Homeಕರ್ನಾಟಕಮುಡಾ ಪ್ರಕರಣ : ಸಿಎಂ ಪತ್ನಿ ಪಾರ್ವತಿ, ಸಚಿವ ಬೈರತಿ ಸುರೇಶ್ ವಿರುದ್ಧದ ಇಡಿ ಸಮನ್ಸ್​...

ಮುಡಾ ಪ್ರಕರಣ : ಸಿಎಂ ಪತ್ನಿ ಪಾರ್ವತಿ, ಸಚಿವ ಬೈರತಿ ಸುರೇಶ್ ವಿರುದ್ಧದ ಇಡಿ ಸಮನ್ಸ್​ ರದ್ದುಗೊಳಿಸಿದ ಹೈಕೋರ್ಟ್

- Advertisement -
- Advertisement -

ಆಪಾದಿತ ಮುಡಾ ನಿವೇಶನ ಹಂಚಿಕೆ ಅಕ್ರಮ ಪ್ರಕರಣದ ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಹಾಗೂ ಸಚಿವ ಬೈರತಿ ಸುರೇಶ್​ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ನೀಡಿದ್ದ ಸಮನ್ಸ್​ ರದ್ದುಗೊಳಿಸಿ ಹೈಕೋರ್ಟ್ ಇಂದು (ಮಾ.7) ಆದೇಶಿಸಿದೆ.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಹಾಜರಾಗಲು ಪಾರ್ವತಿ ಹಾಗೂ ಬೈರತಿ ಸುರೇಶ್​ ಅವರಿಗೆ ಇಡಿ ಸಮನ್ಸ್​ ಜಾರಿ ಮಾಡಿತ್ತು. ಅದನ್ನು ರದ್ದುಪಡಿಸುವಂತೆ ಕೋರಿ ಇಬ್ಬರು ಹೈಕೋರ್ಟ್​ ಗೆ ಪ್ರತ್ಯೇಕ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್​, ಇಡಿ ಸಮನ್ಸ್​ಗೆ ತಡೆಯಾಜ್ಞೆ ನೀಡಿತ್ತು. ಇಂದು ಸಮನ್ಸ್​ ರದ್ದು ಮಾಡಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ಆದೇಶಿಸಿದೆ. ಇದರಿಂದ ಇಬ್ಬರು ನಿರಾಳರಾಗಿದ್ದಾರೆ.

ಸಿಎಂ ಪತ್ನಿ ಪಾರ್ವತಿ ಅವರು ಅಕ್ಟೋಬರ್ 1, 2024 ರಂದು ವಿವಾದಿತ 14 ನಿವೇಶನಗಳನ್ನು ಮುಡಾಗೆ ಹಿಂದಿರುಗಿಸಿದ್ದಾರೆ. ಈ 14 ನಿವೇಶನಗಳಲ್ಲದೆ 1,708 ನಿವೇಶನಗಳ ಬಗ್ಗೆಯೂ ತನಿಖೆ ನಡೆಯುತ್ತಿದೆ. ಈಗಾಗಲೇ 160 ನಿವೇಶನಗಳನ್ನು ಇಡಿ ತಾತ್ಕಾಲಿಕ ಜಪ್ತಿ ಮಾಡಿದೆ. ತನ್ನ ಕಾರ್ಯವ್ಯಾಪ್ತಿ ಮೀರಿ ಇಡಿ ಪರ್ಯಾಯ ತನಿಖೆ ನಡೆಸುತ್ತಿದೆ.

ಇಡಿ ತಾತ್ಕಾಲಿಕ ಜಪ್ತಿ ಆದೇಶದಲ್ಲಿ ಹಲವು ಅಂಶಗಳನ್ನು ಪ್ರಸ್ತಾಪಿಸಿದೆ. ಭೂಸ್ವಾಧೀನ, ಭೂಪರಿವರ್ತನೆ ಇತ್ಯಾದಿಗಳ ಬಗ್ಗೆಯೂ ತನಿಖೆ ನಡೆಸಿದೆ. ಲೋಕಾಯುಕ್ತ ಪೊಲೀಸರ ತನಿಖಾ ವ್ಯಾಪ್ತಿಯಲ್ಲಿ ಇಡಿ ಪ್ರವೇಶಿಸಿದೆ. ಮುಡಾಗೆ ಹಿಂತಿರುಗಿಸಿರುವ 14 ನಿವೇಶನಗಳನ್ನು ಇಡಿ ಜಪ್ತಿ ಮಾಡಿಲ್ಲ. ಆದರೆ, ಇತರೆ 160 ನಿವೇಶನಗಳನ್ನು ಜಪ್ತಿ ಮಾಡಿಕೊಂಡಿದೆ.

ಇನ್ನು ಮುಡಾ ಪ್ರಕರಣದಲ್ಲಿ ಈಗಾಗಲೇ ಲೋಕಾಯುಕ್ತ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ತನಿಖೆಯಲ್ಲಿ ಯಾವುದೇ ಅಕ್ರಮ ಕಂಡು ಬಂದಿಲ್ಲವೆಂದು ನ್ಯಾಯಾಲಯಕ್ಕೆ ಮಧ್ಯಂತರ ವರದಿ ನೀಡಿದ್ದಾರೆ.

ಸಿದ್ದರಾಮಯ್ಯ ಮಂಡಿಸಿದ್ದು ‘ಸಾಬ್ರ’ ಬಜೆಟ್? ಮಾಧ್ಯಮ, ಬಿಜೆಪಿ ಆರೋಪ ನಿಜವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...