Homeಕರ್ನಾಟಕಸೌಜನ್ಯ ಪ್ರಕರಣದ ವಿಡಿಯೊ | ಯೂಟ್ಯೂಬರ್ ಸಮೀರ್ ಎಂಡಿ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ

ಸೌಜನ್ಯ ಪ್ರಕರಣದ ವಿಡಿಯೊ | ಯೂಟ್ಯೂಬರ್ ಸಮೀರ್ ಎಂಡಿ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ

- Advertisement -
- Advertisement -

ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬಗ್ಗೆ ವಿಡಿಯೊ ಮಾಡಿದ್ದ ಯೂಟ್ಯೂಬರ್ ಸಮೀರ್ ಎಂ.ಡಿ. ಅವರ ವಿರುದ್ಧ ದಾಖಲಿಸಲಾದ ಎಫ್‌ಐಆರ್‌ಗೆ ಕರ್ನಾಟಕ ಹೈಕೋರ್ಟ್ ಮಂಗಳವಾರ ತಡೆ ನೀಡಿದೆ. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಎರಡನೇ ವರ್ಷದ ಪದವಿ ಪೂರ್ವ ವಿದ್ಯಾರ್ಥಿನಿಯಾಗಿದ್ದ ಸೌಜನ್ಯ (17) ಅವರನ್ನು ಅಕ್ಟೋಬರ್ 9, 2012 ರಂದು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿತ್ತು. ಸೌಜನ್ಯ ಪ್ರಕರಣದ ವಿಡಿಯೊ

ಸಮೀರ್ ವಿರುದ್ಧ ಭಾರತೀಯ ನ್ಯಾಯ ಸಂಹಿತಾ, 2023 ರ ಸೆಕ್ಷನ್ 299 (ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವುದು) ಅಡಿಯಲ್ಲಿ ಬಳ್ಳಾರಿಯ ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ಈ ಎಫ್‌ಐಆರ್‌ಗೆ ತಡೆಯಾಜ್ಞೆ ನೀಡುವ ಮೂಲಕ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರಿಗೆ ಮಧ್ಯಂತರ ಪರಿಹಾರ ನೀಡಿದ್ದಾರೆ. ಸೌಜನ್ಯ ಪ್ರಕರಣದ ವಿಡಿಯೊ

ಸಮೀರ್ ಅವರು ತಮ್ಮ ಯೂಟ್ಯೂಬ್ ಚಾನೆಲ್ ‘ಧೂತ: ಸಮೀರ್ ಎಂಡಿ’ಯಲ್ಲಿ “ಊರಿಗೆ ದೊಡ್ಡವರೆ ಕೊಲೆ ಮಾಡಿದವರಾ; ಧರ್ಮಸ್ಥಳ ಸೌಜನ್ಯ ಪ್ರಕರಣ” ಎಂಬ ಶೀರ್ಷಿಕೆಯ ವೀಡಿಯೊವನ್ನು ಪೋಸ್ಟ್ ಮಾಡಿದ್ದರು. ವಿಡಿಯೊದ ಥಂಬ್‌ನೈಲ್‌ನಲ್ಲಿ ಅವರು ”ಧರ್ಮಸ್ಥಳ ಹಾರರ್‌” ಎಂಬ ಪೋಸ್ಟರ್ ಹಾಕಿದ್ದರು. ಈ ವಿಡಿಯೊ ಪ್ರಸ್ತುತ 180 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿದೆ.

ಈ ವೀಡಿಯೊದಲ್ಲಿ ಅವರು ಧರ್ಮಸ್ಥಳ ಪ್ರದೇಶದಲ್ಲಿ ದಶಕಗಳ ಕಾಲ ನಡೆದ ಹಲವಾರು ಕ್ರಿಮಿನಲ್ ಪ್ರಕರಣಗಳ ಬಗ್ಗೆ ಮಾತನಾಡಿದ್ದರು. ಅದರಲ್ಲೂ ವಿಶೇಷವಾಗಿ 2012 ರ ಸೌಜನ್ಯ ಅವರ ಅತ್ಯಾಚಾರ ಮತ್ತು ಕೊಲೆ, ಸಂತೋಷ್ ರಾವ್ ಅವರನ್ನು ತಪ್ಪಾಗಿ ಬಂಧಿಸಿದ್ದು, ನಂತರದ ಅವರು ಖುಲಾಸೆಗೊಂಡಿದ್ದನ್ನು ಮತ್ತು ಹಲವು ಕಾಣದ ಕೈಗಳು ಕ್ರಿಮಿನಲ್ ತನಿಖೆಗಳಲ್ಲಿ ಪ್ರಭಾವ ಬೀರಿದ ಬಗ್ಗೆ ಮಾತನಾಡಿದ್ದರು.

ಅದಾಗ್ಯೂ, ಈ ವಿಡಿಯೊ ರಾಜ್ಯದಾದ್ಯಂತ ವ್ಯಾಪಕ ಸಂಚಲನ ಮೂಡಿಸಿತ್ತು. ಈ ನಡುವೆ ಮಾರ್ಚ್ 5, 2025 ರಂದು, ಕೌಲ್ ಬಜಾರ್ ಪೊಲೀಸರು ಸಮೀರ್ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣವನ್ನು ದಾಖಲಿಸಿದ್ದರು. ಸಮೀರ್ ಅವರ ಈ ವೀಡಿಯೊದಲ್ಲಿ ಧರ್ಮಸ್ಥಳ ಮತ್ತು ಅದರ ಧಾರ್ಮಿಕ ನಾಯಕರ ಬಗ್ಗೆ ಜನರಿಗೆ ಇದ್ದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಲಾಗಿತ್ತು.

ಸಮೀರ್ ಪರ ವಾದ ಮಂಡಿಸಿದ ವಕೀಲ ಎ. ವೇಲನ್, ಕಾನೂನು ಪ್ರಕ್ರಿಯೆಯನ್ನು ಸಂಪೂರ್ಣವಾಗಿ ದುರುಪಯೋಗ ಮಾಡಿ ಎಫ್‌ಐಆರ್‌ ದಾಖಲು ಮಾಡಲಾಗಿದೆ. ಜೊತೆಗೆ ಈ ಎಫ್‌ಐಆರ್‌ ಸಮೀರ್‌ ಅವರ ಅಭಿವ್ಯಕ್ತಿಯ ಮೂಲಭೂತ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ವಾದಿಸಿದ್ದಾರೆ. ಬಿಎನ್‌ಎಸ್‌ನ ಸೆಕ್ಷನ್ 299 ಅಡಿಯಲ್ಲಿ ವ್ಯಾಖ್ಯಾನ ಮಾಡಿದ್ದ ಪೊಲೀಸರ ಕ್ರಮಕ್ಕೆ ಅನುಮತಿ ನೀಡಿದರೆ ಅದು ಅಪಾಯಕಾರಿ ಪೂರ್ವ ನಿದರ್ಶನವಾಗಲಿದೆ ಎಂದು ಎತ್ತಿ ತೋರಿಸಿದ್ದಾರೆ.

ಕರ್ನಾಟಕದಲ್ಲಿ, ಅದರಲ್ಲೂ ವಿಶೇಷವಾಗಿ ರಾಜ್ಯದ ಕರಾವಳಿ ಪ್ರದೇಶದಲ್ಲಿ ಸೌಜನ್ಯ ಪ್ರಕರಣವು ವ್ಯಾಪಕವಾಗಿ ಚರ್ಚಿಸಲ್ಪಟ್ಟ ಪ್ರಕರಣವಾಗಿತ್ತು. ನೇತ್ರಾವತಿ ನದಿಯ ಬಳಿ ಸೌಜನ್ಯ ಅವರ ಶವ ಪತ್ತೆಯಾಗಿದ್ದು, ಈ ವೇಳೆ ಅವರ ಕೈಗಳನ್ನು ಶಾಲಿನಿಂದ ಮರಕ್ಕೆ ಕಟ್ಟಲಾಗಿತ್ತು.

ಇದರ ನಂತರ ಪೊಲೀಸರು ಸಂತೋಷ್ ರಾವ್ ವಿರುದ್ಧ ಕೊಲೆ ಆರೋಪ ಹೊರಿಸಿದ್ದರು. ಆದರೆ ಜೂನ್ 16, 2023 ರಂದು ಬೆಂಗಳೂರು ಸೆಷನ್ಸ್ ನ್ಯಾಯಾಲಯವು ಅವರನ್ನು ಖುಲಾಸೆಗೊಳಿಸಿತ್ತು. ಕಾನೂನು ಪ್ರಕ್ರಿಯೆಗಳ ಉದ್ದಕ್ಕೂ, ಸೌಜನ್ಯ ಅವರ ಕುಟುಂಬವು ಸಂತೋಷ್ ರಾವ್ ಅವರನ್ನು ತಪ್ಪಾಗಿ ಆರೋಪಿಸಲಾಗಿದೆ ಎಂದು ವಾದಿಸಿತ್ತು. ಜೊತೆಗೆ ತನಿಖೆಯಲ್ಲಿನ ನ್ಯೂನತೆಗಳನ್ನು ಆರೋಪಿಸಿ ಧರ್ಮಸ್ಥಳದ ಧಾರ್ಮಿಕ ಮುಖಂಡ ವೀರೇಂದ್ರ ಹೆಗ್ಗಡೆ ನಿಜವಾದ ಅಪರಾಧಿಗಳನ್ನು ರಕ್ಷಿಸಿದ್ದಾರೆ ಎಂದು ಪ್ರತಿಪಾದಿಸಿತ್ತು.

ಸಂತೋಷ್ ರಾವ್ ಅವರು ಖುಲಾಸೆಗೊಂಡ ನಂತರ ಕೂಡಾ ಸಾರ್ವಜನಿಕ ಪ್ರತಿಭಟನೆಗಳು ನಡೆದಿದ್ದವು. ಜೊತೆಗೆ ಪ್ರಕರಣವನ್ನು ಮರು ತನಿಖೆ ಮಾಡಬೇಕು ಎಂದು ಕರೆಗಳು ಬಂದವು. 11 ವರ್ಷಗಳ ತನಿಖೆಯ ನಂತರ, ಬೆಂಗಳೂರಿನ ನ್ಯಾಯಾಲಯವು 2023 ರಲ್ಲಿ ಪ್ರಕರಣದ ಏಕೈಕ ಆರೋಪಿ ಸಂತೋಷ್ ರಾವ್ ಅವರನ್ನು ಎಲ್ಲಾ ಆರೋಪಗಳಿಂದ ಖುಲಾಸೆಗೊಳಿಸಿತ್ತು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಂಗಾಳದಲ್ಲಿ ಬಿಜೆಪಿ ಗೆದ್ದ ಬಳಿಕ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರಕ್ಕೆ ಎಸೆಯುತ್ತೇವೆ : ಸುವೇಂದು ಅಧಿಕಾರಿ

ಬಂಗಾಳದಲ್ಲಿ ಬಿಜೆಪಿ ಗೆದ್ದ ಬಳಿಕ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರಕ್ಕೆ ಎಸೆಯುತ್ತೇವೆ : ಸುವೇಂದು ಅಧಿಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...