Homeಕರ್ನಾಟಕಹಲಾಲ್ ಎಂದು ರಾಜಕೀಯ ಮಾಡಿದ್ದ ಬಿಜೆಪಿಯನ್ನು ರಾಜ್ಯದ ಜನತೆ ಹಿಂದೆಯೆ ಜಟ್ಕಾ ಕಟ್ ಮಾಡಿ ಬಿಸಾಡಿದ್ದಾರೆ...

ಹಲಾಲ್ ಎಂದು ರಾಜಕೀಯ ಮಾಡಿದ್ದ ಬಿಜೆಪಿಯನ್ನು ರಾಜ್ಯದ ಜನತೆ ಹಿಂದೆಯೆ ಜಟ್ಕಾ ಕಟ್ ಮಾಡಿ ಬಿಸಾಡಿದ್ದಾರೆ – ಸಚಿವ ಪ್ರಿಯಾಂಕ್ ಖರ್ಗೆ

- Advertisement -
- Advertisement -

ಪ್ರಜಾಪ್ರಭುತ್ವದಲ್ಲಿ ಜವಾಬ್ದಾರಿಯುತ ವಿರೋಧ ಪಕ್ಷವು ನೀತಿಗಳು ಮತ್ತು ನಿರ್ಧಾರಗಳ ಕುರಿತು ಸರ್ಕಾರವನ್ನು ರಚನಾತ್ಮಕವಾಗಿ ಪ್ರಶ್ನಿಸುತ್ತವೆ. ಆದರೆ, ನಮ್ಮ ಸರ್ಕಾರದ ಬಜೆಟ್‌ನಲ್ಲಿ ರಚನಾತ್ಮಕ ಟೀಕೆಗಳಿಗೆ ಅವಕಾಶವೇ ಇಲ್ಲದಿರುವಾಗ ರಾಜ್ಯದ ಬಿಜೆಪಿ ನಾಯಕರು ಹಲಾಲ್ ಬಜೆಟ್ ಎಂಬ ಟೊಳ್ಳು ಟೀಕೆಯ ಮೊರೆ ಹೋಗಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಶುಕ್ರವಾರ ಹೇಳಿದ್ದಾರೆ.

ಸ್ಟಿರಿಯೋಟೈಪ್ ಟೀಕೆಯ ಮೂಲಕ ಬಿಜೆಪಿಗರು ತಮ್ಮ ಬೌದ್ಧಿಕ ದಿವಾಳಿತನವನ್ನು ತಾವೇ ಪ್ರದರ್ಶನಕ್ಕೆ ಇಟ್ಟಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು ಪ್ರಿಯಾಂಕ್ ಖರ್ಗೆ, ಅವರು ಮೌಲ್ಯಯುತ ರಾಜಕಾರಣಕ್ಕೆ ತಿಲಾಂಜಲಿ ಇಟ್ಟಿದ್ದಾರೆ ಎಂದು ಹೇಳಿದ್ದಾರೆ.

ಬಜೆಟ್ ಬಗ್ಗೆ ಅರ್ಥಪೂರ್ಣ ಚರ್ಚೆ ಮಾಡಲು ಸಾಮರ್ಥ್ಯವಿಲ್ಲದ ಬಿಜೆಪಿಗೆ #HalalBudget ಕೊನೆಯ ಅಸ್ತ್ರವಾಗಿದೆ. ಹಿಂದೆ ಹೀಗೆಯೇ ಹಲಾಲ್, ಜಟ್ಕಾ ಕಟ್ ಎಂಬ ವಿಭಜನಾತ್ಮಕ ರಾಜಕೀಯ ಮಾಡಿದ್ದ ಬಿಜೆಪಿಯನ್ನು ರಾಜ್ಯದ ಜನತೆ ಜಟ್ಕಾ ಕಟ್ ಮಾಡಿ ಬಿಸಾಡಿದ್ದಾರೆ ಎಂದು ಅವರು ವ್ಯಂಗ್ಯವಾಡಿದ್ದಾರೆ.

ಅಲ್ಲದೆ, ಬಿಜೆಪಿ ಪಕ್ಷವು ಬಣ ಬಡಿದಾಟದ ಹಲಾಲ್ ಕಟ್‌ನಿಂದಾಗಿ ಹಲವು ತುಂಡುಗಳಾಗಿದೆ. ಬಜೆಟ್ ಬಗ್ಗೆ ರಚನಾತ್ಮಕ ಟೀಕೆಗಳನ್ನು ಎದುರಿಸಲು ನಾವು ಸದಾ ಸಿದ್ದರಿದ್ದೇವೆ. ಚರ್ಚೆಗೆ ಮುಕ್ತವಾಗಿದ್ದು, ಉತ್ತರಿಸಲು ತಯಾರಿದ್ದೇವೆ. ಆದರೆ ಬಿಜೆಪಿ ಚರ್ಚೆಗೆ ಸಿದ್ದವಿದೆಯೇ? ಎಂದು ಅವರು ಪ್ರಶ್ನಿಸಿದ್ದಾರೆ.

ಕರ್ನಾಟಕದ ಸಮಗ್ರ ಏಳಿಗೆಗೆ, ಆರ್ಥಿಕ ಸುಸ್ಥಿರತೆಗೆ, ಸಾಮಾಜಿಕ ಉನ್ನತಿಗೆ ನಮ್ಮ ಬಜೆಟ್ ಪೂರಕವಾಗಿರುವುದನ್ನು ಸಹಿಸದ ಬಿಜೆಪಿ ಸದಾ ಕನ್ನಡಿಗರನ್ನು ಅವಮಾನಿಸುವ ರಾಜಕಾರಣದಲ್ಲಿ ತೊಡಗಿರುವುದು ದುರಂತ. ಅರ್ಥಪೂರ್ಣ ಹೊಣೆಗಾರಿಕೆ ಪ್ರದರ್ಶಿಸಬೇಕಾದ ವಿರೋಧ ಪಕ್ಷವು ನೈತಿಕ ಹಾಗೂ ಬೌದ್ಧಿಕ ದಿವಾಳಿತನ ಪ್ರದರ್ಶಿಸಿದಾಗ ರಾಜಕೀಯ ವ್ಯವಸ್ಥೆ ಮಾತ್ರವಲ್ಲ ಸಾಮಾಜಿಕ ಸ್ವಾಸ್ಥ್ಯವೂ ಕೆಡುತ್ತದೆ. ಇದಕ್ಕೆ ಬಿಜೆಪಿಯೇ ಸ್ಪಷ್ಟ ಉದಾಹರಣೆ ಎಂದು ಅವರು ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮುಡಾ ಪ್ರಕರಣ : ಸಿಎಂ ಪತ್ನಿ ಪಾರ್ವತಿ, ಸಚಿವ ಬೈರತಿ ಸುರೇಶ್ ವಿರುದ್ಧದ ಈಡಿ ಸಮನ್ಸ್​ ರದ್ದುಗೊಳಿಸಿದ ಹೈಕೋರ್ಟ್

ಮುಡಾ ಪ್ರಕರಣ : ಸಿಎಂ ಪತ್ನಿ ಪಾರ್ವತಿ, ಸಚಿವ ಬೈರತಿ ಸುರೇಶ್ ವಿರುದ್ಧದ ಇಡಿ ಸಮನ್ಸ್​ ರದ್ದುಗೊಳಿಸಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...