Homeಮುಖಪುಟವಕೀಲೆ ಆತ್ಮಹತ್ಯೆ ಪ್ರಕರಣ:  ಡಿವೈಎಸ್ಪಿ ಕನಕಲಕ್ಷ್ಮಿ ಬಂಧನ

ವಕೀಲೆ ಆತ್ಮಹತ್ಯೆ ಪ್ರಕರಣ:  ಡಿವೈಎಸ್ಪಿ ಕನಕಲಕ್ಷ್ಮಿ ಬಂಧನ

- Advertisement -
- Advertisement -

ಬೆಂಗಳೂರು: ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿವೈಎಸ್​ಪಿ ಕನಕಲಕ್ಷ್ಮೀ ಬಂಧನವಾಗಿದೆ. ಕರ್ನಾಟಕ ಭೋವಿ ನಿಗಮ ಹಗರಣದ ತನಿಖೆ ಎದುರಿಸಿದಾಗ ಪೊಲೀಸ್ ಅಧಿಕಾರಿ ವಿವಸ್ತ್ರಗೊಳಿಸಿ ವಿಚಾರಣೆ ನಡೆಸಿದ್ದಲ್ಲದೆ, 25 ಲಕ್ಷ ರೂ. ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು ಎಂದು ಮಹಿಳಾ ವಕೀಲೆ ಜೀವಾ 13 ಪುಟಗಳ ಡೆತ್​ನೋಟ್​ ಬರೆದಿಟ್ಟು 2024 ನವೆಂಬರ್ 22ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ ಈ ಪ್ರಕರಣ ಸಂಬಂಧ ಎಸ್​ಐಟಿ ಅಧಿಕಾರಿಗಳು ಕನಕಲಕ್ಷ್ಮಿ ಅವರನ್ನು ಬಂಧಿಸಿದ್ದಾರೆ.

ಈ ಸಂಬಂಧ ಸಿಐಡಿ ಡಿವೈಎಸ್ ಪಿ ಕನಕಲಕ್ಷ್ಮಿ ವಿರುದ್ಧ ಜೀವಾ ಸಹೋದರಿ ದೂರು ನೀಡಿದ್ದರು. ಭೋವಿ ಅಭಿವೃದ್ಧಿ ನಿಗಮದ ಅಕ್ರಮ ಪ್ರಕರಣದ ತನಿಖಾಧಿಕಾರಿಯಾಗಿದ್ದ ಕನಕಲಕ್ಷ್ಮಿ, ವಿಚಾರಣೆ ನೆಪದಲ್ಲಿ ಜೀವಾ ಅವರನ್ನು ಅವಾಚ್ಯವಾಗಿ ನಿಂದಿಸಿ ಮಾನಸಿಕ ಆಘಾತಕ್ಕೆ ಗುರಿಪಡಿಸಿದ್ದರು ಎಂದು ದೂರು ನೀಡಲಾಗಿತ್ತು.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಭೋವಿ ನಿಗಮದ ಅಕ್ರಮದ ಕುರಿತು ಕಾಂಗ್ರೆಸ್​ ಸರ್ಕಾರ ಸಿಐಡಿ ತನಿಖೆಗೆ ವಹಿಸಿತ್ತು. ಇದನ್ನು ಸಿಐಡಿ ಡಿವೈಎಸ್ಪಿ ಕನಕಲಕ್ಷ್ಮೀ ಅವರು ತನಿಖೆ ಕೈಗೊಂಡಿದ್ದು, ಬೋವಿ ನಿಗಮದ ಫಲಾನುಭವಿಗಳಿಗೆ ಮೆಟಿರಿಯಲ್ ಪೂರೈಸಿದ ಆರೋಪದ ಮೇಲೆ 34 ವರ್ಷದ ವಕೀಲೆ ಜೀವಾ ಎನ್ನುವವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಈ ವಿಚಾರಣೆಯ ನಂತರ ವಕೀಲೆ ಜೀವಾ  ಪದ್ಮನಾಭನಗರದ ತಮ್ಮ ನಿವಾಸದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

ರಿಮ್ಯಾಂಡ್‌ ಅರ್ಜಿ ಪರಿಶೀಲಿಸಿದ ನ್ಯಾಯಾಧೀಶ ಕೆ.ಎಂ. ರಾಧಾಕೃಷ್ಣ, ಆರೋಪಿ ಕನಕಲಕ್ಷ್ಮಿ ಅವರನ್ನು ಮಾ.24ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದರು.

ಡೆತ್‌ನೋಟ್‌ನಲ್ಲಿ ಬರೆದ ಬರವಣಿಗೆ ಜೀವಾ ಅವರದ್ದೇ ಎಂದು ಎಫ್‌ಎಸ್‌ಎಲ್‌ ವರದಿಯಲ್ಲಿ ದೃಢಪಟ್ಟಿದೆ. ತನಿಖೆ ಸಂದರ್ಭದಲ್ಲಿ 2024ರ ನವೆಂಬರ್‌ 14ರಂದು ಸಿಐಡಿ ಕಚೇರಿಗೆ ಕರೆಸಿದ್ದ ಕನಕಲಕ್ಷ್ಮಿ, ‘ಒಳ ಉಡುಪು ತೆಗೆಸಿ ವಿವಸ್ತ್ರಗೊಳಿಸಿದ್ದರು. ಬೆನ್ನಿನ ಮೇಲೆ ಹಲ್ಲೆ ನಡೆಸಿದ್ದರು. ಸೈನೈಡ್‌ ತಂದಿದ್ದೀಯಾ ಎಂದು ಹೀಯಾಳಿಸಿ ಹಿಂಸೆ ನೀಡಿದ್ದರು,’ ಎಂದು ಜೀವಾ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದರು. ಈ ಕುರಿತ ವಿಡಿಯೊ ತುಣುಕುಗಳು ಕನಕಲಕ್ಷ್ಮಿ ಅವರ ಮೊಬೈಲ್‌ನಲ್ಲಿಯೇ ಸಿಕ್ಕಿವೆ ಎಂದು ಎಸ್‌ಐಟಿ ನ್ಯಾಯಾಲಯಕ್ಕೆ ತಿಳಿಸಿದೆ.

ಉದ್ಯಮಿ, ವಕೀಲೆ ಎಸ್‌. ಜೀವಾ ಕುರಿತು ಪೊಲೀಸರಿಗೆ ದೂರು ನೀಡಿದ್ದ ಅವರ ತಂಗಿ ಸಂಗೀತಾ, ‘ಭೋವಿ ಅಭಿವೃದ್ಧಿ ನಿಗಮ ಅಕ್ರಮ ಪ್ರಕರಣ ವಿಚಾರಣೆ ವೇಳೆ ನನ್ನ ಅಕ್ಕ ಜೀವಾ ಅವರನ್ನು ನಗ್ನಗೊಳಿಸಿ ಡಿವೈಎಸ್‌ಪಿ ಕನಕಲಕ್ಷ್ಮಿ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಿದ್ದಾರೆ. ಜತೆಗೆ, 25 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಹೀಗಾಗಿ, ಜೀವಾ ಆತ್ಮಹತ್ಯೆಗೆ ಅವರೇ ಕಾರಣ,’ ಎಂದು ಆರೋಪಿಸಿದ್ದರು.

ಕೇರಳದ ಕೂಡಲ್ಮಾಣಿಕ್ಯಂ ದೇವಸ್ಥಾನದಲ್ಲಿ ಜಾತಿ ತಾರತಮ್ಯ : ಬ್ರಾಹ್ಮಣ ಅರ್ಚಕರ ವಿರುದ್ಧ ಪ್ರಕರಣ ದಾಖಲು, ತನಿಖೆಗೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...