Homeಮುಖಪುಟರಾಜಸ್ಥಾನ | ವಿಧಾನಸಭೆಯಲ್ಲೆ ಕಾಂಗ್ರೆಸ್‌ನ ಮುಸ್ಲಿಂ ಶಾಸಕನನ್ನು 'ಪಾಕಿಸ್ತಾನಿ' ಎಂದು ಕರೆದ ಬಿಜೆಪಿ ಶಾಸಕ!

ರಾಜಸ್ಥಾನ | ವಿಧಾನಸಭೆಯಲ್ಲೆ ಕಾಂಗ್ರೆಸ್‌ನ ಮುಸ್ಲಿಂ ಶಾಸಕನನ್ನು ‘ಪಾಕಿಸ್ತಾನಿ’ ಎಂದು ಕರೆದ ಬಿಜೆಪಿ ಶಾಸಕ!

- Advertisement -
- Advertisement -

ರಾಜಸ್ಥಾನ ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಗೋಪಾಲ್ ಶರ್ಮಾ ಅವರು ಕಾಂಗ್ರೆಸ್ ಮುಖ್ಯ ಸಚೇತಕ ರಫೀಕ್ ಖಾನ್ ಅವರನ್ನು ಪದೇ ಪದೇ “ಪಾಕಿಸ್ತಾನಿ” ಎಂದು ಉಲ್ಲೇಖಿಸಿರುವ ಘಟನೆ ಶುಕ್ರವಾರ ನಡೆದಿದೆ. ಇದರ ನಂತರ ಸದನದಲ್ಲಿ ಕೋಲಾಹಲ ಉಂಟಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ವಿಧಾನಸಭೆಯಲ್ಲೆ

ನಗರಾಭಿವೃದ್ಧಿ, ವಸತಿ ಮತ್ತು ಸ್ಥಳೀಯ ಸ್ಥಂಸ್ಥೆ ಇಲಾಖೆಗಳಿಗೆ ನೀಡುವ ಅನುದಾನದ ಕುರಿತಾದ ಚರ್ಚೆಯ ಸಂದರ್ಭದಲ್ಲಿ ಗೋಪಾಲ್ ಅವರು ಈ ಪದವನ್ನು ಬಳಸಿದ್ದಾರೆ. ವಿಧಾನಸಭೆಯಲ್ಲೆ

ನಗರಾಭಿವೃದ್ಧಿಯಲ್ಲಿ ಹಿಂದಿನ ಕಾಂಗ್ರೆಸ್ ಸರ್ಕಾರದ ಕಾರ್ಯಕ್ಷಮತೆಯನ್ನು ಪ್ರಸ್ತುತ ಬಿಜೆಪಿ ಸರ್ಕಾರದ ಕಾರ್ಯಕ್ಷಮತೆಗೆ ಹೋಲಿಸಿದ ರಫೀಕ್ ಖಾನ್ ಅವರು, ಪರೋಕ್ಷವಾಗಿ ಗೋಪಾಲ್ ಶರ್ಮಾ ಅವರನ್ನು ಉಲ್ಲೇಖಿಸಿ, ಸ್ಪೀಕರ್‌ ಸಂದೀಪ್ ಶರ್ಮಾ ಅವರಿಗೆ “ಸ್ವಲ್ಪ ಜ್ಞಾನ ನೀಡಿ” ಎಂದು ಕೇಳಿದರು.

ಈ ವೇಳೆ ಬಿಜೆಪಿ ಶಾಸಕ ಗೋಪಾಲ್ ಶರ್ಮಾ ಅವರು ರಫೀಕ್ ಖಾನ್ ಅವರನ್ನು “ಪಾಕಿಸ್ತಾನಿ” ಎಂದು ಕರೆದಿದ್ದು, ಇದನ್ನು ವಿರೋಧಿಸಿ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸಿದವು.

ಗೋಪಾಲ್ ಅವರ ವರ್ತನೆಗೆ ರಫೀಕ್ ಖಾನ್ ಆಕ್ಷೇಪ ವ್ಯಕ್ತಪಡಿಸಿದ್ದು, ಘರ್ಷಣೆಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಘರ್ಷಣೆಯ ನಡುವೆ, ಬಿಜೆಪಿ ನಾಯಕರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಉಲ್ಲೇಖಿಸಿದ್ದಾರೆ. ಈ ವೇಳೆ ಮಧ್ಯ ಪ್ರವೇಶಿಸಿದ ಸ್ಪೀಕರ್, ರಾಜ್ಯ ವಿಧಾನಸಭೆಯಲ್ಲಿ ಸದಸ್ಯರಲ್ಲದವರನ್ನು ಹೆಸರಿಸಲು ಸಾಧ್ಯವಿಲ್ಲ ಎಂದು ನೆನಪಿಸಿದ ನಂತರ ಅವರ ಹೇಳಿಕೆಗಳನ್ನು ಹಿಂಪಡೆದುಕೊಂಡಿದ್ದಾರೆ.

ವಿರೋಧ ಪಕ್ಷದ ನಾಯಕ ಟಿಕಾ ರಾಮ್ ಜಲ್ಲಿ ಸೇರಿದಂತೆ ಇತರ ಕಾಂಗ್ರೆಸ್ ಶಾಸಕರು ಕೂಡಾ ಗೋಪಾಲ್ ಶರ್ಮಾ ಅವರ ಹೇಳಿಕೆಗಳನ್ನು ಟೀಕಿಸಿದ್ದಾರೆ. ಈ ವೇಳೆ ಸ್ಪೀಕರ್ ಮಧ್ಯಪ್ರವೇಶಿಸಿ ಸದನದಲ್ಲಿ ಸುವ್ಯವಸ್ಥೆಯನ್ನು ಪುನಃಸ್ಥಾಪಿಸಲು ಕೇಳಿಕೊಂಡಿದ್ದಾರೆ.

ಇದರ ನಂತರ ಘಟನೆ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯೆ ನೀಡಿದ ಜುಲ್ಲಿ, ಗೋಪಾಲ್ ಶರ್ಮಾ ಅವರ ಹೇಳಿಕೆಗಳನ್ನು “ಅಸಹನೀಯ ಮತ್ತು ಖಂಡನೀಯ” ಎಂದು ಕರೆದಿದ್ದಾರೆ.

“ಬಿಜೆಪಿ ನಾಯಕರು ದಿನದಿಂದ ದಿನಕ್ಕೆ ತಮ್ಮ ಹೇಳಿಕೆಗಳ ಮಟ್ಟವನ್ನು ಕಡಿಮೆ ಮಾಡಲು ಸ್ಪರ್ಧೆಗೆ ಇಳಿದಿದ್ದಾರೆ. ಅವರು ವಿಧಾನಸಭೆಯಲ್ಲಿ ನೀಡುವ ಭಾಷಣಗಳು ಮತ್ತು ಬೀದಿಯಲ್ಲಿ ನೀಡುವ ಭಾಷಣಗಳ ನಡುವೆ ಯಾವುದೇ ವ್ಯತ್ಯಾಸವನ್ನು ಕಾಣುತ್ತಿಲ್ಲ.” ಎಂದು ಜುಲ್ಲಿ ಹೇಳಿದ್ದಾರೆ.

ಕಳೆದ ವರ್ಷ ಮಾರ್ಚ್ 6 ರಂದು, ಜೈಪುರ ಮುನ್ಸಿಪಲ್ ಕಾರ್ಪೊರೇಷನ್‌ನ ಮಂಡಳಿ ಸಭೆಯಲ್ಲಿ ಗೋಪಾಲ್ ಶರ್ಮಾ ಅವರು ರಫೀಕ್ ಖಾನ್ ಅವರೊಂದಿಗೆ ಘರ್ಷಣೆ ನಡೆಸಿದ್ದರು. ಈ ಘರ್ಷಣೆಯ ಸಂದರ್ಭದಲ್ಲಿ ಜೈಪುರವನ್ನು “ಮಿನಿ-ಪಾಕಿಸ್ತಾನ” ಆಗಲು ಬಿಡುವುದಿಲ್ಲ ಎಂದು ಅವರು ಹೇಳಿದ್ದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಎನ್ಇಪಿ, ಕ್ಷೇತ್ರ ಪುನರ್ವಿಂಗಡನೆ, ವಕ್ಫ್‌ ಕುರಿತು ಚರ್ಚಿಸಲು ಕಾಂಗ್ರೆಸ್ ಸಂಸದೀಯ ಕಾರ್ಯತಂತ್ರ ಸಭೆ

ಎನ್ಇಪಿ, ಕ್ಷೇತ್ರ ಪುನರ್ವಿಂಗಡನೆ, ವಕ್ಫ್‌ ಕುರಿತು ಚರ್ಚಿಸಲು ಕಾಂಗ್ರೆಸ್ ಸಂಸದೀಯ ಕಾರ್ಯತಂತ್ರ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...