Homeಕರ್ನಾಟಕರಾಜ್ಯದಲ್ಲಿ ಜೆಡಿಎಸ್‌ ಪಕ್ಷ ವಿಸರ್ಜನೆಯಾಗಿಬಿಡಬೇಕು, ಜೆಡಿಎಸ್‌-ಕಾಂಗ್ರೆಸ್‌ ಒಳ ಒಪ್ಪಂದ ಮಾಡಿಕೊಂಡಿವೆ: ಆರ್‌.ಅಶೋಕ್‌

ರಾಜ್ಯದಲ್ಲಿ ಜೆಡಿಎಸ್‌ ಪಕ್ಷ ವಿಸರ್ಜನೆಯಾಗಿಬಿಡಬೇಕು, ಜೆಡಿಎಸ್‌-ಕಾಂಗ್ರೆಸ್‌ ಒಳ ಒಪ್ಪಂದ ಮಾಡಿಕೊಂಡಿವೆ: ಆರ್‌.ಅಶೋಕ್‌

- Advertisement -
- Advertisement -

ಮೈತ್ರಿ ಸರ್ಕಾರವಿದ್ದಾಗ ಒಂದು ವರ್ಷ ಪೂರ್ತಿ ಹಾವು ಮುಂಗುಸಿ ರೀತಿ ಕಿತ್ತಾಡಿದ ಜೆಡಿಎಸ್‌-ಕಾಂಗ್ರೆಸ್‌ ಪಕ್ಷಗಳು ಉಪಚುನಾವಣೆ ಬಂದ ತಕ್ಷಣ ಒಳ ಒಪ್ಪಂದ ಮಾಡಿಕೊಂಡಿವೆ ಎಂದು ಕಂದಾಯ ಸಚಿವ ಆರ್‌ ಅಶೋಕ್‌ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್‌ಗೆ 15ಕ್ಷೇತ್ರಕ್ಕೆ ಅಭ್ಯರ್ಥಿ ಹಾಕಲು ಯೋಗ್ಯತೆಯಿಲ್ಲ. ಸೋಲುತ್ತೇವೆ ಎನ್ನುವ ಭಯದಿಂದ ಗೂಂಡಾಗಿರಿ ಮಾಡುವುದು, ಚಪ್ಪಲಿ ತೂರುವುದು, ಬಾವುಟದಲ್ಲಿ ಒಡೆಯುವುದು ಮಾಡುತ್ತಿದ್ದಾ ಇದು ಸರಿಯಲ್ಲ ಎಂದಿದ್ದಾರೆ.

ಜೆಡಿಎಸ್‌ ರಾಷ್ಟ್ರೀಯ ಪಕ್ಷನಾ? ಪ್ರಾದೇಶಿಕ ಪಕ್ಷನಾ? ಅರ್ಥವಾಗುತ್ತಿಲ್ಲ. ಅವರ ಬೆಂಬಲ ಯಾರಿಗೆ? ದಿನಕ್ಕೆ ಒಂದೊಂದು ಸುದ್ದಿ ಹರಡುತ್ತಾರೆ. ಒಂದು ದಿನ ಕಾಂಗ್ರೆಸ್‌ ಬೆಂಬಲ ಅನ್ನುತ್ತಾರೆ. ಇನ್ನೊಂದು ದಿನ ಬಿಜೆಪಿಗೆ ಇನ್ನೊಂದು ದಿನ ತಟಸ್ಥ ಎನ್ನುತ್ತಾರೆ. ಒಟ್ಟು ಆ ಪಕ್ಷ ಅತಂತ್ರ ಸ್ಥಿತಿಯಲ್ಲಿದ್ದು, ಡಿಸಾಲ್ವ್‌ ಆಗಿಬಿಟ್ಟರೆ ಒಳ್ಳೆಯದು ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ : ಟ್ವಿಟ್ಟರ್‌ನಲ್ಲಿ ಸಿದ್ದರಾಮಯ್ಯ – ಸದಾನಂದಗೌಡ – ಶ್ರೀರಾಮುಲು ಕದನ: ಪರಸ್ಪರ ಆರೋಪ ಪ್ರತ್ಯಾರೋಪ

ಸೋಲುತ್ತೀವಿ ಎಂದು ಎರಡು ಪಕ್ಷಕ್ಕೂ ಭೀತಿ ಶುರುವಾಗಿದೆ. ಜೆಡಿಎಸ್‌ 3 ಕಡೆ ಮಾತ್ರ ಕಠಿಣ ಸ್ಪರ್ಧೆ ಮಾಡುತ್ತೇವೆ ಎಂದೂ, ಕಾಂಗ್ರೆಸ್‌ 12 ಕಡೆ ಕಠಿಣವಾಗಿ ಹೋರಾಡುತ್ತೇವೆ ಎಂದರೆ ಒಳ ಒಪ್ಪಂದ ಸ್ಪಷ್ಟವಾಗಿ ಕಾಣುತ್ತಿದೆ ಎಂದಿದ್ದಾರೆ.

ಇವರ ಒಂದು ವರ್ಷದ ದುರಾಡಳಿತ ನೋಡಿದ ಮೇಲೆ ಜನಕ್ಕೆ ಬೇಸರವಾಗಿದೆ. ಎತ್ತು ಏರಿಗೆ ಎಳೆದರೆ, ಕೋಣ ನೀರಿಗೆ ಎಳೆಯಿತು ಎನ್ನುವ ಹಾಗಿದೆ ಅವರ ವರ್ತನೆ. ಹಾಗಾಗಿ ಯಡಿಯೂರಪ್ಪನವರ ಸ್ಥಿರ ಸರ್ಕಾರ ಮುಂದುವರೆಯಬೇಕೆಂದು ಜನರ ಭಾವನೆ. 15ಕ್ಕೆ 15ನ್ನೂ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಿದ್ದರಾಮಯ್ಯನವರಿಗೆ ಟಿಪ್ಪು ಭೂತ ಹಿಡಿದಿದೆ

ಪಕ್ಷಾಂತರಿಗಳು ಎಂದು ಬಿಜೆಪಿಯ ಅಭ್ಯರ್ಥಿಗಳನ್ನು ಸಿದ್ದರಾಮಯ್ಯ ಹೋದಲ್ಲಿ, ಬಂದಲ್ಲಿ ತೆಗೆಳುತ್ತಿದ್ದಾರೆ. ಆದರೆ ವಿಪಕ್ಷದ ನಾಯಕರಾದ ಅವರು ಹಿಂದೆ ಸ್ವತಂತ್ರವಾಗಿ ಗೆದ್ದು, ಜನತಾದಳ, ಜೆಡಿಎಸ್‌ ಸೇರಿ ಈಗ ಕಾಂಗ್ರೆಸ್‌ ಸೇರುವ ಮೂಲಕ ಮೂರು ಪಕ್ಷ ಬದಲಾಯಿಸಿದ್ದಾರೆ. ಅವರಿಗೆ ಪಕ್ಷಾಂತರದ ವಿಷಯದಲ್ಲಿ ಒಂದು ಪಿಎಚ್‌ಡಿಯನ್ನು ಕೊಡಬೇಕು ಎಂದು ವ್ಯಂಗ್ಯವಾಡಿದರು.

ಸಿದ್ದರಾಮಯ್ಯನವರು ಎಂಎಲ್‌ಎಗಳನ್ನು ಕೋಳಿ, ಕುರಿ, ದನದ ರೀತಿ ಮಾರಾಟವಾಗುತ್ತಿದ್ದಾರೆ ಎಂದು ವ್ಯಾಖ್ಯಾನ ಮಾಡುತ್ತಿದ್ದಾರೆ. ನೀವು ಜೆಡಿಎಸ್‌ ಬಿಟ್ಟು ಬಂದಾಗ ತಾವು ಯಾವ ಪ್ರಾಣಿಯಾಗಿದ್ದೀರಿ ಎಂದು ಈಗ ಅವರನ್ನು ಜನ ಕೇಳುತ್ತಿದ್ದಾರೆ. ಪಕ್ಷಾಂತರ ಮಾಡುವುದರಲ್ಲಿ ಸಿದ್ದರಾಮಯ್ಯನವರು ಎತ್ತಿದ ಕೈ. ಅವರನ್ನು ವಿರೋಧ ಪಕ್ಷದ ನಾಯಕರಾಗಿ ಮಾಡಲಿಲ್ಲವಾದರೆ ಮತ್ತೆ ಅಹಿಂದ ಕಟ್ಟುತ್ತಿದ್ದರು ಎಂದು ಅಶೋಕ್‌ ವಾಗ್ದಾಳಿ ನಡೆಸಿದರು.

ಈ ರೀತಿಯ ಮಾತುಗಳನ್ನು ಬಿಟ್ಟು ಚುನಾವಣೆ ಮಾಡಿ. ನಿಮಗೆ ಟಿಪ್ಪು ಭೂತ ಅಂಟಿಕೊಂಡುಬಿಟ್ಟಿದೆ. ಅದರಿಂದ ಹೊರಗಡೆ ಬರುತ್ತಿಲ್ಲ. ನಿನ್ನೆ ಕೆ.ಆರ್‌ ಪೇಟೆಯಲ್ಲಿ ಮಹಿಳೆ ಹಣೆಗೆ ತಿಲಕ ಇಡಲು ಹೋದಾಗ ಬೇಡ ಅಂದಿದ್ದಾರೆ ಎಂದು ಸಿದ್ದು ವಿರುದ್ಧ ಗುಡುಗಿದರು.

ಇದನ್ನೂ ಓದಿ: ಕಾಂಗ್ರೆಸ್ ಮುಖಂಡ ತನ್ವೀರ್ ಸೇಠ್ ಕೊಲೆಯತ್ನ: ಪಿಎಫ್‌ಐ ಮುಗಿಸಲು ಬಿಜೆಪಿ ಶತಪ್ರಯತ್ನ

ಮೈಸೂರಿನ ಶಾಸಕ ತನ್ವೀರ್‌ ಸೇಠ್‌ ಮೇಲೆ ಹಲ್ಲೆಯಾಗಿದೆ. ಎಸ್‌ಡಿಪಿಐ ಮತ್ತು ಪಿಎಫ್‌ಐ ನ ಕಾರ್ಯಕರ್ತರೆ ಕಾರಣ ಎಂದು ಗೊತ್ತಾಗಿದೆ. ಅವರ ಮೇಲಿನ 120 ಕೇಸುಗಳನ್ನು ಸಿದ್ದರಾಮಯ್ಯನವರು ವಾಪಸ್ ಪಡೆದಿದ್ದು ಏಕೆ? ಕಾನೂನು ಸುವ್ಯವಸ್ಥೆ ಕುಸಿದು ಬೀಳಲು ಕಾರಣ ಯಾರು? ನಿಮ್ಮ ಹಳೆ ಸರ್ಕಾರ ಕಾರಣವೇ? ಕೆಎಫ್‌ಡಿಯಿಂದ ಹುಣಸೂರಿನಲ್ಲಿ ಇಬ್ಬರೂ ವಿದ್ಯಾರ್ಥಿಗಳ ಹತ್ಯೆಯಾದಾಗ ಅವರ ಮೇಲೆ ಕೇಸು ಹಾಕಿದ್ದೀರಿ. ಅದನ್ನು ವಾಪಸ್ ಪಡೆದಿದ್ದು ಏಕೆ? ಅವರ ಮೇಲೆ ಸಾಫ್ಟ್‌ ನೇಚರ್‌ ಏಕೆ? ಎಂದು ಅಶೋಕ್‌ ಪ್ರಶ್ನಿಸಿದ್ದಾರೆ.

ಹಾಗಾಗಿ ಟಿಪ್ಪು ಭೂತದಿಂದ ಆಚೆ ಬಂದರೆ ನೀವು ನಿಜವಾಗಿಯೂ ಸಿದ್ದರಾಮಯ್ಯನವರು ಆಗುತ್ತೀರಿ? ಇಲ್ಲದಿದ್ದರೆ ಟಿಪ್ಪು ಸಿದ್ದರಾಮಯ್ಯ ಆಗುತ್ತೀರಿ ಎಂದು ಛೇಡಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...