ಬಿಜೆಪಿಗಾಗಿ ಕೆಲಸ ಮಾಡುತ್ತಿರುವ ತಮ್ಮ ಪಕ್ಷದ ಕಾರ್ಯಕರ್ತರು ಮತ್ತು ನಾಯಕರನ್ನು ಹೊರಗಿಡುವ ಅವಶ್ಯಕತೆಯಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ (ಮಾ.8) ಹೇಳಿದ್ದಾರೆ.
ಎರಡು ದಿನಗಳ ಗುಜರಾತ್ ಭೇಟಿಯ ಎರಡನೇ ದಿನದಂದು ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, “ನಮ್ಮ ಪಕ್ಷ ತನ್ನ ಜವಾಬ್ದಾರಿಗಳನ್ನು ಪೂರೈಸುವವರೆಗೆ ರಾಜ್ಯದ ಜನರು ಮತ ಚಲಾಯಿಸುವುದಿಲ್ಲ” ಎಂದಿದ್ದಾರೆ.
ಮೂರು ದಶಕಗಳಿಗೂ ಹೆಚ್ಚು ಕಾಲದ ಬಿಜೆಪಿ ಆಡಳಿತದಲ್ಲಿ ತೋರಿದ ದೃಷ್ಠಿಕೋನ ವಿಫಲವಾದ ಕಾರಣ ಗುಜರಾತ್ ಜನರು ಹೊಸ ದೃಷ್ಟಿಕೋನಕ್ಕಾಗಿ ಎದುರು ನೋಡುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ರಾಜ್ಯವು ಹೊಸ ದಾರಿಯನ್ನು ನೋಡುತ್ತಿಲ್ಲ. ಕಾಂಗ್ರೆಸ್ಗೆ ಹೊಸ ದಾರಿ ತೋರಿಸಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.
“ಗುಜರಾತ್ ಕಾಂಗ್ರೆಸ್ನಲ್ಲಿ ಎರಡು ರೀತಿಯ ನಾಯಕರು ಮತ್ತು ಕಾರ್ಯಕರ್ತರಿದ್ದಾರೆ. ಒಂದು ಜನರೊಂದಿಗೆ ಪ್ರಾಮಾಣಿಕರಾಗಿರುವವರು, ಅವರಿಗಾಗಿ ಹೋರಾಡುವವರು, ಅವರನ್ನು ಗೌರವಿಸುವವರು ಮತ್ತು ಕಾಂಗ್ರೆಸ್ನ ಸಿದ್ಧಾಂತವನ್ನು ಹೃದಯದಲ್ಲಿ ಇಟ್ಟುಕೊಂಡಿರುವವರು. ಮತ್ತೊಂದು ಜನರಿಂದ ದೂರವಾಗಿರುವರು. ಅವರು ದೂರದಲ್ಲಿ ಕುಳಿತುಕೊಳ್ಳುತ್ತಾರೆ. ಜನರನ್ನು ಗೌರವಿಸುವುದಿಲ್ಲ ಮತ್ತು ಅವರಲ್ಲಿ ಅರ್ಧದಷ್ಟು ಜನರು ಬಿಜೆಪಿಯೊಂದಿಗಿದ್ದಾರೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
“ನಮ್ಮ ಮೊದಲ ಕೆಲಸ ಈ ಎರಡು ಗುಂಪುಗಳನ್ನು ಬೇರ್ಪಡಿಸುವುದು. ನಾವು ಕಠಿಣ ಕ್ರಮ ತೆಗೆದುಕೊಂಡು 30-40 ಜನರನ್ನು ತೆಗೆದು ಹಾಕಬೇಕಾದರೆ, ಅದನ್ನೂ ಮಾಡಬೇಕು. ಒಳಗಿನಿಂದ ಬಿಜೆಪಿಗಾಗಿ ಕೆಲಸ ಮಾಡುತ್ತಿದ್ದರೆ, ಅವರನ್ನು ತೆಗೆದುಹಾಕಿ, ಅವರು ಹೊರಗಿನಿಂದ ಬಿಜೆಪಿಗಾಗಿ ಕೆಲಸ ಮಾಡಲು ಬಿಡಬೇಕು” ಎಂದು ತಿಳಿಸಿದ್ದಾರೆ.
हमारा पहला काम- इन दो ग्रुप को अलग करना है।
अगर हमें सख्त कार्रवाई करनी पड़े, 30-40 लोगों को निकालना पड़े तो निकाल देना चाहिए।
BJP के लिए लोग अंदर से काम कर रहे हैं, तो उन लोगों को निकालो और बाहर से BJP के लिए काम करने दो।
फिर देखते हैं, कैसे इनकी वहां जगह बनती है, क्योंकि वो… pic.twitter.com/X8w97HO8R3
— Congress (@INCIndia) March 8, 2025
ಕಾಂಗ್ರೆಸ್ ಪಕ್ಷವು ಜನರಿಂದ ಮತ ಕೇಳುವ ಮೊದಲು ತನ್ನ ಜವಾಬ್ದಾರಿಗಳನ್ನು ಪೂರೈಸಬೇಕು ಎಂದು ರಾಹುಲ್ ಒತ್ತಿ ಹೇಳಿದ್ದಾರೆ.
“ನಾವು ಇಲ್ಲಿ ಅಧಿಕಾರಕ್ಕೆ ಬಂದು ಹೋಗಿ ಸುಮಾರು 30 ವರ್ಷಗಳು ಕಳೆದಿವೆ. ನಾನು ಇಲ್ಲಿಗೆ ಬಂದಾಗಲೆಲ್ಲಾ, 2007, 2012, 2017, 2022, 2027 ರ ವಿಧಾನಸಭಾ ಚುನಾವಣೆಗಳ ಬಗ್ಗೆ ಚರ್ಚೆ ನಡೆಯುತ್ತದೆ. ಆದರೆ, ಇಲ್ಲಿ ಪ್ರಶ್ನೆ ಚುನಾವಣೆಗಳದ್ದಲ್ಲ. ನಾವು ನಮ್ಮ ಜವಾಬ್ದಾರಿಗಳನ್ನು ಪೂರೈಸುವವರೆಗೆ ಗುಜರಾತ್ ಜನರು ನಮ್ಮನ್ನು ಚುನಾವಣೆಯಲ್ಲಿ ಗೆಲ್ಲಿಸುವುದಿಲ್ಲ” ಎಂದು ರಾಹುಲ್ ಗಾಂಧಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
“ನಾವು ನಮ್ಮ ಜವಾಬ್ದಾರಿಗಳನ್ನು ಪೂರೈಸುವವರೆಗೆ ಗುಜರಾತ್ ಜನರನ್ನು ಅಧಿಕಾರಕ್ಕೆ ತನ್ನಿ ಎಂದು ಕೇಳಬಾರದು. ನಾವು ಇದನ್ನು ಮಾಡುವ ದಿನ ಗುಜರಾತ್ ಜನರು ಕಾಂಗ್ರೆಸ್ ಪಕ್ಷಕ್ಕೆ ತಮ್ಮ ಬೆಂಬಲವನ್ನು ನೀಡುತ್ತಾರೆ ಎಂದು ನಾನು ನಿಮಗೆ ಖಾತರಿ ನೀಡುತ್ತೇನೆ” ಎಂದಿದ್ದಾರೆ.
ಗುಜರಾತ್ ಕಾಂಗ್ರೆಸ್ ಘಟಕದ ಕಾರ್ಯವೈಖರಿಯನ್ನು ಟೀಕಿಸಿದ ರಾಹುಲ್ ಗಾಂಧಿ, “ಗುಜರಾತ್ ಮುಂದುವರಿಯಲು ಸಿದ್ದವಿದೆ. ನಾನು ಕಾಂಗ್ರೆಸ್ ಪಕ್ಷದ ಸದಸ್ಯ, ಆದರೆ ನಾನು ದಾರಿ ತೋರಿಸಲು ಸಾಧ್ಯವಿಲ್ಲ ಎನ್ನುತ್ತಿದ್ದೇನೆ. ನಾನು ನಾಚಿಕೆಯಿಂದ, ಭಯದಿಂದ ಮಾತನಾಡುತ್ತಿಲ್ಲ” ಎಂದು ಹೇಳಿದ್ದಾರೆ.
“ನಮ್ಮ ಕಾರ್ಯಕರ್ತರಾಗಲಿ, ರಾಹುಲ್ ಗಾಂಧಿಯಾಗಲಿ, ನಮ್ಮ ಪ್ರಧಾನ ಕಾರ್ಯದರ್ಶಿಯಾಗಲಿ, ನಮ್ಮ ಪಿಸಿಸಿ ಅಧ್ಯಕ್ಷರಾಗಲಿ, ಗುಜರಾತ್ಗೆ ದಾರಿ ತೋರಿಸಲು ನಮಗೆ ಸಾಧ್ಯವಾಗುತ್ತಿಲ್ಲ ಎಂಬುದನ್ನು ನಾನು ನಿಮ್ಮ ಮುಂದೆ ಹೇಳಲು ಬಯಸುತ್ತೇನೆ. ಇಲ್ಲಿಯವರೆಗೆ, ಕಳೆದ 30 ವರ್ಷಗಳಲ್ಲಿ ಗುಜರಾತ್ ನಮ್ಮಿಂದ, ನನ್ನಿಂದ, ನಮ್ಮ ಪಿಸಿಸಿ ಅಧ್ಯಕ್ಷರಿಂದ, ನಮ್ಮ ಉಸ್ತುವಾರಿಯಿಂದ ಏನನ್ನು ನಿರೀಕ್ಷಿಸಿದೆಯೋ ಅದನ್ನು ನಾವು ಪೂರೈಸಲು ಸಾಧ್ಯವಾಗಿಲ್ಲ” ಎಂದು ರಾಹುಲ್ ಗಾಂಧಿ ಅಸಮಾಧಾನ ಹೊರಹಾಕಿದ್ದಾರೆ.
ಕಾಂಗ್ರೆಸ್ನ ಚುನಾವಣಾ ಬಲದ ಬಗ್ಗೆ ಮಾತನಾಡಿದ ಅವರು, “ಗುಜರಾತ್ನಲ್ಲಿ ವಿರೋಧ ಪಕ್ಷಗಳು ಶೇಕಡಾ 40 ರಷ್ಟು ಮತಗಳನ್ನು ಹೊಂದಿವೆ. ಗೆಲ್ಲಲು ನಮಗೆ ಕೇವಲ ಶೇಕಡಾ 5ರಷ್ಟು ಹೆಚ್ಚಳ ಮಾತ್ರ ಬೇಕು. ತೆಲಂಗಾಣದಲ್ಲಿ ನಾವು ಮತ ಪಾಲನ್ನು ಶೇಕಡಾ 22ರಷ್ಟು ಹೆಚ್ಚಿಸಿದ್ದೇವೆ. ಇಲ್ಲಿಯೂ ಸಹ ಅದನ್ನು ಮಾಡಬಹುದು. ಆದರೆ ಪಕ್ಷವನ್ನು ಫಿಲ್ಟರ್ ಮಾಡದೆ, ಅದು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.
ಜನರೊಂದಿಗೆ ಮತ್ತೆ ಸಂಪರ್ಕ ಸಾಧಿಸುವಂತೆ ರಾಹುಲ್ ಕಾಂಗ್ರೆಸ್ ಕಾರ್ಯಕರ್ತರಿಗೆ ಕಿವಿ ಮಾತು ಹೇಳಿದ್ದಾರೆ ಮತ್ತು ಅವರ ಬದ್ಧತೆಯ ಭರವಸೆ ನೀಡಿದ್ದಾರೆ. “ನಾನು ಗುಜರಾತ್ ಅನ್ನು ಅರ್ಥಮಾಡಿಕೊಳ್ಳಲು ಬಯಸುತ್ತೇನೆ, ಗುಜರಾತ್ ಜನರೊಂದಿಗೆ ಸಂಬಂಧವನ್ನು ಬೆಳೆಸಲು ಬಯಸುತ್ತೇನೆ. ವಿಶ್ವಾಸವು ನಿಮ್ಮೊಳಗೆ ಇದೆ; ಅದನ್ನು ಹೊರತರುವುದು ನನ್ನ ಕೆಲಸ” ಎಂದು ಹೇಳಿದ್ದಾರೆ.
ಎನ್ಇಪಿ, ಕ್ಷೇತ್ರ ಪುನರ್ವಿಂಗಡನೆ, ವಕ್ಫ್ ಕುರಿತು ಚರ್ಚಿಸಲು ಕಾಂಗ್ರೆಸ್ ಸಂಸದೀಯ ಕಾರ್ಯತಂತ್ರ ಸಭೆ



Rahul Gandhiji… Am telling u behind ur Circle all Entire Leaders including #kcvenugopal #mallikarjunkarge#Change these people. They need Priyaka Gandhi to become prime minister not for u.. watch social media people like priyanka Gandhi
My SUGGESTION TRY..