Homeಮುಖಪುಟಕ್ಷೇತ್ರ ಪುನರ್ವಿಂಗಡನೆಗೆ 1971ರ ಜನಗಣತಿ ಬಳಸುವಂತೆ ಸ್ಟಾಲಿನ್ ಒತ್ತಾಯ; ಆಂಧ್ರದ ಟಿಡಿಪಿ ವಿರೋಧ!

ಕ್ಷೇತ್ರ ಪುನರ್ವಿಂಗಡನೆಗೆ 1971ರ ಜನಗಣತಿ ಬಳಸುವಂತೆ ಸ್ಟಾಲಿನ್ ಒತ್ತಾಯ; ಆಂಧ್ರದ ಟಿಡಿಪಿ ವಿರೋಧ!

- Advertisement -
- Advertisement -

ಮುಂದಿನ 30 ವರ್ಷಗಳ ಕಾಲ ನಡೆಸುವ ಯಾವುದೇ ಕ್ಷೇತ್ರ ಪುನರ್ವಿಂಗಡಣೆಯನ್ನು 1971ರ ಜನಗಣತಿಯನ್ನು ಆಧಾರವಾಗಿಟ್ಟುಕೊಂಡು ನಡೆಸಬೇಕು ಎಂದು ತಮಿಳುನಾಡು ಸರ್ಕಾರವು ಬಯಸುತ್ತಿದೆ. ಆದರೆ ಎನ್‌ಡಿಎ ಸರ್ಕಾರದ ಪ್ರಮುಖ ಮಿತ್ರ ಪಕ್ಷವಾದ ಆಂಧ್ರಪ್ರದೇಶದ ಆಡಳಿತಾರೂಢ ತೆಲುಗು ದೇಶಂ ಪಕ್ಷ (ಟಿಡಿಪಿ)ವು ಇದಕ್ಕೆ ವ್ಯತಿರಿಕ್ತವಾಗಿದ್ದು, ತಮಿಳುನಾಡು ಸರ್ಕಾರದ ವಾದದಂತೆ ಮಾಡಿದರೆ ತನ್ನ ರಾಜ್ಯವನ್ನು ಅನಾನುಕೂಲಕ್ಕೆ ಸಿಲುಕಿಸುತ್ತದೆ ಎಂದು ವಾದಿಸುತ್ತಿದೆ. ಕ್ಷೇತ್ರ ಪುನರ್ವಿಂಗಡನೆಗೆ

ಬುಧವಾರ ನಡೆದ ಸರ್ವಪಕ್ಷ ಸಭೆಯಲ್ಲಿ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಸಂಸತ್ತಿನಲ್ಲಿ ಸ್ಥಾನಗಳ ಸಂಖ್ಯೆಯಲ್ಲಿ ಹೆಚ್ಚಳವಾದರೆ, 1971 ರ ಜನಗಣತಿಯ ಆಧಾರವಾಗಿ ಮಾಡಬೇಕು. ಅದಕ್ಕಾಗಿ ಸೂಕ್ತವಾದ ಸಾಂವಿಧಾನಿಕ ತಿದ್ದುಪಡಿ ಮಾಡಬೇಕು ಎಂದು ಹೇಳುವ ನಿರ್ಣಯವನ್ನು ಮಂಡಿಸಿದ್ದಾರೆ.

ಅಲ್ಲದೆ, 2026 ರಿಂದ 30 ವರ್ಷಗಳ ಕಾಲ ಲೋಕಸಭಾ ಸ್ಥಾನಗಳ ಪುನರ್ವಿಂಗಡಣೆಗೆ 1971 ರ ಜನಗಣತಿಯನ್ನು ಆಧಾರವಾಗಿಟ್ಟುಕೊಳ್ಳಬೇಕು ಮತ್ತು ಪ್ರಧಾನಿ ಈ ಬಗ್ಗೆ ಸಂಸತ್ತಿಗೆ ಭರವಸೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ಜನರಲ್ಲಿ ಜಾಗೃತಿ ಮೂಡಿಸಲು ಮತ್ತು ಸೀಟು ಕಡಿತವನ್ನು ತಡೆಯಲು ದಕ್ಷಿಣದ ಎಲ್ಲಾ ರಾಜ್ಯಗಳ ಪ್ರತಿನಿಧಿಗಳನ್ನು ಒಳಗೊಂಡ ಜಂಟಿ ಕ್ರಿಯಾ ಸಮಿತಿಯನ್ನು ಸ್ಟಾಲಿನ್ ಇದೇ ವೇಳೆ ಪ್ರಸ್ತಾಪಿಸಿದ್ದಾರೆ.

ಆದರೆ ಸ್ಟಾಲಿನ್ ಅವರ ವಾದವನ್ನು ನಿರಾಕರಿಸಿರುವ ಟಿಡಿಪಿ ಸಂಸದ ಮತ್ತು ಸಂಸದೀಯ ಪಕ್ಷದ ನಾಯಕ ಲಾವು ಶ್ರೀ ಕೃಷ್ಣ ದೇವರಾಯಲು, 2014 ರಲ್ಲಿ ತೆಲಂಗಾಣ ಮತ್ತು ಆಂಧ್ರಪ್ರದೇಶವಾಗಿ ವಿಭಜನೆಯಾಗುವುದರಿಂದ ಆಂಧ್ರಪ್ರದೇಶವು ಈ ವಿಚಾರದಲ್ಲಿ ಹಲವು ಅಂಶಗಳಲ್ಲಿ ಸೋಲುತ್ತದೆ ಎಂದು ಪ್ರತಿಪಾದಿಸಿದ್ದಾರೆ. ಕ್ಷೇತ್ರ ಪುನರ್ವಿಂಗಡನೆಗೆ

ದಕ್ಷಿಣ ರಾಜ್ಯಗಳ ಆತಂಕಗಳನ್ನು ಪರಿಹರಿಸಲು ಪ್ರಸ್ತುತ ಕ್ಷೇತ್ರ ಪುನರ್ವಿಂಗಡಣೆಯ ಸೂತ್ರವನ್ನು ಪುನರ್ರಚಿಸಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದರೂ, ಅದು ಇತ್ತೀಚಿನ ಜನಸಂಖ್ಯಾ ಅಂಕಿಅಂಶಗಳನ್ನು ಆಧರಿಸಿರಬೇಕು ಎಂದು ಹೇಳಿದ್ದಾರೆ.

“ಕ್ಷೇತ್ರ ಪುನರ್ವಿಂಗಡನೆಯು ಹೊಸ ಜನಗಣತಿಯನ್ನು ಆಧರಿಸಿರಬೇಕು. ಯಾಕೆಂದರೆ ನಮ್ಮ ಎಲ್ಲಾ ಕಲ್ಯಾಣ ಯೋಜನೆಗಳು ಹಳೆಯ ಜನಗಣತಿ ಮತ್ತು ಪರಸ್ಪರ ಸಂಬಂಧವಿಲ್ಲದ ಡೇಟಾವನ್ನು ಆಧರಿಸಿವೆ” ಎಂದು ಅವರು ಹೇಳಿದ್ದಾರೆ.

ಕ್ಷೇತ್ರ ಪುನರ್ವಿಂಗಡನೆಯಲ್ಲಿ ದಕ್ಷಿಣ ರಾಜ್ಯಗಳು ಸೀಟುಗಳನ್ನು ಕಳೆದುಕೊಳ್ಳುವುದಿಲ್ಲ ಎಂಬ ಗೃಹ ಸಚಿವ ಅಮಿತ್ ಶಾ ಅವರ ಭರವಸೆಯನ್ನು ಸ್ವಾಗತಿಸಿದ ದೇವರಾಯಲು, ಜನಸಂಖ್ಯಾ ನಿಯಂತ್ರಣಕ್ಕೆ ಸ್ವಲ್ಪ ಪ್ರಾಮುಖ್ಯತೆ ನೀಡಬೇಕು ಎಂದು ಹೇಳಿದ್ದಾರೆ. ಜನಸಂಖ್ಯೆ ನಿಯಂತ್ರಣ ಮಾಡಿದ ರಾಜ್ಯಗಳು ನಿರಾಶೆಗೊಂಡಿವೆ ತಾನು ಎಂದು ಭಾವಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ವಿಕಟನ್‌ ವೆಬ್‌ಸೈಟ್ ಪುನಃಸ್ಥಾಪಿಸಲು ಕೇಂದ್ರ ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಆದೇಶ

ವಿಕಟನ್‌ ವೆಬ್‌ಸೈಟ್ ಪುನಃಸ್ಥಾಪಿಸಲು ಕೇಂದ್ರ ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...