HomeUncategorizedಬಿಜೆಪಿ-ಎನ್‌ಸಿಪಿ ಮೈತ್ರಿ: ಇದರಲ್ಲಿ ನನ್ನ ಪಾತ್ರವಿಲ್ಲ ಎಂದ ಶರದ್ ಪವಾರ್‌

ಬಿಜೆಪಿ-ಎನ್‌ಸಿಪಿ ಮೈತ್ರಿ: ಇದರಲ್ಲಿ ನನ್ನ ಪಾತ್ರವಿಲ್ಲ ಎಂದ ಶರದ್ ಪವಾರ್‌

- Advertisement -
- Advertisement -

ಮಹಾರಾಷ್ಟ್ರದಲ್ಲಿ ಬಿಜೆಪಿ ಹಾಗೂ ಎನ್ ಸಿಪಿ ಮೈತ್ರಿ ಸರ್ಕಾರ ಜಾರಿಗೆ ಬಂದಿದೆ. ‘ಮಹಾ’ ರಾಜಕೀಯಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಬಿಜೆಪಿಯ ದೇವೇಂದ್ರ ಫಡ್ನವೀಸ್ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಉಪಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಮೂಲಕ ಶಿವಸೇನೆಗೆ ಬಿಜೆಪಿ ಬಿಗ್ ಶಾಕ್ ನೀಡಿದೆ.

ಹಾಗಾದ್ರೆ ಬಿಜೆಪಿಗೆ ಬೆಂಬಲ ಸೂಚಿಸಿ, ಅಜಿತ್ ಪವಾರ್ ಡಿಸಿಎಂ ಹುದ್ದೆಗೇರಲು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಕಾರಣನಾ..? ಒಂದು ಮೂಲದ ಮಾಹಿತಿ ಪ್ರಕಾರ ಶರದ್ ಪವಾರ್, ಬಿಜೆಪಿಗೆ ಬೆಂಬಲ ಸೂಚಿಸಲು ಒಪ್ಪಿದ್ದರಿಂದಲೇ ಅಜಿತ್ ಪವಾರ್  ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ ಎಂದು ಎಎನ್ ಐ ವರದಿ ಮಾಡಿದೆ. ಹಾಗಾದ್ರೆ ಎನ್ ಸಿಪಿಯನ್ನು ಒಡೆದು, ಅಜಿತ್ ಪವಾರ್ ಡಿಸಿಎಂ ಹುದ್ದೆಗೇರಿದರಾ ಎಂಬ ಸುದ್ದಿ ಹರಿದಾಡ್ತಿದೆ.

ಇತ್ತ ಶರದ್ ಪವಾರ್ ಇದ್ಯಾವುದರಲ್ಲೂ ತಮ್ಮ ಪಾಲು ಇಲ್ಲ. ಇದೆಲ್ಲಾ ಅಜಿತ್ ಪವಾರ್ ತೆಗೆದುಕೊಂಡಿರುವ ನಿರ್ಧಾರ ಎಂದು ಟ್ವೀಟ್ ಮಾಡಿದ್ದಾರೆ. ಬಿಜೆಪಿ ಜತೆ ಸೇರಿಕೊಂಡು ಸರ್ಕಾರ ರಚಿಸುವ ನಿರ್ಧಾರ ತೆಗೆದುಕೊಂಡಿರುವುದು ಅಜಿತ್ ಪವಾರ್. ಇದನ್ನು ಎನ್ ಸಿಪಿ ಅನುಮೋದಿಸುವುದಿಲ್ಲ ಎಂದು ಶರದ್ ಪವಾರ್ ಟ್ವೀಟ್ ಮಾಡಿದ್ದಾರೆ.

ಇತ್ತ ಮತ್ತೊಂದು ಅವಧಿಗೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿರುವ ದೇವೇಂದ್ರ ಫಡ್ನವೀಸ್ ಮಾತನಾಡಿ, ಎನ್‌ಸಿಪಿಯ ಅಜಿತ್ ಪವಾರ್ ಗೆ ಧನ್ಯವಾದ ತಿಳಿಸಿದ್ದಾರೆ. ಅಜಿತ್ ಪವಾರ್ ಮಹಾರಾಷ್ಟ್ರದಲ್ಲಿ ಸ್ಥಿರ ಸರ್ಕಾರ ರಚನೆಗೆ ಉತ್ತಮ ನಿರ್ಧಾರ ತೆಗೆದುಕೊಂಡಿದ್ದಾರೆ. ಇನ್ನು ಕೆಲವು ನಾಯಕರು ನಮ್ಮೊಂದಿಗೆ ಬರಲಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಮಹಾ’ ರಾಜಕೀಯದಲ್ಲಿ ಸ್ಫೋಟಕ ತಿರುವು: ಬಿಜೆಪಿಯ ದೇವೇಂದ್ರ ಫಡ್ನವೀಸ್ ಸಿಎಂ ಆಗಿ ಪ್ರಮಾಣ

ಇತ್ತ ಬಿಜೆಪಿ ಅಧಿಕಾರಕ್ಕೇರುತ್ತಿದ್ದಂತೆ ಬಿಜೆಪಿ ಸಂಭ್ರಮಾಚರಣೆ ನಡೆಸಿತು. ಮಹಾರಾಷ್ಟ್ರದ ಹಲವು ಭಾಗಗಳಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಇನ್ನು ಶುಕ್ರವಾರ ಸಂಜೆಯಷ್ಟೇ ಶಿವಸೇನೆ, ಎನ್ ಸಿಪಿ ಮತ್ತು ಕಾಂಗ್ರೆಸ್ ಮಹತ್ವದ ಸಭೆ ನಡೆಸಿದ್ದವು. ಉನ್ನತ ನಾಯಕರ ಮಟ್ಟದಲ್ಲಿ ನಡೆದ ಸಭೆಯಲ್ಲಿ ಮೂರು ಪಕ್ಷಗಳ ನಾಯಕರು ಭಾಗಿಯಾಗಿದ್ದರು. ಶಿವಸೇನೆ ನೇತೃತ್ವದಲ್ಲಿ ಸರ್ಕಾರ ಜಾರಿಯಾಗಲಿದ್ದು, ಉದ್ಧವ್ ಠಾಕ್ರೆ ಅವರು ಸಿಎಂ ಆಗಲಿದ್ದಾರೆ ಎಂದೇ ಹೇಳಲಾಗಿತ್ತು. ಈ ಸಭೆಯಲ್ಲಿ ಅಜಿತ್ ಪವಾರ್ ಕೂಡ ಹಾಜರಿದ್ದರು. ಆದರೆ ದಿಢೀರ್ ಬೆಳವಣಿಗೆಯಲ್ಲಿ ಬಿಜೆಪಿ ಮತ್ತೆ ಅಧಿಕಾರ ಗದ್ದುಗೆ ಹಿಡಿದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...