Homeಮುಖಪುಟಕಾಂಗ್ರೆಸ್‌ನಲ್ಲಿದ್ದು ಬಿಜೆಪಿಗೆ ಕೆಲಸ ಮಾಡುವವರನ್ನು ಮೊದಲು ಹೊರಗಿಡಬೇಕಿದೆ : ರಾಹುಲ್ ಗಾಂಧಿ

ಕಾಂಗ್ರೆಸ್‌ನಲ್ಲಿದ್ದು ಬಿಜೆಪಿಗೆ ಕೆಲಸ ಮಾಡುವವರನ್ನು ಮೊದಲು ಹೊರಗಿಡಬೇಕಿದೆ : ರಾಹುಲ್ ಗಾಂಧಿ

- Advertisement -
- Advertisement -

ಬಿಜೆಪಿಗಾಗಿ ಕೆಲಸ ಮಾಡುತ್ತಿರುವ ತಮ್ಮ ಪಕ್ಷದ ಕಾರ್ಯಕರ್ತರು ಮತ್ತು ನಾಯಕರನ್ನು ಹೊರಗಿಡುವ ಅವಶ್ಯಕತೆಯಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ (ಮಾ.8) ಹೇಳಿದ್ದಾರೆ.

ಎರಡು ದಿನಗಳ ಗುಜರಾತ್ ಭೇಟಿಯ ಎರಡನೇ ದಿನದಂದು ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, “ನಮ್ಮ ಪಕ್ಷ ತನ್ನ ಜವಾಬ್ದಾರಿಗಳನ್ನು ಪೂರೈಸುವವರೆಗೆ ರಾಜ್ಯದ ಜನರು ಮತ ಚಲಾಯಿಸುವುದಿಲ್ಲ” ಎಂದಿದ್ದಾರೆ.

ಮೂರು ದಶಕಗಳಿಗೂ ಹೆಚ್ಚು ಕಾಲದ ಬಿಜೆಪಿ ಆಡಳಿತದಲ್ಲಿ ತೋರಿದ ದೃಷ್ಠಿಕೋನ ವಿಫಲವಾದ ಕಾರಣ ಗುಜರಾತ್ ಜನರು ಹೊಸ ದೃಷ್ಟಿಕೋನಕ್ಕಾಗಿ ಎದುರು ನೋಡುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ರಾಜ್ಯವು ಹೊಸ ದಾರಿಯನ್ನು ನೋಡುತ್ತಿಲ್ಲ. ಕಾಂಗ್ರೆಸ್‌ಗೆ ಹೊಸ ದಾರಿ ತೋರಿಸಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.

“ಗುಜರಾತ್‌ ಕಾಂಗ್ರೆಸ್‌ನಲ್ಲಿ ಎರಡು ರೀತಿಯ ನಾಯಕರು ಮತ್ತು ಕಾರ್ಯಕರ್ತರಿದ್ದಾರೆ. ಒಂದು ಜನರೊಂದಿಗೆ ಪ್ರಾಮಾಣಿಕರಾಗಿರುವವರು, ಅವರಿಗಾಗಿ ಹೋರಾಡುವವರು, ಅವರನ್ನು ಗೌರವಿಸುವವರು ಮತ್ತು ಕಾಂಗ್ರೆಸ್‌ನ ಸಿದ್ಧಾಂತವನ್ನು ಹೃದಯದಲ್ಲಿ ಇಟ್ಟುಕೊಂಡಿರುವವರು. ಮತ್ತೊಂದು ಜನರಿಂದ ದೂರವಾಗಿರುವರು. ಅವರು ದೂರದಲ್ಲಿ ಕುಳಿತುಕೊಳ್ಳುತ್ತಾರೆ. ಜನರನ್ನು ಗೌರವಿಸುವುದಿಲ್ಲ ಮತ್ತು ಅವರಲ್ಲಿ ಅರ್ಧದಷ್ಟು ಜನರು ಬಿಜೆಪಿಯೊಂದಿಗಿದ್ದಾರೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

“ನಮ್ಮ ಮೊದಲ ಕೆಲಸ ಈ ಎರಡು ಗುಂಪುಗಳನ್ನು ಬೇರ್ಪಡಿಸುವುದು. ನಾವು ಕಠಿಣ ಕ್ರಮ ತೆಗೆದುಕೊಂಡು 30-40 ಜನರನ್ನು ತೆಗೆದು ಹಾಕಬೇಕಾದರೆ, ಅದನ್ನೂ ಮಾಡಬೇಕು. ಒಳಗಿನಿಂದ ಬಿಜೆಪಿಗಾಗಿ ಕೆಲಸ ಮಾಡುತ್ತಿದ್ದರೆ, ಅವರನ್ನು ತೆಗೆದುಹಾಕಿ, ಅವರು ಹೊರಗಿನಿಂದ ಬಿಜೆಪಿಗಾಗಿ ಕೆಲಸ ಮಾಡಲು ಬಿಡಬೇಕು” ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷವು ಜನರಿಂದ ಮತ ಕೇಳುವ ಮೊದಲು ತನ್ನ ಜವಾಬ್ದಾರಿಗಳನ್ನು ಪೂರೈಸಬೇಕು ಎಂದು ರಾಹುಲ್ ಒತ್ತಿ ಹೇಳಿದ್ದಾರೆ.

“ನಾವು ಇಲ್ಲಿ ಅಧಿಕಾರಕ್ಕೆ ಬಂದು ಹೋಗಿ ಸುಮಾರು 30 ವರ್ಷಗಳು ಕಳೆದಿವೆ. ನಾನು ಇಲ್ಲಿಗೆ ಬಂದಾಗಲೆಲ್ಲಾ, 2007, 2012, 2017, 2022, 2027 ರ ವಿಧಾನಸಭಾ ಚುನಾವಣೆಗಳ ಬಗ್ಗೆ ಚರ್ಚೆ ನಡೆಯುತ್ತದೆ. ಆದರೆ, ಇಲ್ಲಿ ಪ್ರಶ್ನೆ ಚುನಾವಣೆಗಳದ್ದಲ್ಲ. ನಾವು ನಮ್ಮ ಜವಾಬ್ದಾರಿಗಳನ್ನು ಪೂರೈಸುವವರೆಗೆ ಗುಜರಾತ್ ಜನರು ನಮ್ಮನ್ನು ಚುನಾವಣೆಯಲ್ಲಿ ಗೆಲ್ಲಿಸುವುದಿಲ್ಲ” ಎಂದು ರಾಹುಲ್ ಗಾಂಧಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

“ನಾವು ನಮ್ಮ ಜವಾಬ್ದಾರಿಗಳನ್ನು ಪೂರೈಸುವವರೆಗೆ ಗುಜರಾತ್ ಜನರನ್ನು ಅಧಿಕಾರಕ್ಕೆ ತನ್ನಿ ಎಂದು ಕೇಳಬಾರದು. ನಾವು ಇದನ್ನು ಮಾಡುವ ದಿನ ಗುಜರಾತ್ ಜನರು ಕಾಂಗ್ರೆಸ್ ಪಕ್ಷಕ್ಕೆ ತಮ್ಮ ಬೆಂಬಲವನ್ನು ನೀಡುತ್ತಾರೆ ಎಂದು ನಾನು ನಿಮಗೆ ಖಾತರಿ ನೀಡುತ್ತೇನೆ” ಎಂದಿದ್ದಾರೆ.

ಗುಜರಾತ್‌ ಕಾಂಗ್ರೆಸ್‌ ಘಟಕದ ಕಾರ್ಯವೈಖರಿಯನ್ನು ಟೀಕಿಸಿದ ರಾಹುಲ್ ಗಾಂಧಿ, “ಗುಜರಾತ್ ಮುಂದುವರಿಯಲು ಸಿದ್ದವಿದೆ. ನಾನು ಕಾಂಗ್ರೆಸ್ ಪಕ್ಷದ ಸದಸ್ಯ, ಆದರೆ ನಾನು ದಾರಿ ತೋರಿಸಲು ಸಾಧ್ಯವಿಲ್ಲ ಎನ್ನುತ್ತಿದ್ದೇನೆ. ನಾನು ನಾಚಿಕೆಯಿಂದ, ಭಯದಿಂದ ಮಾತನಾಡುತ್ತಿಲ್ಲ” ಎಂದು ಹೇಳಿದ್ದಾರೆ.

“ನಮ್ಮ ಕಾರ್ಯಕರ್ತರಾಗಲಿ, ರಾಹುಲ್ ಗಾಂಧಿಯಾಗಲಿ, ನಮ್ಮ ಪ್ರಧಾನ ಕಾರ್ಯದರ್ಶಿಯಾಗಲಿ, ನಮ್ಮ ಪಿಸಿಸಿ ಅಧ್ಯಕ್ಷರಾಗಲಿ, ಗುಜರಾತ್‌ಗೆ ದಾರಿ ತೋರಿಸಲು ನಮಗೆ ಸಾಧ್ಯವಾಗುತ್ತಿಲ್ಲ ಎಂಬುದನ್ನು ನಾನು ನಿಮ್ಮ ಮುಂದೆ ಹೇಳಲು ಬಯಸುತ್ತೇನೆ. ಇಲ್ಲಿಯವರೆಗೆ, ಕಳೆದ 30 ವರ್ಷಗಳಲ್ಲಿ ಗುಜರಾತ್ ನಮ್ಮಿಂದ, ನನ್ನಿಂದ, ನಮ್ಮ ಪಿಸಿಸಿ ಅಧ್ಯಕ್ಷರಿಂದ, ನಮ್ಮ ಉಸ್ತುವಾರಿಯಿಂದ ಏನನ್ನು ನಿರೀಕ್ಷಿಸಿದೆಯೋ ಅದನ್ನು ನಾವು ಪೂರೈಸಲು ಸಾಧ್ಯವಾಗಿಲ್ಲ” ಎಂದು ರಾಹುಲ್ ಗಾಂಧಿ ಅಸಮಾಧಾನ ಹೊರಹಾಕಿದ್ದಾರೆ.

ಕಾಂಗ್ರೆಸ್‌ನ ಚುನಾವಣಾ ಬಲದ ಬಗ್ಗೆ ಮಾತನಾಡಿದ ಅವರು, “ಗುಜರಾತ್‌ನಲ್ಲಿ ವಿರೋಧ ಪಕ್ಷಗಳು ಶೇಕಡಾ 40 ರಷ್ಟು ಮತಗಳನ್ನು ಹೊಂದಿವೆ. ಗೆಲ್ಲಲು ನಮಗೆ ಕೇವಲ ಶೇಕಡಾ 5ರಷ್ಟು ಹೆಚ್ಚಳ ಮಾತ್ರ ಬೇಕು. ತೆಲಂಗಾಣದಲ್ಲಿ ನಾವು ಮತ ​​ಪಾಲನ್ನು ಶೇಕಡಾ 22ರಷ್ಟು ಹೆಚ್ಚಿಸಿದ್ದೇವೆ. ಇಲ್ಲಿಯೂ ಸಹ ಅದನ್ನು ಮಾಡಬಹುದು. ಆದರೆ ಪಕ್ಷವನ್ನು ಫಿಲ್ಟರ್ ಮಾಡದೆ, ಅದು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಜನರೊಂದಿಗೆ ಮತ್ತೆ ಸಂಪರ್ಕ ಸಾಧಿಸುವಂತೆ ರಾಹುಲ್ ಕಾಂಗ್ರೆಸ್ ಕಾರ್ಯಕರ್ತರಿಗೆ ಕಿವಿ ಮಾತು ಹೇಳಿದ್ದಾರೆ ಮತ್ತು ಅವರ ಬದ್ಧತೆಯ ಭರವಸೆ ನೀಡಿದ್ದಾರೆ. “ನಾನು ಗುಜರಾತ್ ಅನ್ನು ಅರ್ಥಮಾಡಿಕೊಳ್ಳಲು ಬಯಸುತ್ತೇನೆ, ಗುಜರಾತ್ ಜನರೊಂದಿಗೆ ಸಂಬಂಧವನ್ನು ಬೆಳೆಸಲು ಬಯಸುತ್ತೇನೆ. ವಿಶ್ವಾಸವು ನಿಮ್ಮೊಳಗೆ ಇದೆ; ಅದನ್ನು ಹೊರತರುವುದು ನನ್ನ ಕೆಲಸ” ಎಂದು ಹೇಳಿದ್ದಾರೆ.

ಎನ್ಇಪಿ, ಕ್ಷೇತ್ರ ಪುನರ್ವಿಂಗಡನೆ, ವಕ್ಫ್‌ ಕುರಿತು ಚರ್ಚಿಸಲು ಕಾಂಗ್ರೆಸ್ ಸಂಸದೀಯ ಕಾರ್ಯತಂತ್ರ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Rahul Gandhiji… Am telling u behind ur Circle all Entire Leaders including #kcvenugopal #mallikarjunkarge#Change these people. They need Priyaka Gandhi to become prime minister not for u.. watch social media people like priyanka Gandhi
    My SUGGESTION TRY..

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...