Homeಅಂತರಾಷ್ಟ್ರೀಯ2024 ರಲ್ಲಿ ಭಾರತ ವಿಶ್ವದ ಎರಡನೇ ಅತಿದೊಡ್ಡ ಶಸ್ತ್ರಾಸ್ತ್ರ ಆಮದುದಾರ ರಾಷ್ಟ್ರ: ವರದಿ

2024 ರಲ್ಲಿ ಭಾರತ ವಿಶ್ವದ ಎರಡನೇ ಅತಿದೊಡ್ಡ ಶಸ್ತ್ರಾಸ್ತ್ರ ಆಮದುದಾರ ರಾಷ್ಟ್ರ: ವರದಿ

- Advertisement -
- Advertisement -

2024ರಲ್ಲಿ ವಿಶ್ವದ ಎರಡನೇ ಅತಿದೊಡ್ಡ ಪ್ರಮುಖ ಶಸ್ತ್ರಾಸ್ತ್ರ ಆಮದುದಾರ ರಾಷ್ಟ್ರವಾಗಿ ಭಾರತ ಹೊರಹೊಮ್ಕಿದೆ ಎಂದು ಸ್ಟಾಕ್‌ಹೋಮ್ ಇಂಟರ್ನ್ಯಾಷನಲ್ ಪೀಸ್ ರಿಸರ್ಚ್ ಇನ್‌ಸ್ಟಿಟ್ಯೂಟ್ (SIPRI)ನ ಹೊಸ ವರದಿ ಉಲ್ಲೇಖಿಸಿ ಎಂದು ಮಂಗಳವಾರ ದಿ ಪ್ರಿಂಟ್ ವರದಿ ಮಾಡಿದೆ. ಆ ವರ್ಷ ಜಾಗತಿಕವಾಗಿ ಆಮದಾಗಿದ್ದ ಒಟ್ಟು ಶಸ್ತ್ರಾಸ್ತ್ರಗಳಲ್ಲಿ ಭಾರತವು 8.3%ದಷ್ಟು ಪಾಲನ್ನು ಹೊಂದಿತ್ತು ಎಂದು ವರದಿ ಉಲ್ಲೇಖಿಸಿದೆ. 2024 ರಲ್ಲಿ ಭಾರತ

2020 ಮತ್ತು 2024 ರ ನಡುವೆ ಜಾಗತಿಕವಾಗಿ ಆಮದಾದ ಒಟ್ಟು ಶಸ್ತ್ರಾಸ್ತ್ರಗಳಲ್ಲಿ 8.8% ದಷ್ಟು ಉಕ್ರೇನ್ ಆಮದು ಮಾಡಿದ್ದು, ಅಗ್ರ ಸ್ಥಾನವನ್ನು ಹೊಂದಿದೆ ಎಂದು ವರದಿ ಉಲ್ಲೇಖಿಸಿದೆ. 2022 ರ ಫೆಬ್ರವರಿಯಲ್ಲಿ ರಷ್ಯಾವು ಉಕ್ರೇನ್ ಮೇಲೆ ಪೂರ್ಣ ಪ್ರಮಾಣದ ಆಕ್ರಮಣ ನಡೆಸಿದ ನಂತರ 35 ಕ್ಕೂ ಹೆಚ್ಚು ದೇಶಗಳು ಉಕ್ರೇನ್‌ಗೆ ಶಸ್ತ್ರಾಸ್ತ್ರಗಳನ್ನು ಪೂರೈಸಿದ್ದವು. 2015 ಮತ್ತು 2019 ರ ನಡುವಿನ ಅವಧಿಗೆ ಹೋಲಿಸಿದರೆ ಉಕ್ರೇನ್‌ನ ಶಸ್ತ್ರಾಸ್ತ್ರ ಆಮದು ಸುಮಾರು ನೂರು ಪಟ್ಟು ಹೆಚ್ಚಾಗಿದೆ ಎಂದು ವರದಿ ಉಲ್ಲೇಖಿಸಿದೆ.

“ಉಕ್ರೇನ್‌ಗೆ ಸರಬರಾಜು ಮಾಡಲಾದ ಪ್ರಮುಖ ಶಸ್ತ್ರಾಸ್ತ್ರಗಳಲ್ಲಿ ಹೆಚ್ಚಿನವು ಅಮೆರಿಕ (45%), ನಂತರ ಜರ್ಮನಿ (12%) ಮತ್ತು ಪೋಲೆಂಡ್ (11%) ನಿಂದ ಬಂದವು. 2020–24 ರಲ್ಲಿ ಟಾಪ್ 10 ಆಮದುದಾರರ ಪಟ್ಟಿಯಲ್ಲಿ ಉಕ್ರೇನ್ ಏಕೈಕ ಯುರೋಪಿಯನ್ ರಾಜ್ಯವಾಗಿತ್ತು. ಆದಾಗ್ಯೂ ಇತರ ಹಲವು ಯುರೋಪಿಯನ್ ರಾಜ್ಯಗಳು ಈ ಅವಧಿಯಲ್ಲಿ ತಮ್ಮ ಶಸ್ತ್ರಾಸ್ತ್ರ ಆಮದುಗಳನ್ನು ಗಮನಾರ್ಹವಾಗಿ ಹೆಚ್ಚಿಸಿವೆ.” ಎಂದು ವರದಿ ಹೇಳಿದೆ.

2015-19 ಮತ್ತು 2020-24 ರ ನಡುವೆ ಭಾರತದ ಶಸ್ತ್ರಾಸ್ತ್ರ ಆಮದು ಶೇಖಡ 9.3 ರಷ್ಟು ಕಡಿಮೆಯಾಗಿದೆ, ಇದಕ್ಕೆ ಭಾಗಶಃ ಕಾರಣ ಭಾರತವು ದೇಶೀಯವಾಗಿ ಶಸ್ತ್ರಾಸ್ತ್ರ ತಯಾರಿಕಾ ಸಾಮರ್ಥ್ಯ ಹೆಚ್ಚುತ್ತಿರುವುದೇ ಆಗಿದೆ ಎಂದು ವರದಿ ಹೇಳಿದೆ.

“ಭಾರತ ಮತ್ತು ರಷ್ಯಾ ನಡುವಿನ ಸಂಬಂಧಗಳು ಸ್ನೇಹಪರವಾಗಿಯೇ ಉಳಿದಿವೆ ಎಂದು ಎರಡೂ ಕಡೆಯಿಂದ ಇತ್ತೀಚೆಗೆ ಸಾರ್ವಜನಿಕ ಘೋಷಣೆಗಳ ಹೊರತಾಗಿಯೂ, ಪ್ರಮುಖ ಶಸ್ತ್ರಾಸ್ತ್ರಗಳಿಗಾಗಿ ಭಾರತದ ಹೊಸ ಮತ್ತು ಯೋಜಿತ ಆದೇಶಗಳಲ್ಲಿಯೂ ಬದಲಾವಣೆ ಗೋಚರಿಸುತ್ತಿದೆ. ಅವುಗಳಲ್ಲಿ ಹೆಚ್ಚಿನವು ಪಾಶ್ಚಿಮಾತ್ಯ ಪೂರೈಕೆದಾರರಿಂದ ಬರುತ್ತವೆ” ಎಂದು SIPRI ವರದಿ ಹೇಳಿದೆ.

ಈಗಲೂ ರಷ್ಯಾ ಭಾರತದ ಅತಿದೊಡ್ಡ ಶಸ್ತ್ರಾಸ್ತ್ರ ಪೂರೈಕೆದಾರರಾಗಿ ಉಳಿದಿದೆ. ಆದರೆ ಭಾರತೀಯ ಶಸ್ತ್ರಾಸ್ತ್ರ ರಫ್ತಿನಲ್ಲಿ ಅದರ ಪಾಲು 2020-24 ರಲ್ಲಿ 36-38% ಕ್ಕೆ ಇಳಿದಿದೆ. ಇದು 2015-19 ರಲ್ಲಿ 55% ಮತ್ತು 2010-14 ರಲ್ಲಿ 72% ರಿಂದ ಕಡಿಮೆಯಾಗಿದೆ ಎಂದು ವರದಿ ಹೇಳಿದೆ. 2024 ರಲ್ಲಿ ಭಾರತ

ಭಾರತವು ಫ್ರಾನ್ಸ್, ಇಸ್ರೇಲ್ ಮತ್ತು ಯುನೈಟೆಡ್ ಸ್ಟೇಟ್ಸ್ ಕಡೆಗೆ ಗಮನ ಹರಿಸಿದ್ದರಿಂದ 2015-19 ಮತ್ತು 2020-24 ರ ನಡುವೆ ಭಾರತದ ರಷ್ಯಾದ ಮೇಲಿನ ಅವಲಂಬನೆ 64% ರಷ್ಟು ಕಡಿಮೆಯಾಗಿದೆ ಎಂದು SIPRI ಹೇಳಿದೆ. ದಕ್ಷಿಣ ಕೊರಿಯಾ ಮತ್ತು ದಕ್ಷಿಣ ಆಫ್ರಿಕಾದಿಂದ ಭಾರತವು ಮೂರನೇ ಅತಿದೊಡ್ಡ ಆಮದುದಾರ ರಾಷ್ಟ್ರವಾಗಿದ್ದು, ಕ್ರಮವಾಗಿ 7% ಮತ್ತು 11% ಪಾಲನ್ನು ಹೊಂದಿದೆ.

ಫ್ರಾನ್ಸ್ ಮತ್ತು ಇಸ್ರೇಲ್‌ನಿಂದ ಶಸ್ತ್ರಾಸ್ತ್ರ ಖರೀದಿಸುತ್ತಿರುವ ಅಗ್ರ ಶಸ್ತ್ರಾಸ್ತ್ರ ಆಮದುದಾರ ರಾಷ್ಟ್ರವಾಗಿ ಭಾರತವು ಇದ್ದು, ಅವುಗಳ ರಫ್ತಿನಲ್ಲಿ ಕ್ರಮವಾಗಿ 28% ಮತ್ತು 34% ರಷ್ಟಿದೆ. 2015-19 ಮತ್ತು 2020-24 ರ ನಡುವೆ ಫ್ರಾನ್ಸ್‌ನಿಂದ ಭಾರತದ ಶಸ್ತ್ರಾಸ್ತ್ರ ಆಮದು 11% ರಷ್ಟು ಹೆಚ್ಚಾಗಿದ್ದು, ಆದರೆ ಇಸ್ರೇಲ್‌ನಿಂದ ಆಮದು 2% ರಷ್ಟು ಕಡಿಮೆಯಾಗಿದೆ. ಆದಾಗ್ಯೂ, ಭಾರತವು ಅಮೆರಿಕದ ಅಗ್ರ ಮೂರು ಆಮದುದಾರರಲ್ಲಿ ಇರಲಿಲ್ಲ.

ಭಾರತವು ಫ್ರಾನ್ಸ್‌ನೊಂದಿಗೆ 36 ರಫೇಲ್ ಫೈಟರ್ ಜೆಟ್‌ಗಳು ಮತ್ತು ಆರು ಸ್ಕಾರ್ಪೀನ್-ಕ್ಲಾಸ್ ಸಾಂಪ್ರದಾಯಿಕ ಜಲಾಂತರ್ಗಾಮಿ ನೌಕೆಗಳ ಪ್ರಮುಖ ರಕ್ಷಣಾ ಒಪ್ಪಂದಗಳಿಗೆ ಸಹಿ ಹಾಕಿದೆ. ಜೊತೆಗೆ 26 ರಫೇಲ್-ಎಂ ಜೆಟ್‌ಗಳು ಮತ್ತು ಇನ್ನೂ ಮೂರು ಜಲಾಂತರ್ಗಾಮಿ ನೌಕೆಗಳ ಒಪ್ಪಂದಗಳನ್ನು ಅಂತಿಮಗೊಳಿಸಲು ಸಿದ್ಧವಾಗಿದೆ.

1990-94ರ ನಂತರ ಚೀನಾ ಮೊದಲ ಬಾರಿಗೆ ಟಾಪ್ 10 ಶಸ್ತ್ರಾಸ್ತ್ರ ಆಮದುದಾರರ ಪಟ್ಟಿಯಿಂದ ಹೊರಗುಳಿದಿದೆ. ಇದು ಅದರ ವಿಸ್ತರಿಸುತ್ತಿರುವ ದೇಶೀಯ ರಕ್ಷಣಾ ಉದ್ಯಮವನ್ನು ಪ್ರತಿಬಿಂಬಿಸುತ್ತದೆ ಎಂದು ದಿ ಹಿಂದೂ ವರದಿ ಮಾಡಿದೆ. ವಿಶ್ವದ 10 ಅತಿದೊಡ್ಡ ಆಮದುದಾರರಲ್ಲಿ ನಾಲ್ಕು ಏಷ್ಯಾ ಮತ್ತು ಓಷಿಯಾನಿಯಾದಲ್ಲಿವೆ: ಭಾರತ, ಪಾಕಿಸ್ತಾನ, ಜಪಾನ್ ಮತ್ತು ಆಸ್ಟ್ರೇಲಿಯಾ. ಜಾಗತಿಕ ಶಸ್ತ್ರಾಸ್ತ್ರ ಆಮದುಗಳಲ್ಲಿ ಈ ಪ್ರದೇಶವು ಶೇ. 33 ರಷ್ಟು ಪಾಲನ್ನು ಹೊಂದಿದ್ದರೆ, ಯುರೋಪ್ (28%), ಪಶ್ಚಿಮ ಏಷ್ಯಾ (27%), ಅಮೆರಿಕ (6.2%) ಮತ್ತು ಆಫ್ರಿಕಾ (4.5%) ನಂತರದ ಸ್ಥಾನದಲ್ಲಿವೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ: ಧರ್ಮೇಂದ್ರ ಪ್ರಧಾನ್ ವಿರುದ್ಧ ಹಕ್ಕು ಚ್ಯುತಿ ನೋಟಿಸ್ ಸಲ್ಲಿಸಿದ ಸಂಸದೆ ಕನಿಮೋಳಿ : ಸಂಸತ್ ಹೊರಗೆ ಡಿಎಂಕೆ ಸಂಸದರಿಂದ ಪ್ರತಿಭಟನೆ

ಧರ್ಮೇಂದ್ರ ಪ್ರಧಾನ್ ವಿರುದ್ಧ ಹಕ್ಕು ಚ್ಯುತಿ ನೋಟಿಸ್ ಸಲ್ಲಿಸಿದ ಸಂಸದೆ ಕನಿಮೋಳಿ : ಸಂಸತ್ ಹೊರಗೆ ಡಿಎಂಕೆ ಸಂಸದರಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...