Homeಮುಖಪುಟಒಡಿಶಾ| ರಜೆ ಕೋರಿಕೆ ನಿರಾಕರಿಸಿದ ಪ್ರಾಂಶುಪಾಲರು; ಡ್ರಿಪ್‌ನೊಂದಿಗೆ ಶಾಲೆಗೆ ಆಗಮಿಸಿದ ಶಿಕ್ಷಕ

ಒಡಿಶಾ| ರಜೆ ಕೋರಿಕೆ ನಿರಾಕರಿಸಿದ ಪ್ರಾಂಶುಪಾಲರು; ಡ್ರಿಪ್‌ನೊಂದಿಗೆ ಶಾಲೆಗೆ ಆಗಮಿಸಿದ ಶಿಕ್ಷಕ

- Advertisement -
- Advertisement -

ನಿರಂತರ ಮನವಿಗಳ ಹೊರತಾಗಿಯೂ ರಜೆ ಕೋರಿಕೆ ನಿರಾಕರಿಸಿದ ನಂತರ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದದ್ದ ಶಾಲಾ ಶಿಕ್ಷಕರೊಬ್ಬರನ್ನು ಕರ್ತವ್ಯಕ್ಕೆ ಹಾಜರಾಗುವಂತೆ ಒತ್ತಾಯಿಸಲಾಗಿದೆ. ಶಿಕ್ಷಕ ಪ್ರಕಾಶ್ ಭೋಯ್ ಬೇರೆ ದಾರಿಯಿಲ್ಲದೆ ಕೈಗೆ ಡ್ರಿಪ್‌ (ಔಷಧ) ಅಳವಡಿಸಿಕೊಂಡು ಶಾಲೆಗೆ ಆಗಮಿಸಿದ ಘಟನೆ ಒಡಿಶಾದಲ್ಲಿ ನಡೆದಿದೆ.

ಅಜ್ಜನ ಅಂತ್ಯಕ್ರಿಯೆಯ ನಂತರ ತಾನು ಅಸ್ವಸ್ಥಳಾಗಿದ್ದೇನೆ, ಕರ್ತವ್ಯಕ್ಕೆ ರಜೆ ಕೋರಿದ್ದೇನೆ ಎಂದು ಭೋಯ್ ಹೇಳಿದರು. ಆದರೆ, ಪ್ರಾಂಶುಪಾಲರಾದ ಬಿಜಯಲಕ್ಷ್ಮಿ ಪ್ರಧಾನ್ ಅವರ ವಿನಂತಿಯನ್ನು ನಿರಾಕರಿಸಿದರು. ಬೋಲಂಗಿರ್‌ನ ಶಾಲೆಯೊಂದರ ಗಣಿತ ಶಿಕ್ಷಕ ಭೋಯ್, ಆರ್ಥಿಕ ತೊಂದರೆಯಿಂದಾಗಿ ಯಾವುದೇ ವೈದ್ಯಕೀಯ ಚಿಕಿತ್ಸೆ ಇಲ್ಲದೆ ಕೆಲಸಕ್ಕೆ ಹೋಗುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎಂದು ಹೇಳಿದರು.

ಜಿಲ್ಲಾ ಶಿಕ್ಷಣ ಅಧಿಕಾರಿ ಮತ್ತು ಜಿಲ್ಲಾ ಯೋಜನಾ ಸಂಯೋಜಕರನ್ನು ಭೇಟಿ ಮಾಡಲು ಶಾಲಾ ಪ್ರಾಂಶುಪಾಲರು ನಿರ್ದೇಶಿಸಿದ್ದಾರೆ ಎಂದು ಭೋಯ್ ಹೇಳಿಕೊಂಡಿದ್ದಾರೆ.

ಭೋಯ್ ಪ್ರಕಾರ, ಮಧ್ಯಾಹ್ನ ಡಿಪಿಸಿ ಕಚೇರಿ ತಲುಪಿದಾಗ ಅವರ ಸ್ಥಿತಿ ಹದಗೆಟ್ಟಿತು. ಆಸ್ಪತ್ರೆಗೆ ಭೇಟಿ ನೀಡಲು ಅನುಮತಿ ಕೋರಿದಾಗ, ಪ್ರಾಂಶುಪಾಲರು ಮಧ್ಯಾಹ್ನ 2 ಗಂಟೆಯೊಳಗೆ ಹಿಂತಿರುಗಬಹುದೇ ಎಂದು ಕೇಳಿದರು. “ಸರ್ಕಾರಿ ಆಸ್ಪತ್ರೆ ದೂರದಲ್ಲಿತ್ತು, ನನ್ನ ಬಳಿ ಖಾಸಗಿ ಆಸ್ಪತ್ರೆಗೆ ತೆರಳಲು ಹಣವಿರಲಿಲ್ಲ. ನನ್ನ ಯುಪಿಐ ಕೂಡ ಕೆಲಸ ಮಾಡುತ್ತಿರಲಿಲ್ಲ. ಆದ್ದರಿಂದ, ಯಾವುದೇ ಚಿಕಿತ್ಸೆ ಇಲ್ಲದೆ, ನಾನು ಕಚೇರಿಗೆ ಹಿಂತಿರುಗಿ ಸಂಜೆಯವರೆಗೂ ಕೆಲಸ ಮುಂದುವರಿಸಿದೆ. ಹಲವು ಬಾರಿ ವಿನಂತಿಸಿದರೂ, ಪ್ರಾಂಶುಪಾಲರು ನನಗೆ ರಜೆ ನೀಡಲು ನಿರಾಕರಿಸಿದರು” ಎಂದು ಭೋಯ್ ಹೇಳಿದರು.

ರಾತ್ರಿಯಲ್ಲಿ ಔಷಧ ಸೇವಿಸಿದ ನಂತರವೂ ಭೋಯ್ ಅವರ ಆರೋಗ್ಯ ಸುಧಾರಿಸಲಿಲ್ಲ. ಮರುದಿನ, ಅವರು ಮತ್ತೆ ರಜೆ ಕೋರಿದಾಗ, ಪ್ರಾಂಶುಪಾಲರು ಅದನ್ನು ನಿರಾಕರಿಸಿದರು. ಪರೀಕ್ಷಾ ಸಿದ್ಧತೆಗಳಿಗೆ ಅವರ ಉಪಸ್ಥಿತಿ ಅಗತ್ಯ ಎಂದು ಒತ್ತಾಯಿಸಿದರು. ಬೇರೆ ದಾರಿಯಿಲ್ಲದೆ, ಅವರು ವೈದ್ಯರಿಂದ ಡ್ರಿಪ್ ಪಡೆದರು. ಗಂಭೀರ ಸ್ಥಿತಿಯಲ್ಲಿ ಶಾಲೆಗೆ ವರದಿ ಮಾಡಿದರು. ಅವರ ಆರೋಗ್ಯ ಹದಗೆಡುತ್ತಿರುವುದನ್ನು ನೋಡಿ, ಭೋಯ್ ಅವರ ಸಹೋದ್ಯೋಗಿಗಳು ತಕ್ಷಣ ಅವರನ್ನು ಆಸ್ಪತ್ರೆಗೆ ಕಳುಹಿಸಿದರು.

ಘಟನೆಗೆ ಪ್ರತಿಕ್ರಿಯಿಸಿದ ಪಟ್ನಗಢ ಬ್ಲಾಕ್ ಶಿಕ್ಷಣ ಅಧಿಕಾರಿ (ಬಿಇಒ) ಪ್ರಸಾದ್ ಮಾಝಿ, “ಸಂಬಂಧಪಟ್ಟ ಶಿಕ್ಷಕರು ಹಿರಿಯ ಅಧಿಕಾರಿಗಳಿಗೆ ಸಾಂದರ್ಭಿಕ ರಜೆಗಾಗಿ ಅರ್ಜಿಯನ್ನು ಸಲ್ಲಿಸಿದ್ದರು. ಈಗ ಶಿಕ್ಷಕರು ರಜೆ ತೆಗೆದುಕೊಳ್ಳಲು ಅನುಮತಿ ನೀಡಲಾಗಿಲ್ಲ ಎಂದು ದೂರುತ್ತಿದ್ದಾರೆ. ನಾವು ಈ ವಿಷಯದ ಬಗ್ಗೆ ವಿಚಾರಣೆ ನಡೆಸುತ್ತಿದ್ದೇವೆ ಮತ್ತು ಸಂಬಂಧಪಟ್ಟ ಅಧಿಕಾರಿ ತಪ್ಪಿತಸ್ಥರೆಂದು ಕಂಡುಬಂದರೆ, ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದರು.

ಗುಜರಾತ್| ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...