Homeಚಳವಳಿಶುಲ್ಕ ಹೆಚ್ಚಳದ ಆದೇಶ ಮರುಪರಿಶೀಲನೆಗೆ ಒಪ್ಪಿದ ಕೇಂದ್ರ : JNU ವಿದ್ಯಾರ್ಥಿ ಹೋರಾಟಕ್ಕೆ ಮೊದಲ ಗೆಲುವು..

ಶುಲ್ಕ ಹೆಚ್ಚಳದ ಆದೇಶ ಮರುಪರಿಶೀಲನೆಗೆ ಒಪ್ಪಿದ ಕೇಂದ್ರ : JNU ವಿದ್ಯಾರ್ಥಿ ಹೋರಾಟಕ್ಕೆ ಮೊದಲ ಗೆಲುವು..

- Advertisement -
- Advertisement -

ಶುಲ್ಕ ಹೆಚ್ಚಳದ ವಿರುದ್ಧ ಕಳೆದ 10 ದಿನಗಳಿಂದ ಭಾರೀ ಹೋರಾಟದ ಕಾರಣಕ್ಕೆ ದೇಶದ ಗಮನ ಸೆಳೆದಿರುವ ಜೆಎನ್‌ಯುನಲ್ಲಿ ಪರಿಹಾರ ಭರವಸೆ ದೊರಕಿದೆ. ಶುಲ್ಕ ಹೆಚ್ಚಳದ ಆದೇಶ ಮರುಪರಿಶೀಲನೆಗೆ ಒಪ್ಪಿದ ಕೇಂದ್ರ ಕೇಂದ್ರ ಸರ್ಕಾರವು ಅದಕ್ಕೊಂದು ಸಮಿತಿಯನ್ನು ರಚಿಸಿದೆ. ಸಮಿತಿಯು ಈಗಾಗಲೇ ವಿವಿಯ ವಿದ್ಯಾರ್ಥಿಗಳನ್ನು ಭೇಟಿ ಮಾಡಿ ಅವರ ಹಕ್ಕೊತ್ತಾಯಗಳ ಕುರಿತು ಚರ್ಚೆ ನಡೆಸಿದೆ.

ಇದು ವಿದ್ಯಾರ್ಥಿಗಳ ನಿರಂತರ ಹೋರಾಟಕ್ಕೆ ಸಿಕ್ಕ ಮೊದಲ ಗೆಲುವಾಗಿದೆ. ಮುಂದಿನ ಒಂದು ವಾರದಲ್ಲಿ ಜೆಎನ್‌ಯು ಶುಲ್ಕ ಹೆಚ್ಚಳದಲ್ಲಿ ವಿಚಾರದಲ್ಲಿ ಸಮಿತಿಯು ತನ್ನ ವರದಿಯನ್ನು ಸಲ್ಲಿಸಲಿದೆ.

ಯುಜಿಸಿ ಮಾಜಿ ಅಧ್ಯಕ್ಷ ವಿ.ಎಸ್.ಚೌಹಾನ್, ಎಐಸಿಟಿಇ ಅಧ್ಯಕ್ಷ ಅನಿಲ್ ಸಹಸ್ರಬುದ್ಧೆ ಮತ್ತು ಯುಜಿಸಿ ಕಾರ್ಯದರ್ಶಿ ರಜನೀಶ್ ಜೈನ್ ಸೇರಿದಂತೆ ಮೂವರು ಸದಸ್ಯರ ಸಮಿತಿಯು ಶುಕ್ರವಾರ ಜೆಎನ್‌ಯು ಕ್ಯಾಂಪಸ್‌ಗೆ ಭೇಟಿ ನೀಡಿ ವಿದ್ಯಾರ್ಥಿ ಸಂಘದ ಪ್ರತಿನಿಧಿಗಳನ್ನು ಭೇಟಿ ಮಾಡಿದೆ.

ಇದನ್ನೂ ಓದಿ: JNU ವಿದ್ಯಾರ್ಥಿಗಳ ಮೇಲಿನ ದಾಳಿ ಖಂಡಿಸಿ ರಾಜ್ಯದ್ಯಂತ ವಿದ್ಯಾರ್ಥಿಗಳಿಂದ ಪ್ರತಿಭಟನೆ..

ವಿದ್ಯಾರ್ಥಿಗಳು ತಮ್ಮ ಹೋರಾಟವನ್ನು ತೀವ್ರಗೊಳಿಸಿದ್ದರಿಂದ ಸಂಧಾನಕ್ಕಾಗಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವು ಮೂರು ಸದಸ್ಯರ ಸಮಿತಿಯನ್ನು ನೇಮಿಸಿದೆ.

“ನಾವು ವಿದ್ಯಾರ್ಥಿ ಸಂಘದ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದೇವೆ ಮತ್ತು ಅವರ ಸಲಹೆಗಳನ್ನು ಗಣನೆಗೆ ತೆಗೆದುಕೊಂಡಿದ್ದೇವೆ. ಸಭೆ ಎರಡು ಗಂಟೆಗಳ ಕಾಲ ನಡೆಯಿತು, ಅಲ್ಲಿ ವಿವಿ ಆಡಳಿತ ಮತ್ತು ವಿದ್ಯಾರ್ಥಿಗಳ ನಡುವಿನ ಭಿನ್ನಾಭಿಪ್ರಾಯದ ಹಿಂದಿನ ಕಾರಣಗಳನ್ನು ನಾವು ತಿಳಿದುಕೊಂಡಿದ್ದೇವೆ” ಎಂದು ಸಮಿತಿಯ ಸದಸ್ಯರೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

“ಇದು ಅಂತಿಮ ಸಭೆಯಾಗಿದ್ದು ನಾವು ಎಲ್ಲಾ ದೃಷ್ಟಿಕೋನಗಳಿಂದಲೂ ಆಲಿಸಿದ್ದೇವೆ. ನಾವು ಈಗ ನಮ್ಮ ಶಿಫಾರಸುಗಳನ್ನು ಒಂದು ವಾರದೊಳಗೆ ಸಲ್ಲಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

“ನಮ್ಮ ಚರ್ಚೆಯು ಸಕಾರಾತ್ಮಕವಾಗಿದೆ ಆದರೆ ಅಂತಿಮ ನಿರ್ಧಾರವನ್ನು ಜೆಎನ್‌ಯು ಆಡಳಿತವು ತೆಗೆದುಕೊಳ್ಳುತ್ತದೆ. ನಾವು ಶೀಘ್ರದಲ್ಲೇ ಶಿಫಾರಸುಗಳನ್ನು ಸಲ್ಲಿಸುತ್ತೇವೆ” ಎಂದು ವಿ.ಎಸ್. ಚೌಹಾನ್ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಹಾಗಾಗಿ ವಿದ್ಯಾರ್ಥಿಗಳು ಸಂಪೂರ್ಣ ಶುಲ್ಕ ಹೆಚ್ಚಳದ ಆದೇಶ ವಾಪಸಾತಿ ಆಗುವವರೆಗೂ ತಮ್ಮ ಹೋರಾಟವನ್ನು ಮುಂದುವರೆಸಲು ನಿರ್ಧರಿಸಿದ್ದಾರೆ. ಅವರ ಹೋರಾಟಕ್ಕೆ JNU ಹಿರಿಯ ವಿದ್ಯಾರ್ಥಿಗಳು ಸಹ ಸಾಥ್‌ ನೀಡಿದ್ದು ಇಂದು ದೆಹಲಿಯ ಮಂಡಿಹೌಸ್‌ನಲ್ಲಿ ಭಾರೀ ಪ್ರತಿಭಟನೆ ನಡೆಸುತ್ತಿದ್ದಾರೆ.

ಜೊತೆಗೆ ಏಮ್ಸ್‌ (All india Institute of medical science) ವಿದ್ಯಾರ್ಥಿ ಸಂಘವು ಕೂಡ ಪತ್ರಿಕಾ ಹೇಳಿಕೆ ನೀಡಿದ್ದು JNU ವಿದ್ಯಾರ್ಥಿಗಳ ಹೋರಾಟಕ್ಕೆ ಪೂರ್ಣ ಬೆಂಬಲ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...