Homeದಲಿತ್ ಫೈಲ್ಸ್ಮಥುರಾ| ಹಲ್ಲೆ ನಡೆದ ಎರಡು ವಾರಗಳ ಬಳಿಕ ನಡೆದ ದಲಿತ ಸಹೋದರಿಯರ ಮದುವೆ; ಬಿಗಿ ಪೊಲೀಸ್...

ಮಥುರಾ| ಹಲ್ಲೆ ನಡೆದ ಎರಡು ವಾರಗಳ ಬಳಿಕ ನಡೆದ ದಲಿತ ಸಹೋದರಿಯರ ಮದುವೆ; ಬಿಗಿ ಪೊಲೀಸ್ ಭದ್ರತೆ

- Advertisement -
- Advertisement -

ಮಥುರಾದ ಕರ್ನವಾಲ್‌ನಲ್ಲಿರುವ ದಲಿತ ಕುಟುಂಬದ ಇಬ್ಬರು ಸಹೋದರಿಯರು ಶುಕ್ರವಾರ ಮತ್ತೊಮ್ಮೆ ತಮ್ಮ ಮದುವೆಯ ಸಂಭ್ರಮದಲ್ಲಿ ಭಾಗಿಯಾದರು. ಪ್ರಬಲ ಜಾತಿಗೆ ಸೇರಿದ ಕನಿಷ್ಠ 15 ಜನರು ರಸ್ತೆ ಅಪಘಾತದಲ್ಲಿ ಉಂಟಾದ ಜಗಳದಲ್ಲಿ ದಲಿತ ಸಹೋದರಿಯರು ಮತ್ತು ಅವರ ಸಂಬಂಧಿಕರ ಮೇಲೆ ಹಲ್ಲೆ ನಡೆಸಿ, ಪಾರ್ಲರ್‌ನಿಂದ ಬರುತ್ತಿದ್ದ ನವ ವದುಗಳ ಮೇಲೆ ಕೆಸರು ಎರಚಿ ವಿಕೃತಿ ಮೆರೆದಿದ್ದರು. ದಾಳಿಯಿಂದ ಹೆದರಿದ್ದ ವರನ ಕಡೆಯವರು ಮದುವೆ ರದ್ದುಗೊಳಿಸಿದ್ದರು.

ಫೆಬ್ರವರಿ 21 ಕ್ಕೆ ಹೋಲಿಸಿದರೆ ಮದುವೆ ಸಿದ್ಧತೆಗಳು ಸಂಪೂರ್ಣವಾಗಿ ಭಿನ್ನವಾಗಿದ್ದವು. ಹಿಂಸಾತ್ಮಕ ಘರ್ಷಣೆಯ ಸಮಯದಲ್ಲಿ ಗೈರುಹಾಜರಾಗಿದ್ದ ಪೊಲೀಸ್ ಸಿಬ್ಬಂದಿ ನಿನ್ನೆ ನಡೆದ ‘ಬರಾತ್’ಗೆ ಪೂರ್ಣ ಬೆಂಗಾವಲು ನೀಡಿದರು. ಸಮಾಜ ಕಲ್ಯಾಣ ಸಚಿವ (ಸ್ವತಂತ್ರ ಉಸ್ತುವಾರಿ) ಅಸಿಮ್ ಅರುಣ್ ಅವರು ಕೂಡ ಸಹೋದರಿಯರ ವಿವಾಹದಲ್ಲಿ ಭಾಗವಹಿಸಿದ್ದರು.

ಕಳೆದ ಗುರುವಾರ, ರಾಜ್ಯಸಭಾ ಸದಸ್ಯ ಮತ್ತು ಸಮಾಜವಾದಿ ಪಕ್ಷದ ನಾಯಕ ರಾಮ್‌ಜಿಲಾಲ್ ಸುಮನ್ ನೇತೃತ್ವದ ನಿಯೋಗವು ಕುಟುಂಬಕ್ಕೆ ₹2 ಲಕ್ಷದ ಚೆಕ್ ನೀಡಲು ಕರ್ನವಾಲ್‌ನಲ್ಲಿತ್ತು. ಕಾಂಗ್ರೆಸ್ ಮತ್ತು ಆಜಾದ್ ಸಮಾಜ ಪಕ್ಷದ ನಾಯಕರು ಸಹ ದಲಿತ ಸಹೋದರಿಯರ ಮದುವೆಗೆ ತಮ್ಮ ಕೊಡುಗೆಗಳನ್ನು ನೀಡಿದರು.

“ಫೆಬ್ರವರಿ 21 ರಂದು, ಈ ಘಟನೆಯಿಂದಾಗಿ ಪದಮ್ ಸಿಂಗ್ ಅವರ ಹೆಣ್ಣುಮಕ್ಕಳ ವಿವಾಹಗಳನ್ನು ರದ್ದುಗೊಳಿಸಲಾಯಿತು ಎಂಬುದು ದುರದೃಷ್ಟಕರ. ಬಜೆಟ್ ಅಧಿವೇಶನ ನಡೆಯುತ್ತಿರುವಾಗ, 15 ಆರೋಪಿಗಳನ್ನು ಬಂಧಿಸುವಂತೆ ನೋಡಿಕೊಳ್ಳಲು ಮುಖ್ಯಮಂತ್ರಿಗಳು ನನ್ನನ್ನು ಇಲ್ಲಿಗೆ ಕಳುಹಿಸಿದರು. ನಾನು ಮದುವೆಗೆ ಹಾಜರಾಗುವುದಾಗಿ ಭರವಸೆ ನೀಡಿದ್ದೆ, ಇಂದು ಇಲ್ಲಿದ್ದೇನೆ” ಎಂದು ಸಚಿವ ಅರುಣ್ ಹೇಳಿದರು.

ಶನಿವಾರ ಗ್ರಾಮದಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು. ವಿವಾಹ ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಲು ಎಸ್‌ಪಿ (ನಗರ) ಅರವಿಂದ್ ಕುಮಾರ್ ಕೂಡ ಗ್ರಾಮದಲ್ಲಿದ್ದರು.

ಘಟನೆ ಹಿನ್ನೆಲೆ:

ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ರಿಫೈನರಿ ಪ್ರದೇಶದಲ್ಲಿ ನಡೆದ ಸಣ್ಣ ಅಪಘಾತವು ಹಿಂಸಾತ್ಮಕ ಘರ್ಷಣೆಗೆ ಕಾರಣವಾಗಿತ್ತು. ಈ ಘಟನೆಯಲ್ಲಿ ದಲಿತ ಕುಟುಂಬದ ಇಬ್ಬರು ಸಹೋದರಿಯರ ವಿವಾಹವೆ ರದ್ದಾಗಿದ್ದು, ಹಲವಾರು ಅತಿಥಿಗಳಿಗೆ ಗಾಯಗೊಂಡಿದ್ದರು.

ಬ್ಯೂಟಿ ಪಾರ್ಲರ್‌ನಿಂದ ಇಬ್ಬರು ಸಹೋದರಿಯರು ತಮ್ಮ ಸಂಬಂಧಿಕರೊಂದಿಗೆ ಮನೆಗೆ ಹಿಂತಿರುಗುತ್ತಿದ್ದಾಗ ಅವರ ಕಾರು ಮೋಟಾರ್‌ಸೈಕಲ್‌ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದರ ನಂತರ, ಮೋಟಾರ್‌ಸೈಕಲ್‌ನಲ್ಲಿದ್ದ ಕರ್ಣವಾಲ್ ಗ್ರಾಮದ ನಿವಾಸಿಗಳಾದ ಲೋಕೇಶ್, ರೋಹ್ತಾಶ್ ಮತ್ತು ಸತೀಶ್ ಕಾರಿನ ಪ್ರಯಾಣಿಕರೊಂದಿಗೆ ವಾಗ್ವಾದ ನಡೆಸಿದರು. ಮೂವರು ಪುರುಷರು ಮಹಿಳೆಯರನ್ನು ಕಾರಿನಿಂದ ಹೊರಗೆಳೆದು, ಅವರ ಮೇಲೆ ಹಲ್ಲೆ ನಡೆಸಿ, ಅವರ ಮುಖಕ್ಕೆ ಕೆಸರು ಎರಚಿದ್ದಾರೆ ಎಂದು ಆರೋಪಿಸಲಾಗಿದೆ.

ವಧುವಿನ ಕುಟುಂಬ ಸದಸ್ಯರಿಗೆ ದಾಳಿಯ ಬಗ್ಗೆ ತಿಳಿದಾಗ, ಅವರು ಸ್ಥಳಕ್ಕೆ ಧಾವಿಸಿದರು. ಶಂಕಿತ ದಾಳಿಕೋರರು ಸಹ ಪ್ರತಿಯಾಗಿ ತಮ್ಮ ಸಂಬಂಧಿಕರನ್ನು ಕರೆದರು. ನಂತರ ನಡೆದ ಘರ್ಷಣೆಯಲ್ಲಿ, ವಧುವಿನ ತಂದೆ ಸೇರಿದಂತೆ ಹಲವಾರು ಜನರು ಗಾಯಗೊಂಡರು, ಅವರ ತಲೆಗೆ ಗಾಯವಾಗಿತ್ತು.

ಮೀರತ್| ಅತ್ಯಾಚಾರದ ವಿಡಿಯೊ ತೋರಿಸಿ ದಲಿತ ಯುವತಿಯ ವಿವಾಹ ಮುರಿದ ದುರುಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...