Homeಕರ್ನಾಟಕಬೆಂಗಳೂರು ಅರಮನೆ ಮೈದಾನ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ

ಬೆಂಗಳೂರು ಅರಮನೆ ಮೈದಾನ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ

- Advertisement -
- Advertisement -

ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ವಿಧೇಯಕ-2025 ವಿಪಕ್ಷ ಬಿಜೆಪಿ ಸದಸ್ಯರ ತೀವ್ರ ವಿರೋಧದ ನಡುವೆಯೂ ಗುರುವಾರ (ಮಾ.6) ವಿಧಾನಸಭೆಯಲ್ಲಿ ಅಂಗೀಕಾರಗೊಂಡಿದೆ.

ಈ ಮಸೂದೆ ಮೂಲಕ ಬೆಂಗಳೂರು ಅರಮನೆ ಮೈದಾನದ ಬಳಕೆ ಮತ್ತು ನಿಯಂತ್ರಣ ಅಧಿಕಾರವನ್ನು ತನ್ನ ಬಳಿಯೇ ಇಟ್ಟುಕೊಳ್ಳುವ ಉದ್ದೇಶವನ್ನು ಸರ್ಕಾರ ಹೊಂದಿದೆ.

ಸುಗ್ರೀವಾಜ್ಞೆ ರೂಪದಲ್ಲಿದ್ದ ಮಸೂದೆಗೆ ಕೆಲ ಸಣ್ಣ ತಿದ್ದುಪಡಿಗಳೊಂದಿಗೆ ಗುರುವಾರ ಕಾನೂನು ಸಚಿವ ಹೆಚ್‌.ಕೆ.ಪಾಟೀಲ್ ಅವರು ವಿಧಾನಸಭೆಯಲ್ಲಿ ಮಂಡಿಸಿದರು.

ರಸ್ತೆ ವಿಸ್ತರಣೆಯ ಉದ್ದೇಶಕ್ಕಾಗಿ ಬಳಕೆಯಾಗುವ ಅರಮನೆ ಮೈದಾನದ 15 ಎಕರೆ 36 ಗುಂಟೆ ಭೂಮಿಗೆ ಪರಿಹಾರವಾಗಿ ಟಿಡಿಆರ್​ (ಅಭಿವೃದ್ಧಿ ಹಕ್ಕು ವರ್ಗಾವಣೆ) 3,014 ಕೋಟಿ ರೂಪಾಯಿ ನೀಡಬೇಕು ಎಂದು ಸುಪ್ರೀಂ ಕೋರ್ಟ್‌ ಆದೇಶ ನೀಡಿತ್ತು. ಸಣ್ಣ ಜಾಗಕ್ಕೆ ಭಾರಿ ಮೊತ್ತವನ್ನು ಪಾವತಿಸಬೇಕಾದ ಹೊರೆಯಿಂದ ತಪ್ಪಿಸಿಕೊಳ್ಳಲು ಸರ್ಕಾರ ಈ ವಿಧೇಯಕ ತಂದಿದೆ ಎಂದು ತಿಳಿಸಿದರು.

ತಿದ್ದುಪಡಿ ಕುರಿತು ಮಾತನಾಡಿದ ಅವರು, “ಈ ವಿಧೇಯಕ ಜಾರಿಗೆ ಬರುವುದಕ್ಕೆ ಮೊದಲು ಮತ್ತು ನ್ಯಾಯಾಲಯದ ತೀರ್ಪು ಅಥವಾ ಆದೇಶಕ್ಕೆ ಅನುಗುಣವಾಗಿ ಸರ್ಕಾರದ ತೀರ್ಮಾನದ ಪ್ರಕಾರ ನಷ್ಟ ಪರಿಹಾರ ಪಾವತಿಸಿದ್ದರೆ, ಮತ್ತೊಮ್ಮೆ ನಷ್ಟ ಪರಿಹಾರ ಪಾವತಿಸುವ ಅಗತ್ಯವಿಲ್ಲ. ಅಂದರೆ, ಈಗಾಗಲೇ 11 ಕೋಟಿ ರೂಪಾಯಿ ಪರಿಹಾರ ಎಂದು ನಿಗದಿ ಮಾಡಿದ್ದರಿಂದ ಮತ್ತೆ ಪರಿಹಾರ ಮೊತ್ತ ಪರಿಷ್ಕರಣೆ ಮಾಡುವುದರಿಂದ ರಕ್ಷಣೆ ಪಡೆಯಲು ಈ ತಿದ್ದುಪಡಿ ಎಂದು ತಿಳಿಸಿದರು.

ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಮಾತನಾಡಿ, “ರಾಜಮನೆತದವರು ಬಿಜೆಪಿ ಸಂಸದರಾದರು ಎಂಬ ಕಾರಣಕ್ಕೆ ದ್ವೇಷದಿಂದ ಈ ಮಸೂದೆ ತರಲಾಗಿದೆ. ಮೈಸೂರು ರಾಜಮನೆತನ ಕರ್ನಾಟಕಕ್ಕೆ ನೀಡಿದ ಕೊಡುಗೆಯನ್ನೂ ಯಾರೂ ಮರೆಯುವಂತಿಲ್ಲ. ನಿಮಗೇಕೆ ಬೆಂಗಳೂರು ಅರಮನೆ ಮೇಲೆ ಕಣ್ಣು” ಎಂದು ಪ್ರಶ್ನಿಸಿದರು.

ಡಾ.ಸಿ.ಎನ್‌.ಅಶ್ವತ್ಥನಾರಾಯಣ ಮಾತನಾಡಿ, ಅರಮನೆ ಮಾಲೀಕತ್ವದ ವಿಷಯ ಇತ್ಯರ್ಥವಾಗದೇ ಈ ಮಸೂದೆ ಮಂಡಿಸುವುದರಲ್ಲಿ ಅರ್ಥವಿಲ್ಲ. ಸುಪ್ರೀಂಕೋರ್ಟ್‌ ತೀರ್ಪಿನಂತೆ ಟಿಡಿಆರ್‌ ಪಾವತಿ ಮಾಡಿ ಎಂದು ಹೇಳಿದರು.

ಇದಕ್ಕೆ ಬಿಜೆಪಿಯ ಬಿ.ವೈ.ವಿಜಯೇಂದ್ರ, ಬೈರತಿ ಬಸವರಾಜ, ಆರಗ ಜ್ಞಾನೇಂದ್ರ ಧ್ವನಿಗೂಡಿಸಿದರು. ಮಸೂದೆಯನ್ನು ಮತಕ್ಕೆ ಹಾಕುವುದಾಗಿ ಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದಾಗ, ಸರ್ಕಾರ ಮಸೂದೆ ಹಿಂಪಡೆಯಬೇಕು ಎಂದು ಒತ್ತಾಯಿಸಿ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಸಭಾತ್ಯಾಗ ಮಾಡಿದರು. ಧ್ವನಿಮತದೊಂದಿಗೆ ಬೆಂಗಳೂರು ಅರಮನೆ ವಿಧೇಯಕ ಅಂಗೀಕಾರಗೊಂಡಿತು.

ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಪ್ರಕರಣದ ವಿಡಿಯೊ ಪ್ರಕರಣ; ಯೂಟ್ಯೂಬರ್ ಸಮೀರ್‌ಗೆ ಹೈಕೋರ್ಟ್‌ ರಿಲೀಫ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...