Homeದಲಿತ್ ಫೈಲ್ಸ್ಮೀರತ್| ಅತ್ಯಾಚಾರದ ವಿಡಿಯೊ ತೋರಿಸಿ ದಲಿತ ಯುವತಿಯ ವಿವಾಹ ಮುರಿದ ದುರುಳ

ಮೀರತ್| ಅತ್ಯಾಚಾರದ ವಿಡಿಯೊ ತೋರಿಸಿ ದಲಿತ ಯುವತಿಯ ವಿವಾಹ ಮುರಿದ ದುರುಳ

- Advertisement -
- Advertisement -

ಆಗಸ್ಟ್ 2023 ರಲ್ಲಿ ಪ್ರಬಲ ಜಾತಿ ವ್ಯಕ್ತಿಯಿಂದ ಅತ್ಯಾಚಾರಕ್ಕೊಳಗಾಗಿದ್ದ 21 ವರ್ಷದ ದಲಿತ ಮಹಿಳೆಯನ್ನು ನಂತರ ಸ್ಥಳೀಯ ಪಂಚಾಯತ್‌ನಲ್ಲಿ ರಾಜಿ ಮಾಡಿಕೊಳ್ಳಲು ಒತ್ತಾಯಿಸಲಾಯಿಸಿದ ಬಳಿಕ, ದೂರು ನೀಡಿದಂತೆ ₹2.5 ಲಕ್ಷಗಳನ್ನು ನೀಡಲಾಗಿತ್ತು.

ಆದರೆ, ಈ ರಾಜಿ-ಪಂಚಾಯ್ತಿಂದ ಆಕೆಯ ಸಂಕಷ್ಟ ಅಂತ್ಯವಾಗಲಿಲ್ಲ. ಕಿರುಕುಳ ಮತ್ತು ಸಾಮಾಜಿಕ ದಬ್ಬಾಳಿಕೆಯಿಂದ ತಪ್ಪಿಸಿಕೊಳ್ಳಲು ಸಂತ್ರಸ್ತೆ ಕುಟುಂಬ ಊರನ್ನೇ ಬಿಟ್ಟು ಬೇರೆಡೆ ಜೀವನ ಕಂಡುಕೊಂಡಿದ್ದರು. ದೂರದ ಊರಲ್ಲಿ ಸದ್ದಿಲ್ಲದೆ ಆಕೆಯ ಮದುವೆ ಏರ್ಪಡಿಸಿದಾಗ, ಆರೋಪಿಯು ಅದರ ಬಗ್ಗೆ ತಿಳಿದುಕೊಂಡು ಲೈಂಗಿಕ ದೌರ್ಜನ್ಯದ ವೀಡಿಯೊವನ್ನು ವರನ ಕುಟುಂವಕ್ಕೆ ಕಳುಹಿಸಿದ್ದಾನೆ. ಪರಿಣಾಮ, ಆಕೆಯ ನಿಶ್ಚಿತಾರ್ಥದ ನಂತರ ಮದುವೆಯನ್ನು ರದ್ದುಗೊಳಿಸಲಾಯಿತು.

ಮದುವೆ ರದ್ದಾದ ಬಳಿಕ ಆಕೆಯ ಕುಟುಂಬದ ಸ್ಥಿತಿ ಇನ್ನೂ ಕೆಟ್ಟದಾಗಿದೆ; ಆರೋಪಿಯ ಕುಟುಂಬವು ಹಣವನ್ನು ಹಿಂದಿರುಗಿಸುವಂತೆ ಒತ್ತಾಯಿಸಿತು. ಆಗ ಸಂತ್ರಸ್ತೆ ತಂದೆ, ಒತ್ತಡ ಮತ್ತು ಬೆದರಿಕೆಗಳನ್ನು ಸಹಿಸಲಾರದೆ, ಹಾಪುರ್ ಪೊಳಿಸ್ ವರಿಷ್ಠಾಧಿಕಾರಿ ಕುನ್ವರ್ ಜ್ಞಾನಂಜಯ್ ಸಿಂಗ್ ಅವರನ್ನು ಭೇಟಿಯಾದರು. ಅಪರಾಧ ನಡೆದ ಸುಮಾರು ಎರಡು ವರ್ಷಗಳ ನಂತರ ಕಳೆದ ಗುರುವಾರ ಎಫ್‌ಐಆರ್ ದಾಖಲಿಸಲಾಯಿತು.

“ನನ್ನ ಮಗಳ ಮೇಲೆ ದೌರ್ಜನ್ಯ ನಡೆಸಿದ ನಂತರ, ಪಂಚಾಯತ್ ಕರೆಯಲಾಯಿತು, ಅಲ್ಲಿ ನಾವು ₹2.5 ಲಕ್ಷ ಗಳಿಗೆ ಪ್ರಕರಣವನ್ನು ಇತ್ಯರ್ಥಪಡಿಸಿಕೊಳ್ಳುವಂತೆ ಒತ್ತಾಯಿಸಲಾಯಿತು. ನಾವು ಗ್ರಾಮವನ್ನು ಬಿಟ್ಟು ಬೇರೆ ಸ್ಥಳಕ್ಕೆ ಹೋದೆವು. ಇತ್ತೀಚೆಗೆ ನನ್ನ ಮಗಳ ಮದುವೆಯನ್ನು ಒಬ್ಬ ವ್ಯಕ್ತಿಯೊಂದಿಗೆ ಏರ್ಪಡಿಸಿದೆವು, ಆದರೆ ಆರೋಪಿಯು ನಿಶ್ಚಿತಾರ್ಥದ ದಿನ ಅಶ್ಲೀಲ ವೀಡಿಯೊ ಕಳುಹಿಸಿದನು. ಇದರಿಂದಾಗಿ ಆಕೆಯ ಮದುವೆಯನ್ನು ರದ್ದುಗೊಳಿಸಲಾಯಿತು; ಈಗ ನಾವು ಏನು ಮಾಡಬೇಕು” ಎಂದು ಪ್ರಶ್ನಿಸಿದ್ದಾರೆ.

ಆರೋಪಿಯ ಕುಟುಂಬವು ತನ್ನ ಮೇಲೆ ಇತ್ತೀಚೆಗೆ ಹಲ್ಲೆ ನಡೆಸಿ ಬಟ್ಟೆ ಬಿಚ್ಚಿತು ಎಂದು ಸಂತ್ರಸ್ತೆಯ ತಾಯಿ ಹೇಳಿದ್ದಾರೆ. “ಅವರು ಹಣವನ್ನು ಹಿಂತಿರುಗಿಸುವಂತೆ ನಮ್ಮ ಬಳಿಗೆ ಬಂದು ಅನುಚಿತವಾಗಿ ವರ್ತಿಸಲು ಪ್ರಾರಂಭಿಸಿದರು. ನನ್ನ ಹೆಂಡತಿ ಅವರನ್ನು ವಿರೋಧಿಸಿದಾಗ, ಆಕೆಯ ಮೇಲೆ ಹಲ್ಲೆ ನಡೆಸಲಾಯಿತು. ಆರೋಪಿಯು ತನ್ನ ಬಟ್ಟೆಗಳನ್ನು ಹರಿದು ಹಾಕಿದನು” ಎಂದು ಯುವತಿಯ ತಂದೆ ಪೊಲೀಸರಿಗೆ ತಿಳಿಸಿದ್ದಾರೆ.

“ಆರಂಭಿಕ ಘಟನೆಯನ್ನು ನನಗೆ ವರದಿ ಮಾಡಲಾಗಿಲ್ಲ. ಈಗ, ಲಿಖಿತ ದೂರು ಬಂದಿದ್ದು, ಅದರ ನಂತರ ಐದು ಪುರುಷರ ವಿರುದ್ಧ ಐಪಿಸಿ ಸೆಕ್ಷನ್ 376 (ಅತ್ಯಾಚಾರ), 354 (ದಾಳಿ ಅಥವಾ ಕ್ರಿಮಿನಲ್ ಬಲ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ” ಎಂದು ಹಫೀಜ್‌ಪುರ ಎಸ್‌ಎಚ್‌ಒ ಆಶಿಶ್ ಕುಮಾರ್ ಹೇಳಿದರು.

“ಈ ವಿಷಯದ ತನಿಖೆಗಾಗಿ ತಂಡಗಳನ್ನು ರಚಿಸಲಾಗಿದ್ದು, ಸಂಬಂಧಪಟ್ಟವರನ್ನು ಬಂಧಿಸಲಾಗುವುದು” ಎಂದು ಎಸ್‌ಎಚ್‌ಒ ಹೇಳಿದರು.

550 ದಲಿತರಿಗೆ ಶಿವ ದೇಗುಲಕ್ಕೆ ಪ್ರವೇಶ ನಿರ್ಬಂಧ; ಕ್ರಮ ತೆಗೆದುಕೊಳ್ಳದ ಮಮತಾ ಬ್ಯಾನರ್ಜಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...