Homeದಲಿತ್ ಫೈಲ್ಸ್24 ದಲಿತರ ಸಾಮೂಹಿಕ ಹತ್ಯೆ ಪ್ರಕರಣ | 44 ವರ್ಷಗಳ ಬಳಿಕ ತೀರ್ಪು ಪ್ರಕಟ; ಮೂವರು...

24 ದಲಿತರ ಸಾಮೂಹಿಕ ಹತ್ಯೆ ಪ್ರಕರಣ | 44 ವರ್ಷಗಳ ಬಳಿಕ ತೀರ್ಪು ಪ್ರಕಟ; ಮೂವರು ದೋಷಿಗಳೆಂದ ಕೋರ್ಟ್

- Advertisement -
- Advertisement -

ಉತ್ತರ ಪ್ರದೇಶದ ಫಿರೋಝಾಬಾದ್ ಜಿಲ್ಲೆಯ ದಿಹುಲಿ ಗ್ರಾಮದಲ್ಲಿ ಏಳು ಮಹಿಳೆಯರು ಮತ್ತು ಇಬ್ಬರು ಅಪ್ರಾಪ್ತ ವಯಸ್ಕರು ಸೇರಿದಂತೆ 24 ದಲಿತರ ಹತ್ಯೆ ನಡೆದು ಸುಮಾರು 44 ವರ್ಷಗಳ ನಂತರ, ವಿಚಾರಣಾ ನ್ಯಾಯಾಲಯವು ಮೂವರು ಆರೋಪಿಗಳನ್ನು ದೋಷಿಗಳು ಎಂದು ಘೋಷಿಸಿದೆ.

ಕಳೆದ ವರ್ಷ ಅಲಹಾಬಾದ್ ಹೈಕೋರ್ಟ್‌ನ ಆದೇಶದ ಮೇರೆಗೆ ಮೈನ್‌ಪುರಿ ಜಿಲ್ಲೆಯ ನ್ಯಾಯಾಲಯಕ್ಕೆ ವರ್ಗಾಯಿಸಲಾದ ಈ ಪ್ರಕರಣದ ದೀರ್ಘ ವಿಚಾರಣೆಯ ಅವಧಿಯಲ್ಲಿ, 13 ಆರೋಪಿಗಳು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಇನ್ನೂ ತಲೆಮರೆಸಿಕೊಂಡಿದ್ದಾರೆ.

ಕ್ರಿಮಿನಲ್ ಗ್ಯಾಂಗ್ ಒಂದರ ವಿರುದ್ಧ ದಿಹುಲಿ ಗ್ರಾಮದ ಕೆಲ ಜನರು ಸಾಕ್ಷ್ಯ ನುಡಿದ ನಂತರ 24 ದಲಿತರ ಹತ್ಯಾಕಾಂಡ ನಡೆದಿತ್ತು. ಹತ್ಯೆ ಮಾಡಿದ ಕ್ರಿಮಿನಲ್ ಗ್ಯಾಂಗ್‌ನ ಸದಸ್ಯರು ಹೆಚ್ಚಾಗಿ ಪ್ರಬಲ ಜಾತಿಗೆ ಸೇರಿದವರಾಗಿದ್ದರು.

“ಸಾಮೂಹಿಕ ಹತ್ಯೆ ಪ್ರಕರಣದಲ್ಲಿ ಮೂವರು ವ್ಯಕ್ತಿಗಳನ್ನು ದೋಷಿಗಳು ಎಂದು ನ್ಯಾಯಾಲಯ ಮಂಗಳವಾರ (ಮಾ.11) ತೀರ್ಪು ನೀಡಿದೆ. ಮೂವರು ಅಪರಾಧಿಗಳ ಪೈಕಿ ಜೈಲಿನಲ್ಲಿರುವ ರಾಮ್ ಸೇವಕ್ ಎಂಬಾತ ಅಲ್ಲಿಂದಲೇ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಜಾಮೀನಿನ ಮೇಲೆ ಹೊರಗಿದ್ದ ಕಪ್ತಾನ್ ಅವರನ್ನು ತಪ್ಪಿತಸ್ಥರೆಂದು ಸಾಬೀತಾದ ನಂತರ ವಶಕ್ಕೆ ಪಡೆಯಲಾಗಿದೆ. ಮೂರನೇ ಅಪರಾಧಿ ರಾಂಪಾಲ್ ನ್ಯಾಯಾಲಯಕ್ಕೆ ಗೈರಾಗಿದ್ದರು. ವಿನಾಯಿತಿ ನೀಡುವಂತೆ ಕೋರಿದ್ದ ಅವರ ಮನವಿಯನ್ನು ತಿರಸ್ಕರಿಸಿದ್ದರೂ ನ್ಯಾಯಾಲಯಕ್ಕೆ ಬಂದಿಲ್ಲ. ಹಾಗಾಗಿ, ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿದೆ” ಎಂದು ಸರ್ಕಾರಿ ವಕೀಲ (ಮೈನ್‌ಪುರಿ) ರೋಹಿತ್ ಶುಕ್ಲಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ನ್ಯಾಯಾಲಯವು ಐಪಿಸಿ ಸೆಕ್ಷನ್ 302 (ಕೊಲೆ), 307 (ಕೊಲೆ ಯತ್ನ), 120 ಬಿ (ಕ್ರಿಮಿನಲ್ ಪಿತೂರಿ), 216 (ಕಸ್ಟಡಿಯಿಂದ ತಪ್ಪಿಸಿಕೊಂಡ ಅಥವಾ ಬಂಧನಕ್ಕೆ ಆದೇಶಿಸಲಾದ ಅಪರಾಧಿಗೆ ಆಶ್ರಯ ನೀಡುವುದು), 449 (ಮರಣಶಿಕ್ಷೆಗೆ ಅರ್ಹವಾದ ಅಪರಾಧವನ್ನು ಮಾಡಲು ಮನೆ-ಅತಿಕ್ರಮಣ) ಮತ್ತು 450 (ಜೀವಾವಧಿ ಶಿಕ್ಷೆಗೆ ಅರ್ಹವಾದ ಅಪರಾಧವನ್ನು ಮಾಡಲು ಮನೆ-ಅತಿಕ್ರಮಣ) ಸೇರಿದಂತೆ ವಿವಿಧ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಮೂವರನ್ನು ತಪ್ಪಿತಸ್ಥರೆಂದು ಘೋಷಿಸಿದೆ.

ಶಿಕ್ಷೆಯ ಪ್ರಮಾಣವನ್ನು ಮಾರ್ಚ್ 18 ರಂದು ಪ್ರಕಟಿಸಲಿದೆ ಎಂದು ವಕೀಲ ಶುಕ್ಲಾ ಹೇಳಿದ್ದಾರೆ.

ಪ್ರಾಸಿಕ್ಯೂಷನ್ ಪ್ರಕಾರ, ಈ ಘಟನೆ ನವೆಂಬರ್ 18, 1981ರಂದು ನಡೆದಿದ್ದು, ರಾಧೇ-ಸಂತೋಷ್ ಎಂಬ ಕ್ರಿಮಿನಲ್ ಗ್ಯಾಂಗ್ ದಿಹುಲಿ ಗ್ರಾಮದ ಮೇಲೆ ದಾಳಿ ಮಾಡಿತ್ತು. ಅಲ್ಲಿನ ಮನೆಗಳಿಗೆ ನುಗ್ಗಿ ಜನರನ್ನು ಗುಂಡಿಕ್ಕಿ ಕೊಂದು, ಮನೆಗಳನ್ನು ಲೂಟಿ ಮಾಡಿತ್ತು. ಘಟನಾ ಸ್ಥಳಕ್ಕೆ ಸ್ಥಳೀಯ ಜಸ್ರಾನಾ ಪೊಲೀಸ್ ಠಾಣೆಯ ತಂಡ ತಲುಪುವ ಹೊತ್ತಿಗೆ, ದಾಳಿ ಮಾಡಿದವರು ಪರಾರಿಯಾಗಿದ್ದರು.

ಸಾಮೂಹಿಕ ಹತ್ಯೆಗೆ ಸುಮಾರು ಒಂದೂವರೆ ವರ್ಷಗಳ ಮೊದಲು, ರಾಧೇ-ಸಂತೋಷ್ ಗ್ಯಾಂಗ್ ಮತ್ತು ಪೊಲೀಸರ ನಡುವೆ ಎನ್‌ಕೌಂಟರ್ ನಡೆದಿತ್ತು. ಇದರ ಪರಿಣಾಮವಾಗಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿತ್ತು.

ಎನ್‌ಕೌಂಟರ್‌ಗೆ ಸಾಕ್ಷಿಯಾಗಿದ್ದ ನಾಲ್ವರು ದಿಹುಲಿ ಗ್ರಾಮದ ನಿವಾಸಿಗಳಾಗಿದ್ದರು. ಹಾಗಾಗಿ, ಗ್ರಾಮಸ್ಥರನ್ನು ಬೆದರಿಸುವ ಉದ್ದೇಶದಿಂದ ಗ್ಯಾಂಗ್‌ ಸಾಮೂಹಿಕ ಹತ್ಯೆಗಳನ್ನು ಮಾಡಿತ್ತು. ರಾಧೇ-ಸಂತೋಷ್ ಗ್ಯಾಂಗ್‌ನ ಹೆಚ್ಚಿನ ಸದಸ್ಯರು ಪ್ರಬಲ ಜಾತಿಗೆ ಸೇರಿದವರು ಎಂದು ಪ್ರಾಸಿಕ್ಯೂಷನ್ ಹೇಳಿದೆ.

ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಡಕಾಯಿತರ ತಂಡದ ಮುಖಂಡ ಸಂತೋಷ್‌ ಮತ್ತು ರಾಧೇ ಒಳಗೊಂಡು 17 ಜನರ ವಿರುದ್ಧ ದೋಷಾರೋಪ ಸಲ್ಲಿಸಿದ್ದರು. ವಿಚಾರಣೆ ಹಂತದಲ್ಲಿ 17 ಆರೋಪಿಗಳಲ್ಲಿ ಸಂತೋಷ್ ಮತ್ತು ರಾಧೇ ಸೇರಿ 13 ಜನ ಮೃತಪಟ್ಟಿದ್ದಾರೆ. ಬದುಕುಳಿದಿರುವ ನಾಲ್ವರಲ್ಲಿ 40 ವರ್ಷಗಳ ಬಳಿಕವೂ ಒಬ್ಬ ನಾಪತ್ತೆಯಾಗಿದ್ದಾನೆ. ಉಳಿದ ಮೂವರು ವಿಚಾರಣೆ ಎದುರಿಸಿದ್ದರು.

ಈ ಘಟನೆ ನಡೆದ ನಂತರ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು ಗ್ರಾಮಕ್ಕೆ ಭೇಟಿ ನೀಡಿ ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿದ್ದರು. ವಿರೋಧ ಪಕ್ಷದ ನಾಯಕರಾಗಿದ್ದ ಅಟಲ್ ಬಿಹಾರಿ ವಾಜಪೇಯಿ ಅವರು ಹತ್ಯಾಕಾಂಡ ಖಂಡಿಸಿ ದಿಹುಲಿಯಿಂದ ಫಿರೋಝಾಬಾದ್‌ನ ಸಾದುಪುರ್‌ವರೆಗೆ ಪಾದಯಾತ್ರೆ ಕೈಗೊಂಡಿದ್ದರು.

ದಿಹುಲಿ ಗ್ರಾಮವು 1981ರಲ್ಲಿ ಮೈನ್‌ಪುರಿ ಜಿಲ್ಲೆಯ ಭಾಗವಾಗಿತ್ತು. 1989ರಲ್ಲಿ ಫಿರೋಝಾಬಾದ್ ಜಿಲ್ಲೆಯನ್ನು ರಚಿಸಿದ ನಂತರ, ಈ ಗ್ರಾಮವು ಅದರ ವ್ಯಾಪ್ತಿಗೆ ಒಳಪಟ್ಟಿತು.

ದಿಹುಲಿ ಸಾಮೂಹಿಕ ಹತ್ಯೆ ಘಟನೆಯ ನಂತರ ಡಿಸೆಂಬರ್ 30, 1981 ರಂದು ಹತ್ತಿರದ ಸಾಧುಪುರ ಗ್ರಾಮದಲ್ಲಿ ದಲಿತರ ಮೇಲೆ ಮತ್ತೊಂದು ದಾಳಿ ನಡೆದಿತ್ತು. ಡಕಾಯಿತ ಅನಾರ್ ಸಿಂಗ್ ಯಾದವ್ ನೇತೃತ್ವದ ಗ್ಯಾಂಗ್‌ಗೆ ಸೇರಿದ ಪುರುಷರು ಪರಿಶಿಷ್ಟ ಜಾತಿಗೆ ಸೇರಿದ ಆರು ಮಹಿಳೆಯರು ಸೇರಿದಂತೆ ಹತ್ತು ಜನರನ್ನು ಹತ್ಯೆ ಮಾಡಿದ್ದರು.

ತಮಿಳುನಾಡು : ಪರೀಕ್ಷೆ ಬರೆಯಲು ಹೋಗುತ್ತಿದ್ದ ದಲಿತ ವಿದ್ಯಾರ್ಥಿಯ ಕೈ ಬೆರಳು ಕತ್ತರಿಸಿದ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...