Homeಕರ್ನಾಟಕಸಿದ್ದರಾಮಯ್ಯ ಮಂಡಿಸಿದ್ದು 'ಸಾಬ್ರ' ಬಜೆಟ್? ಮಾಧ್ಯಮ, ಬಿಜೆಪಿ ಆರೋಪ ನಿಜವೆ?

ಸಿದ್ದರಾಮಯ್ಯ ಮಂಡಿಸಿದ್ದು ‘ಸಾಬ್ರ’ ಬಜೆಟ್? ಮಾಧ್ಯಮ, ಬಿಜೆಪಿ ಆರೋಪ ನಿಜವೆ?

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ (ಮಾ.7) ತಮ್ಮ ದಾಖಲೆಯ ಹದಿನಾರನೇ ಬಜೆಟ್ ಮಂಡಿಸಿದ್ದಾರೆ. ಈ ಬಜೆಟ್‌ಗೂ ಮುಂಚಿತವಾಗಿ ಸಂಪ್ರದಾಯದಂತೆ ಮುಖ್ಯಮಂತ್ರಿ ಅವರ ಕಡೆಯಿಂದ ಗುರುವಾರ ರಾತ್ರಿ ಬೆಂಗಳೂರಿನ ರ‍್ಯಾಡಿಸನ್ ಬ್ಲೂ ಪಂಚತಾರ ಹೊಟೇಲ್‌ನಲ್ಲಿ ಪತ್ರಕರ್ತರಿಗೆ ಔತಣಕೂಟವಿತ್ತು. ರಾಜ್ಯದ ಎಲ್ಲಾ ಪ್ರಮುಖ ಮಾಧ್ಯಮಗಳ ಮತ್ತು ಪತ್ರಿಕೆಗಳ ಪತ್ರಕರ್ತರು ಈ ಔತಣಕೂಟದಲ್ಲಿ ಭಾಗವಹಿಸಿದ್ದರು. ಸಿದ್ದರಾಮಯ್ಯ ಮಂಡಿಸಿದ್ದು

ಅದಾಗ್ಯೂ, ಈ ಔತಣಕೂಟದ ನಂತರ ಹೆಚ್ಚಿನ ಎಲ್ಲಾ ಪತ್ರಕರ್ತರು ಬಿಜೆಪಿಯ ಜಗನ್ನಾಥ ಭವನ ಅಥವಾ ಆರೆಸ್ಸೆಸ್‌ನ ಕೇಶವಕೃಪಾ ಕಚೇರಿಗೆ ಹೋಗಿ ಸಭೆ ನಡೆಸಿದ್ದಾರೆ ಎಂದು ನನ್ನ ಅನುಮಾನ. ಯಾಕೆಂದರೆ, ಇಂದು ಸಿದ್ದರಾಮಯ್ಯ ಅವರ ರಾಜ್ಯದ 2025-26 ಆರ್ಥಿಕ ವರ್ಷದ ಬಜೆಟ್ ಮಂಡಿಸಿ ಮುಗಿಸುತ್ತಿದ್ದಂತೆ ಬಿಜೆಪಿ ಮತ್ತು ಕನ್ನಡ ಮಾಧ್ಯಮಗಳು ಒಂದೇ ಧ್ವನಿಯಲ್ಲಿ ಮಾತನಾಡುತ್ತಿವೆ. ಮುಖ್ಯಮಂತ್ರಿ ಮಂಡಿಸಿದ ಬಜೆಟ್ ಅನ್ನು ವಿಶ್ಲೇಷಣೆ ಮಾಡಿದರೆ ಇವರುಗಳ ಒಂದೇ ಧ್ವನಿಯನ್ನು ಒಪ್ಪಬಹುದಿತ್ತು. ಆದರೆ, ಕನ್ನಡ ಮಾಧ್ಯಮಗಳು ಮತ್ತು ವಿಪಕ್ಷ ಬಿಜೆಪಿ ಬಜೆಟ್‌ ಅನ್ನು ಕೋಮುದೃಷ್ಠಿಯಿಂದ ನೋಡುತ್ತಾ ಎಂದಿನಂತೆ ಮುಸ್ಲಿಮರ ವಿರುದ್ಧ ನಂಜು ಕಾರಿಕೊಳ್ಳುತ್ತಿವೆ.

ರಾಜ್ಯ ಸರ್ಕಾರದ ಬಜೆಟ್ ವಿಶ್ಲೇಷಣೆ ಮಾಡುವುದು, ಅದರಲ್ಲಿನ ಮಿತಿಗಳ ಬಗ್ಗೆ ಟೀಕೆ ಮಾಡುವುದು ವಿಪಕ್ಷವಾಗಿ ಬಿಜೆಪಿ ಮತ್ತು ಮಾಧ್ಯಮಗಳ ಕರ್ತವ್ಯವೆ ಆಗಿದೆ. ಆದರೆ ಈ ಮಾಧ್ಯಮಗಳು ಅವುಗಳನ್ನು ಬಿಟ್ಟು ಬಜೆಟ್‌ ಅನ್ನು ಕೂಡಾ ಕೋಮುವಾದಿ ನೆಲೆಯಲ್ಲಿ ಮಾತನಾಡುತ್ತಾ, ಈಗಾಗಲೆ ಕುಗ್ಗಿರುವ ಈ ರಾಜ್ಯದ ಮುಸ್ಲಿಮರನ್ನು ಮತ್ತಷ್ಟು ಅವಮಾನಿಸುತ್ತಾ ಇವೆ. ಸಿದ್ದರಾಮಯ್ಯ ಮಂಡಿಸಿದ್ದು

ಮುಖ್ಯಮಂತ್ರಿ ಸಿದ್ದರಾಮಯ್ಯಾ ಅವರ ಬಜೆಟ್ ‘ಸಾಬ್ರ’ ಬಜೆಟ್ ಎಂಬುವುದು ನಿಜವೆ?

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಿದ ಬಜೆಟ್‌ ಮೊತ್ತ ನಾಲ್ಕು ಲಕ್ಷ ಕೋಟಿ ರೂಪಾಯಿಗಳಾಗಿದೆ. ಇದನ್ನು ಅಂಕೆಯಲ್ಲಿ ಬರೆದರೆ, 4,095,490,000,000 ಆಗುತ್ತದೆ. ಮುಸ್ಲಿಮರು ಸೇರಿ ಈ ರಾಜ್ಯದ ಎಲ್ಲಾ ಅಲ್ಪ ಸಂಖ್ಯಾತರಿಗೆ ಮೀಸಲಿಟ್ಟ ಹಣ ಕೇವಲ 1,300 ಕೋಟಿ ರೂಪಾಯಿಗಳಾಗಿವೆ. ರಾಜ್ಯದಲ್ಲಿ ಅಲ್ಪ ಸಂಖ್ಯಾತರು ಎಂದರೆ ಕೇವಲ ಮುಸ್ಲಿಮರು ಮಾತ್ರವಲ್ಲ. 2% ಕ್ರಿಶ್ಚಿಯನ್ನರು, 1% ಜೈನರು, ಬೌದ್ಧರು, ಸಿಖ್ಖರು, ಪಾರ್ಸಿಗಳು ಇದ್ದಾರೆ. ಈ ವಿಚಾರ ಬಿಜೆಪಿಗಾಗಲಿ, ಕನ್ನಡ ಮಾಧ್ಯಮಗಳಿಗಾಗಲಿ ತಿಳಿದಿಲ್ಲ ಎಂಬುವುದೇನಿಲ್ಲ.

ಮುಸ್ಲಿಮರು ಈ ರಾಜ್ಯದ 1 ಕೋಟಿ(13%)ಯಷ್ಟು ಜನಸಂಖ್ಯೆ ಹೊಂದಿರುವ ದೊಡ್ಡ ಸಮುದಾಯ. ಮುಖ್ಯಮಂತ್ರಿ ಮಂಡಿಸಿದ ನಾಲ್ಕು ಲಕ್ಷ ಕೋಟಿ ರೂಪಾಯಿಯ ಬೃಹತ್ ಬಜೆಟ್‌ನಲ್ಲಿ, ನೇರವಾಗಿ ಮುಸ್ಲಿಮರಿಗೆ ಎಂದು ಮೀಸಲಿಟ್ಟ ಅನುದಾನ ಕೇವಲ 250 ಕೋಟಿ ರೂಪಾಯಿಗಳು ಮಾತ್ರವಾಗಿದೆ. ಇದು ಬಜೆಟ್‌ನ 0.061% ಮಾತ್ರ. ಉಳಿದಂತೆ 1000 ಕೋಟಿ ರೂಪಾಯಿಗಳನ್ನು ಅಲ್ಪಸಂಖ್ಯಾತರಿಗೆ ಸರ್ಕಾರ ಮೀಸಲಿಟ್ಟಿದೆ.

ಮುಸ್ಲಿಮರಿಗೆ ನೇರವಾಗಿ ನೀಡಿರುವ 250 ಕೋಟಿ ಹಾಗೂ 1000 ಕೋಟಿ ರೂಪಾಯಿಗಳು ಸೇರಿಸಿ 1300 ಕೋಟಿಯಾಗುತ್ತದೆ. ಇತರ ಅಲ್ಪಸಂಖ್ಯಾತ ಸಮುದಾಯದ ಎಲ್ಲಾ ಪಾಲನ್ನು ಮುಸ್ಲಿಮರೆ ಪಡೆದರೂ, ಅಲ್ಲಿ ಸಿಗುವುದು ಬಜೆಟ್‌ನ ಪಾಲು 0.318% ಅಷ್ಟೇ. ಬಜೆಟ್‌ನ ಮೊತ್ತದಲ್ಲಿ ಒಂದು ಶೇಖಡ ಕೂಡಾ ಇಲ್ಲ. ಕನಿಷ್ಠ ಪಕ್ಷ ಅರ್ಧ ಶೇಖಡಾ ಕೂಡಾ ಇಲ್ಲ.

ಈ ರಾಜ್ಯದಲ್ಲೆ ದುಡಿದು, ಇಲ್ಲೆ ಖರ್ಚು ಮಾಡಿ ತೆರಿಗೆ ಕಟ್ಟುವ, ಈ ರಾಜ್ಯದ ಅಭಿವೃದ್ಧಿಗೆ ಪಾಲು ನೀಡುವ 13% ಮುಸ್ಲಿಮರಿಗೆ ರಾಜ್ಯ ಕನಿಷ್ಠ ಪಕ್ಷ ಅರ್ಧ ಶೇಖಡಾ ಕೂಡಾ ವಾಪಾಸು ನೀಡುತ್ತಾ ಇಲ್ಲ.‌ ಈ ಅನ್ಯಾಯವನ್ನು ವಿಪಕ್ಷಗಳು ಮತ್ತು ಮಾಧ್ಯಮಗಳು ಕೇಳಬೇಕು ಅಲ್ಲವೆ?  ಬಿಜೆಪಿ ರೀತಿಯ ವಿಪಕ್ಷವಾಗಲಿ, ಮಾಧ್ಯಮವಾಗಲಿ ಮೇಲಿನಂತೆ ರಾಜ್ಯ ಸರ್ಕಾರ ಮಾಡುತ್ತಿರುವ ಅನ್ಯಾಯದ ಬಗ್ಗೆ ಮಾತನಾಡಬೇಕೆ ವಿನಃ, ಅವಮಾನಿತ, ಅನುಮಾನಿತ ಮತ್ತು ಹಿಂದುಳಿದ ಸಮುದಾಯವನ್ನು ಮತ್ತಷ್ಟು ಕುಗ್ಗಿಸುವುದಲ್ಲ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  Karnataka Budget 2025-26 | ಶಿಕ್ಷಣ ಕ್ಷೇತ್ರದ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Karnataka Budget 2025-26 | ಶಿಕ್ಷಣ ಕ್ಷೇತ್ರದ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...