Homeಮುಖಪುಟಹೋಳಿಯಂದು ಮುಸ್ಲಿಮರು ಮನೆಯೊಳಗೇ ಇರಿ, ಹಿಂದೂಗಳಿಗೆ ಹಬ್ಬ ಆಚರಿಸಲು ಬಿಡಿ ಎಂದ ಬಿಹಾರದ ಬಿಜೆಪಿ ಶಾಸಕ!

ಹೋಳಿಯಂದು ಮುಸ್ಲಿಮರು ಮನೆಯೊಳಗೇ ಇರಿ, ಹಿಂದೂಗಳಿಗೆ ಹಬ್ಬ ಆಚರಿಸಲು ಬಿಡಿ ಎಂದ ಬಿಹಾರದ ಬಿಜೆಪಿ ಶಾಸಕ!

- Advertisement -
- Advertisement -

“ಈ ವರ್ಷ ಪವಿತ್ರ ರಂಝಾನ್ ಮಾಸದ ಶುಕ್ರವಾರ ಬರುವ ಹೋಳಿಯಂದು ಮನೆಯೊಳಗೆ ಇರಿ ಮತ್ತು ಹಿಂದೂಗಳು ತಮ್ಮ ಹಬ್ಬವನ್ನು ಯಾವುದೇ ಅಡೆತಡೆಗಳಿಲ್ಲದೆ ಆಚರಿಸಲು ಬಿಡಿ” ಎಂದು ಬಿಹಾರದ ಬಿಜೆಪಿ ಶಾಸಕರೊಬ್ಬರು ಸೋಮವಾರ (ಮಾ.10) ಮುಸ್ಲಿಮರಿಗೆ ಮನವಿ ಮಾಡಿರುವುದು ವಿವಾದಕ್ಕೀಡಾಗಿದೆ.

ಮಧುಬನಿ ಜಿಲ್ಲೆಯ ಬಿಸ್ಫಿ ವಿಧಾನಸಭಾ ಕ್ಷೇತ್ರದ ಶಾಸಕ ಹರಿಭೂಷಣ್ ಠಾಕೂರ್ ಬಚೌಲ್ ಅವರು ವಿಧಾನಸಭೆ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಈ ಹೇಳಿಕೆ ನೀಡಿದ್ದಾರೆ.

“ಒಂದು ವರ್ಷದಲ್ಲಿ 52 ಶುಕ್ರವಾರಗಳು ಇರುತ್ತವೆ. ಅವುಗಳಲ್ಲಿ ಒಂದು ಹೋಳಿಯ ದಿನವೇ ಬಂದಿದೆ. ಆದ್ದರಿಂದ, ಮುಸ್ಲಿಮರು ಹಿಂದೂಗಳಿಗೆ ಹಬ್ಬವನ್ನು ಆಚರಿಸಲು ಬಿಡಬೇಕು. ಅವರ ಮೇಲೆ ಬಣ್ಣಗಳನ್ನು ಬಳಿದರೆ ನೊಂದುಕೊಳ್ಳಬಾರದು. ಅವರಿಗೆ ಅಂತಹ ಸಮಸ್ಯೆ ಇದ್ದರೆ, ಅವರು ಮನೆಯಲ್ಲೇ ಇರಬೇಕು. ಕೋಮು ಸಾಮರಸ್ಯವನ್ನು ಕಾಪಾಡಿಕೊಳ್ಳಲು ಇದು ಅತ್ಯಗತ್ಯ” ಎಂದು ಠಾಕೂರ್ ಹೇಳಿದ್ದಾರೆ.

ಮುಸ್ಲಿಮರು ರಂಝಾನ್ ಸಮಯದಲ್ಲಿ ಉಪವಾಸ ಆಚರಿಸುತ್ತಾರೆ. ಶುಕ್ರವಾರದಂದು ವಿಶೇಷ ಪ್ರಾರ್ಥನೆ ಮಾಡುತ್ತಾರೆ ಎಂದಾಗ, ಶಾಸಕ ಠಾಕೂರ್, “ಅವರದು ಯಾವಾಗಲೂ ದ್ವಿಮುಖ ನೀತಿ. ಬಣ್ಣದ ಪುಡಿ ಮಾರಾಟ ಮಾಡುವ ಅಂಗಡಿಗಳನ್ನು ಹಾಕುವ ಮೂಲಕ ಹಣ ಗಳಿಸಲು ಅವರಿಗೆ ಯಾವ ಅಡೆತಡೆಯೂ ಇಲ್ಲ. ಆದರೆ ಕೆಲವು ಬಣ್ಣದ ಕಲೆಗಳು ಅವರ ಬಟ್ಟೆಗಳ ಮೇಲೆ ಬಿದ್ದರೆ, ಅದು ಅವರಿಗೆ ಆಗುವುದಿಲ್ಲ”, ಎಂದಿದ್ದಾರೆ.

ಆರ್‌ಜೆಡಿ ಶಾಸಕ ಮತ್ತು ಮಾಜಿ ಸಚಿವ ಇಸ್ರೈಲ್ ಮನ್ಸೂರಿ, ಬಚೌಲ್ ಅವರ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ಹಬ್ಬಗಳ ವಿಷಯಕ್ಕೆ ಬಂದಾಗ ಹಿಂದೂಗಳು ಮತ್ತು ಮುಸ್ಲಿಮರ ನಡುವೆ ಯಾವುದೇ ಸಮಸ್ಯೆ ಇಲ್ಲ. ಹಿಂದೂಗಳು ನಮ್ಮ ಇಫ್ತಾರ್ ಕೂಟಗಳಿಗೆ ಹಾಜರಾಗುತ್ತಾರೆ. ಬಿಜೆಪಿ ಶಾಸಕರು ಹೋಳಿಯಂದು ಮುಸ್ಲಿಮರ ಬಗ್ಗೆ ಏಕೆ ಚಿಂತೆ ಮಾಡುತ್ತಿದ್ದಾರೆ? ಇವರೆಲ್ಲ ರಾಜಕೀಯಕ್ಕಾಗಿ ಕೋಮು ಗಲಭೆಯನ್ನು ಹುಟ್ಟುಹಾಕುತ್ತಾರೆ. ಇವರೇ ಸನಾತನದ ಧ್ವಜಧಾರಿಗಳಂತೆ ನಟಿಸುತ್ತಾರೆ” ಎಂದು ಹೇಳಿದ್ದಾರೆ.

ರಾಜ್ಯ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮತ್ತು ಜೆಡಿ (ಯು) ನಾಯಕ ಜಮಾ ಖಾನ್, “ಹೋಳಿಯ ವೇಳೆ ಯಾವುದೇ ಅಹಿತಕರ ಘಟನೆ ನಡೆಯುವುದಿಲ್ಲ. ಹಬ್ಬದ ಸಮಯದಲ್ಲಿ ಸಾಮರಸ್ಯವನ್ನು ಕಾಪಾಡಲು ಸ್ಪಷ್ಟವಾಗಿ ಸೂಚನೆ ನೀಡಲಾಗಿದೆ” ಎಂದಿದ್ದಾರೆ.

ಮಧ್ಯಪ್ರದೇಶ | ಮುಸ್ಲಿಂ ವಿರೋಧಿ ಘೋಷಣೆ ಕೂಗಿ ಮಸೀದಿಯ ಮುಂದೆ ವಿಜಯೋತ್ಸವ ರ‍್ಯಾಲಿ ನಡೆಸಿದ ದುಷ್ಕರ್ಮಿಗಳು; ಭುಗಿಲೆದ್ದ ಕೋಮು ಸಂಘರ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...