Homeಅಂತರಾಷ್ಟ್ರೀಯ2024 ರಲ್ಲಿ ಭಾರತ ವಿಶ್ವದ ಎರಡನೇ ಅತಿದೊಡ್ಡ ಶಸ್ತ್ರಾಸ್ತ್ರ ಆಮದುದಾರ ರಾಷ್ಟ್ರ: ವರದಿ

2024 ರಲ್ಲಿ ಭಾರತ ವಿಶ್ವದ ಎರಡನೇ ಅತಿದೊಡ್ಡ ಶಸ್ತ್ರಾಸ್ತ್ರ ಆಮದುದಾರ ರಾಷ್ಟ್ರ: ವರದಿ

- Advertisement -
- Advertisement -

2024ರಲ್ಲಿ ವಿಶ್ವದ ಎರಡನೇ ಅತಿದೊಡ್ಡ ಪ್ರಮುಖ ಶಸ್ತ್ರಾಸ್ತ್ರ ಆಮದುದಾರ ರಾಷ್ಟ್ರವಾಗಿ ಭಾರತ ಹೊರಹೊಮ್ಕಿದೆ ಎಂದು ಸ್ಟಾಕ್‌ಹೋಮ್ ಇಂಟರ್ನ್ಯಾಷನಲ್ ಪೀಸ್ ರಿಸರ್ಚ್ ಇನ್‌ಸ್ಟಿಟ್ಯೂಟ್ (SIPRI)ನ ಹೊಸ ವರದಿ ಉಲ್ಲೇಖಿಸಿ ಎಂದು ಮಂಗಳವಾರ ದಿ ಪ್ರಿಂಟ್ ವರದಿ ಮಾಡಿದೆ. ಆ ವರ್ಷ ಜಾಗತಿಕವಾಗಿ ಆಮದಾಗಿದ್ದ ಒಟ್ಟು ಶಸ್ತ್ರಾಸ್ತ್ರಗಳಲ್ಲಿ ಭಾರತವು 8.3%ದಷ್ಟು ಪಾಲನ್ನು ಹೊಂದಿತ್ತು ಎಂದು ವರದಿ ಉಲ್ಲೇಖಿಸಿದೆ. 2024 ರಲ್ಲಿ ಭಾರತ

2020 ಮತ್ತು 2024 ರ ನಡುವೆ ಜಾಗತಿಕವಾಗಿ ಆಮದಾದ ಒಟ್ಟು ಶಸ್ತ್ರಾಸ್ತ್ರಗಳಲ್ಲಿ 8.8% ದಷ್ಟು ಉಕ್ರೇನ್ ಆಮದು ಮಾಡಿದ್ದು, ಅಗ್ರ ಸ್ಥಾನವನ್ನು ಹೊಂದಿದೆ ಎಂದು ವರದಿ ಉಲ್ಲೇಖಿಸಿದೆ. 2022 ರ ಫೆಬ್ರವರಿಯಲ್ಲಿ ರಷ್ಯಾವು ಉಕ್ರೇನ್ ಮೇಲೆ ಪೂರ್ಣ ಪ್ರಮಾಣದ ಆಕ್ರಮಣ ನಡೆಸಿದ ನಂತರ 35 ಕ್ಕೂ ಹೆಚ್ಚು ದೇಶಗಳು ಉಕ್ರೇನ್‌ಗೆ ಶಸ್ತ್ರಾಸ್ತ್ರಗಳನ್ನು ಪೂರೈಸಿದ್ದವು. 2015 ಮತ್ತು 2019 ರ ನಡುವಿನ ಅವಧಿಗೆ ಹೋಲಿಸಿದರೆ ಉಕ್ರೇನ್‌ನ ಶಸ್ತ್ರಾಸ್ತ್ರ ಆಮದು ಸುಮಾರು ನೂರು ಪಟ್ಟು ಹೆಚ್ಚಾಗಿದೆ ಎಂದು ವರದಿ ಉಲ್ಲೇಖಿಸಿದೆ.

“ಉಕ್ರೇನ್‌ಗೆ ಸರಬರಾಜು ಮಾಡಲಾದ ಪ್ರಮುಖ ಶಸ್ತ್ರಾಸ್ತ್ರಗಳಲ್ಲಿ ಹೆಚ್ಚಿನವು ಅಮೆರಿಕ (45%), ನಂತರ ಜರ್ಮನಿ (12%) ಮತ್ತು ಪೋಲೆಂಡ್ (11%) ನಿಂದ ಬಂದವು. 2020–24 ರಲ್ಲಿ ಟಾಪ್ 10 ಆಮದುದಾರರ ಪಟ್ಟಿಯಲ್ಲಿ ಉಕ್ರೇನ್ ಏಕೈಕ ಯುರೋಪಿಯನ್ ರಾಜ್ಯವಾಗಿತ್ತು. ಆದಾಗ್ಯೂ ಇತರ ಹಲವು ಯುರೋಪಿಯನ್ ರಾಜ್ಯಗಳು ಈ ಅವಧಿಯಲ್ಲಿ ತಮ್ಮ ಶಸ್ತ್ರಾಸ್ತ್ರ ಆಮದುಗಳನ್ನು ಗಮನಾರ್ಹವಾಗಿ ಹೆಚ್ಚಿಸಿವೆ.” ಎಂದು ವರದಿ ಹೇಳಿದೆ.

2015-19 ಮತ್ತು 2020-24 ರ ನಡುವೆ ಭಾರತದ ಶಸ್ತ್ರಾಸ್ತ್ರ ಆಮದು ಶೇಖಡ 9.3 ರಷ್ಟು ಕಡಿಮೆಯಾಗಿದೆ, ಇದಕ್ಕೆ ಭಾಗಶಃ ಕಾರಣ ಭಾರತವು ದೇಶೀಯವಾಗಿ ಶಸ್ತ್ರಾಸ್ತ್ರ ತಯಾರಿಕಾ ಸಾಮರ್ಥ್ಯ ಹೆಚ್ಚುತ್ತಿರುವುದೇ ಆಗಿದೆ ಎಂದು ವರದಿ ಹೇಳಿದೆ.

“ಭಾರತ ಮತ್ತು ರಷ್ಯಾ ನಡುವಿನ ಸಂಬಂಧಗಳು ಸ್ನೇಹಪರವಾಗಿಯೇ ಉಳಿದಿವೆ ಎಂದು ಎರಡೂ ಕಡೆಯಿಂದ ಇತ್ತೀಚೆಗೆ ಸಾರ್ವಜನಿಕ ಘೋಷಣೆಗಳ ಹೊರತಾಗಿಯೂ, ಪ್ರಮುಖ ಶಸ್ತ್ರಾಸ್ತ್ರಗಳಿಗಾಗಿ ಭಾರತದ ಹೊಸ ಮತ್ತು ಯೋಜಿತ ಆದೇಶಗಳಲ್ಲಿಯೂ ಬದಲಾವಣೆ ಗೋಚರಿಸುತ್ತಿದೆ. ಅವುಗಳಲ್ಲಿ ಹೆಚ್ಚಿನವು ಪಾಶ್ಚಿಮಾತ್ಯ ಪೂರೈಕೆದಾರರಿಂದ ಬರುತ್ತವೆ” ಎಂದು SIPRI ವರದಿ ಹೇಳಿದೆ.

ಈಗಲೂ ರಷ್ಯಾ ಭಾರತದ ಅತಿದೊಡ್ಡ ಶಸ್ತ್ರಾಸ್ತ್ರ ಪೂರೈಕೆದಾರರಾಗಿ ಉಳಿದಿದೆ. ಆದರೆ ಭಾರತೀಯ ಶಸ್ತ್ರಾಸ್ತ್ರ ರಫ್ತಿನಲ್ಲಿ ಅದರ ಪಾಲು 2020-24 ರಲ್ಲಿ 36-38% ಕ್ಕೆ ಇಳಿದಿದೆ. ಇದು 2015-19 ರಲ್ಲಿ 55% ಮತ್ತು 2010-14 ರಲ್ಲಿ 72% ರಿಂದ ಕಡಿಮೆಯಾಗಿದೆ ಎಂದು ವರದಿ ಹೇಳಿದೆ. 2024 ರಲ್ಲಿ ಭಾರತ

ಭಾರತವು ಫ್ರಾನ್ಸ್, ಇಸ್ರೇಲ್ ಮತ್ತು ಯುನೈಟೆಡ್ ಸ್ಟೇಟ್ಸ್ ಕಡೆಗೆ ಗಮನ ಹರಿಸಿದ್ದರಿಂದ 2015-19 ಮತ್ತು 2020-24 ರ ನಡುವೆ ಭಾರತದ ರಷ್ಯಾದ ಮೇಲಿನ ಅವಲಂಬನೆ 64% ರಷ್ಟು ಕಡಿಮೆಯಾಗಿದೆ ಎಂದು SIPRI ಹೇಳಿದೆ. ದಕ್ಷಿಣ ಕೊರಿಯಾ ಮತ್ತು ದಕ್ಷಿಣ ಆಫ್ರಿಕಾದಿಂದ ಭಾರತವು ಮೂರನೇ ಅತಿದೊಡ್ಡ ಆಮದುದಾರ ರಾಷ್ಟ್ರವಾಗಿದ್ದು, ಕ್ರಮವಾಗಿ 7% ಮತ್ತು 11% ಪಾಲನ್ನು ಹೊಂದಿದೆ.

ಫ್ರಾನ್ಸ್ ಮತ್ತು ಇಸ್ರೇಲ್‌ನಿಂದ ಶಸ್ತ್ರಾಸ್ತ್ರ ಖರೀದಿಸುತ್ತಿರುವ ಅಗ್ರ ಶಸ್ತ್ರಾಸ್ತ್ರ ಆಮದುದಾರ ರಾಷ್ಟ್ರವಾಗಿ ಭಾರತವು ಇದ್ದು, ಅವುಗಳ ರಫ್ತಿನಲ್ಲಿ ಕ್ರಮವಾಗಿ 28% ಮತ್ತು 34% ರಷ್ಟಿದೆ. 2015-19 ಮತ್ತು 2020-24 ರ ನಡುವೆ ಫ್ರಾನ್ಸ್‌ನಿಂದ ಭಾರತದ ಶಸ್ತ್ರಾಸ್ತ್ರ ಆಮದು 11% ರಷ್ಟು ಹೆಚ್ಚಾಗಿದ್ದು, ಆದರೆ ಇಸ್ರೇಲ್‌ನಿಂದ ಆಮದು 2% ರಷ್ಟು ಕಡಿಮೆಯಾಗಿದೆ. ಆದಾಗ್ಯೂ, ಭಾರತವು ಅಮೆರಿಕದ ಅಗ್ರ ಮೂರು ಆಮದುದಾರರಲ್ಲಿ ಇರಲಿಲ್ಲ.

ಭಾರತವು ಫ್ರಾನ್ಸ್‌ನೊಂದಿಗೆ 36 ರಫೇಲ್ ಫೈಟರ್ ಜೆಟ್‌ಗಳು ಮತ್ತು ಆರು ಸ್ಕಾರ್ಪೀನ್-ಕ್ಲಾಸ್ ಸಾಂಪ್ರದಾಯಿಕ ಜಲಾಂತರ್ಗಾಮಿ ನೌಕೆಗಳ ಪ್ರಮುಖ ರಕ್ಷಣಾ ಒಪ್ಪಂದಗಳಿಗೆ ಸಹಿ ಹಾಕಿದೆ. ಜೊತೆಗೆ 26 ರಫೇಲ್-ಎಂ ಜೆಟ್‌ಗಳು ಮತ್ತು ಇನ್ನೂ ಮೂರು ಜಲಾಂತರ್ಗಾಮಿ ನೌಕೆಗಳ ಒಪ್ಪಂದಗಳನ್ನು ಅಂತಿಮಗೊಳಿಸಲು ಸಿದ್ಧವಾಗಿದೆ.

1990-94ರ ನಂತರ ಚೀನಾ ಮೊದಲ ಬಾರಿಗೆ ಟಾಪ್ 10 ಶಸ್ತ್ರಾಸ್ತ್ರ ಆಮದುದಾರರ ಪಟ್ಟಿಯಿಂದ ಹೊರಗುಳಿದಿದೆ. ಇದು ಅದರ ವಿಸ್ತರಿಸುತ್ತಿರುವ ದೇಶೀಯ ರಕ್ಷಣಾ ಉದ್ಯಮವನ್ನು ಪ್ರತಿಬಿಂಬಿಸುತ್ತದೆ ಎಂದು ದಿ ಹಿಂದೂ ವರದಿ ಮಾಡಿದೆ. ವಿಶ್ವದ 10 ಅತಿದೊಡ್ಡ ಆಮದುದಾರರಲ್ಲಿ ನಾಲ್ಕು ಏಷ್ಯಾ ಮತ್ತು ಓಷಿಯಾನಿಯಾದಲ್ಲಿವೆ: ಭಾರತ, ಪಾಕಿಸ್ತಾನ, ಜಪಾನ್ ಮತ್ತು ಆಸ್ಟ್ರೇಲಿಯಾ. ಜಾಗತಿಕ ಶಸ್ತ್ರಾಸ್ತ್ರ ಆಮದುಗಳಲ್ಲಿ ಈ ಪ್ರದೇಶವು ಶೇ. 33 ರಷ್ಟು ಪಾಲನ್ನು ಹೊಂದಿದ್ದರೆ, ಯುರೋಪ್ (28%), ಪಶ್ಚಿಮ ಏಷ್ಯಾ (27%), ಅಮೆರಿಕ (6.2%) ಮತ್ತು ಆಫ್ರಿಕಾ (4.5%) ನಂತರದ ಸ್ಥಾನದಲ್ಲಿವೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ: ಧರ್ಮೇಂದ್ರ ಪ್ರಧಾನ್ ವಿರುದ್ಧ ಹಕ್ಕು ಚ್ಯುತಿ ನೋಟಿಸ್ ಸಲ್ಲಿಸಿದ ಸಂಸದೆ ಕನಿಮೋಳಿ : ಸಂಸತ್ ಹೊರಗೆ ಡಿಎಂಕೆ ಸಂಸದರಿಂದ ಪ್ರತಿಭಟನೆ

ಧರ್ಮೇಂದ್ರ ಪ್ರಧಾನ್ ವಿರುದ್ಧ ಹಕ್ಕು ಚ್ಯುತಿ ನೋಟಿಸ್ ಸಲ್ಲಿಸಿದ ಸಂಸದೆ ಕನಿಮೋಳಿ : ಸಂಸತ್ ಹೊರಗೆ ಡಿಎಂಕೆ ಸಂಸದರಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....