Homeಕರ್ನಾಟಕಸಿದ್ದರಾಮಯ್ಯ ಮಂಡಿಸಿದ್ದು 'ಸಾಬ್ರ' ಬಜೆಟ್? ಮಾಧ್ಯಮ, ಬಿಜೆಪಿ ಆರೋಪ ನಿಜವೆ?

ಸಿದ್ದರಾಮಯ್ಯ ಮಂಡಿಸಿದ್ದು ‘ಸಾಬ್ರ’ ಬಜೆಟ್? ಮಾಧ್ಯಮ, ಬಿಜೆಪಿ ಆರೋಪ ನಿಜವೆ?

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ (ಮಾ.7) ತಮ್ಮ ದಾಖಲೆಯ ಹದಿನಾರನೇ ಬಜೆಟ್ ಮಂಡಿಸಿದ್ದಾರೆ. ಈ ಬಜೆಟ್‌ಗೂ ಮುಂಚಿತವಾಗಿ ಸಂಪ್ರದಾಯದಂತೆ ಮುಖ್ಯಮಂತ್ರಿ ಅವರ ಕಡೆಯಿಂದ ಗುರುವಾರ ರಾತ್ರಿ ಬೆಂಗಳೂರಿನ ರ‍್ಯಾಡಿಸನ್ ಬ್ಲೂ ಪಂಚತಾರ ಹೊಟೇಲ್‌ನಲ್ಲಿ ಪತ್ರಕರ್ತರಿಗೆ ಔತಣಕೂಟವಿತ್ತು. ರಾಜ್ಯದ ಎಲ್ಲಾ ಪ್ರಮುಖ ಮಾಧ್ಯಮಗಳ ಮತ್ತು ಪತ್ರಿಕೆಗಳ ಪತ್ರಕರ್ತರು ಈ ಔತಣಕೂಟದಲ್ಲಿ ಭಾಗವಹಿಸಿದ್ದರು. ಸಿದ್ದರಾಮಯ್ಯ ಮಂಡಿಸಿದ್ದು

ಅದಾಗ್ಯೂ, ಈ ಔತಣಕೂಟದ ನಂತರ ಹೆಚ್ಚಿನ ಎಲ್ಲಾ ಪತ್ರಕರ್ತರು ಬಿಜೆಪಿಯ ಜಗನ್ನಾಥ ಭವನ ಅಥವಾ ಆರೆಸ್ಸೆಸ್‌ನ ಕೇಶವಕೃಪಾ ಕಚೇರಿಗೆ ಹೋಗಿ ಸಭೆ ನಡೆಸಿದ್ದಾರೆ ಎಂದು ನನ್ನ ಅನುಮಾನ. ಯಾಕೆಂದರೆ, ಇಂದು ಸಿದ್ದರಾಮಯ್ಯ ಅವರ ರಾಜ್ಯದ 2025-26 ಆರ್ಥಿಕ ವರ್ಷದ ಬಜೆಟ್ ಮಂಡಿಸಿ ಮುಗಿಸುತ್ತಿದ್ದಂತೆ ಬಿಜೆಪಿ ಮತ್ತು ಕನ್ನಡ ಮಾಧ್ಯಮಗಳು ಒಂದೇ ಧ್ವನಿಯಲ್ಲಿ ಮಾತನಾಡುತ್ತಿವೆ. ಮುಖ್ಯಮಂತ್ರಿ ಮಂಡಿಸಿದ ಬಜೆಟ್ ಅನ್ನು ವಿಶ್ಲೇಷಣೆ ಮಾಡಿದರೆ ಇವರುಗಳ ಒಂದೇ ಧ್ವನಿಯನ್ನು ಒಪ್ಪಬಹುದಿತ್ತು. ಆದರೆ, ಕನ್ನಡ ಮಾಧ್ಯಮಗಳು ಮತ್ತು ವಿಪಕ್ಷ ಬಿಜೆಪಿ ಬಜೆಟ್‌ ಅನ್ನು ಕೋಮುದೃಷ್ಠಿಯಿಂದ ನೋಡುತ್ತಾ ಎಂದಿನಂತೆ ಮುಸ್ಲಿಮರ ವಿರುದ್ಧ ನಂಜು ಕಾರಿಕೊಳ್ಳುತ್ತಿವೆ.

ರಾಜ್ಯ ಸರ್ಕಾರದ ಬಜೆಟ್ ವಿಶ್ಲೇಷಣೆ ಮಾಡುವುದು, ಅದರಲ್ಲಿನ ಮಿತಿಗಳ ಬಗ್ಗೆ ಟೀಕೆ ಮಾಡುವುದು ವಿಪಕ್ಷವಾಗಿ ಬಿಜೆಪಿ ಮತ್ತು ಮಾಧ್ಯಮಗಳ ಕರ್ತವ್ಯವೆ ಆಗಿದೆ. ಆದರೆ ಈ ಮಾಧ್ಯಮಗಳು ಅವುಗಳನ್ನು ಬಿಟ್ಟು ಬಜೆಟ್‌ ಅನ್ನು ಕೂಡಾ ಕೋಮುವಾದಿ ನೆಲೆಯಲ್ಲಿ ಮಾತನಾಡುತ್ತಾ, ಈಗಾಗಲೆ ಕುಗ್ಗಿರುವ ಈ ರಾಜ್ಯದ ಮುಸ್ಲಿಮರನ್ನು ಮತ್ತಷ್ಟು ಅವಮಾನಿಸುತ್ತಾ ಇವೆ. ಸಿದ್ದರಾಮಯ್ಯ ಮಂಡಿಸಿದ್ದು

ಮುಖ್ಯಮಂತ್ರಿ ಸಿದ್ದರಾಮಯ್ಯಾ ಅವರ ಬಜೆಟ್ ‘ಸಾಬ್ರ’ ಬಜೆಟ್ ಎಂಬುವುದು ನಿಜವೆ?

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಿದ ಬಜೆಟ್‌ ಮೊತ್ತ ನಾಲ್ಕು ಲಕ್ಷ ಕೋಟಿ ರೂಪಾಯಿಗಳಾಗಿದೆ. ಇದನ್ನು ಅಂಕೆಯಲ್ಲಿ ಬರೆದರೆ, 4,095,490,000,000 ಆಗುತ್ತದೆ. ಮುಸ್ಲಿಮರು ಸೇರಿ ಈ ರಾಜ್ಯದ ಎಲ್ಲಾ ಅಲ್ಪ ಸಂಖ್ಯಾತರಿಗೆ ಮೀಸಲಿಟ್ಟ ಹಣ ಕೇವಲ 1,300 ಕೋಟಿ ರೂಪಾಯಿಗಳಾಗಿವೆ. ರಾಜ್ಯದಲ್ಲಿ ಅಲ್ಪ ಸಂಖ್ಯಾತರು ಎಂದರೆ ಕೇವಲ ಮುಸ್ಲಿಮರು ಮಾತ್ರವಲ್ಲ. 2% ಕ್ರಿಶ್ಚಿಯನ್ನರು, 1% ಜೈನರು, ಬೌದ್ಧರು, ಸಿಖ್ಖರು, ಪಾರ್ಸಿಗಳು ಇದ್ದಾರೆ. ಈ ವಿಚಾರ ಬಿಜೆಪಿಗಾಗಲಿ, ಕನ್ನಡ ಮಾಧ್ಯಮಗಳಿಗಾಗಲಿ ತಿಳಿದಿಲ್ಲ ಎಂಬುವುದೇನಿಲ್ಲ.

ಮುಸ್ಲಿಮರು ಈ ರಾಜ್ಯದ 1 ಕೋಟಿ(13%)ಯಷ್ಟು ಜನಸಂಖ್ಯೆ ಹೊಂದಿರುವ ದೊಡ್ಡ ಸಮುದಾಯ. ಮುಖ್ಯಮಂತ್ರಿ ಮಂಡಿಸಿದ ನಾಲ್ಕು ಲಕ್ಷ ಕೋಟಿ ರೂಪಾಯಿಯ ಬೃಹತ್ ಬಜೆಟ್‌ನಲ್ಲಿ, ನೇರವಾಗಿ ಮುಸ್ಲಿಮರಿಗೆ ಎಂದು ಮೀಸಲಿಟ್ಟ ಅನುದಾನ ಕೇವಲ 250 ಕೋಟಿ ರೂಪಾಯಿಗಳು ಮಾತ್ರವಾಗಿದೆ. ಇದು ಬಜೆಟ್‌ನ 0.061% ಮಾತ್ರ. ಉಳಿದಂತೆ 1000 ಕೋಟಿ ರೂಪಾಯಿಗಳನ್ನು ಅಲ್ಪಸಂಖ್ಯಾತರಿಗೆ ಸರ್ಕಾರ ಮೀಸಲಿಟ್ಟಿದೆ.

ಮುಸ್ಲಿಮರಿಗೆ ನೇರವಾಗಿ ನೀಡಿರುವ 250 ಕೋಟಿ ಹಾಗೂ 1000 ಕೋಟಿ ರೂಪಾಯಿಗಳು ಸೇರಿಸಿ 1300 ಕೋಟಿಯಾಗುತ್ತದೆ. ಇತರ ಅಲ್ಪಸಂಖ್ಯಾತ ಸಮುದಾಯದ ಎಲ್ಲಾ ಪಾಲನ್ನು ಮುಸ್ಲಿಮರೆ ಪಡೆದರೂ, ಅಲ್ಲಿ ಸಿಗುವುದು ಬಜೆಟ್‌ನ ಪಾಲು 0.318% ಅಷ್ಟೇ. ಬಜೆಟ್‌ನ ಮೊತ್ತದಲ್ಲಿ ಒಂದು ಶೇಖಡ ಕೂಡಾ ಇಲ್ಲ. ಕನಿಷ್ಠ ಪಕ್ಷ ಅರ್ಧ ಶೇಖಡಾ ಕೂಡಾ ಇಲ್ಲ.

ಈ ರಾಜ್ಯದಲ್ಲೆ ದುಡಿದು, ಇಲ್ಲೆ ಖರ್ಚು ಮಾಡಿ ತೆರಿಗೆ ಕಟ್ಟುವ, ಈ ರಾಜ್ಯದ ಅಭಿವೃದ್ಧಿಗೆ ಪಾಲು ನೀಡುವ 13% ಮುಸ್ಲಿಮರಿಗೆ ರಾಜ್ಯ ಕನಿಷ್ಠ ಪಕ್ಷ ಅರ್ಧ ಶೇಖಡಾ ಕೂಡಾ ವಾಪಾಸು ನೀಡುತ್ತಾ ಇಲ್ಲ.‌ ಈ ಅನ್ಯಾಯವನ್ನು ವಿಪಕ್ಷಗಳು ಮತ್ತು ಮಾಧ್ಯಮಗಳು ಕೇಳಬೇಕು ಅಲ್ಲವೆ?  ಬಿಜೆಪಿ ರೀತಿಯ ವಿಪಕ್ಷವಾಗಲಿ, ಮಾಧ್ಯಮವಾಗಲಿ ಮೇಲಿನಂತೆ ರಾಜ್ಯ ಸರ್ಕಾರ ಮಾಡುತ್ತಿರುವ ಅನ್ಯಾಯದ ಬಗ್ಗೆ ಮಾತನಾಡಬೇಕೆ ವಿನಃ, ಅವಮಾನಿತ, ಅನುಮಾನಿತ ಮತ್ತು ಹಿಂದುಳಿದ ಸಮುದಾಯವನ್ನು ಮತ್ತಷ್ಟು ಕುಗ್ಗಿಸುವುದಲ್ಲ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  Karnataka Budget 2025-26 | ಶಿಕ್ಷಣ ಕ್ಷೇತ್ರದ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Karnataka Budget 2025-26 | ಶಿಕ್ಷಣ ಕ್ಷೇತ್ರದ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...