Homeಮುಖಪುಟಕೇರಳದ ಕೂಡಲ್ಮಾಣಿಕ್ಯಂ ದೇವಸ್ಥಾನದಲ್ಲಿ ಜಾತಿ ತಾರತಮ್ಯ : ಬ್ರಾಹ್ಮಣ ಅರ್ಚಕರ ವಿರುದ್ಧ ಪ್ರಕರಣ ದಾಖಲು, ತನಿಖೆಗೆ...

ಕೇರಳದ ಕೂಡಲ್ಮಾಣಿಕ್ಯಂ ದೇವಸ್ಥಾನದಲ್ಲಿ ಜಾತಿ ತಾರತಮ್ಯ : ಬ್ರಾಹ್ಮಣ ಅರ್ಚಕರ ವಿರುದ್ಧ ಪ್ರಕರಣ ದಾಖಲು, ತನಿಖೆಗೆ ಆದೇಶ

- Advertisement -
- Advertisement -

‘ಜಾತಿ ಕಾರಣಕ್ಕೆ’ ಹಿಂದುಳಿದ ಸಮುದಾಯದ ಉದ್ಯೋಗಿಯೊಬ್ಬರಿಗೆ ತಾರತಮ್ಯವೆಸಗಿದ ಆರೋಪದ ಮೇಲೆ ಕೇರಳದ ತ್ರಿಶೂರ್ ಜಿಲ್ಲೆಯ ಇರಿಂಜಲಕುಡದಲ್ಲಿರುವ ಪ್ರಸಿದ್ದ ಕೂಡಲ್ಮಾಣಿಕ್ಯಂ ದೇವಸ್ಥಾನದ ಅರ್ಚಕರ ವಿರುದ್ದ ರಾಜ್ಯ ಮಾನವ ಹಕ್ಕುಗಳ ಆಯೋಗ (ಎಸ್‌ಹೆಚ್‌ಆರ್‌ಸಿ) ಪ್ರಕರಣ ದಾಖಲಿಸಿದ್ದು, ತನಿಖೆಗೆ ಆದೇಶಿಸಿದೆ.

ಕೇರಳ ದೇವಸ್ವಂ (ದೇವಸ್ಥಾನ) ನೇಮಕಾತಿ ಮಂಡಳಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ‘ಈಳವ ಸಮುದಾಯ’ಕ್ಕೆ (ಇತರೆ ಹಿಂದುಳಿದ ಸಮುದಾಯ) ಸೇರಿದ ವಿಎ ಬಾಲು ಅವರನ್ನು ದೇವಸ್ಥಾನದಲ್ಲಿ ‘ಕಝಕಂ’ ಆಗಿ ನೇಮಿಸುವುದರೊಂದಿಗೆ ವಿವಾದ ಆರಂಭವಾಗಿದೆ. ದೇವರಿಗೆ ಮಾಲೆಗಳನ್ನು ತಯಾರಿಸುವುದು ಮತ್ತು ವಿಧ್ಯುಕ್ತ ವ್ಯವಸ್ಥೆಗಳನ್ನು ನೋಡಿಕೊಳ್ಳುವುದು ‘ಕಝಕಂ’ ಹುದ್ದೆಯ ಜವಾಬ್ದಾರಿಯಾಗಿರುತ್ತದೆ.

ಬಾಲು ಅವರ ನೇಮಕಾತಿಗೆ ದೇವಾಲಯದ ನಂಬೂದಿರಿ ಅರ್ಚಕರು ವಿರೋಧ ವ್ಯಕ್ತಪಡಿಸಿದ್ದು, ದೇವಸ್ಥಾನದ ಕಾರ್ಯಕ್ರಮಗಳನ್ನು ಬಹಿಷ್ಕರಿಸಿದ್ದಾರೆ. ಅಲ್ಲದೆ, ಮುಂಬರುವ ‘ಪ್ರತಿಷ್ಠಾ ದಿನಂ’ (ಪವಿತ್ರೀಕರಣ ದಿನ) ವಿಧಿ ವಿಧಾನಗಳಿಂದ ದೂರ ಉಳಿಯುವುದಾಗಿ ಬೆದರಿಕೆ ಹಾಕಿದ್ದಾರೆ.

ಫೆಬ್ರವರಿ 24ರಂದು ಬಾಲು ಅವರು ದೇವಸ್ಥಾನದ ಕೆಲಸಕ್ಕೆ ಸೇರಿದ್ದು, ಅಂದಿನಿಂದ ದೇವಾಲಯದೊಂದಿಗೆ ಸಂಬಂಧ ಹೊಂದಿರುವ ಆರು ಕುಟುಂಬಗಳ ಅರ್ಚಕರು ವಿಧಿ ವಿಧಾನಗಳನ್ನು ಮಾಡಲು ನಿರಾಕರಿಸಿದ್ದಾರೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ದೇವಸ್ವಂ (ದೇವಸ್ಥಾನ) ಮಂಡಳಿ ಅಧಿಕಾರಿಗಳು ಅರ್ಚಕರ ಗೈರು ಹಾಜರಿ ಕುರಿತು ವಿವರಣೆ ಕೋರಿ ನೋಟಿಸ್ ನೀಡಿದ್ದರು. ಅದಕ್ಕೆ ಪ್ರತಿಕ್ರಿಯಿಸಿರುವ ಅರ್ಚಕರು, “ತಪ್ಪು ಸರಿಪಡಿಸುವವರೆಗೆ ತಮ್ಮ ಕರ್ತವ್ಯಗಳನ್ನು ಪುನರಾರಂಭಿಸುವುದಿಲ್ಲ” ಎಂದು ಉತ್ತರಿಸಿದ್ದಾರೆ. ಒತ್ತಡಕ್ಕೆ ಮಣಿದ ದೇವಸ್ವಂ ಅಧಿಕಾರಿಗಳು ಬಾಲು ಅವರನ್ನು ಕಚೇರಿ ಕರ್ತವ್ಯಗಳಿಗೆ ಮರು ನಿಯೋಜಿಸಿದ್ದು, ಅವರನ್ನು ದೇವಾಲಯಕ್ಕೆ ಸಂಬಂಧಿಸಿದ ಜವಾಬ್ದಾರಿಗಳಿಂದ ಮುಕ್ತಗೊಳಿಸಿದ್ದಾರೆ ಎಂದು ವರದಿ ಹೇಳಿದೆ.

ಈ ಕುರಿತು ತನಿಖೆ ನಡೆಸಿ ಎರಡು ವಾರಗಳಲ್ಲಿ ವರದಿ ಸಲ್ಲಿಸುವಂತೆ ಸೋಮವಾರ (ಮಾ.10) ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯೆ ವಿ. ಗೀತಾ ಅವರು ಕೊಚ್ಚಿನ್ ದೇವಸ್ವಂ (ದೇವಸ್ಥಾನ) ಆಯುಕ್ತರು ಮತ್ತು ಕೂಡಲ್ಮಾಣಿಕ್ಯಂ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಗೆ ಆದೇಶಿಸಿದ್ದಾರೆ.

ಈ ಬೆಳವಣಿಗೆ ಕುರಿತು ಪ್ರತಿಕ್ರಿಯಿಸಿರುವ ಸಂಸದ ಕೆ. ರಾಧಾಕೃಷ್ಣನ್ ಅವರು “ದೇವಸ್ವಂ ಮಂಡಳಿಯು 10 ತಿಂಗಳ ಅವಧಿಗೆ ‘ಕಝಕಂ’ ಹುದ್ದೆಗೆ ಬಾಲು ಅವರನ್ನು ನೇಮಿಸುವ ನಿರ್ಧಾರ ತೆಗೆದುಕೊಂಡಿತ್ತು. ಆ ನಿರ್ಧಾರವನ್ನು ಎತ್ತಿ ಹಿಡಿಯಬೇಕು. ಒಬ್ಬ ವ್ಯಕ್ತಿಗೆ ಕೆಲಸ ಮಾಡುವ ಸ್ವಾತಂತ್ರ್ಯವನ್ನು ನಿರಾಕರಿಸುವ ಹಕ್ಕು ಪುರೋಹಿತರಿಗೆ ಇಲ್ಲ” ಎಂದಿದ್ದಾರೆ. ತಾರತಮ್ಯ ನೀತಿ ಮತ್ತು ನಂಬಿಕೆಗಳನ್ನು ಮತ್ತೆ ಮುನ್ನಲೆಗೆ ತರುವ ಪ್ರಯತ್ನಗಳ ವಿರುದ್ಧ ಅವರು ಕಿಡಿಕಾರಿದ್ದಾರೆ.

“ಪ್ರಸ್ತುತ ಬಾಲು ಅವರನ್ನು ದೇವಸ್ಥಾನದ ಹುದ್ದೆಯಿಂದ ಹೊರಗಿಡಲಾಗಿದೆ. ಅವರ ಬದಲಿಗೆ ‘ಪಿಶಾರೋಡಿ’ ಸಮುದಾಯದ ಒಬ್ಬರನ್ನು’ಕಝಕಂ’ ಹುದ್ದೆಗೆ ತಾತ್ಕಾಲಿಕವಾಗಿ ನೇಮಿಸಲಾಗಿದೆ” ನ್ಯಾಯಾಲಯ ಅಥವಾ ಸರ್ಕಾರ ಏನಾದರು ಆದೇಶದ ನೀಡದ ಹೊರತು, ಅರ್ಚಕರಿಂದ ಎಷ್ಟೇ ಒತ್ತಡ ಇದ್ದರೂ ಬಾಲು ಅವರನ್ನು ದೇವಾಲಯದ ಕರ್ತವ್ಯಕ್ಕೆ ಮರಳಿ ಸೇರಿಸಿಕೊಳ್ಳಲಾಗುವುದು” ಎಂದು ಕೂಡಲ್ಮಾಣಿಕ್ಯಂ ದೇವಸ್ವಂ (ದೇವಸ್ಥಾನ) ಅಧ್ಯಕ್ಷ ಸಿ.ಕೆ ಗೋಪಿ ಹೇಳಿದ್ದಾಗಿ ದಿ ನ್ಯೂಸ್ ಮಿನಿಟ್ ವರದಿ ತಿಳಿಸಿದೆ.

ಪವಿತ್ರೀಕರಣ ದಿನದಂದು ವಿಧಿ ವಿಧಾನಗಳು ಸುಗಮವಾಗಿ ನಡೆಯಲು ಪುರೋಹಿತರ ಭಾಗವಹಿಸುವಿಕೆ ಅಗತ್ಯವಾಗಿದೆ. ಹಾಗಾಗಿ, ದೇವಸ್ಥಾನದ ಮಂಡಳಿ ಅಧಿಕಾರಿಗಳು ಕಝಕಂ ಹುದ್ದೆಗೆ ತಾತ್ಕಾಲಿಕವಾಗಿ ಒಬ್ಬರನ್ನು ನೇಮಕ ಮಾಡಿದ್ದಾರೆ ಎಂದು ಸಿ.ಕೆ ಗೋಪಿ ಸಮರ್ಥಿಸಿಕೊಂಡಿದ್ದಾರೆ.

ಈ ನಡುವೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಬಾಲು ಅವರು, “ತಾನು ಇನ್ನು ಮುಂದೆ ‘ಕಝಕಂ’ ಕೆಲಸವನ್ನು ಮಾಡುವುದಿಲ್ಲ. ತನ್ನ ನಿರ್ಧಾರದ ಬಗ್ಗೆ ದೇವಸ್ಥಾನ ಮಂಡಳಿ ಅಧಿಕಾರಿಗಳಿಗೆ ಪತ್ರ ಬರೆಯುವುದಾಗಿ ತಿಳಿಸಿದ್ದಾರೆ.

ಮಹಾಕುಂಭದಿಂದ ತಂದ ಗಂಗಾಜಲ ಕುಡಿಯಲು ನಿರಾಕರಿಸಿದ ರಾಜ್ ಠಾಕ್ರೆ: ಮೂಢನಂಬಿಕೆಯಿಂದ ಹೊರಬರಲು ಜನತೆಗೆ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...