Homeಅಂತರಾಷ್ಟ್ರೀಯಪಾಕಿಸ್ತಾನ | 450ಕ್ಕೂ ಹೆಚ್ಚು ಜನರನ್ನು ಒತ್ತೆಯಾಳುಗಳಾಗಿ ಇಟ್ಟು ರೈಲು ಅಪಹರಿಸಿದ ಬಲೂಚಿಸ್ತಾನ್ ಪ್ರತ್ಯೇಕವಾದಿಗಳು

ಪಾಕಿಸ್ತಾನ | 450ಕ್ಕೂ ಹೆಚ್ಚು ಜನರನ್ನು ಒತ್ತೆಯಾಳುಗಳಾಗಿ ಇಟ್ಟು ರೈಲು ಅಪಹರಿಸಿದ ಬಲೂಚಿಸ್ತಾನ್ ಪ್ರತ್ಯೇಕವಾದಿಗಳು

- Advertisement -
- Advertisement -

ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಪೇಶಾವರಕ್ಕೆ ತೆರಳುತ್ತಿದ್ದ ರೈಲೊಂದನ್ನು ಮಂಗಳವಾರ ‘ಬಲೂಚ್ ಲಿಬರೇಶನ್ ಆರ್ಮಿ’ ಎಂಬ ಪ್ರತ್ಯೇಕತಾವಾದಿ ಗುಂಪು ಅಪಹರಿಸಿದ್ದು, ಅದರಲ್ಲಿದ್ದ 450 ಪ್ರಯಾಣಿಕರಲ್ಲಿ 182 ಜನರನ್ನು ಒತ್ತೆಯಾಳನ್ನಾಗಿ ಇರಿಸಿಕೊಂಡಿದ್ದಾರೆ. ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಒತ್ತೆಯಾಳುಗಳನ್ನು ಕೊಲ್ಲುವುದಾಗಿ ಬಂಡುಕೋರರು ಬೆದರಿಕೆ ಹಾಕಿದ್ದಾರೆ ಎಂದು ಎಎಫ್‌ಪಿ ವರದಿ ಮಾಡಿದೆ. ಪಾಕಿಸ್ತಾನ

ಸುಮಾರು 450 ಪ್ರಯಾಣಿಕರಲ್ಲಿ ಮಹಿಳೆಯರು, ಮಕ್ಕಳು, ವೃದ್ಧರು ಮತ್ತು ಬಲೂಚ್ ನಾಗರಿಕರು ಸೇರಿದಂತೆ ಎಲ್ಲಾ ನಾಗರಿಕ ಪ್ರಯಾಣಿಕರನ್ನು (ಒಟ್ಟು 450 ರಲ್ಲಿ) ಯಾವುದೇ ಹಾನಿಯಾಗದಂತೆ ಬಿಡುಗಡೆ ಮಾಡಲಾಗಿದೆ ಮತ್ತು ಸುರಕ್ಷಿತ ಮಾರ್ಗವನ್ನು ಒದಗಿಸಲಾಗಿದೆ ಎಂದು ಬಂಡುಕೋರ ಗುಂಪು ಹೇಳಿದೆ. ಒತ್ತೆಯಾಳುಗಳಲ್ಲಿ ರಜೆಯಲ್ಲಿ ಪ್ರಯಾಣಿಸುತ್ತಿದ್ದ ಪಾಕಿಸ್ತಾನಿ ಸೇನೆ, ಪೊಲೀಸ್, ISI ಮತ್ತು ATIF ನ ಸೇವೆ ಸಲ್ಲಿಸುತ್ತಿರುವ ಸದಸ್ಯರು ಸೇರಿದ್ದಾರೆ ಎಂದು ವರದಿಯಾಗಿದೆ.

ಬಂಡುಕೋರರೊಂದಿಗೆ ಭದ್ರತಾ ಪಡೆಗಳು ಭಾರೀ ಘರ್ಷಣೆ ನಡೆಸಿದ್ದು 11 ಸೈನಿಕರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಅಪಹರಿಸಲ್ಪಟ್ಟ ಜಾಫರ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಗುಂಡು ಹಾರಿಸಲಾಯಿತು ಎಂದು ರೈಲ್ವೆ ಮತ್ತು ಪೊಲೀಸ್ ಅಧಿಕಾರಿಗಳು ದೃಢಪಡಿಸಿದ್ದಾರೆ ಎಂದು ರಾಯಿಟರ್ಸ್ ವರದಿ ಮಾಡಿದೆ. ದಾಳಿಯಲ್ಲಿ ಚಾಲಕ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದು, ರೈಲು ಸುರಂಗದೊಳಗೆ ಸಿಲುಕಿಕೊಂಡಿದೆ ಎಂದು ಅವರು ಹೇಳಿದ್ದಾರೆ. ಪಾಕಿಸ್ತಾನ

“ರೈಲಿನಲ್ಲಿದ್ದ 450 ಕ್ಕೂ ಹೆಚ್ಚು ಪ್ರಯಾಣಿಕರನ್ನು ಬಂದೂಕುಧಾರಿಗಳು ಒತ್ತೆಯಾಳಾಗಿ ಇರಿಸಿಕೊಂಡಿದ್ದಾರೆ” ಎಂದು ಕ್ವೆಟ್ಟಾದಲ್ಲಿರುವ ರೈಲ್ವೆ ಸರ್ಕಾರಿ ಅಧಿಕಾರಿ ಮುಹಮ್ಮದ್ ಕಾಶಿಫ್ ಹೇಳಿರುವುದಾಗಿ ಎಎಫ್‌ಪಿ ವರದಿ ಮಾಡಿದೆ. ಕ್ವೆಟ್ಟಾ ಬಲೂಚಿಸ್ತಾನ್‌ನ ಪ್ರಾಂತೀಯ ರಾಜಧಾನಿಯಾಗಿದೆ.

“ರೈಲು ಒಂಬತ್ತು ಬೋಗಿಗಳನ್ನು ಹೊಂದಿದ್ದು, ಸುಮಾರು 500 ಪ್ರಯಾಣಿಕರನ್ನು ಹೊಂದಿತ್ತು. ಸುರಂಗ ಸಂಖ್ಯೆ 8 ರಲ್ಲಿ ಶಸ್ತ್ರಸಜ್ಜಿತ ವ್ಯಕ್ತಿಗಳು ರೈಲನ್ನು ನಿಲ್ಲಿಸಿದರು. ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಸಂಪರ್ಕಿಸಲು ಪ್ರಯತ್ನಗಳನ್ನು ಮಾಡಲಾಗುತ್ತಿದೆ.” ಎಂದು ಕಾಶಿಫ್ ಅವರು ಹೇಳಿದ್ದಾರೆ ಎಂದು ಡಾನ್‌ ಪತ್ರಿಕೆ ವರದಿ ಮಾಡಿದೆ.

“ರೈಲು ನಿಂತಿರುವ ಪ್ರದೇಶವು ಪರ್ವತ ಪ್ರದೇಶವಾಗಿದ್ದು, ಬಂಡುಕೋರರು ಅಡಗುತಾಣಗಳನ್ನು ಹೊಂದಲು ಮತ್ತು ದಾಳಿಗಳನ್ನು ಯೋಜಿಸಲು ಸುಲಭವಾಗುತ್ತದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು AFP ಗೆ ತಿಳಿಸಿದ್ದಾರೆ. ಸುರಂಗದ ಸುತ್ತಲೂ ಸ್ಫೋಟದ ಶಬ್ದ ಕೇಳಿಬಂದಿದ್ದು, ಅವರು ಆ ಪ್ರದೇಶದಲ್ಲಿ ಬಂಡುಕೋರರೊಂದಿಗೆ ಗುಂಡಿನ ಚಕಮಕಿ ನಡೆಸುತ್ತಿದ್ದಾರೆ ಎಂದು ಭದ್ರತಾ ಪಡೆಗಳು ಹೇಳಿರುವುದಾಗಿ ರಾಯಿಟರ್ಸ್ ಉಲ್ಲೇಖಿಸಿದೆ.

ರೈಲನ್ನು ಅಪಹರಿಸಿದ ನಂತರ ಬಲೂಚ್ ಲಿಬರೇಶನ್ ಆರ್ಮಿ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದು, ಭದ್ರತಾ ಪಡೆಗಳು ಸೇರಿದಂತೆ ರೈಲಿನಲ್ಲಿರುವ ಜನರನ್ನು ಒತ್ತೆಯಾಳುಗಳನ್ನಾಗಿ ಮಾಡಿಕೊಂಡಿರುವುದಾಗಿ ಹೇಳಿದೆ. ಭದ್ರತಾ ಪಡೆಗಳು ಹಿಂದೆ ಸರಿಯದಿದ್ದರೆ ಒತ್ತೆಯಾಳುಗಳನ್ನು ಕೊಲ್ಲುವುದಾಗಿ ಗುಂಪು ಬೆದರಿಕೆ ಹಾಕಿದೆ.

ದಾಳಿಯನ್ನು ಖಂಡಿಸಿರುವ ಪಾಕಿಸ್ತಾನದ ಆಂತರಿಕ ಸಚಿವ ಮೊಹ್ಸಿನ್ ನಖ್ವಿ, “ಮುಗ್ಧ ಪ್ರಯಾಣಿಕರ ಮೇಲೆ ಗುಂಡು ಹಾರಿಸುವ ಮೃಗಗಳಿಗೆ ತಮ್ಮ ಸರ್ಕಾರ ಯಾವುದೇ ರಿಯಾಯಿತಿಗಳನ್ನು ನೀಡುವುದಿಲ್ಲ” ಎಂದು ಹೇಳಿದ್ದಾರೆ.

ಬಲೂಚ್ ಲಿಬರೇಶನ್ ಆರ್ಮಿ ಪಾಕಿಸ್ತಾನದ ಬಲೂಚಿಸ್ತಾನ್ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಬಂಡುಕೋರ ಗುಂಪಾಗಿದ್ದು, ಸಶಸ್ತ್ರ ಹೋರಾಟದ ಮೂಲಕ ಈ ಪ್ರದೇಶವನ್ನು ದೇಶದಿಂದ ಬೇರ್ಪಡಿಸುವುದಾಗಿ ಪ್ರತಿಪಾದಿಸುತ್ತದೆ. ಈ ಸಂಘಟನೆಯನ್ನು ಪಾಕಿಸ್ತಾನ ಸರ್ಕಾರ ”ಭಯೋತ್ಪಾದಕ ಸಂಘಟನೆ” ಎಂದು ಗುರುತಿಸಿದೆ. ಈ ಗುಂಪು ಸರ್ಕಾರ, ಸೈನ್ಯ ಮತ್ತು ಚೀನಾದ ಹಿತಾಸಕ್ತಿಗಳ ವಿರುದ್ಧ ಆಗಾಗ್ಗೆ ದಾಳಿಗಳನ್ನು ನಡೆಸುತ್ತಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕೆಂಪು ಮೆಣಸಿನಕಾಯಿ ಬೆಲೆ ಕುಸಿತ | ಮಧ್ಯಪ್ರವೇಶಿಸುವಂತೆ ಪ್ರಧಾನಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಕೆಂಪು ಮೆಣಸಿನಕಾಯಿ ಬೆಲೆ ಕುಸಿತ | ಮಧ್ಯಪ್ರವೇಶಿಸುವಂತೆ ಪ್ರಧಾನಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...