Homeಕರ್ನಾಟಕರಾಜ್ಯದಲ್ಲಿ ಜೆಡಿಎಸ್‌ ಪಕ್ಷ ವಿಸರ್ಜನೆಯಾಗಿಬಿಡಬೇಕು, ಜೆಡಿಎಸ್‌-ಕಾಂಗ್ರೆಸ್‌ ಒಳ ಒಪ್ಪಂದ ಮಾಡಿಕೊಂಡಿವೆ: ಆರ್‌.ಅಶೋಕ್‌

ರಾಜ್ಯದಲ್ಲಿ ಜೆಡಿಎಸ್‌ ಪಕ್ಷ ವಿಸರ್ಜನೆಯಾಗಿಬಿಡಬೇಕು, ಜೆಡಿಎಸ್‌-ಕಾಂಗ್ರೆಸ್‌ ಒಳ ಒಪ್ಪಂದ ಮಾಡಿಕೊಂಡಿವೆ: ಆರ್‌.ಅಶೋಕ್‌

- Advertisement -
- Advertisement -

ಮೈತ್ರಿ ಸರ್ಕಾರವಿದ್ದಾಗ ಒಂದು ವರ್ಷ ಪೂರ್ತಿ ಹಾವು ಮುಂಗುಸಿ ರೀತಿ ಕಿತ್ತಾಡಿದ ಜೆಡಿಎಸ್‌-ಕಾಂಗ್ರೆಸ್‌ ಪಕ್ಷಗಳು ಉಪಚುನಾವಣೆ ಬಂದ ತಕ್ಷಣ ಒಳ ಒಪ್ಪಂದ ಮಾಡಿಕೊಂಡಿವೆ ಎಂದು ಕಂದಾಯ ಸಚಿವ ಆರ್‌ ಅಶೋಕ್‌ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್‌ಗೆ 15ಕ್ಷೇತ್ರಕ್ಕೆ ಅಭ್ಯರ್ಥಿ ಹಾಕಲು ಯೋಗ್ಯತೆಯಿಲ್ಲ. ಸೋಲುತ್ತೇವೆ ಎನ್ನುವ ಭಯದಿಂದ ಗೂಂಡಾಗಿರಿ ಮಾಡುವುದು, ಚಪ್ಪಲಿ ತೂರುವುದು, ಬಾವುಟದಲ್ಲಿ ಒಡೆಯುವುದು ಮಾಡುತ್ತಿದ್ದಾ ಇದು ಸರಿಯಲ್ಲ ಎಂದಿದ್ದಾರೆ.

ಜೆಡಿಎಸ್‌ ರಾಷ್ಟ್ರೀಯ ಪಕ್ಷನಾ? ಪ್ರಾದೇಶಿಕ ಪಕ್ಷನಾ? ಅರ್ಥವಾಗುತ್ತಿಲ್ಲ. ಅವರ ಬೆಂಬಲ ಯಾರಿಗೆ? ದಿನಕ್ಕೆ ಒಂದೊಂದು ಸುದ್ದಿ ಹರಡುತ್ತಾರೆ. ಒಂದು ದಿನ ಕಾಂಗ್ರೆಸ್‌ ಬೆಂಬಲ ಅನ್ನುತ್ತಾರೆ. ಇನ್ನೊಂದು ದಿನ ಬಿಜೆಪಿಗೆ ಇನ್ನೊಂದು ದಿನ ತಟಸ್ಥ ಎನ್ನುತ್ತಾರೆ. ಒಟ್ಟು ಆ ಪಕ್ಷ ಅತಂತ್ರ ಸ್ಥಿತಿಯಲ್ಲಿದ್ದು, ಡಿಸಾಲ್ವ್‌ ಆಗಿಬಿಟ್ಟರೆ ಒಳ್ಳೆಯದು ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ : ಟ್ವಿಟ್ಟರ್‌ನಲ್ಲಿ ಸಿದ್ದರಾಮಯ್ಯ – ಸದಾನಂದಗೌಡ – ಶ್ರೀರಾಮುಲು ಕದನ: ಪರಸ್ಪರ ಆರೋಪ ಪ್ರತ್ಯಾರೋಪ

ಸೋಲುತ್ತೀವಿ ಎಂದು ಎರಡು ಪಕ್ಷಕ್ಕೂ ಭೀತಿ ಶುರುವಾಗಿದೆ. ಜೆಡಿಎಸ್‌ 3 ಕಡೆ ಮಾತ್ರ ಕಠಿಣ ಸ್ಪರ್ಧೆ ಮಾಡುತ್ತೇವೆ ಎಂದೂ, ಕಾಂಗ್ರೆಸ್‌ 12 ಕಡೆ ಕಠಿಣವಾಗಿ ಹೋರಾಡುತ್ತೇವೆ ಎಂದರೆ ಒಳ ಒಪ್ಪಂದ ಸ್ಪಷ್ಟವಾಗಿ ಕಾಣುತ್ತಿದೆ ಎಂದಿದ್ದಾರೆ.

ಇವರ ಒಂದು ವರ್ಷದ ದುರಾಡಳಿತ ನೋಡಿದ ಮೇಲೆ ಜನಕ್ಕೆ ಬೇಸರವಾಗಿದೆ. ಎತ್ತು ಏರಿಗೆ ಎಳೆದರೆ, ಕೋಣ ನೀರಿಗೆ ಎಳೆಯಿತು ಎನ್ನುವ ಹಾಗಿದೆ ಅವರ ವರ್ತನೆ. ಹಾಗಾಗಿ ಯಡಿಯೂರಪ್ಪನವರ ಸ್ಥಿರ ಸರ್ಕಾರ ಮುಂದುವರೆಯಬೇಕೆಂದು ಜನರ ಭಾವನೆ. 15ಕ್ಕೆ 15ನ್ನೂ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಿದ್ದರಾಮಯ್ಯನವರಿಗೆ ಟಿಪ್ಪು ಭೂತ ಹಿಡಿದಿದೆ

ಪಕ್ಷಾಂತರಿಗಳು ಎಂದು ಬಿಜೆಪಿಯ ಅಭ್ಯರ್ಥಿಗಳನ್ನು ಸಿದ್ದರಾಮಯ್ಯ ಹೋದಲ್ಲಿ, ಬಂದಲ್ಲಿ ತೆಗೆಳುತ್ತಿದ್ದಾರೆ. ಆದರೆ ವಿಪಕ್ಷದ ನಾಯಕರಾದ ಅವರು ಹಿಂದೆ ಸ್ವತಂತ್ರವಾಗಿ ಗೆದ್ದು, ಜನತಾದಳ, ಜೆಡಿಎಸ್‌ ಸೇರಿ ಈಗ ಕಾಂಗ್ರೆಸ್‌ ಸೇರುವ ಮೂಲಕ ಮೂರು ಪಕ್ಷ ಬದಲಾಯಿಸಿದ್ದಾರೆ. ಅವರಿಗೆ ಪಕ್ಷಾಂತರದ ವಿಷಯದಲ್ಲಿ ಒಂದು ಪಿಎಚ್‌ಡಿಯನ್ನು ಕೊಡಬೇಕು ಎಂದು ವ್ಯಂಗ್ಯವಾಡಿದರು.

ಸಿದ್ದರಾಮಯ್ಯನವರು ಎಂಎಲ್‌ಎಗಳನ್ನು ಕೋಳಿ, ಕುರಿ, ದನದ ರೀತಿ ಮಾರಾಟವಾಗುತ್ತಿದ್ದಾರೆ ಎಂದು ವ್ಯಾಖ್ಯಾನ ಮಾಡುತ್ತಿದ್ದಾರೆ. ನೀವು ಜೆಡಿಎಸ್‌ ಬಿಟ್ಟು ಬಂದಾಗ ತಾವು ಯಾವ ಪ್ರಾಣಿಯಾಗಿದ್ದೀರಿ ಎಂದು ಈಗ ಅವರನ್ನು ಜನ ಕೇಳುತ್ತಿದ್ದಾರೆ. ಪಕ್ಷಾಂತರ ಮಾಡುವುದರಲ್ಲಿ ಸಿದ್ದರಾಮಯ್ಯನವರು ಎತ್ತಿದ ಕೈ. ಅವರನ್ನು ವಿರೋಧ ಪಕ್ಷದ ನಾಯಕರಾಗಿ ಮಾಡಲಿಲ್ಲವಾದರೆ ಮತ್ತೆ ಅಹಿಂದ ಕಟ್ಟುತ್ತಿದ್ದರು ಎಂದು ಅಶೋಕ್‌ ವಾಗ್ದಾಳಿ ನಡೆಸಿದರು.

ಈ ರೀತಿಯ ಮಾತುಗಳನ್ನು ಬಿಟ್ಟು ಚುನಾವಣೆ ಮಾಡಿ. ನಿಮಗೆ ಟಿಪ್ಪು ಭೂತ ಅಂಟಿಕೊಂಡುಬಿಟ್ಟಿದೆ. ಅದರಿಂದ ಹೊರಗಡೆ ಬರುತ್ತಿಲ್ಲ. ನಿನ್ನೆ ಕೆ.ಆರ್‌ ಪೇಟೆಯಲ್ಲಿ ಮಹಿಳೆ ಹಣೆಗೆ ತಿಲಕ ಇಡಲು ಹೋದಾಗ ಬೇಡ ಅಂದಿದ್ದಾರೆ ಎಂದು ಸಿದ್ದು ವಿರುದ್ಧ ಗುಡುಗಿದರು.

ಇದನ್ನೂ ಓದಿ: ಕಾಂಗ್ರೆಸ್ ಮುಖಂಡ ತನ್ವೀರ್ ಸೇಠ್ ಕೊಲೆಯತ್ನ: ಪಿಎಫ್‌ಐ ಮುಗಿಸಲು ಬಿಜೆಪಿ ಶತಪ್ರಯತ್ನ

ಮೈಸೂರಿನ ಶಾಸಕ ತನ್ವೀರ್‌ ಸೇಠ್‌ ಮೇಲೆ ಹಲ್ಲೆಯಾಗಿದೆ. ಎಸ್‌ಡಿಪಿಐ ಮತ್ತು ಪಿಎಫ್‌ಐ ನ ಕಾರ್ಯಕರ್ತರೆ ಕಾರಣ ಎಂದು ಗೊತ್ತಾಗಿದೆ. ಅವರ ಮೇಲಿನ 120 ಕೇಸುಗಳನ್ನು ಸಿದ್ದರಾಮಯ್ಯನವರು ವಾಪಸ್ ಪಡೆದಿದ್ದು ಏಕೆ? ಕಾನೂನು ಸುವ್ಯವಸ್ಥೆ ಕುಸಿದು ಬೀಳಲು ಕಾರಣ ಯಾರು? ನಿಮ್ಮ ಹಳೆ ಸರ್ಕಾರ ಕಾರಣವೇ? ಕೆಎಫ್‌ಡಿಯಿಂದ ಹುಣಸೂರಿನಲ್ಲಿ ಇಬ್ಬರೂ ವಿದ್ಯಾರ್ಥಿಗಳ ಹತ್ಯೆಯಾದಾಗ ಅವರ ಮೇಲೆ ಕೇಸು ಹಾಕಿದ್ದೀರಿ. ಅದನ್ನು ವಾಪಸ್ ಪಡೆದಿದ್ದು ಏಕೆ? ಅವರ ಮೇಲೆ ಸಾಫ್ಟ್‌ ನೇಚರ್‌ ಏಕೆ? ಎಂದು ಅಶೋಕ್‌ ಪ್ರಶ್ನಿಸಿದ್ದಾರೆ.

ಹಾಗಾಗಿ ಟಿಪ್ಪು ಭೂತದಿಂದ ಆಚೆ ಬಂದರೆ ನೀವು ನಿಜವಾಗಿಯೂ ಸಿದ್ದರಾಮಯ್ಯನವರು ಆಗುತ್ತೀರಿ? ಇಲ್ಲದಿದ್ದರೆ ಟಿಪ್ಪು ಸಿದ್ದರಾಮಯ್ಯ ಆಗುತ್ತೀರಿ ಎಂದು ಛೇಡಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...