Homeದಲಿತ್ ಫೈಲ್ಸ್ಮೀರತ್| ಅತ್ಯಾಚಾರದ ವಿಡಿಯೊ ತೋರಿಸಿ ದಲಿತ ಯುವತಿಯ ವಿವಾಹ ಮುರಿದ ದುರುಳ

ಮೀರತ್| ಅತ್ಯಾಚಾರದ ವಿಡಿಯೊ ತೋರಿಸಿ ದಲಿತ ಯುವತಿಯ ವಿವಾಹ ಮುರಿದ ದುರುಳ

- Advertisement -
- Advertisement -

ಆಗಸ್ಟ್ 2023 ರಲ್ಲಿ ಪ್ರಬಲ ಜಾತಿ ವ್ಯಕ್ತಿಯಿಂದ ಅತ್ಯಾಚಾರಕ್ಕೊಳಗಾಗಿದ್ದ 21 ವರ್ಷದ ದಲಿತ ಮಹಿಳೆಯನ್ನು ನಂತರ ಸ್ಥಳೀಯ ಪಂಚಾಯತ್‌ನಲ್ಲಿ ರಾಜಿ ಮಾಡಿಕೊಳ್ಳಲು ಒತ್ತಾಯಿಸಲಾಯಿಸಿದ ಬಳಿಕ, ದೂರು ನೀಡಿದಂತೆ ₹2.5 ಲಕ್ಷಗಳನ್ನು ನೀಡಲಾಗಿತ್ತು.

ಆದರೆ, ಈ ರಾಜಿ-ಪಂಚಾಯ್ತಿಂದ ಆಕೆಯ ಸಂಕಷ್ಟ ಅಂತ್ಯವಾಗಲಿಲ್ಲ. ಕಿರುಕುಳ ಮತ್ತು ಸಾಮಾಜಿಕ ದಬ್ಬಾಳಿಕೆಯಿಂದ ತಪ್ಪಿಸಿಕೊಳ್ಳಲು ಸಂತ್ರಸ್ತೆ ಕುಟುಂಬ ಊರನ್ನೇ ಬಿಟ್ಟು ಬೇರೆಡೆ ಜೀವನ ಕಂಡುಕೊಂಡಿದ್ದರು. ದೂರದ ಊರಲ್ಲಿ ಸದ್ದಿಲ್ಲದೆ ಆಕೆಯ ಮದುವೆ ಏರ್ಪಡಿಸಿದಾಗ, ಆರೋಪಿಯು ಅದರ ಬಗ್ಗೆ ತಿಳಿದುಕೊಂಡು ಲೈಂಗಿಕ ದೌರ್ಜನ್ಯದ ವೀಡಿಯೊವನ್ನು ವರನ ಕುಟುಂವಕ್ಕೆ ಕಳುಹಿಸಿದ್ದಾನೆ. ಪರಿಣಾಮ, ಆಕೆಯ ನಿಶ್ಚಿತಾರ್ಥದ ನಂತರ ಮದುವೆಯನ್ನು ರದ್ದುಗೊಳಿಸಲಾಯಿತು.

ಮದುವೆ ರದ್ದಾದ ಬಳಿಕ ಆಕೆಯ ಕುಟುಂಬದ ಸ್ಥಿತಿ ಇನ್ನೂ ಕೆಟ್ಟದಾಗಿದೆ; ಆರೋಪಿಯ ಕುಟುಂಬವು ಹಣವನ್ನು ಹಿಂದಿರುಗಿಸುವಂತೆ ಒತ್ತಾಯಿಸಿತು. ಆಗ ಸಂತ್ರಸ್ತೆ ತಂದೆ, ಒತ್ತಡ ಮತ್ತು ಬೆದರಿಕೆಗಳನ್ನು ಸಹಿಸಲಾರದೆ, ಹಾಪುರ್ ಪೊಳಿಸ್ ವರಿಷ್ಠಾಧಿಕಾರಿ ಕುನ್ವರ್ ಜ್ಞಾನಂಜಯ್ ಸಿಂಗ್ ಅವರನ್ನು ಭೇಟಿಯಾದರು. ಅಪರಾಧ ನಡೆದ ಸುಮಾರು ಎರಡು ವರ್ಷಗಳ ನಂತರ ಕಳೆದ ಗುರುವಾರ ಎಫ್‌ಐಆರ್ ದಾಖಲಿಸಲಾಯಿತು.

“ನನ್ನ ಮಗಳ ಮೇಲೆ ದೌರ್ಜನ್ಯ ನಡೆಸಿದ ನಂತರ, ಪಂಚಾಯತ್ ಕರೆಯಲಾಯಿತು, ಅಲ್ಲಿ ನಾವು ₹2.5 ಲಕ್ಷ ಗಳಿಗೆ ಪ್ರಕರಣವನ್ನು ಇತ್ಯರ್ಥಪಡಿಸಿಕೊಳ್ಳುವಂತೆ ಒತ್ತಾಯಿಸಲಾಯಿತು. ನಾವು ಗ್ರಾಮವನ್ನು ಬಿಟ್ಟು ಬೇರೆ ಸ್ಥಳಕ್ಕೆ ಹೋದೆವು. ಇತ್ತೀಚೆಗೆ ನನ್ನ ಮಗಳ ಮದುವೆಯನ್ನು ಒಬ್ಬ ವ್ಯಕ್ತಿಯೊಂದಿಗೆ ಏರ್ಪಡಿಸಿದೆವು, ಆದರೆ ಆರೋಪಿಯು ನಿಶ್ಚಿತಾರ್ಥದ ದಿನ ಅಶ್ಲೀಲ ವೀಡಿಯೊ ಕಳುಹಿಸಿದನು. ಇದರಿಂದಾಗಿ ಆಕೆಯ ಮದುವೆಯನ್ನು ರದ್ದುಗೊಳಿಸಲಾಯಿತು; ಈಗ ನಾವು ಏನು ಮಾಡಬೇಕು” ಎಂದು ಪ್ರಶ್ನಿಸಿದ್ದಾರೆ.

ಆರೋಪಿಯ ಕುಟುಂಬವು ತನ್ನ ಮೇಲೆ ಇತ್ತೀಚೆಗೆ ಹಲ್ಲೆ ನಡೆಸಿ ಬಟ್ಟೆ ಬಿಚ್ಚಿತು ಎಂದು ಸಂತ್ರಸ್ತೆಯ ತಾಯಿ ಹೇಳಿದ್ದಾರೆ. “ಅವರು ಹಣವನ್ನು ಹಿಂತಿರುಗಿಸುವಂತೆ ನಮ್ಮ ಬಳಿಗೆ ಬಂದು ಅನುಚಿತವಾಗಿ ವರ್ತಿಸಲು ಪ್ರಾರಂಭಿಸಿದರು. ನನ್ನ ಹೆಂಡತಿ ಅವರನ್ನು ವಿರೋಧಿಸಿದಾಗ, ಆಕೆಯ ಮೇಲೆ ಹಲ್ಲೆ ನಡೆಸಲಾಯಿತು. ಆರೋಪಿಯು ತನ್ನ ಬಟ್ಟೆಗಳನ್ನು ಹರಿದು ಹಾಕಿದನು” ಎಂದು ಯುವತಿಯ ತಂದೆ ಪೊಲೀಸರಿಗೆ ತಿಳಿಸಿದ್ದಾರೆ.

“ಆರಂಭಿಕ ಘಟನೆಯನ್ನು ನನಗೆ ವರದಿ ಮಾಡಲಾಗಿಲ್ಲ. ಈಗ, ಲಿಖಿತ ದೂರು ಬಂದಿದ್ದು, ಅದರ ನಂತರ ಐದು ಪುರುಷರ ವಿರುದ್ಧ ಐಪಿಸಿ ಸೆಕ್ಷನ್ 376 (ಅತ್ಯಾಚಾರ), 354 (ದಾಳಿ ಅಥವಾ ಕ್ರಿಮಿನಲ್ ಬಲ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ” ಎಂದು ಹಫೀಜ್‌ಪುರ ಎಸ್‌ಎಚ್‌ಒ ಆಶಿಶ್ ಕುಮಾರ್ ಹೇಳಿದರು.

“ಈ ವಿಷಯದ ತನಿಖೆಗಾಗಿ ತಂಡಗಳನ್ನು ರಚಿಸಲಾಗಿದ್ದು, ಸಂಬಂಧಪಟ್ಟವರನ್ನು ಬಂಧಿಸಲಾಗುವುದು” ಎಂದು ಎಸ್‌ಎಚ್‌ಒ ಹೇಳಿದರು.

550 ದಲಿತರಿಗೆ ಶಿವ ದೇಗುಲಕ್ಕೆ ಪ್ರವೇಶ ನಿರ್ಬಂಧ; ಕ್ರಮ ತೆಗೆದುಕೊಳ್ಳದ ಮಮತಾ ಬ್ಯಾನರ್ಜಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ.

ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಹೋರಾಟ...

ತಮಿಳುನಾಡು| ಮರ್ಯಾದೆಗೇಡು ಹತ್ಯೆ ಶಂಕೆ; 25 ವರ್ಷದ ದಲಿತ ಯುವಕನ ಭೀಕರ ಕೊಲೆ

ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನೊಬ್ಬನನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ಮರ್ಯಾದೆಗೇಡು ಕೊಲೆಯ ಶಂಕೆ ವ್ಯಕ್ತವಾಗಿದೆ. ಆಗಸ್ಟ್ 16 ರಂದು ರಾತ್ರಿ ಚೆಂಗಲ್ಪಟ್ಟುವಿನ ಕೇಳಂಬಾಕ್ಕಂ ನಿವಾಸಿ ಪ್ರವೀಣ್ ಅವರ ಮೇಲೆ ದಾಳಿಕೋರರಾದ...

44 ಲಕ್ಷ ಮತದಾರರಿಗೆ ನೋಟಿಸ್: BLA ಗಳಿಗೆ ಪಟ್ಟಿ ನೀಡಿ, ಪಾರದರ್ಶಕತೆ ಕಾಯ್ದುಕೊಳ್ಳಲು ‘ಜಾಗೃತ ಕರ್ನಾಟಕ’ ಒತ್ತಾಯ

ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಪ್ರಕಟಗೊಳ್ಳುತ್ತಿರುವ ಕರಡು ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಎಚ್ಚರವಹಿಸಬೇಕು ಹಾಗೂ ನೋಟಿಸ್ ಪ್ರಕ್ರಿಯೆಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಆಗ್ರಹಿಸಿ ‘ಜಾಗೃತ...

ಕೇರಳ ಬಿಜೆಪಿಗೆ ಹಿರಿಯ ನಟ ಎಸ್. ದೇವನ್ ಗುಡ್‌ಬೈ: ‘ದಳಪತಿ’ ವಿಜಯ್ ಟಿವಿಕೆ ಪಕ್ಷ ಸೇರಲು ಒಲವು!

ಮಲಯಾಳಂ ನಟ ಹಾಗೂ ರಾಜಕಾರಣಿ ಎಸ್. ದೇವನ್ ಅವರು ತಮಿಳುನಾಡಿನ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷವನ್ನು ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಕೇರಳ...

ಮತ್ತೆ ಜೈಲಿನಿಂದ ಹೊರಬಂದ ಅತ್ಯಾಚಾರಿ ರಾಮ್ ರಹೀಮ್! 6 ವರ್ಷದಲ್ಲಿ 17ನೇ ಬಾರಿ ಪೆರೋಲ್

ನವದೆಹಲಿ/ರೋಹ್ಟಕ್: ಇಬ್ಬರು ಮಹಿಳಾ ಶಿಷ್ಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಹರಿಯಾಣ ಸರ್ಕಾರ ಪುನಃ...

ಎಸ್‌ಐಆರ್‌ ಕರಡು ತಿರಸ್ಕರಿಸಿದ ನಾಗರಿಕ ಸಂಘಟನೆಗಳು; ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ

ಆಗಸ್ಟ್ 24 ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಮತದಾರರ ಎಸ್‌ಐಆರ್‌ ಕರಡು ಪಟ್ಟಿಯನ್ನು ಕರ್ನಾಟಕದ ನಾಗರಿಕ ಸಂಘಟನೆಗಳು ತಿರಸ್ಕರಿಸಿದ್ದು, ಲಕ್ಷಾಂತರ ಮತದಾರರಿಗೆ ನೋಟಿಸ್‌ ಕೊಡಲು ಸಿದ್ಧತೆ ನಡೆಸಿರುವ ಕೇಂದ್ರ ಚುನಾವಣಾ...

‘ಕೇಂದ್ರ ಸರ್ಕಾರ ಜಾತಿ ಗಣತಿಗೆ ರೂಪಿಸಿರುವ ಪ್ರಶ್ನಾವಳಿ ವಿಧಾನ ದಾರಿತಪ್ಪಿಸುವಂತಿವೆ’: ಹೊಸ ಪ್ರಶ್ನಾವಳಿ ರಚಿಸಲು ಪ್ರಧಾನಿ ಮೋದಿಗೆ ಖರ್ಗೆ-ರಾಹುಲ್ ಪತ್ರ

ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ದತ್ತಾಂಶ ಸಂಗ್ರಹಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ರೂಪಿಸಿರುವ ಪ್ರಶ್ನಾವಳಿಯ ವಿಧಾನವು ಅತ್ಯಂತ ದಾರಿತಪ್ಪಿಸುವಂತಿದೆ ಎಂದು ಗಂಭೀರ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭಾ ವಿರೋಧ ಪಕ್ಷದ ನಾಯಕ...

ಪತ್ರಕರ್ತ ಅಭಿಷೇಕ್ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಸುಪ್ರೀಂ ಕೋರ್ಟ್ ಆದೇಶ

ರಾಮ ಮಂದಿರ ದೇಣಿಗೆ ಅಕ್ರಮದ ಕುರಿತು ವರದಿ ಮಾಡಿದ್ದ ಪತ್ರಕರ್ತ ಅಭಿಷೇಕ್ ಉಪಾಧ್ಯಾಯ ಅವರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಂತರ ಆದೇಶ ನೀಡಿದ್ದು,...

2027ರ ಜನಗಣತಿಯಲ್ಲಿ ಪೋಷಕರ ಧರ್ಮ, ಜನ್ಮಸ್ಥಳದ ವಿವರ ಏಕೆ? ಕೇಂದ್ರದ ವಿರುದ್ಧ ಸಿಪಿಐ(ಎಂ) ಆಕ್ರೋಶ

2027ರ ಜನಗಣತಿ ಪ್ರಶ್ನಾವಳಿಯಲ್ಲಿ ಪೋಷಕರ ಧರ್ಮ ಹಾಗೂ ಜನ್ಮಸ್ಥಳದ ಕುರಿತಾದ ವಿವರಗಳನ್ನು ಸಂಗ್ರಹಿಸಲು ಉದ್ದೇಶಿಸಿರುವುದರ ವಿರುದ್ಧ ಸಿಪಿಐ(ಎಂ) ತೀವ್ರ ಆತಂಕ ವ್ಯಕ್ತಪಡಿಸಿದ್ದು, ಈ ಕ್ರಮವು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಜಾರಿಗೆ ತರುವ...

ಟಿಎಂಸಿ ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಶಾಕ್: 20 ಎಂಪಿಗಳಿಗೆ ನೋಟಿಸ್ ಜಾರಿ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು, ಎನ್‌ಸಿಪಿಐ (NCPI) ಎಂಬ ಅಷ್ಟಾಗಿ ಜನಪ್ರಿಯವಲ್ಲದ ಪಕ್ಷದೊಂದಿಗೆ ವಿಲೀನಗೊಂಡು ಎನ್‌ಡಿಎ ಒಕ್ಕೂಟವನ್ನು ಸೇರಿಕೊಂಡಿರುವ 20 ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ. ಟಿಎಂಸಿ ಪ್ರಧಾನ...