಾಯಿಸಲಾಯಿತು. ಆದರೆ ಅವರು ದಾರಿಯಲ್ಲಿ ಸಾವನ್ನಪ್ಪಿದರು. ಅವರ ದೇಹವನ್ನು ಸಾಧ್ಯವಾದಷ್ಟು ಬೇಗ ಭಾರತಕ್ಕೆ ಕಳುಹಿಸಲಾಗುವುದು ಎಂದು ಪತ್ರವು ಹೇಳಿಕೊಂಡಿದೆ.

ಚುಡಾಸಮ ಶಿಕ್ಷೆಯನ್ನು ಪೂರ್ಣಗೊಳಿಸಿದ ನಂತರವೂ ನಾಲ್ಕು ವರ್ಷಗಳಿಂದ ಪಾಕಿಸ್ತಾನದ ಜೈಲಿನಲ್ಲಿ ನರಳುತ್ತಿದ್ದರು ಎಂದು ಅವರ ಕುಟುಂಬ ಸದಸ್ಯರ ಆರೋಪಿಸಿದ್ದಾರೆ.

ಅವರ ಸಾವಿನೊಂದಿಗೆ ಕಳೆದ ಎರಡು ವರ್ಷಗಳಲ್ಲಿ ಇಂತಹ ನಾಲ್ಕನೇ ದುರಂತ ಗಟನೆ ಇದಾಗಿದೆ ಎಂದು ಮಾಧ್ಯಮಗಳು ವರಿದ ಮಾಡಿದೆ. ಪಾಕಿಸ್ತಾನದ ಜೈಲಿನಲ್ಲಿ ಅನೇಕ ಮೀನುಗಾರರು ಈಗಾಗಲೇ ತಮ್ಮ ಶಿಕ್ಷೆಯನ್ನು ಅನುಭವಿಸಿದ್ದಾರೆ. ಆದರೆ ರಾಯಭಾರ ಕಚೇರಿ ಪರಿಶೀಲನೆಯಲ್ಲಿ ವಿಳಂಬ ಮಾಡುತ್ತಿರುವುದರಿಂದ ಅವರು ಜೈಲಿನಲ್ಲೆ ಕೊಳೆಯುತ್ತಿದ್ದಾರೆ ಎಂದು ಜೈಲಿನಲ್ಲಿರುವ ಮೀನುಗಾರರ ಕುಟುಂಬಗಳು ಆರೋಪಿಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮನೆಗೆ ನುಗ್ಗಿ ಪೊಲೀಸ್ ದಾಳಿ ಸಂದರ್ಭ ತುಳಿದು ಒಂದು ತಿಂಗಳ ಮುಸ್ಲಿಂ ಶಿಶು ಸಾವು: ಪ್ರತಿಭಟನೆ

ಮನೆಗೆ ನುಗ್ಗಿ ಪೊಲೀಸ್ ದಾಳಿ ಸಂದರ್ಭ ತುಳಿದು ಒಂದು ತಿಂಗಳ ಮುಸ್ಲಿಂ ಶಿಶು ಸಾವು: ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...