Homeಕರ್ನಾಟಕಧರ್ಮಸ್ಥಳ ಸೌಜನ್ಯ ಪರ ಧ್ವನಿಯೆತ್ತಿದ ಯೂಟ್ಯೂಬರ್ ಸಮೀರ್ ಎಂಡಿ ವಿರುದ್ಧ ಎಫ್‌ಐಆರ್‌!

ಧರ್ಮಸ್ಥಳ ಸೌಜನ್ಯ ಪರ ಧ್ವನಿಯೆತ್ತಿದ ಯೂಟ್ಯೂಬರ್ ಸಮೀರ್ ಎಂಡಿ ವಿರುದ್ಧ ಎಫ್‌ಐಆರ್‌!

ಧಾರ್ಮಿಕ ಭಾವನೆಗೆ ಧಕ್ಕೆ ಎಂದು ಸ್ವಯಂ ಪ್ರೇರಿತ ಎಫ್‌ಐಆರ್ ದಾಖಲಿಸಿದ ಪೊಲೀಸರು

- Advertisement -
- Advertisement -

ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಪ್ರಕರಣದ ಕುರಿತು ಯುಟ್ಯೂಬ್ ವಿಡಿಯೊ ಮಾಡಿದ್ದ ಯೂಟ್ಯೂಬರ್ ಸಮೀರ್ ಎಂಡಿ ಅವರು ವಿರುದ್ಧ ಬಳ್ಳಾರಿ ಜಿಲ್ಲೆಯ ಕೌಲ್‌ಬಝಾರ್ ಪೊಲೀಸ್ ಠಾಣೆಯ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಸಮೀರ್ ಅವರ ವೀಡಿಯೋದಿಂದ ಧರ್ಮಸ್ಥಳ ಮತ್ತು ಧರ್ಮಸ್ಥಳದ ಧರ್ಮಾಧಿಕಾರಿ ಮೇಲೆ ಧಾರ್ಮಿಕ ಭಾವನೆ ಹೊಂದಿದ ಸಾರ್ವಜನಿಕರ ಧಾರ್ಮಿಕ ಭಾವನೆಗೆ ದಕ್ಕೆಯಾಗಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಸಮೀರ್ ಅವರು ಧರ್ಮಸ್ಥಳ ಸೌಜನ್ಯ ಪ್ರಕರಣದ ಬಗ್ಗೆ ಇತ್ತೀಚೆಎ ಮಾಡಿದ್ದ ವೀಡಿಯೊವೊಂದು ವ್ಯಾಪಕ ಗಮನ ಸೆಳೆದಿದ್ದು, ರಾಜ್ಯದಾದ್ಯಂತ ಮತ್ತೆ ಸೌಜನ್ಯ ಪ್ರಕರಣ ಮುನ್ನಲೆಗೆ ಬಂದಿದೆ. ಈ ನಡುವೆ ಅವರ ಧರ್ಮವನ್ನು ಮುನ್ನಲೆಗೆ ತಂದು ಅವರನ್ನು ಅವಮಾನಿಸುತ್ತಿದ್ದಾರೆ ಎಂಬ ಆರೋಪಗಳಿಗೆ ಅವರು ಪ್ರತಿಕ್ರಿಯೆ ನೀಡಿದ್ದು, ಜನರು ಜಾತಿ ಮತ್ತು ಧರ್ಮವನ್ನು ಈ ವಿಷಯಕ್ಕೆ ಏಕೆ ಎಳೆದು ತರುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಸಮೀರ್ ವಿರುದ್ಧ ಪೊಲೀಸರು ಬುಧವಾರ ಎಫ್‌ಐಆರ್‌ ದಾಖಲಿಸಿದ್ದು, ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಕಲಂ -299 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಧರ್ಮಸ್ಥಳ ಸೌಜನ್ಯ

ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವೈರಲ್ ಆದ ನಂತರ ಸಮೀರ್ ಅವರ ಮನೆಗೆ ಬುಧವಾರ ತಡ ರಾತ್ರಿ ಪೊಲೀಸರು ಪ್ರವೇಶಿಸಿದ್ದು, ಅವರನ್ನು ಬಂಧಿಸಲು ಪ್ರಯತ್ನಿಸಿದ್ದಾಗಿ ಅವರು ಆರೋಪಿಸಿದ್ದಾರೆ. ಈ ಕುರಿತು ಸಮೀರ್ ರಾತ್ರಿ 1 ಗಂಟೆಗೆ ಫೇಸ್‌ಬುಕ್ ಲೈವ್‌ನಲ್ಲಿ ಖಚಿತಪಡಿಸಿದ್ದಾರೆ.

ಈ ನಡುವೆ ಎಡಿಜಿಪಿ ( ಕಾನೂನು ಮತ್ತು ಸುವ್ಯವಸ್ಥೆ) ಅವರು ಹೊರಡಿಸಿದ್ದಾರೆ ಎನ್ನಲಾದ ಆದೇಶದ ಪ್ರತಿಯೊಂದು ಬುಧವಾರ ಸಂಜೆಯಿಂದ ವೈರಲ್ ಆಗಿದೆ. ಈ ಆದೇಶದಲ್ಲಿ “ಸಮೀರ್ ವೀಡಿಯೊದಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಂಭವವಿದ್ದು, ಸಾಮಾಜಿಕ ಮಾಧ್ಯಮ ಮಾನಿಟರಿಂಗ್ ಸೆಲ್ ಚುರುಕುಗೊಳಿಸಿ ಕ್ರಮ ಕೈಗೊಳ್ಳಬೇಕು” ಎಂದು ಹೇಳಿದ್ದು, ಈ ಆದೇಶವು ಸಾಕಷ್ಟು ಆಕ್ರೋಶಕ್ಕೆ ಗುರಿಯಾಗಿದೆ.

ಎಡಿಜಿಪಿ ಹೊರಡಿಸಿದ್ದಾರೆ ಎನ್ನಲಾದ ಈ ಆದೇಶದಲ್ಲಿ, “ಇತ್ತೀಚಿಗೆ ಸಮೀರ್ ಎಂಬಾತನು ಸಾಮಾಜಿಕ ಜಾಲತಾಣದಲ್ಲಿ ಈ ಹಿಂದೆ ಧರ್ಮಸ್ಥಳದಲ್ಲಿ ನಡೆದಿದ್ದ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋವನ್ನು ಹರಿಬಿಟ್ಟದ್ದು, ಘಟಕಾಧಿಕಾರಿಗಳು ಈ ವಿಷಯವನ್ನು ತಮ್ಮ ಘಟಕಗಳಲ್ಲಿರುವ Social Media Monitoring Cell ಮುಖೇನ ಮೇಲಾಧಿಕಾರಿಗಳ ಗಮನಕ್ಕೆ ತರುವಲ್ಲಿ ವಿಫಲರಾಗಿರುತ್ತೀರಿ. ಈ ವಿಷಯ ಕುರಿತಂತೆ ಸಾರ್ವಜನಿಕರಲ್ಲಿ ಪರ/ವಿರೋಧ ಅನಿಸಿಕೆಗಳು ಉದ್ಭವಿಸಿ ಸಾಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಂಭವವಿರುತ್ತದೆ. ಆದ್ದರಿಂದ, Social Media Monitoring Cell ಚುರುಕುಗೊಳಿಸುವುದು ಹಾಗೂ ಈ ಕುರಿತಂತೆ ಕೈಗೊಂಡ ಕ್ರಮದ ಬಗ್ಗೆ ಮಾನ್ಯ ಎಡಿಜಿಪಿ, ಕಾನೂನು ಮತ್ತು ಸುವ್ಯವಸ್ಥೆ ರವರಿಗೆ ಮಾಹಿತಿ ನೀಡುವುದು” ಎಂದು ಹೇಳಿದೆ.

ಮಾಜಿ ಪೊಲೀಸ್ ಅಧಿಕಾರಿ, ಸೌಜನ್ಯ ಪರ ಹೋರಾಟಗಳಲ್ಲಿ ಗುರುತಿಸಿಕೊಂಡಿದ್ದ ಗಿರೀಶ್ ಮಟ್ಟಣ್ಣನವರ್ ಅವರ ಜೊತೆಗೆ ಸಮೀರ್ ಅವರು ಬುಧವಾರ ತಡರಾತ್ರಿ ಫೇಸ್‌ಬುಕ್ ಲೈವ್‌ನಲ್ಲಿ ತನಗೆ ವ್ಯಾಪಕ ಜೀವ ಬೆದರಿಕೆ ಒಡ್ಡಲಾಗುತ್ತಿದೆ ಎಂದು ಹೇಳಿದ್ದಾರೆ.

ಲೈವ್‌ನಲ್ಲಿ ಮಾತನಾಡಿದ ಸಮೀರ್, “ಪ್ರಸ್ತುತ ನನ್ನ ಪರಿಸ್ಥತಿ ತುಂಬಾ ಕೆಟ್ಟದಾಗಿದ್ದು, ಈಗಾಗಲೆ ಪೊಲೀಸ್ ನೋಟಿಸ್ ಬಂದಿದೆ. ಸುಮಾರು ರಾತ್ರಿ 10;45ರ ಹೊತ್ತಿಗೆ ಪೊಲೀಸರು ಬಂದು ನೋಟಿಸ್ ಕೊಟ್ಟು ಹೋಗಿದ್ದಾರೆ. ಅದಾಗ್ಯೂ ನನಗೆ ಯಾವುದೇ ಭಯವಿಲ್ಲ. ನಾನು ವಿಡಿಯೊದಲ್ಲಿ ಹೇಳಿರುವ ಎಲ್ಲಾ ವಿಚಾರಗಳಿಗೂ ಸಾಕ್ಷಿಯಿದೆ. ನನಗೆ ಕಾನೂನಿನ ಮೇಲೆ ನಂಬಿಕೆಯಿದ್ದು, ಕೋರ್ಟ್‌ನ ಮುಂದೆ ಮತ್ತಷ್ಟು ವಿಸೃತವಾಗಿ ಮಂಡಿಸುತ್ತೇನೆ. ಈ ಬಗ್ಗೆ ಯಾವುದೇ ತೊಂದರೆಯಿಲ್ಲ” ಎಂದು ಹೇಳಿದ್ದಾರೆ.

ಪ್ರಸ್ತತ ತನಗೆ ತೊಂದರೆ ಆಗುತ್ತಿರುವುದು, ಮುಸ್ಲಿಮನೊಬ್ಬ ಧರ್ಮಸ್ಥಳ ಸೌಜನ್ಯ ಪ್ರಕರಣದ ಬಗ್ಗೆ ಮಾತನಾಡಿದ್ದೆ ತಪ್ಪು ಹಾಗೂ ಹಿಂದೂ ವಿರೋಧಿ ಎಂದು ಬಿಂಬಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಅದಾಗ್ಯೂ, ತಾನು ಅನ್ಯಾಯದ ವಿರುದ್ಧ ಧ್ವನಿಯೆತ್ತಿದ್ದು, ಅದು ನನ್ನ ಧರ್ಮ, ಅದನ್ನು ನಾನು ಪಾಲಿಸುತ್ತಿದ್ದೇನೆ ಎಂದು ಅವರು ತಿಳಿಸಿದ್ದಾರೆ.

“ಒಂದು ವೇಳೆ ನಾನು ಹಿಂದೂ ವಿರೋಧಿ ಆಗಿದ್ದರೆ, ಒಬ್ಬ ಹಿಂದೂ ಹುಡುಗಿಗೆ ಆಗಿರುವ ಅನ್ಯಾಯದ ಬಗ್ಗೆ ನಾನು ಯಾಕೆ ಧ್ವನಿ ಎತ್ತಬೇಕು? ನ್ಯಾಯದ ಬಗ್ಗೆ ಮಾತನಾಡೋಣ. ಅದುವೇ ಧರ್ಮ” ಎಂದು ಸಮೀರ್ ಅವರು ಫೇಸ್‌ಬುಕ್ ಲೈವ್‌ನಲ್ಲಿ ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಒತ್ತೆಯಾಳುಗಳನ್ನು ಬಿಡುಗಡೆ ಮಾಡುವಂತೆ ಹಮಾಸ್‌ಗೆ ಕೊನೆಯ ಎಚ್ಚರಿಕೆ ನೀಡಿದ ಟ್ರಂಪ್

ಒತ್ತೆಯಾಳುಗಳನ್ನು ಬಿಡುಗಡೆ ಮಾಡುವಂತೆ ಹಮಾಸ್‌ಗೆ ಕೊನೆಯ ಎಚ್ಚರಿಕೆ ನೀಡಿದ ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...