Homeಕರ್ನಾಟಕಟ್ವಿಟ್ಟರ್‌ನಲ್ಲಿ ಸಿದ್ದರಾಮಯ್ಯ - ಸದಾನಂದಗೌಡ - ಶ್ರೀರಾಮುಲು ಕದನ: ಪರಸ್ಪರ ಆರೋಪ ಪ್ರತ್ಯಾರೋಪ

ಟ್ವಿಟ್ಟರ್‌ನಲ್ಲಿ ಸಿದ್ದರಾಮಯ್ಯ – ಸದಾನಂದಗೌಡ – ಶ್ರೀರಾಮುಲು ಕದನ: ಪರಸ್ಪರ ಆರೋಪ ಪ್ರತ್ಯಾರೋಪ

- Advertisement -
- Advertisement -

ಉಪಚುನಾವಣೆಯ ರಂಗು ಏರುತ್ತಿದ್ದಂತೆಯೇ ರಾಜಕಾರಾಣಿಗಳ ನಡುವಿನ ಆರೋಪ ಪ್ರತ್ಯಾರೋಪಗಳು ಗರಿಗೆದರಿವೆ. ಟ್ವಿಟ್ಟರ್‌ ಅದಕ್ಕೊಂದು ವೇದಿಕೆಯಾಗಿ ಬಳಕೆಯಾಗುತ್ತಿದ್ದು ಪರಸ್ಪರ ಕೆಸೆರೆರಚಾಟಕ್ಕೆ ಸಾಕ್ಷಿಯಾಗಿದೆ.

ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಡಿ.ವಿ ಸದಾನಂದಗೌಡರ ನಡುವೆ ಇಂದು ಆರಂಭವಾದ ಟ್ವೀಟ್‌ ಸಮರಕ್ಕೆ ಸಚಿವ ಬಿ.ಶ್ರೀರಾಮುಲು ಸಾಥ್‌ ನೀಡಿದ್ದಾರೆ. ಹಾಗಾದರೆ ಯಾರು ಏನು ಹೇಳಿದರೂ ಬನ್ನಿ ನೋಡೋಣ.

ಇದನ್ನೂ ಓದಿ: ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಉದ್ಧವ್ ಠಾಕ್ರೆ: ಶಿವಸೇನೆ ಶಾಸಕರ ಒಕ್ಕೊರಲ ಒತ್ತಾಯ

ರಾಜ್ಯದ ಬಿಜೆಪಿ ನಾಯಕರೆಲ್ಲರೂ ನನ್ನ ಮೇಲೆಯೇ ಮುಗಿಬೀಳುತ್ತಿರುವುದು ನೋಡಿದರೆ, ನನ್ನನ್ನು ಅತಿಹೆಚ್ಚು ಟೀಕಿಸಿದವರಿಗೆ ಏನೋ ಬಹುಮಾನ ಕೊಡ್ತೇವೆ ಎಂದು ನರೇಂದ್ರ ಮೋದಿ ಮತ್ತು ಅಮಿತ್‌ ಶಾ ಭರವಸೆ ನೀಡಿದ ಹಾಗಿದೆ. ನಾನು ಏಕಾಂಗಿಯಾಗಿದ್ದರೆ ಇವರಿಗ್ಯಾಕೆ ನನ್ನ ಬಗ್ಗೆ ಭಯ? ಎಂದು ಟ್ವೀಟ್‌ ಮಾಡುವ ಮೂಲಕ ಸಿದ್ದರಾಮಯ್ಯ ಕಣಕ್ಕೆ ಆಹ್ವಾನ ನೀಡಿದ್ದಾರೆ.

ನನ್ನ ಮಾನಸಿಕ ಸ್ಥಿತಿ ಬಗ್ಗೆ ಬಡಬಡಿಸುತ್ತಿರುವ ಡಿ.ವಿ ಸದಾನಂದಗೌಡರ ಬಗ್ಗೆ ಅನುಕಂಪ ಇದೆ. ಮೊದಲು ಮುಖ್ಯಮಂತ್ರಿ ಸ್ಥಾನದಿಂದ ನಂತರ ರೈಲ್ವೆ, ಕಾನೂನು, ಅಂಕಿ ಅಂಶ ಹೀಗೆ ಎಲ್ಲ ಕಡೆಗಳಲ್ಲಿಯೂ ತಿರಸ್ಕೃತಗೊಂಡ ಗೌಡರು ಈಗ ಪಕ್ಷದಲ್ಲಿ ‘ಗೊಬ್ಬರ’ವಾಗಿ ಹೋಗಿದ್ದಾರೆ. ಈ ಹತಾಶೆ ಅವರಿಂದ ಇಂತಹ ಹೇಳಿಕೆಗಳನ್ನು ಹೊರಡಿಸುತ್ತಿದೆ ಎಂದು ಸಹ ಡಿವಿಎಸ್‌ಗೆ ಟಾಂಗ್‌ ಕೊಟ್ಟಿದ್ದಾರೆ.

ವೃಕ್ಷಕೆಲ್ಲಿಯದು ಹೂವಿನ ಹಬ್ಬ? ಗೊಬ್ಬರದ ಜೀವವನೆ ಹೀರಿ ಕೊಬ್ಬಿಹ ಹೂವೆ, ಕಬ್ಬಕ್ಕೆ ನೀಂ ಮಾತ್ರ ವಸ್ತುವೇಂ? ನಿನ್ನಂತೆ ಗೊಬ್ಬರಂ ಕಬ್ಬಕ್ಕೆ ಸಾಮಗ್ರಿಯಾಗಬಾರದೆ ಹೇಳು?

ಹಳಿಯದಿರೊ; ಇಂದೊ ನಾಳೆಯೊ ನೀನು ಕೆಳಗುರುಳಿ ಗೊಬ್ಬರದೊಳೊಂದಾಗುವಾ ಮುಂದೆ ಕಾದಿಹುದು ಕುವೆಂಪು ನಾನು ಗೊಬ್ಬರ ಹೌದು ಸ್ವಪಕ್ಷೀಯರ ರಕ್ತ ಹೀರಿದ PFI ನ ಸಮರ್ಥಕ ನೀವಲ್ಲವೇ? ಎಂದು ಡಿ.ವಿ ಸದಾನಂದಗೌಡರು ತಿರುಗೇಟು ನೀಡಿದ್ದಾರೆ.

ವೃಕ್ಷಕೆಲ್ಲಿಯದು ಹೂವಿನ ಹಬ್ಬ? ಗೊಬ್ಬರದ ಜೀವವನೆ ಹೀರಿ ಕೊಬ್ಬಿಹ ಹೂವೆ, ಕಬ್ಬಕ್ಕೆ ನೀಂ ಮಾತ್ರ ವಸ್ತುವೇಂ? ನಿನ್ನಂತೆ ಗೊಬ್ಬರಂ ಕಬ್ಬಕ್ಕೆ ಸಾಮಗ್ರಿಯಾಗಬಾರದೆ ಹೇಳು? ಹಳಿಯದಿರೊ; ಇಂದೊ ನಾಳೆಯೊ ನೀನು ಕೆಳಗುರುಳಿ ಗೊಬ್ಬರದೊಳೊಂದಾಗುವಾ ಮುಂದೆ ಕಾದಿಹುದು – ಕುವೆಂಪು ಎಂಬ ಪದ್ಯವನ್ನೇ ಅವರು ಓದಿಬಿಟ್ಟಿದ್ದಾರೆ.

ನಾವು ತಿನ್ನುವ ಅನ್ನ ಗೊಬ್ಬರದಿಂದಲೇ.. ಗೊಬ್ಬರವನ್ನು ಹೀಯಾಳಿಸುವ ಮೂಲಕ ರೈತರನ್ನು ಕೇವಲವಾಗಿ ಕಂಡಿದ್ದೀರಿ. ಪ್ರಚಾರಕ್ಕಾಗಿ ದಿನಕ್ಕೊಂದು ಹೇಳಿಕೆ ನೀಡುವುದು ಸಮತೋಲನವಿಲ್ಲದ ತಮ್ಮ ಮನಸ್ಥಿತಿಯನ್ನು ತೋರಿಸುತ್ತದೆ ಎಂದೂ ಡಿವಿಎಸ್‌ ದೂರಿದ್ದಾರೆ.

ಏಕಾಂಗಿಯಾಗಿ ಹೋಗಿರುವ ಡಿ.ವಿ ಸದಾನಂದಗೌಡರವರನ್ನು ಬಿಜೆಪಿಯಲ್ಲಿ ಯಾರೂ ಗಂಭೀರವಾಗಿ ಸ್ವೀಕರಿಸುತ್ತಿಲ್ಲ. ಇದಕ್ಕಾಗಿ ಅವರು ತಮ್ಮ ಜೋಕುಗಳಿಗೆ ತಾವೇ ನಕ್ಕು ರಾಜ್ಯದ ಜನರಿಗೆ ಮನರಂಜನೆ ನೀಡುತ್ತಾ ಇರುತ್ತಾರೆ ಎಂದು ಸಿದ್ದರಾಮಯ್ಯ ಪ್ರತಿ ಉತ್ತರ ನೀಡಿದ್ದಾರೆ.

ಮಾನ್ಯ ಸಿದ್ದರಾಮಯ್ಯನವರೇ, ಸತ್ಯದ ತಲೆ ಮೇಲೆ ಹೊಡೆದಂತೆ ಸುಳ್ಳು ಹೇಳುವುದರಲ್ಲಿ, ನಂಬಿಸಿ ಕತ್ತು ಕೊಯ್ಯುವುದರಲ್ಲಿ, ತಾನು ಬೆಳೆಯಲು ಇನ್ನೊಬ್ಬನನ್ನು ನಾಶ ಮಾಡುವುದರಲ್ಲಿ ನಿಮ್ಮಂತೆ ನಾನು ಬುದ್ಧಿವಂತನಲ್ಲ. ಇನ್ನೊಬ್ಬರಿಗೆ ಅನ್ಯಾಯ ಮಾಡುವುದೇ ಬುದ್ಧಿವಂತಿಕೆ ಎನ್ನುವ ನಿಮಗೆ ನಾನು ಪೆದ್ದನಂತೆ ಕಾಣುವುದು ಸಹಜ ಎಂದು ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್‌ ಮಾಡಿದ್ದಾರೆ.

ಮುಂದುವರಿದು ಸಿದ್ದರಾಮಯ್ಯನವರೇ, ಮೋದಿ ಮತ್ತು ಅಮಿತ್‌ ಶಾ ಹೆಸರು ಎಳೆತಂದು ದೊಡ್ಡವರಾಗುವ ಯೋಚನೆ ಬೇಡ. ಹಸೀ ಸುಳ್ಳು ಬಿಟ್ಟು ಸತ್ಯ ಹೇಳಿ. ಆಗದಿದ್ದರೆ ಸತ್ಯಕ್ಕೆ ಸಮೀಪವಾದರೂ ಮಾತನಾಡಿ. ಆಗ ಯಾರೂ ನಿಮ್ಮ ಮೇಲೆ ಮುಗಿಬೀಳುವುದಿಲ್ಲ. ಮುಗಿಬೀಳುತ್ತಾರೆ ಎಂಬ ಭಯವನ್ನು ನೀವು ಬಿಡಿ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...