Homeದಲಿತ್ ಫೈಲ್ಸ್24 ದಲಿತರ ಸಾಮೂಹಿಕ ಹತ್ಯೆ ಪ್ರಕರಣ | 44 ವರ್ಷಗಳ ಬಳಿಕ ತೀರ್ಪು ಪ್ರಕಟ; ಮೂವರು...

24 ದಲಿತರ ಸಾಮೂಹಿಕ ಹತ್ಯೆ ಪ್ರಕರಣ | 44 ವರ್ಷಗಳ ಬಳಿಕ ತೀರ್ಪು ಪ್ರಕಟ; ಮೂವರು ದೋಷಿಗಳೆಂದ ಕೋರ್ಟ್

- Advertisement -
- Advertisement -

ಉತ್ತರ ಪ್ರದೇಶದ ಫಿರೋಝಾಬಾದ್ ಜಿಲ್ಲೆಯ ದಿಹುಲಿ ಗ್ರಾಮದಲ್ಲಿ ಏಳು ಮಹಿಳೆಯರು ಮತ್ತು ಇಬ್ಬರು ಅಪ್ರಾಪ್ತ ವಯಸ್ಕರು ಸೇರಿದಂತೆ 24 ದಲಿತರ ಹತ್ಯೆ ನಡೆದು ಸುಮಾರು 44 ವರ್ಷಗಳ ನಂತರ, ವಿಚಾರಣಾ ನ್ಯಾಯಾಲಯವು ಮೂವರು ಆರೋಪಿಗಳನ್ನು ದೋಷಿಗಳು ಎಂದು ಘೋಷಿಸಿದೆ.

ಕಳೆದ ವರ್ಷ ಅಲಹಾಬಾದ್ ಹೈಕೋರ್ಟ್‌ನ ಆದೇಶದ ಮೇರೆಗೆ ಮೈನ್‌ಪುರಿ ಜಿಲ್ಲೆಯ ನ್ಯಾಯಾಲಯಕ್ಕೆ ವರ್ಗಾಯಿಸಲಾದ ಈ ಪ್ರಕರಣದ ದೀರ್ಘ ವಿಚಾರಣೆಯ ಅವಧಿಯಲ್ಲಿ, 13 ಆರೋಪಿಗಳು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಇನ್ನೂ ತಲೆಮರೆಸಿಕೊಂಡಿದ್ದಾರೆ.

ಕ್ರಿಮಿನಲ್ ಗ್ಯಾಂಗ್ ಒಂದರ ವಿರುದ್ಧ ದಿಹುಲಿ ಗ್ರಾಮದ ಕೆಲ ಜನರು ಸಾಕ್ಷ್ಯ ನುಡಿದ ನಂತರ 24 ದಲಿತರ ಹತ್ಯಾಕಾಂಡ ನಡೆದಿತ್ತು. ಹತ್ಯೆ ಮಾಡಿದ ಕ್ರಿಮಿನಲ್ ಗ್ಯಾಂಗ್‌ನ ಸದಸ್ಯರು ಹೆಚ್ಚಾಗಿ ಪ್ರಬಲ ಜಾತಿಗೆ ಸೇರಿದವರಾಗಿದ್ದರು.

“ಸಾಮೂಹಿಕ ಹತ್ಯೆ ಪ್ರಕರಣದಲ್ಲಿ ಮೂವರು ವ್ಯಕ್ತಿಗಳನ್ನು ದೋಷಿಗಳು ಎಂದು ನ್ಯಾಯಾಲಯ ಮಂಗಳವಾರ (ಮಾ.11) ತೀರ್ಪು ನೀಡಿದೆ. ಮೂವರು ಅಪರಾಧಿಗಳ ಪೈಕಿ ಜೈಲಿನಲ್ಲಿರುವ ರಾಮ್ ಸೇವಕ್ ಎಂಬಾತ ಅಲ್ಲಿಂದಲೇ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಜಾಮೀನಿನ ಮೇಲೆ ಹೊರಗಿದ್ದ ಕಪ್ತಾನ್ ಅವರನ್ನು ತಪ್ಪಿತಸ್ಥರೆಂದು ಸಾಬೀತಾದ ನಂತರ ವಶಕ್ಕೆ ಪಡೆಯಲಾಗಿದೆ. ಮೂರನೇ ಅಪರಾಧಿ ರಾಂಪಾಲ್ ನ್ಯಾಯಾಲಯಕ್ಕೆ ಗೈರಾಗಿದ್ದರು. ವಿನಾಯಿತಿ ನೀಡುವಂತೆ ಕೋರಿದ್ದ ಅವರ ಮನವಿಯನ್ನು ತಿರಸ್ಕರಿಸಿದ್ದರೂ ನ್ಯಾಯಾಲಯಕ್ಕೆ ಬಂದಿಲ್ಲ. ಹಾಗಾಗಿ, ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿದೆ” ಎಂದು ಸರ್ಕಾರಿ ವಕೀಲ (ಮೈನ್‌ಪುರಿ) ರೋಹಿತ್ ಶುಕ್ಲಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ನ್ಯಾಯಾಲಯವು ಐಪಿಸಿ ಸೆಕ್ಷನ್ 302 (ಕೊಲೆ), 307 (ಕೊಲೆ ಯತ್ನ), 120 ಬಿ (ಕ್ರಿಮಿನಲ್ ಪಿತೂರಿ), 216 (ಕಸ್ಟಡಿಯಿಂದ ತಪ್ಪಿಸಿಕೊಂಡ ಅಥವಾ ಬಂಧನಕ್ಕೆ ಆದೇಶಿಸಲಾದ ಅಪರಾಧಿಗೆ ಆಶ್ರಯ ನೀಡುವುದು), 449 (ಮರಣಶಿಕ್ಷೆಗೆ ಅರ್ಹವಾದ ಅಪರಾಧವನ್ನು ಮಾಡಲು ಮನೆ-ಅತಿಕ್ರಮಣ) ಮತ್ತು 450 (ಜೀವಾವಧಿ ಶಿಕ್ಷೆಗೆ ಅರ್ಹವಾದ ಅಪರಾಧವನ್ನು ಮಾಡಲು ಮನೆ-ಅತಿಕ್ರಮಣ) ಸೇರಿದಂತೆ ವಿವಿಧ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಮೂವರನ್ನು ತಪ್ಪಿತಸ್ಥರೆಂದು ಘೋಷಿಸಿದೆ.

ಶಿಕ್ಷೆಯ ಪ್ರಮಾಣವನ್ನು ಮಾರ್ಚ್ 18 ರಂದು ಪ್ರಕಟಿಸಲಿದೆ ಎಂದು ವಕೀಲ ಶುಕ್ಲಾ ಹೇಳಿದ್ದಾರೆ.

ಪ್ರಾಸಿಕ್ಯೂಷನ್ ಪ್ರಕಾರ, ಈ ಘಟನೆ ನವೆಂಬರ್ 18, 1981ರಂದು ನಡೆದಿದ್ದು, ರಾಧೇ-ಸಂತೋಷ್ ಎಂಬ ಕ್ರಿಮಿನಲ್ ಗ್ಯಾಂಗ್ ದಿಹುಲಿ ಗ್ರಾಮದ ಮೇಲೆ ದಾಳಿ ಮಾಡಿತ್ತು. ಅಲ್ಲಿನ ಮನೆಗಳಿಗೆ ನುಗ್ಗಿ ಜನರನ್ನು ಗುಂಡಿಕ್ಕಿ ಕೊಂದು, ಮನೆಗಳನ್ನು ಲೂಟಿ ಮಾಡಿತ್ತು. ಘಟನಾ ಸ್ಥಳಕ್ಕೆ ಸ್ಥಳೀಯ ಜಸ್ರಾನಾ ಪೊಲೀಸ್ ಠಾಣೆಯ ತಂಡ ತಲುಪುವ ಹೊತ್ತಿಗೆ, ದಾಳಿ ಮಾಡಿದವರು ಪರಾರಿಯಾಗಿದ್ದರು.

ಸಾಮೂಹಿಕ ಹತ್ಯೆಗೆ ಸುಮಾರು ಒಂದೂವರೆ ವರ್ಷಗಳ ಮೊದಲು, ರಾಧೇ-ಸಂತೋಷ್ ಗ್ಯಾಂಗ್ ಮತ್ತು ಪೊಲೀಸರ ನಡುವೆ ಎನ್‌ಕೌಂಟರ್ ನಡೆದಿತ್ತು. ಇದರ ಪರಿಣಾಮವಾಗಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿತ್ತು.

ಎನ್‌ಕೌಂಟರ್‌ಗೆ ಸಾಕ್ಷಿಯಾಗಿದ್ದ ನಾಲ್ವರು ದಿಹುಲಿ ಗ್ರಾಮದ ನಿವಾಸಿಗಳಾಗಿದ್ದರು. ಹಾಗಾಗಿ, ಗ್ರಾಮಸ್ಥರನ್ನು ಬೆದರಿಸುವ ಉದ್ದೇಶದಿಂದ ಗ್ಯಾಂಗ್‌ ಸಾಮೂಹಿಕ ಹತ್ಯೆಗಳನ್ನು ಮಾಡಿತ್ತು. ರಾಧೇ-ಸಂತೋಷ್ ಗ್ಯಾಂಗ್‌ನ ಹೆಚ್ಚಿನ ಸದಸ್ಯರು ಪ್ರಬಲ ಜಾತಿಗೆ ಸೇರಿದವರು ಎಂದು ಪ್ರಾಸಿಕ್ಯೂಷನ್ ಹೇಳಿದೆ.

ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಡಕಾಯಿತರ ತಂಡದ ಮುಖಂಡ ಸಂತೋಷ್‌ ಮತ್ತು ರಾಧೇ ಒಳಗೊಂಡು 17 ಜನರ ವಿರುದ್ಧ ದೋಷಾರೋಪ ಸಲ್ಲಿಸಿದ್ದರು. ವಿಚಾರಣೆ ಹಂತದಲ್ಲಿ 17 ಆರೋಪಿಗಳಲ್ಲಿ ಸಂತೋಷ್ ಮತ್ತು ರಾಧೇ ಸೇರಿ 13 ಜನ ಮೃತಪಟ್ಟಿದ್ದಾರೆ. ಬದುಕುಳಿದಿರುವ ನಾಲ್ವರಲ್ಲಿ 40 ವರ್ಷಗಳ ಬಳಿಕವೂ ಒಬ್ಬ ನಾಪತ್ತೆಯಾಗಿದ್ದಾನೆ. ಉಳಿದ ಮೂವರು ವಿಚಾರಣೆ ಎದುರಿಸಿದ್ದರು.

ಈ ಘಟನೆ ನಡೆದ ನಂತರ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು ಗ್ರಾಮಕ್ಕೆ ಭೇಟಿ ನೀಡಿ ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿದ್ದರು. ವಿರೋಧ ಪಕ್ಷದ ನಾಯಕರಾಗಿದ್ದ ಅಟಲ್ ಬಿಹಾರಿ ವಾಜಪೇಯಿ ಅವರು ಹತ್ಯಾಕಾಂಡ ಖಂಡಿಸಿ ದಿಹುಲಿಯಿಂದ ಫಿರೋಝಾಬಾದ್‌ನ ಸಾದುಪುರ್‌ವರೆಗೆ ಪಾದಯಾತ್ರೆ ಕೈಗೊಂಡಿದ್ದರು.

ದಿಹುಲಿ ಗ್ರಾಮವು 1981ರಲ್ಲಿ ಮೈನ್‌ಪುರಿ ಜಿಲ್ಲೆಯ ಭಾಗವಾಗಿತ್ತು. 1989ರಲ್ಲಿ ಫಿರೋಝಾಬಾದ್ ಜಿಲ್ಲೆಯನ್ನು ರಚಿಸಿದ ನಂತರ, ಈ ಗ್ರಾಮವು ಅದರ ವ್ಯಾಪ್ತಿಗೆ ಒಳಪಟ್ಟಿತು.

ದಿಹುಲಿ ಸಾಮೂಹಿಕ ಹತ್ಯೆ ಘಟನೆಯ ನಂತರ ಡಿಸೆಂಬರ್ 30, 1981 ರಂದು ಹತ್ತಿರದ ಸಾಧುಪುರ ಗ್ರಾಮದಲ್ಲಿ ದಲಿತರ ಮೇಲೆ ಮತ್ತೊಂದು ದಾಳಿ ನಡೆದಿತ್ತು. ಡಕಾಯಿತ ಅನಾರ್ ಸಿಂಗ್ ಯಾದವ್ ನೇತೃತ್ವದ ಗ್ಯಾಂಗ್‌ಗೆ ಸೇರಿದ ಪುರುಷರು ಪರಿಶಿಷ್ಟ ಜಾತಿಗೆ ಸೇರಿದ ಆರು ಮಹಿಳೆಯರು ಸೇರಿದಂತೆ ಹತ್ತು ಜನರನ್ನು ಹತ್ಯೆ ಮಾಡಿದ್ದರು.

ತಮಿಳುನಾಡು : ಪರೀಕ್ಷೆ ಬರೆಯಲು ಹೋಗುತ್ತಿದ್ದ ದಲಿತ ವಿದ್ಯಾರ್ಥಿಯ ಕೈ ಬೆರಳು ಕತ್ತರಿಸಿದ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...